ಉಡುಪಿ

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು

ಬನ್ನಂಜೆಯಿಂದ ಕಲ್ಸಂಕದವರೆಗೆ ರೋಡ್‌ ಶೋ ನಡೆಸಲು ವ್ಯವಸ್ಥೆ ಉಡುಪಿ: ಶುಕ್ರವಾರ ಉಡುಪಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ ಶೋದಲ್ಲಿ ಭಾಗವಹಿಸಲಿದ್ದಾರೆ. ಶುಕ್ರವಾರ ಪೂರ್ವಾಹ್ನ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಉಡುಪಿ ಬನ್ನಂಜೆಯ ಡಾ.ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್‌ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್‌ವರೆಗೆ ಸಾಗಲಿದೆ. ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ 12ಕ್ಕೆ ಶ್ರೀ ಕೃಷ್ಣ ಮಠವನ್ನು […]

ಉಡುಪಿ: ಪ್ರಧಾನಿ ಮೋದಿ ಸ್ವಾಗತಕ್ಕೆ ಭರದ ಸಿದ್ಧತೆ; ಬಿಗಿ ಭದ್ರತೆ ಏರ್ಪಾಡು Read More »

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ

ಉಡುಪಿ : ಮಣಿಪಾಲದ ಎರಡು ಹಾಸ್ಟೆಲ್‌ಗಳ ಮೇಲೆ ದಾಳಿ ನಡೆಸಿದ ಪೊಲೀಸರು ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಂದ ಸುಮಾರು 36,000 ರೂ. ಮೌಲ್ಯದ 727 ಗ್ರಾಂ ಗಾಂಜಾ ಮತ್ತು 30,000 ರೂ. ಮೌಲ್ಯದ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬಂಧಿತ ವಿದ್ಯಾರ್ಥಿಗಳನ್ನು ಗುಜರಾತ್ ಮೂಲದ ಕುಶ್‌ಕೆಯುಶ್ ಪಟೇಲ್ (20) ಮತ್ತು ಉತ್ತರ ಪ್ರದೇಶದ ದೇವಾಂಶ್ ತ್ಯಾಗಿ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಮಣಿಪಾಲದಲ್ಲಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಂಗ್ರಹಿಸಿಟ್ಟಿದ್ದರು. ಈ ಸಂಬಂಧ ಮಣಿಪಾಲ ಪೊಲೀಸ್

ಹಾಸ್ಟೆಲ್‌ನಲ್ಲಿ ಗಾಂಜಾ ತಂದಿಟ್ಟಿದ್ದ ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಉಡುಪಿಯಲ್ಲಿ ಮೋದಿಯ ರೋಡ್‌ ಶೋ ರದ್ದು

ನ.28ಕ್ಕೆ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಉಡುಪಿಗೆ ಆಗಮಿಸಲಿರುವ ಪ್ರಧಾನಿ ಉಡುಪಿ: ನವೆಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸರುವುದನ್ನು ಪ್ರಧಾನಮಂತ್ರಿಗಳ ಕಚೇರಿ (ಪಿಎಂಒ) ದೃಢಪಡಿಸಿದೆ. ನವೆಂಬರ್ 28ರಂದು ಪ್ರಧಾನಿ ಮೋದಿ ಉಡುಪಿಗೆ ಭೇಟಿ ನೀಡುವ ಬಗ್ಗೆ ಪ್ರಧಾನಿ ಕಚೇರಿ ಕರ್ನಾಟಕದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ. ಆ ವೇಳಾಪಟ್ಟಿಯ ಪ್ರಕಾರ ಪ್ರಧಾನಿ ಮೋದಿ ನವೆಂಬರ್ 28ರಂದು ಬೆಳಿಗ್ಗೆ 11.05ಕ್ಕೆ ದೆಹಲಿಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ

ಉಡುಪಿಯಲ್ಲಿ ಮೋದಿಯ ರೋಡ್‌ ಶೋ ರದ್ದು Read More »

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ

ಅಡಿ ಭಾಗದ ಫೈಬರ್‌ ಪ್ಲೇಟ್‌ ಒಡೆದು ಒಳನುಗ್ಗಿದ ನೀರು ಉಡುಪಿ : ಮೀನುಗಾರಿಗೆ ತೆರಳಿದ ದೋಣಿಯೊಂದು ಸಮುದ್ರ ಮಧ್ಯದಲ್ಲಿ ಮುಳುಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟ್‌ ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ Read More »

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ

ಉಡುಪಿ: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿರುವ ‘ಸುನಂದಾ ವೆಲ್ನೆಸ್ ಸೆಂಟರ್’ನಲ್ಲಿ ಕೌನ್ಸೆಲಿಂಗ್‌ಗೆ ಬಂದಿದ್ದ ಮಹಿಳೆಯ ದೇಹ ಸ್ಪರ್ಶ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪಿ ನಿರಂಜನ ಶೇಖರ ಶೆಟ್ಟಿ (52) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ದಾಂಪತ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಕೌನ್ಸಿಲಿಂಗ್‌ಗಾಗಿ ಕಂಕಣಗುತ್ತು ಕಂಪೌಂಡ್‌ನಲ್ಲಿರುವ ವೆಲ್ನೆಸ್ ಸೆಂಟರ್‌ಗೆ ಭೇಟಿ ನೀಡಿದ್ದರು. ಈ ವೇಳೆ ಕೌನ್ಸೆಲಿಂಗ್‌ ಮಾಡುತ್ತಿದ್ದ ನಿರಂಜನ ಶೇಖರ ಶೆಟ್ಟಿ ದೈಹಿಕ ಸ್ಪರ್ಶ ಮಾಡಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ದೂರು ದಾಖಲಾಗಿದೆ. ಘಟನೆ ಬಳಿಕ

ಕೌನ್ಸೆಲಿಂಗ್‌ ಸೆಂಟರ್‌ನಲ್ಲಿ ಮಹಿಳೆಗೆ ಕಿರುಕುಳ : ಆರೋಪಿ ಸೆರೆ Read More »

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ

ನ.28ರಂದು ಪ್ರಧಾನಿಯಿಂದ ಸುವರ್ಣ ತೀರ್ಥ ಮಂಟಪ, ಚಿನ್ನದ ಕನಕನ ಕಿಂಡಿ, ಕನಕ ಕವಚ ಉದ್ಘಾಟನೆ ಉಡುಪಿ : ನ.28ರಂದು ಉಡುಪಿಗೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಿ ಶ್ಲೋಕ ಪಠಿಸಲಿದ್ದಾರೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ. ನವೆಂಬರ್ 8ರಿಂದ ಡಿಸೆಂಬರ್ 7ರವರೆಗೆ ಭವ್ಯವಾದ ಗೀತೋತ್ಸವವನ್ನು ಆಚರಿಸಲಾಗುವುದು. ಈ ಕಾರ್ಯಕ್ರಮವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಪ್ರತಿದಿನ ವಿದ್ವಾಂಸರಿಂದ ಗೀತಾ

ಉಡುಪಿ: ಲಕ್ಷಕಂಠ ಗೀತಾ ಪಾರಾಯಣದಲ್ಲಿ ಶ್ಲೋಕ ಪಠಿಸಲಿರುವ ಮೋದಿ Read More »

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು

ಸಹೋದ್ಯೋಗಿಯ ವಿದಾಯಕೂಟದಲ್ಲಿ ಹಾಡುತ್ತಿರುವಾಗಲೇ ಹೃದಯಾಘಾತ ಉಡುಪಿ : ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ಎಎಸ್ಸೈ) ವಿಶ್ವನಾಥ್ (56) ಭಾನುವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಪರೀಕ್ಷಿಸಿದ ವೈದ್ಯರು ವಿಶ್ವನಾಥ್ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಇತ್ತೀಚಿಗಷ್ಟೇ ಇವರು ಮಲ್ಪೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಬಂದಿದ್ದರು.

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಎಎಸ್‌ಐ ಸಾವು Read More »

ನವೆಂಬರ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮನ

ಶ್ರೀಕೃಷ್ಣ ಮಠದಲ್ಲಿ ಲಕ್ಷ ಕಂಠ ಗೀತಾ ಪಾರಾಯಣ-ಬೃಹತ್ ಗೀತೋತ್ಸವದಲ್ಲಿ ಭಾಗಿಯಾಗಲು ಆಗಮನ ಉಡುಪಿ : ಪ್ರಧಾನಿ ನರೇಂದ್ರ ಮೋದಿ ನವೆಂಬರ್​ 28ರಂದು ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಮೋದಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡುವ ಕಾರ್ಯಕ್ರಮ ಈಗಾಗಲೇ ನಿಗದಿಯಾಗಿದೆ. ಇದರ ಜೊತೆಗೆ ಇನ್ನಿತರ ಕಾರ್ಯಕ್ರಮಗಳಲ್ಲೂ ಭಾಗವಹಿಸುವ ನಿರೀಕ್ಷೆಯಿದೆ. ಮುಖ್ಯವಾಗಿ ಮಂಗಳೂರಿನ ಪಣಂಬೂರಿನಲ್ಲಿ ನಿರ್ಮಾಣವಾಗಿರುವ ಬಂದರು ಕಾರ್ಮಿಕರ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸುವ ಕಾರ್ಯಕ್ರಮದಲ್ಲೂ ಭಾಗವಹಿಸುವ ನಿರೀಕ್ಷೆಯಿದೆ. ಆದರೆ ಈ ಕಾರ್ಯಕ್ರಮ ಇನ್ನೂ ದೃಢಪಟ್ಟಿಲ್ಲ. ಶ್ರೀಕೃಷ್ಣ ಮಠದಲ್ಲಿ ನಡೆಯಲಿರುವ ಲಕ್ಷ ಕಂಠ ಗೀತಾ

ನವೆಂಬರ್‌ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಆಗಮನ Read More »

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ

ಉಡುಪಿ: ಕೇಂದ್ರ ಸರ್ಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಉಡುಪಿ ಸಮೀಪದ ಬ್ರಹ್ಮಾವರದ ಕೌಶಲ್ಯ ಎಂದು ಗುರುತಿಸಲಾಗಿದೆ ಈಕೆ 2023ರ ನವೆಂಬರ್‌ನಲ್ಲಿ ಬಾರಕೂರು ಹೇರಾಡಿಯ ಸರಿತಾ ಲೂವಿಸ್ ಎಂಬವರಿಗೆ ಪಿಎಂಇಜಿಪಿ ಅಡಿಯಲ್ಲಿ ಸಬ್ಸಡಿ ಲೋನ್ ಮಾಡಿಸಿಕೊಡುವುದಾಗಿ ಹೇಳಿದ್ದು ನಂತರದ ದಿನಗಳಲ್ಲಿ ಸಬ್ಸಡಿ ಲೋನ್ ಬಗ್ಗೆ ಹಲವಾರು ಕಾರಣಗಳನ್ನು ತಿಳಿಸಿ ಹಣ ಪಾವತಿಸುವಂತೆ ತಿಳಿಸಿದ್ದಳು. ಅದರಂತೆ ಸರಿತಾ

ಪಿಎಂಇಜಿಪಿ ಸಾಲ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ವಂಚನೆ : ಮಹಿಳೆ ಬಂಧನ Read More »

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದೆ. ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರ್ಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ

ಉಡುಪಿ: ಮನೆಯಲ್ಲೇ ನೇಣಿಗೆ ಶರಣಾದ ಪ್ರೇಮಿಗಳು Read More »

error: Content is protected !!
Scroll to Top