ಉಡುಪಿ

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ

ಗೋಮಾಂಸ ಸಾಗಿಸಲು ಬಳಸಿದ್ದ ಕಾರು, ಸ್ಕೂಟಿ ವಶ ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲುವಿನಲ್ಲಿ ಹಸುವಿನ ರುಂಡ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬ್ರಹ್ಮಾವರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಲೆಮೆರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಕೇಶವ, ರಾಮಣ್ಣ, ನವೀನ್, ಪ್ರಸಾದ್, ರಾಜೇಶ್, ಸಂದೇಶ್‌ ಬಂಧಿತರು. ಕುಂಜಾಲು ರಾಮ ಮಂದಿರದ ಬಳಿ ಶನಿವಾರ ತಡರಾತ್ರಿ ಗೋವಿನ ರುಂಡ ಪತ್ತೆಯಾದ ಘಟನೆ ಜಿಲ್ಲೆಯಲ್ಲಿ ಭಾರಿ ಸಂಚಲನವುಂಟು ಮಾಡಿತ್ತು. ಹಿಂದು ಸಂಘಟನೆಗಳು ಹೋರಾಟದ ಎಚ್ಚರಿಕೆ ನೀಡಿದ […]

ರಸ್ತೆಯಲ್ಲಿ ಗೋವಿನ ರುಂಡ ಪತ್ತೆ ಪ್ರಕರಣ : ಆರು ಆರೋಪಿಗಳು ಸೆರೆ Read More »

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ

ಉಡುಪಿ ಸಮೀಪ ಬ್ರಹ್ಮಾವರದ ಕುಂಜಾಲಿನಲ್ಲಿ ನಡೆದ ಘಟನೆ ಉಡುಪಿ: ಜಿಲ್ಲೆಯ ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ದನವನ್ನು ಕಡಿದು ರುಂಡ ಎಸೆದು ಹೋಗಿರುವ ಅಮಾನವೀಯ ಕೃತ್ಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಮತ್ತು ಹಲವು ಹಿಂದೂ ಮುಖಂಡರು ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆಗ್ರಹಿಸಿದ್ದಾರೆ. ಶನಿವಾರ ರಾತ್ರಿ ಸುಮಾರು 11.30 ಸಮಯದಲ್ಲಿ ಗೋವಿನ ರುಂಡ ಹಾಗೂ ದೇಹದ ಭಾಗಗಳು ಬ್ರಹ್ಮಾವರ ಕುಂಜಾಲು ಮುಖ್ಯರಸ್ತೆಯಲ್ಲಿ ಪತ್ತೆಯಾಗಿದೆ. ಮೇಲ್ನೋಟಕ್ಕೆ ಇದು ಹಿಂದುಗಳ ಧಾರ್ಮಿಕ ಭಾವನೆಯನ್ನು ನೋಯಿಸಲು

ಗೋವಿನ ರುಂಡ ನಡುರಸ್ತೆಯಲ್ಲಿ ಎಸೆದ ಕಟುಕರು : ಹಿಂದೂ ಸಂಘಟನೆಗಳಿಂದ ಆಕ್ರೋಶ Read More »

ಗಾಯಾಳುಗಳಿಗೆ ಬಸ್‌ ಮಾಲೀಕನಿಂದ ಪರಿಹಾರ ಕೊಡಿಸಿದ್ದ ಹಿಂದೂ ಮುಖಂಡ ಸೆರೆ

8 ತಿಂಗಳ ಹಿಂದೆ ಇತ್ಯರ್ಥವಾಗಿದ್ದ ಅಪಘಾತ ವಿವಾದ ಸಂಬಂಧ ಈಗ ಕ್ರಮ ಮಂಗಳೂರು: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಬಸ್ಸು ಮಾಲೀಕನಿಂದ ಗಾಯಾಳುಗಳಿಗೆ ಸ್ಥಳದಲ್ಲಿಯೇ ಪರಿಹಾರ ಕೊಡಿಸುವಲ್ಲಿ ಮುಂಚೂಣಿಯಲ್ಲಿ ಇದ್ದು ಹೋರಾಟ ನಡೆಸಿದ ಹಿಂದೂ ಜಾಗರಣಾ ವೇದಿಕೆಯ ಮುಖಂಡನನ್ನು ಮೂಡುಬಿದಿರೆ ಪೊಲೀಸರು ಘಟನೆ ನಡೆದ 8 ತಿಂಗಳ ಬಳಿಕ ಬಂಧಿಸಿದ್ದಾರೆ. ಹಿಂದೂ ಜಾಗರಣಾ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಬಂಧಿತ. ಕಾರ್ಕಳ ಅನಂತಶಯನ ದೇವಳ ರಸ್ತೆಯ ವ್ಯಾಪಾರ ಸಂಕೀರ್ಣವೊಂದರಲ್ಲಿ ಮೂಡುಬಿದಿರೆ ಪೊಲೀಸರ ತಂಡ ಗುರುವಾರ ಸಮಿತ್‌ರಾಜ್‌ ಅವರನ್ನು

ಗಾಯಾಳುಗಳಿಗೆ ಬಸ್‌ ಮಾಲೀಕನಿಂದ ಪರಿಹಾರ ಕೊಡಿಸಿದ್ದ ಹಿಂದೂ ಮುಖಂಡ ಸೆರೆ Read More »

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ

ಕಾರ್ಕಳ: ಮುಡಾರಿನ ಅಹಿಂಸಾ ಅನಿಮಲ್ ಕೇರ್‌ ನಿಂದ ಮೂರು ದನಗಳನ್ನು ಕದ್ದ ಮೂವರು ಕಳ್ಳರ ಪೈಕಿ ಓರ್ವ ಪೊಲೀಸರ ವಶವಾಗಿದ್ದಾನೆ. ಬಂಧಿತ ಆರೋಪಿಯನ್ನು ಸಲೀಂ(38) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಕೆ ಮಾಡಿದ ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಇನ್ನಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಗಂಗೊಳ್ಳಿ ಸಮೀಪ ಸ್ಕೂಟರಿನಲ್ಲಿ ದನದ ಮಾಂಸ ಸಾಗಿಸುತ್ತಿದ್ದ ಆರೋಪಿ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ರಹೀಮ್ (35) ಎಂಬವನೇ ಬಂಧಿತ ಆರೋಪಿ. ಈತನಿಂದ 25 ಕೆಜಿ ಗೋಮಾಂಸ ಮತ್ತು ಕೃತ್ಯಕ್ಕೆ

ಹಸು ಕಳ್ಳತನ, ಗೋಮಾಂಸ ಮಾರಾಟಕ್ಕೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರ ಬಂಧನ Read More »

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರು ಅಪಘಾತ

ಮೂರು ಕಾರುಗಳು ಸರಣಿ ಡಿಕ್ಕಿ ; ಶಾಸಕರು ಪಾರು ಶಿವಮೊಗ್ಗ : ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೋಡೂರಿನಲ್ಲಿ ನಡೆದಿದೆ. ಶುಕ್ರವಾರ ಸಂಜೆ ಗುರುರಾಜ ಗಂಟಿಹೊಳೆ ಉಡುಪಿ ಕಡೆಗೆ ತೆರಳುವ ವೇಳೆ ಅಪಘಾತ ನಡೆದಿದೆ. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಕಾರು ಸೇರಿ ಮೂರು ಕಾರುಗಳು ಶುಕ್ರವಾರ ಸಂಜೆ ಕೋಡೂರು ಬಳಿ ಅಪಘಾತಕ್ಕೀಡಾಗಿವೆ. ಶಾಸಕರ ಕಾರಿನ ಮುಂದೆ ಚಲಿಸುತ್ತಿದ್ದ

ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಕಾರು ಅಪಘಾತ Read More »

ಹೆಂಡತಿಯನ್ನು ಹತ್ಯೆಗೈದು ಗಂಡ ಪರಾರಿ

ಪುತ್ತೂರು: ಹೆಂಡತಿಯನ್ನು ಕೊಚ್ಚಿ ಹತ್ಯೆಗೈದ ಗಂಡನೋರ್ವ ಪರಾರಿಯಾಗಿರುವ ಘಟನೆ ಆವರ್ಸೆ ಬಂಡ್ಸಾಲೆ ದರ್ಕಾಸು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಣೇಶ ಪೂಜಾರಿ (40) ಎಂಬಾತನೇ ಆರೋಪಿಯಾಗಿದ್ದು, ತನ್ನ ಪತ್ನಿ ರೇಖಾ ಪೂಜಾರಿ (30) ಅವರನ್ನು ಹತ್ಯೆ ಗೈದಿದ್ದಾನೆ ಎಂದು ತಿಳಿದು ಬಂದಿದೆ. ಮೃತ ಪತ್ನಿಗೆ ಎರಡು ಗಂಡು ಮಕ್ಕಳಿದ್ದು ಒಂದು ಮಗು ಒಂದನೇ ತರಗತಿಯಲ್ಲಿ ಹಾಗೂ ಇನ್ನೊಂದು ಅಂಗನವಾಡಿಯಲ್ಲಿ ಕಲಿಯುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಹೆಂಡತಿಯನ್ನು ಹತ್ಯೆಗೈದು ಗಂಡ ಪರಾರಿ Read More »

ಶಿವಮೊಗ್ಗ ಭಾರೀ ಮಳೆಯಿಂದ ಭೂಕುಸಿತ | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ

ಶಿವಮೊಗ್ಗ : ಭಾರೀ ಮಳೆಯಿಂದ ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಶಿವಮೊಗ್ಗ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ನಾಳೆಯಿಂದ ಬರೋಬ್ಬರಿ ಮೂರುವರೆ ತಿಂಗಳುಗಳ ಕಾಲ ಆಗುಂಬೆ ಘಾಟಿನಲ್ಲಿ ಭಾರೀ ವಾಹನ ಓಡಾಡುವುದಿಲ್ಲ. ಆಗುಂಬೆ ಘಾಟಿ 169ಎ ಹೆದ್ದಾರಿ ರಸ್ತೆಯಲ್ಲಿ

ಶಿವಮೊಗ್ಗ ಭಾರೀ ಮಳೆಯಿಂದ ಭೂಕುಸಿತ | ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ನಿಷೇಧ | ವಾಹನ ಸಂಚಾರದಲ್ಲಿ ಬದಲಿ ವ್ಯವಸ್ಥೆ Read More »

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು

ಮಂಗಳೂರು: ಖಾಸಗಿ ಬಸ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ಕಾರ್ಕಳ-ಪಡುಬಿದ್ರಿ ರಾಜ್ಯ ಹೆದ್ದಾರಿಯಲ್ಲಿರುವ ಅಡ್ವೆ ಗಣಪತಿ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಬಸ್ ಕಾರ್ಕಳದಿಂದ ಮಂಗಳೂರಿನ ಕಡೆಗೆ ಪ್ರಯಾಣಿಸುತ್ತಿದ್ದಾಗ, ಅಡ್ಡ ರಸ್ತೆಯಿಂದ ಬಂದ ಆಟೋರಿಕ್ಷಾ ಇದ್ದಕ್ಕಿದ್ದಂತೆ ಬಸ್‌ನ ಮಾರ್ಗಕ್ಕೆ ಅಡ್ಡಲಾಗಿ ಬಂದಿದೆ. ಪರಿಣಾಮ ಬಸ್ ರಿಕ್ಷಾಗೆ ಡಿಕ್ಕಿ ಹೊಡೆದು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ನಿಂತಿದೆ. ಅದೃಷ್ಟವಶಾತ್, ಬಸ್ ರಸ್ತೆಬದಿಯ ಕಂದಕಕ್ಕೆ ಬೀಳುವುದು ಸ್ವಲ್ಪದರಲ್ಲೇ ತಪ್ಪಿದ ಕಾರಣ

ಬಸ್‌-ಆಟೋರಿಕ್ಷಾ ಡಿಕ್ಕಿ : ಓರ್ವ ಸಾವು Read More »

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು

ಉಡುಪಿ : ಕಾರು ಚಾಲಕನ ನಿರ್ಲಕ್ಷದಿಂದ ಪ್ರಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ ಆಳ್ವಾಸ್ ಸಂಕೀರ್ತನ್ (28) ಮೃತಪಟ್ಟಿದ್ದಾರೆ ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಈ ಘಟನೆ ಸಂಭವಿಸಿದ್ದು, ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ಅಜಾಗರೂಕತೆ ಯಿಂದ ಚಲಾಯಿಸುತ್ತಿದ್ದುದರಿಂದ ಕಾರು  ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದು ಬಳಿಕ  ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತ

ಪ್ರಸಿದ್ಧ ಭಕ್ತಿ ಗಾಯಕ, ತಬಲಾ ವಾದಕ ಸಂಕೀರ್ತನ್‍ ಅಪಘಾತದಲ್ಲಿ ಮೃತ್ಯು Read More »

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ

ಉಡುಪಿ: ಲಾಡ್ಜ್ ಒಂದರಲ್ಲಿ  ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ದಾಳಿಯ ವೇಳೆ ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ. ಬಡಗಬೆಟ್ಟುವಿನ ದಶರಥನಗರದ ಲಾಡ್ಜ್ ವೊಂದರಲ್ಲಿ ಮಹಿಳೆಯನ್ನು ಬಲವಂತವಾಗಿ ಇರಿಸಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಗೊತ್ತಾಗಿದ್ದು, ಕೂಡಲೇ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಮಹಿಳೆಯನ್ನು ರಕ್ಷಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ : ಆರೋಪಿ ಬಂಧನ Read More »

error: Content is protected !!
Scroll to Top