ಉಡುಪಿ

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ

ಕಾರ್ಕಳದಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಕಾರ್ಕಳ : ಕಾರ್ಕಳ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯ ಕುಂಟಲ್ಪಾಡಿ ಎಂಬಲ್ಲಿ ವಾಸವಾಗಿದ್ದ ಮಂಗಳೂರು ಮೂಲದ ವ್ಯಕ್ತಿಯೊಬ್ಬರನ್ನು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ನವೀನ್‌ ಪೂಜಾರಿ (50) ಎಂದು ಗುರುತಿಸಲಾಗಿದೆ. ನವೀನ್‌ ಪೂಜಾರಿ ಕಾರ್ಕಳದಲ್ಲಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಸ್ಥಳೀಯವಾಗಿ ಅವರು ಬಡ್ಡಿ ನವೀನ ಎಂದು ಪರಿಚಿತರಾಗಿದ್ದರು. ಬಹಳ ಸಮಯದಿಂದ ಕಾರ್ಕಳದಲ್ಲೇ ವಾಸವಾಗಿದ್ದರು. ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ […]

ಕಾರ್ಕಳ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯ ಇರಿದು ಕೊಲೆ Read More »

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು

ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಯತ್ನಿಸಿದಾಗ ಪಲ್ಟಿಯಾದ ಕಾರು ಕಾಪು: ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಕಾರು ಕಾಪು ಸಮೀಪ ಮೂಳೂರಿನಲ್ಲಿ ಪಲ್ಟಿಯಾಗಿ ಯುವ ಡಿಜೆ ಮತ್ತು ಸಿನೆಮಾಗಳ ಛಾಯಾಗ್ರಾಹಕ ಮೃತಪಟ್ಟಿದ್ದು, ಅವರ ಇಬ್ಬರು ಗಾಯಗೊಂಡಿದ್ದಾರೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ 28 ವರ್ಷದ ಮೃತ ಯುವಕನನ್ನು ಛಾಯಾಗ್ರಾಹಕ ಹಾಗೂ ಡಿಜೆ ಬೆಳ್ಮಣ್‌ನ ಮರ್ವಿನ್ ಮೆಂಡೊನ್ಸ (28) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುವರ್ಣ ಮತ್ತು ಪ್ರಸಾದ್ ಎಂಬಿಬ್ಬರು ಗಾಯಗೊಂಡಿದ್ದಾರೆ. ಅಪಘಾತದ ತೀವ್ರತೆಯಿಂದ ಕಾರು ಪೂರ್ತಿಯಾಗಿ

ಕಾಪು : ಕಾರು ಅಪಘಾತದಲ್ಲಿ ಯುವ ಡಿಜೆ ಮರ್ವಿನ್‌ ಸಾವು Read More »

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು

ಬಿಜೆಪಿ ಮುಖಂಡ ಬಿ.ಎಲ್‌.ಸಂತೋಷ್‌ ನಿಂದನೆ ಪ್ರಕರಣದಲ್ಲಿ ಸೆರೆಯಾಗಿರುವ ತಿಮರೋಡಿ ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಅವಹೇಳನಕಾರಿಯಾಗಿ ನಿಂದಿಸಿ ಜೈಲು ಸೇರಿರುವ ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನಿ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ. ಗುರುವಾರ ಬ್ರಹ್ಮಾವರ ಪೊಲೀಸರು ತಿಮರೋಡಿಯನ್ನು ವಶಕ್ಕೆ ಪಡೆದು ಬಳಿಕ ಅರೆಸ್ಟ್ ಮಾಡಿದ್ದರು. ನಂತರ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ತಿಮರೋಡಿ ಹಿರಿಯಡ್ಕ ಸಬ್ ಜೈಲಿನಲ್ಲಿದ್ದಾರೆ. ಬಂಧಿಸುವ ವೇಳೆ ಉಜಿರೆಯಲ್ಲಿರುವ ತಿಮರೋಡಿ ಮನೆಯಲ್ಲಿ ಹೈಡ್ರಾಮಾ ನಡೆದಿತ್ತು. ಪೊಲೀಸರ

ಮಹೇಶ್‌ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಿಚಾರಣೆ ಇಂದು Read More »

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದ ಶ್ರೀನಿವಾಸ ಪೂಜಾರಿ ಉಡುಪಿ: ಧರ್ಮಸ್ಥಳದ ಪಾವಿತ್ರ್ಯಕ್ಕೆ ಧಕ್ಕೆ ತರುವ ಸಲುವಾಗಿ ಅಪಪ್ರಚಾರ ಮಾಡಲು ವಿದೇಶಗಳಿಂದ ಹಣ ಬಂದಿರುವ ಅನುಮಾನ ವ್ಯಕ್ತಪಡಿಸಿರುವ ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪತ್ರ ಬರೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಧರ್ಮಸ್ಥಳದ ಕುರಿತಾಗಿ ವ್ಯಾಪಕವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಈ ವಿಷಯವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ

ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶಿ ಫಂಡಿಂಗ್‌ : ಇ.ಡಿ. ತನಿಖೆಗೆ ಸಂಸದ ಕೋಟ ಆಗ್ರಹ Read More »

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು

ಉಡುಪಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ವಾಚಾಮಗೋಚರವಾಗಿ ನಿಂದಿಸಿದ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಫೇಸ್‌ಬುಕ್‌ ವೀಡಿಯೊದಲ್ಲಿ ಮಹೇಶ್‌ ತಿಮರೋಡಿ ಎಂಬ ವ್ಯಕ್ತಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಹಿರಿಯ ಹಿಂದೂ ನಾಯಕರಾಗಿರುವ ಬಿ.ಎಲ್‌.ಸಂತೋಷ್‌ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಈ ಮೂಲಕ ವಿಭಿನ್ನ ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲೆ ಗ್ರಾಮಾಂತರ ಮಂಡಲಾಧ್ಯಕ್ಷ ರಾಜೀವ್‌ ಕುಲಾಲ್‌ ಎಂಬವರು

ಬಿ.ಎಲ್‌.ಸಂತೋಷ್‌ ನಿಂದನೆ : ತಿಮರೋಡಿ ವಿರುದ್ಧ ದೂರು ದಾಖಲು Read More »

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ

ಮಠದಲ್ಲಿ ಜನಸಾಮಾನ್ಯರಂತೆ ವಿವಿಧ ಸೇವೆಗಳನ್ನು ನೆರವೇರಿಸಿದ ಕೇಂದ್ರ ವಿತ್ತ ಸಚಿವೆ ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಸಂದರ್ಭದಲ್ಲಿ ಶನಿವಾರ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾರತ ಲಕ್ಷ್ಮಿ ಎಂಬ ಗೌರವ ಬಿರುದನ್ನು ಪ್ರದಾನ ಮಾಡಲಾಯಿತು. ಪುತ್ತಿಗೆ ಮಠದ ಪರ್ಯಾಯ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಈ ಗೌರವವನ್ನು ನಿರ್ಮಲಾ ಸೀತಾರಾಮನ್‌ಗೆ ಪ್ರದಾನ ಮಾಡಿದರು. ಅದಮಾರು ಮಠದ ಶ್ರೀ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು.

ನಿರ್ಮಲಾ ಸೀತಾರಾಮನ್‌ಗೆ ಉಡುಪಿ ಕೃಷ್ಣ ಮಠದಿಂದ ಭಾರತ ಲಕ್ಷ್ಮಿ ಬಿರುದು ಪ್ರದಾನ Read More »

ಗಂಧದ ಮರ ಕಳ್ಳತನ : ಮೂವರು ಬಂಧನ

ರಾತ್ರಿ ಹೊತ್ತು ತೋಟದಲ್ಲಿದ್ದ 9 ಗಂಧದ ಮರ ಕಡಿದು ಸಾಗಿಸಿದ್ದ ಆರೋಪಿಗಳು ಕಾರ್ಕಳ: ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ಎಂಬವರ ತೋಟದಲ್ಲಿದ್ದ 4 ಲಕ್ಷ ಮೌಲ್ಯದ ಒಟ್ಟು 9 ಶ್ರೀಗಂಧದ ಮರಗಳನ್ನು ಜೂನ್ 16ರಂದು ರಾತ್ರಿ ಕಳ್ಳತನ ಮಾಡಿಕೊಂಡು ಹೋಗಿದ್ದ ಬಂಟ್ವಾಳದ ಓರ್ವನ ಸಹಿತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕಳವು ಮಾಡಲಾದ ಶ್ರೀಗಂಧದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ 2023 ಕಲಂ 86,87 ಕರ್ನಾಟಕ ಅರಣ್ಯ ಕಾಯ್ದೆ1963ರಂತೆ

ಗಂಧದ ಮರ ಕಳ್ಳತನ : ಮೂವರು ಬಂಧನ Read More »

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು

ಉಡುಪಿ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ ಉಡುಪಿ: ಇಲ್ಲಿನ ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ಕಳ್ಳತನಕ್ಕೆ ಬಂದ ಇಬ್ಬರು ಮೂರ್ಚೆತಪ್ಪಿ ಜನರ ಕೈಗೆ ಸಿಕ್ಕಿಬಿದ್ದ ಘಟನೆ ಶನಿವಾರ ಮುಂಜಾನೆ ಸಂಭವಿಸಿದೆ. ಕಳ್ಳರು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ದೇವಸ್ಥಾನದ ಹೆಬ್ಬಾಗಿಲಿನ ಬೀಗ ಮುರಿದು ಕಳ್ಳತನಗೈಯ್ಯಲು ಯತ್ನಿಸಿದ್ದಾರೆ. ದೇವಸ್ಥಾನದ ಕಾವಲುಗಾರ ಬೊಬ್ಬಿಟ್ಟಾಗ ಕಳ್ಳರು ಕಾವಲುಗಾರನಿಗೆ ಚಾಕು ತೋರಿಸಿ ಜೀವ ಬೆದರಿಕೆಯೊಡ್ಡಿ ಪಲಾಯನಗೈದಿದ್ದಾರೆ. ತಕ್ಷಣ ಕಾವಲುಗಾರ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ದೇವಸ್ಥಾನದ ವಠಾರದಲ್ಲಿ ಸ್ಥಳೀಯರು ಜಮಾಯಿದ್ದಾರೆ. ಬಳಿಕ ಸಿಸಿಟಿವಿ

ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನಿಸಿದವರು ಮೂರ್ಛೆ ತಪ್ಪಿ ಸಿಕ್ಕಿಬಿದ್ದರು Read More »

ಶಾಸಕ ಸುನಿಲ್‌ ಕುಮಾರ್‌ಗೆ ಪಿತೃ ವಿಯೋಗ

ಕಾರ್ಕಳ : ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಅವರ ತಂದೆ ಎಂ.ಕೆ. ವಾಸುದೇವ (87) ಇಂದು ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ಜು.17ರಂದು ಮಧ್ಯಾಹ್ನ 12 ಗಂಟೆಗೆ ಶಾಸಕರ ಸ್ವಗೃಹಕ್ಕೆ ಪಾರ್ಥೀವ ಶರೀರ ತರಲಾಗುವುದು. ಸಂಜೆ ನಾಲ್ಕು ಗಂಟೆಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಮೃತರು ಪತ್ನಿ, ಮಗ ಮತ್ತು ಮಗಳನ್ನು ಅಗಲಿದ್ದಾರೆ.

ಶಾಸಕ ಸುನಿಲ್‌ ಕುಮಾರ್‌ಗೆ ಪಿತೃ ವಿಯೋಗ Read More »

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು

ನೀರಿಗೆ ಬಿದ್ದ ಒಬ್ಬನನ್ನು ರಕ್ಷಿಸಲು ಯತ್ನಿಸಿದ ಇನ್ನಿಬ್ಬರು ನೀರುಪಾಲು ಉಡುಪಿ: ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ. ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38) ಮತ್ತು ಜಗ್ಗು ಯಾನೆ ಜಗದೀಶ್ ಖಾರ್ವಿ (36) ನೀರುಪಾಲಾದ ಮೀನುಗಾರರು. ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ. ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾರೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ

ನಾಡದೋಣಿ ಮೀನುಗಾರಿಕೆ ದೋಣಿ ಮಗುಚಿ ಮೂವರು ಮೀನುಗಾರರು ಸಮುದ್ರಪಾಲು Read More »

error: Content is protected !!
Scroll to Top