Uncategorized

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ‘ವರುಷದ ಹರುಷ’

ಪುತ್ತೂರು: ಮುಖ್ಯರಸ್ತೆಯಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸ್ ಸಂಸ್ಥೆಯು ಪುತ್ತೂರು, ಹಾಸನ, ಸುಳ್ಯ ಮತ್ತು ಕುಶಾಲನಗರದಲ್ಲಿರುವ ತಮ್ಮ ಶಾಖೆಗಳಲ್ಲಿ ಮಾತ್ರ ವಾರ್ಷಿಕೋತ್ಸವದ ಸಂಭ್ರಮದ ಪ್ರಯುಕ್ತ ನೆಚ್ಚಿನ ಗ್ರಾಹಕರಿಗೆ ಜಿ.ಎಲ್. ಶಾಪಿಂಗ್ ಹಬ್ಬ “ವರುಷದ ಹರುಷ” ಎಂಬ ವಿಶಿಷ್ಟ ಶಾಪಿಂಗ್ ಹಬ್ಬವನ್ನು ತಾ.11.04.2026ರಿಂದ 20.04.2026ರವರೆಗೆ ಆಯೋಜಿಸಲಾಗಿದೆ. ಗ್ರಾಹಕರಿಗೆ ಚಿನ್ನಾಭರಣಗಳ VA ಶುಲ್ಕದ ಮೇಲೆ ಪ್ರತಿ ಗ್ರಾಂಗೆ ರೂ. 500/-ರವರೆಗೆ ರಿಯಾಯಿತಿ ನೀಡಲಾಗುವುದು ಅದೇ ರೀತಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೇಟ್‌ ಗೆ ರೂ.7000/-ರವರೆಗೆ ರಿಯಾಯಿತಿ ಹಾಗೂ […]

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌‍ನಲ್ಲಿ ಜಿ.ಎಲ್. ಶಾಪಿಂಗ್ ಹಬ್ಬ ‘ವರುಷದ ಹರುಷ’ Read More »

ಕಾಂಗ್ರೆಸ್‌ನೊಳಗಿನ ಭಿನ್ನಮತವನ್ನು ಬಯಲಿಗೆಳೆದ ಮಧ್ಯಪ್ರಾಚ್ಯ ಯುದ್ಧ

ಮೋದಿಗೆ ಹಿರಿಯ ನಾಯಕರ ಹೊಗಳಿಕೆ; ರಾಹುಲ್‌ ಗಾಂಧಿ ಟೀಕೆ ನವದೆಹಲಿ: ಆಪರೇಷನ್ ಸಿಂದೂರ ಬಳಿಕ ಇದೀಗ ಮಧ್ಯಪ್ರಾಚ್ಯ ಯುದ್ಧ ಕಾಂಗ್ರೆಸ್‌ನಲ್ಲಿ ಹಿರಿಯ ನಾಯಕರು ಮತ್ತು ರಾಹುಲ್‌ ಗಾಂಧಿ ನಡುವಿನ ಭಿನ್ನಮತವನ್ನು ಬಯಲಿಗೆ ತಂದಿದೆ. ಇರಾನ್‌-ಇಸ್ರೇಲ್‌-ಅಮೆರಿಕ ಯುದ್ಧದ ಸಂದರ್ಭದಲ್ಲಿ ಮೋದಿ ಸರ್ಕಾರದ ರಾಜತಾಂತ್ರಿಕ ನಡೆ, ತೈಲ ನಿರ್ವಹಣೆಯನ್ನು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸಾಧ್ಯವಾದಷ್ಟು ಟೀಕಿಸಿದರೆ, ಶಶಿ ತರೂರ್‌ ಸೇರಿ ನಾಲ್ಕೈದು ಹಿರಿಯ ಕಾಂಗ್ರೆಸ್‌ ಮುಖಂಡರು ಕೇಂದ್ರವನ್ನು ತಾರೀಪು ಮಾಡುತ್ತಿದ್ದಾರೆ. ಮೋದಿ ಸರ್ಕಾರದಡಿ ಭಾರತದ ವಿದೇಶಾಂಗ ನೀತಿ

ಕಾಂಗ್ರೆಸ್‌ನೊಳಗಿನ ಭಿನ್ನಮತವನ್ನು ಬಯಲಿಗೆಳೆದ ಮಧ್ಯಪ್ರಾಚ್ಯ ಯುದ್ಧ Read More »

ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ಮೆಸ್ಕಾಂ ಅಧಿಕಾರಿಗಳ ಮುಂಜಾಗೃತಾ ಕ್ರಮ

ಪುತ್ತೂರು : ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವಾರಿ ಸೇರಿದಂತೆ ಜನಸಂಖ್ಯೆ ಹೆಚ್ಚಾಗಿರುವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮಂಜಾಗ್ರತ ಕ್ರಮವಾಗಿ ವಿದ್ಯುತ್ ಸುರಕ್ಷಾ ಕಾರ್ಯಗಳನ್ನು ಕೈಗೊಂಡಿದ್ದಾರೆ. ಏಪ್ರಿಲ್ 10 ರಿಂದ ಆರಂಭವಾಗುವ ದೇವರಪೇಟೆ ಸವಾರಿಯ ಸಂದರ್ಭ ಯಾವುದೇ ಅನಾಹುತ ಸಂಭವಿಸದಂತೆ ಎಚ್ ಟಿ ಹಾಗೂ ಎಲ್‌ಟಿ ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದ ಹಾಗೂ ತಂತಿಗಳಿಗೆ ವಾಲಿ ನಿಂತಿದ್ದ ಮರದ ಕೊಂಬೆಗಳು ಮತ್ತು ಗೆಲ್ಲುಗಳನ್ನು ಕಡಿಯಲಾಯಿತು. ವಿದ್ಯುತ್ ತಂತಿಗಳ ಸಂಪರ್ಕದಿಂದ ಉಂಟಾಗಬಹುದಾದ ಅಪಾಯಗಳನ್ನು ತಡೆಗಟ್ಟುವ

ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ಮೆಸ್ಕಾಂ ಅಧಿಕಾರಿಗಳ ಮುಂಜಾಗೃತಾ ಕ್ರಮ Read More »

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ : ಐವರು ಯುವಕರು ಸೆರೆ

ಕ್ರಿಕೆಟ್‌ ಬೆಟ್ಟಿಂಗ್‌ ಜಾಲದಲ್ಲಿ ಶಾಮೀಲಾಗಿರುವ ಶಂಕೆ ಉಡುಪಿ : ಕಾರ್ಕಳ ಮತ್ತು ಶಿರ್ವದಲ್ಲಿ ಪೊಲೀಸ್ ಸಿಬ್ಬಂದಿಯ ಮೇಲೆ ದಾಳಿ ಮಾಡಲು ಯತ್ನಿಸಿದ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲದಲ್ಲಿ ತೊಡಗಿದ್ದ ಪ್ರಕರಣಗಳಡಿ ಐವರನ್ನು ಬಂಧಿಸಲಾಗಿದೆ. ಈ ಕುರಿತು ಕಾರ್ಕಳ ಮತ್ತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಂಚಿಕಟ್ಟೆ ಸಮೀಪದ ಹೋಂಡಾ ಶೋ ರೂಮ್ ಬಳಿ ನಡೆದಿದೆ. ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಪ್ರಸನ್ನ ಎಂ.ಎಸ್. ಮತ್ತು

ಪೊಲೀಸರ ಮೇಲೆ ಕಾರು ಹತ್ತಿಸಲು ಯತ್ನ : ಐವರು ಯುವಕರು ಸೆರೆ Read More »

ಬೈಕ್‌ ಅಪಘಾತ : ಕಾಲೇಜ್‌ ವಿದ್ಯಾರ್ಥಿ ಸಾವು

ಮಧ್ಯರಾತ್ರಿ ಉಜಿರೆ ಸಮೀಪ ಸಂಭವಿಸಿದ ಅಪಘಾತ, ಸವಾರ ಗಂಭೀರ ಬೆಳ್ತಂಗಡಿ : ಬೈಕ್ ಸ್ಕೀಡ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸಹಸವಾರ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಸಹಸವಾರ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮೃತ ವಿದ್ಯಾರ್ಥಿಯನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಪುತ್ರ ನಿತೇಶ್(19) ಎಂದು ಗುರುತಿಸಲಾಗಿದೆ. ಬೈಕ್ ಸವಾರ ಪುತ್ತೂರು ನಿವಾಸಿ ಲಿಖಿತ್(20) ಗಂಭೀರ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಬೈಕ್‌ ಅಪಘಾತ : ಕಾಲೇಜ್‌ ವಿದ್ಯಾರ್ಥಿ ಸಾವು Read More »

ಐಪಿಎಲ್‌ ಉದ್ಘಾಟನೆಗೆ ಕ್ಷಣಗಣನೆ : ಕಾತುರದಿಂದ ಕಾಯುತ್ತಿರುವ ಕ್ರಿಕೆಟ್‌ ಪ್ರೇಮಿಗಳು

10 ತಂಡಗಳು, 74 ಪಂದ್ಯಗಳು, 65 ದಿನಗಳ ಕಾಲ ಸೆಣಸಾಟ ಬೆಂಗಳೂರು: ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಆಗಿರುವ ಐಪಿಎಲ್ ಇಂದಿನಿಂದ ಆರಂಭವಾಗುತ್ತಿದೆ. 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ಒದಗಿಸುತ್ತಿರುವ ಐಪಿಎಲ್‌ನ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಕಳೆದ ಸಾಲಿನ ಚಾಂಪಿಯನ್ ಆರ್‌ಸಿಬಿಯ ತವರು ಸ್ಟೇಡಿಯಂ ಆಗಿರುವ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದೆ. ಬೆಂಗಳೂರಿನಲ್ಲಿ ಬರೋಬ್ಬರಿ 18 ವರ್ಷ ಬಳಿಕ ಉದ್ಘಾಟನಾ ಪಂದ್ಯ ನಡೆಯಲಿದ್ದು, ಕಳೆದ ವರ್ಷದ ಭೀಕರ ಕಾಲ್ತುಳಿತ

ಐಪಿಎಲ್‌ ಉದ್ಘಾಟನೆಗೆ ಕ್ಷಣಗಣನೆ : ಕಾತುರದಿಂದ ಕಾಯುತ್ತಿರುವ ಕ್ರಿಕೆಟ್‌ ಪ್ರೇಮಿಗಳು Read More »

ಪೆಟ್ರೋಲು, ಡೀಸಿಲ್‌ ಮೇಲಿನ ಅಬಕಾರಿ ಸುಂಕ ಕಡಿತ : ಕೇಂದ್ರದ ಮಹತ್ವದ ನಿರ್ಧಾರ

ಡೀಸಿಲ್‌ 10 ರೂ.; ಪೆಟ್ರೋಲು 3 ರೂ. ಕಡಿತ : ಯುದ್ಧ ಕಾಲದಲ್ಲಿ ಜನರಿಗೆ ಲಾಭವಾಗುವ ನಡೆ ನವದೆಹಲಿ: ಮಧ್ಯಪ್ರಾಚ್ಯದ ಯುದ್ಧದ ಪರಿಸ್ಥಿತಿಯಿಂದಾಗಿ ದೇಶದಲ್ಲಿ ಪೆಟ್ರೋಲು ಮತ್ತು ಡೀಸಿಲ್‌ ಬೆಲೆ ಹೆಚ್ಚಾಗಬಹುದು ಎಂಬ ಆತಂಕ ಇರುವಾಗಲೇ ಇದಕ್ಕೆ ವ್ಯತಿರಿಕ್ತವಾಗಿ ಕೆಂದ್ರ ಸರ್ಕಾರ ಈ ಎರಡು ಇಂಧನಗಳ ಬೆಲೆಯನ್ನು ಕಡಿಮೆಗೊಳಿಸಿ ಜನರನ್ನು ತುಸು ನಿರಾಳರನ್ನಾಗಿ ಮಾಡಿದೆ. ಪೆಟ್ರೋಲು ಮೇಲೆ ಅಬಕಾರಿ ಸುಂಕವನ್ನು 3 ರೂ. ಇಳಿಸಲಾಗಿದೆ. ಅದೇ ರೀತಿ ಡೀಸಿಲ್‌ ಮೇಲಿನ ಅಬಕಾರಿ ಸುಂಕ ಬರೋಬ್ಬರಿ 10 ರೂ.

ಪೆಟ್ರೋಲು, ಡೀಸಿಲ್‌ ಮೇಲಿನ ಅಬಕಾರಿ ಸುಂಕ ಕಡಿತ : ಕೇಂದ್ರದ ಮಹತ್ವದ ನಿರ್ಧಾರ Read More »

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು

ಧಾರವಾಡ: ಜಯ ನಗರದ 4 ನೇ ಕ್ರಾಸ್‌ನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಸರೋಜಾ ಪಾಟೀಲ ಎಂಬವರ ಪುತ್ರಿ‌ ಸವಿತಾ ಹೊಂಗಲಮಠ ಎಂಬವರೇ ‌ಮೃತ ದುರ್ದೈವಿ. ಸವಿತಾ ಅವರು ಪತಿಯ ಮನೆಯಲ್ಲೇ ನೇಣಿಗೆ ಶರಣಾಗಿರುವುದಾಗಿದೆ. ಆದರೆ ಸವಿತಾ ಮನೆಯವರು ಇದು ಕೊಲೆ, ಆತ್ಮಹತ್ಯೆ ಅಲ್ಲ ಎಂಬುದಾಗಿ ಆರೋಪಿಸಿದ್ದಾರೆ. ಸವಿತಾ ಅವರಿಗೆ ಪತಿ ಮನೆಯಲ್ಲಿ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ.

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು Read More »

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು

ಉಪ್ಪಿನಂಗಡಿ: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ‌ನಂಬಿಸಿ, ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ವಾಟ್ಸಾಪ್ ಮೂಲಕ ಹಂಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಉಪ್ಪಿನಂಗಡಿ ‌ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 20 ವರ್ಷದ ಯುವತಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿಯಾಗಿದ್ದು, ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿತ ಸುಶಾಂತ್ ಪೂಜಾರಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಿರ್ಧರಿಸಿದ್ದಾಗಿ

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು Read More »

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ?

ಸಿಬಿಐಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್‌ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿರುವುದರಿಂದ ಈ ಪ್ರಕರಣ ಮರಳಿ ತನಿಖೆಯಾಗುವ ನಿರೀಕ್ಷೆ ಮೂಡಿದೆ. 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ? Read More »

error: Content is protected !!
Scroll to Top