Uncategorized

ದಸರಾ ಉದ್ಘಾಟನೆಗೆ ‌ವಿರೋಧ: ಬಾನು ಮುಷ್ತಾಕ್ ಹೇಳಿದ್ದೇನು?

ಹಾಸನ: ಯಾರು ಏನು ಬೇಕಾದರೂ ಮಾತನಾಡಲಿ, ನಾನು ಸರಿಯಾದ ಸಮಯದಲ್ಲಿ ಮತ್ತು ಸರಿಯಾದ ವೇದಿಕೆಯಲ್ಲಿ ಮಾತನಾಡುತ್ತೇನೆ ಎಂದು ದಸರಾ ಉದ್ಘಾಟನೆಗೆ ಸಂಬಂಧಿಸಿದ ಹಾಗೆ ಎದ್ದಿರುವ ಗೊಂದಲಗಳಿಗೆ ಪ್ರತಿಷ್ಟಿತ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ತಿಳಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ತಮ್ಮನ್ನು ಆಮಂತ್ರಿಸಿರುವ ಬಗ್ಗೆ ಎದ್ದಿರುವ ವಿರೋಧಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ನಾನು ಈ ಹಿಂದೆ ಏನು ಮಾತನಾಡಿದ್ದೇನೆ ಎನ್ನುವುದನ್ನು ತಿಳಿದುಕೊಂಡು ಮಾತನಾಡಲಿ. ಯಾರದ್ದೋ ವಿರೋಧಕ್ಕೆ ನಾನು ಪ್ರತಿಕ್ರಿಯೆ ನೀಡುವ ಅಗತ್ಯ ಇಲ್ಲ. ಮಾತನಾಡುವವರು ಮಾತನಾಡಲಿ. […]

ದಸರಾ ಉದ್ಘಾಟನೆಗೆ ‌ವಿರೋಧ: ಬಾನು ಮುಷ್ತಾಕ್ ಹೇಳಿದ್ದೇನು? Read More »

ಭಾರತ – ಫಿಜಿ ಸ್ನೇಹ ಸಂಬಂಧ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ: ಭಾರತ ಮತ್ತು ಫಿಜಿ ದೇಶಗಳ ಆಕಾಂಕ್ಷೆಗಳು ಒಂದೇ ದೋಣಿಯಲ್ಲಿ ಸಾಗುತ್ತವೆ ಎಂದು ಉಭಯ ರಾಷ್ಟ್ರಗಳ ಸ್ನೇಹ ಸಂಬಂಧವನ್ನು ಪ್ರಧಾನಿ ಮೋದಿ ಅವರು ಶ್ಲಾಘಿಸಿದ್ದಾರೆ. ಫಿಜಿ ಪ್ರಧಾನಿ ಸಿತಿವೇನಿ ರಬುಕಾ ಇಂಡೋ-ಪೆಸಿಫಿಕ್ ಸಾಗರ ಉಪಕ್ರಮಕ್ಕೆ ಸೇರಲು ಆಸಕ್ತಿ ವ್ಯಕ್ತಪಡಿಸಿದ ನಂತರ, ಪ್ರಧಾನ ಮಂತ್ರಿ ಮೋದಿ ಅವರು ದಕ್ಷಿಣ ಪೆಸಿಫಿಕ್ ಸಾಗರ ರಾಷ್ಟ್ರವನ್ನು ಭಾರತವು 2019 ರಲ್ಲಿ ಪ್ರಾರಂಭಿಸಿದ ಸಮಾನ ಮನಸ್ಕ ದೇಶಗಳೊಂದಿಗೆ ಕಡಲ ಪ್ರದೇಶವನ್ನು ನಿರ್ವಹಿಸಲು, ಸಂರಕ್ಷಿಸಲು ಮತ್ತು ಉಳಿಸಿಕೊಳ್ಳಲು ಬಯಸುವ ಪಾಲುದಾರಿಕೆಗೆ ಸೇರಲು ಸ್ವಾಗತಿಸಿದರು. “ನಾವು

ಭಾರತ – ಫಿಜಿ ಸ್ನೇಹ ಸಂಬಂಧ ಕೊಂಡಾಡಿದ ಪ್ರಧಾನಿ ಮೋದಿ Read More »

ಶಿವರಾಜ್ ಕುಮಾರ್ ಬಳಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಬೆಂಗಳೂರು: ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದ ನಟ ಮಡೆನೂರು ಮನು ಇಂದು ನಟ ಶಿವರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ. ನಟಿಗೆ ‌ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೈಲು ಸೇರಿದ್ದ ಸಂದರ್ಭದಲ್ಲಿ ಮನು ಅವರದ್ದು ಎನ್ನಲಾದ ಅಡಿಯೋ ಒಂದು ಸದ್ದು ಮಾಡಿತ್ತು. ಅದರಲ್ಲಿ ಶಿವರಾಜ್ ಕುಮಾರ್, ಧ್ರುವ ಸರ್ಜಾ, ದರ್ಶನ್ ಬಗ್ಗೆ ಕೆಟ್ಟದಾಗಿ ಮಾತುಗಳನ್ನಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಮನು ಇಂದು ಶಿವರಾಜ್ ಕುಮಾರ್ ಅವರ ಕಾಲಿಗೆ ಬಿದ್ದು

ಶಿವರಾಜ್ ಕುಮಾರ್ ಬಳಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು Read More »

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ. ವಿರುದ್ಧ ದಾಖಲಾದ ಪ್ರಕರಣ ಕ್ಕೆ ಸಂಬಂಧಿಸಿದ ವಿಚಾರಣೆಗೆ ತನ್ನ ವಕೀಲರ ಜೊತೆಗೆ ಎರಡನೇ ದಿನ ವಿಚಾರಣೆಗೆ ಹಾಜರಾಗಿದ್ದಾನೆ. ಆ. 24 ರಂದು ಮಧ್ಯಾನ 1.30 ರಿಂದ ಸಂಜೆ 6 ರ ವರೆಗೆ ಸಮೀರ್ ‌ವಿಚಾರಣೆ ನಡೆದಿದ್ದು, ಇಂದು ಸಹ ಮುಂದುವರೆದಿದೆ. ಇಂದು ಆತನಿಂದ ಕೆಲವು ದಾಖಲೆಗಳಿಗೆ ಸಹಿ ಹಾಕಿಸಿಕೊಂಡು ಕಳುಹಿಸಿದ್ದಾಗಿ ತಿಳಿದು ಬಂದಿದೆ.

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ Read More »

ಧರ್ಮಸ್ಥಳ ಪ್ರಕರಣ NIA ಗೆ ವಹಿಸುವ ಅಗತ್ಯ ಇಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪೊಲೀಸರು ತನಿಖೆಗೆ ಅಗತ್ಯವಾದ ಎಲ್ಲವನ್ನೂ ಮಾಡುತ್ತಾರೆ. ಅದು ಮಾಡಿ, ಇದು ಮಾಡಿ ಎನ್ನಲು ನಾವು ಯಾರು? ಮಂಪರು ಪರೀಕ್ಷೆ ಬೇಕೋ ಬೇಡವೋ ಎನ್ನುವುದನ್ನು ನಾನು ನಿರ್ಧರಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. SIT ಸರಿಯಾದ ರೀತಿಯಲ್ಲಿ ತನಿಖೆ ಮಾಡುತ್ತಿದೆ. ಅದನ್ನು NIA ಗೆ ವಹಿಸುವ ಅಗತ್ಯ ಇಲ್ಲ. ಮೊದಲು ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಿ. ಅದರಿಂದ ಸತ್ಯ ಹೊರಬರಲು ಸಾಧ್ಯವಿಲ್ಲ. ಹಾಗೆಯೇ ತನಿಖೆಯನ್ನು ಮಾಡಲು ಸಮಯ ನಿಗದಿ ಮಾಡಲು

ಧರ್ಮಸ್ಥಳ ಪ್ರಕರಣ NIA ಗೆ ವಹಿಸುವ ಅಗತ್ಯ ಇಲ್ಲ: ಡಾ. ಜಿ. ಪರಮೇಶ್ವರ್ Read More »

ಧನ್ಕರ್ ರಾಜೀನಾಮೆ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ನವದೆಹಲಿ: ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆಗೆ ‌ಸಂಬಂಧಿಸಿದ ಹಾಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ಗೃಹ ಸಚಿವ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಧನ್ಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಅನಾರೋಗ್ಯದ ಕಾರಣಗಳನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಜೊತೆಗೆ ತಮ್ಮ ಹುದ್ದೆ, ಪ್ರಧಾನಿ ಮೋದಿ ಅವರಿಗೆ ಮತ್ತು ಇತರ ಸಚಿವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ ಎನ್ನುವ ಮೂಲಕ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎನ್ನುವ ವಿಪಕ್ಷಗಳ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸತ್ಯ ಮತ್ತು ಸುಳ್ಳಿನ ವ್ಯಾಖ್ಯಾನಗಳು ವಿಪಕ್ಷಗಳ ಹೇಳಿಕೆಗಳನ್ನು

ಧನ್ಕರ್ ರಾಜೀನಾಮೆ ಬಗ್ಗೆ ಅಮಿತ್ ಶಾ ಹೇಳಿದ್ದೇನು? Read More »

ಮಾಸ್ಕ್‌ಮ್ಯಾನ್ ಬಂಧನ: ಗಿರೀಶ್ ಮಟ್ಟಣ್ಣನವರ್ ಹೇಳಿದ್ದೇನು?

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣದ ಪ್ರಮುಖ ವ್ಯಕ್ತಿ ದೂರುದಾರ ‌ಮಾಸ್ಕ್‌ಮ್ಯಾನ್ ಚೆನ್ನಯ್ಯನ ಬಂಧನವನ್ನು ಗಿರೀಶ್ ಮಟ್ಟಣ್ಣನವರ್ ಸ್ವಾಗತಿಸಿದ್ದಾರೆ. ಚೆನ್ನಯ್ಯನ ಬಂಧನ ಉತ್ತಮ ಬೆಳವಣಿಗೆ. ಆತನನ್ನು ಬಂಧಿಸಿದಕೆ ಸಾಲದು. ಆತನ ಮಂಪರು ಪರೀಕ್ಷೆ ಸಹ ಮಾಡಬೇಕು ಎಂದು ಹೇಳಿದ್ದಾರೆ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಎಲ್ಲಾ ಷಡ್ಯಂತ್ರಗಳ ಉತ್ತರವನ್ನು SIT ಅಧಿಕಾರಿಗಳೇ ಕೊಡುತ್ತಾರೆ. ಇಲ್ಲಿ ನನ್ನ ಹೆಸರೂ ಸಹ ಬರಬಹುದು. SIT ಅಧಿಕಾರಿಗಳು ಕರೆದರೆ ನಾನು ಅವನ ಮತ್ತು ನನ್ನ ನಡುವೆ ಏನು ಸಂಬಂಧ ಇದೆ

ಮಾಸ್ಕ್‌ಮ್ಯಾನ್ ಬಂಧನ: ಗಿರೀಶ್ ಮಟ್ಟಣ್ಣನವರ್ ಹೇಳಿದ್ದೇನು? Read More »

ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ವಿಚಾರಣೆಗೆ ಹಾಜರಾಗಲು ಸಮೀರ್‌ಗೆ ನೊಟೀಸ್ ನೀಡಿದ ಪೊಲೀಸರು

ಬಳ್ಳಾರಿ: ಧರ್ಮಸ್ಥಳಕ್ಕೆ ಅಪಚಾರ ಎಸಗಿದ ಪ್ರಕರಣದಲ್ಲಿ ಯೂಟ್ಯೂಬರ್ ಸಮೀರ್‌‌ಗೆ ನೊಟೀಸ್ ನೀಡಲಾಗಿದ್ದು, ಆತನ ಬಳ್ಳಾರಿಯಲ್ಲಿರುವ ಮನೆಗೆ ಪೊಲೀಸರು ನೊಟೀಸ್ ಹಚ್ಚಿ ಬಂದಿದ್ದಾರೆ. ಈ ನೊಟೀಸ್‌ನಲ್ಲಿ ಬೆಳ್ತಂಗಡಿ ಪೊಲೀಸರು ಸಮೀರ್‌ಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಸಮೀರನ ಆಧಾರ್ ಕಾರ್ಡ್‌ನಲ್ಲಿ ಸಮೀರನ ವಿಳಾಸ ಬಳ್ಳಾರಿ ಎಂದು ನಮೂದಾಗಿದ್ದು, ಈ ಹಿನ್ನೆಲೆಯಲ್ಲಿ ಬಳ್ಳಾರಿ ಮತ್ತು ಬೆಂಗಳೂರು ಮನೆಗೆ ನೊಟೀಸ್ ನೀಡಿದ್ದಾರೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ: ವಿಚಾರಣೆಗೆ ಹಾಜರಾಗಲು ಸಮೀರ್‌ಗೆ ನೊಟೀಸ್ ನೀಡಿದ ಪೊಲೀಸರು Read More »

ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಬೆಂಗಳೂರು: ಬಿಜೆಪಿ ನಾಯಕ ಬಿ. ಎಲ್. ಸಂತೋಷ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದಲ್ಲಿ ಪೊಲೀಸರಿಂದ ಬಂಧಿಸಲ್ಪಟ್ಟ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿದೆ. ಬಿ.ಎಲ್. ಸಂತೋಷ್ ಅವರನ್ನು ಅವಹೇಳನ ಮಾಡಿದ ಆರೋಪದಲ್ಲಿ ‌ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದರು. ಆ ಬಳಿಕ ಈ ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಈಗ ಜಾಮೀನು ಅರ್ಜಿ ವಿಚಾರಣೆ ನಡೆಸಿ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ತಿಮರೋಡಿ ಅವರ ಆರೋಗ್ಯದ ಹಿನ್ನೆಲೆ ಅವರಿಗೆ

ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು Read More »

ಒಂದೊಂದೇ ಸತ್ಯಗಳು ಹೊರ ಬರುತ್ತಿವೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ದೇಗುಲದ ಸೋಷಿಯಲ್ ಮೀಡಿಯಾದಲ್ಲಿ ‌ಶಿವ ರುದ್ರತಾಂಡವ ಚಿತ್ರ ಅಪ್ಲೋಡ್ ಧರ್ಮಸ್ಥಳ: ನೂರಾರು ಶವಗಳನ್ನು ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ SIT ದೂರುದಾರ ಮುಸುಕುಧಾರಿ ‌ಚೆನ್ನಯ್ಯನನ್ನೇ ಬಂಧಿಸಿದ್ದು, ಆತನಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ ಬಗ್ಗೆ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿದ್ದು, ಈ ಪ್ರಕರಣ SIT ತನಿಖೆಯಲ್ಲಿದ್ದು, ಹೆಚ್ಚೇನು ‌ಮಾತನಾಡುವುದಿಲ್ಲ. ಒಂದೊಂದೇ ಸತ್ಯಗಳು ಹೊರ ಬರುತ್ತಿದ್ದು, ಇದು ಸಂತಸ ನೀಡಿದೆ ಎಂದಿದ್ದಾರೆ. ಎಲ್ಲಾ ಆರೋಪಗಳು ಈಗ

ಒಂದೊಂದೇ ಸತ್ಯಗಳು ಹೊರ ಬರುತ್ತಿವೆ: ಡಾ. ಡಿ. ವೀರೇಂದ್ರ ಹೆಗ್ಗಡೆ Read More »

error: Content is protected !!
Scroll to Top