Uncategorized

ತನಿಖೆ ಮುಗಿಯದೆ ಏನನ್ನೂ ಹೇಳಲಾಗದು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜಿ. ಪರಮೇಶ್ವರ್ ಮಾತು

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ದೂರುದಾರ ಮುಸುಕುಧಾರಿ ಪೊಲೀಸ್ ಕಸ್ಟಡಿಯಲ್ಲಿದ್ದಾನೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಉಡುಪಿಯಲ್ಲಿ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, SIT ತನಿಖೆ ಆಂತ್ಯವಾಗುತ್ತದೆ ಎಂದು ಹೇಳಲಾಗದು. ಈ ಪ್ರಕರಣದ ಹಿಂದಿನ ಜಾಲವನ್ನು ಪತ್ತೆ ಮಾಡಲಾಗುವುದು. SIT ತನಿಖೆಯ ಅಂತಿಮ ವರದಿ ಬರುವವರೆಗೆ ಏನನ್ನೂ ಹೇಳಲಾಗದು ಎಂದು ತಿಳಿಸಿದ್ದಾರೆ. ಸುಜಾತ ಭಟ್ ಪ್ರಕರಣ […]

ತನಿಖೆ ಮುಗಿಯದೆ ಏನನ್ನೂ ಹೇಳಲಾಗದು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜಿ. ಪರಮೇಶ್ವರ್ ಮಾತು Read More »

ತಿಮರೋಡಿ 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ: ನ್ಯಾಯಾಲಯದ ಆದೇಶ

ಉಡುಪಿ: ಬಿಜೆಪಿ ನಾಯಕ ಬಿ. ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಉಡುಪಿಯ ಹೆಚ್ಚುವರಿ ಸಿವಿಲ್ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯ ಆದೇಶ ನೀಡಿದೆ. ತಿಮರೋಡಿಯನ್ನು ಪ್ರಕರಣದ ತನಿಖೆಗಾಗಿ ತಮ್ಮ ವಶಕ್ಕೆ ನೀಡುವಂತೆ ಬ್ರಹ್ಮಾವರದ ಪೊಲೀಸರು ಕೋರ್ಟ್‌ಗೆ ಮನವಿ ಮಾಡಿದ್ದರು. ಅದರಂತೆ ತಿಮರೋಡಿಯನ್ನು ‌ಒಂದು ಗಂಟೆಯ ಒಳಗಾಗಿ ನ್ಯಾಯಾಲಕ್ಕೆ ಹಾಜರುಪಡಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದರು. ಅದರಂತೆ 1.30

ತಿಮರೋಡಿ 2 ಗಂಟೆಗಳ ಕಾಲ ಪೊಲೀಸ್ ವಶಕ್ಕೆ: ನ್ಯಾಯಾಲಯದ ಆದೇಶ Read More »

RSS ಗುಣಗಾನ ‌ಮಾಡಿ ಮತ್ತೆ ಸುದ್ದಿಯಾದ ‌ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಈ ಹಿಂದೆ ಸದನದಲ್ಲಿ RSS ಗೀತೆ ಹಾಡಿ ಅಚ್ಚರಿಗೆ ‌ಕಾರಣವಾಗಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈಗ RSS ಗುಣಗಾನ ‌ಮಾಡಿ ಮತ್ತೆ ಚರ್ಚೆಗೆ ಗ್ರಾಸರಾಗಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಕೆಲವೊಮ್ಮೆ ಕೆಲವೊಂದು ಸಂಸ್ಥೆಗಳಲ್ಲಿ ಒಳ್ಳೆಯ ಗುಣಗಳಿರುತ್ತವೆ. ಅವುಗಳನ್ನು ನಾವು ಗಮನಿಸಬೇಕು ಅಲ್ಲವೇ. ನೇರವಾಗಿ ಮತ್ತು ದಿಟ್ಟವಾಗಿ ‌ಮಾತನಾಡುವುದು ನಮ್ಮ ಗುಣ. ಬೇರೆಯವರಲ್ಲಿನ ಒಳ್ಳೆಯ ಗುಣವನ್ನು ನಾವು ಗಮನಿಸಿದ್ದೇವೆ. ಅದನ್ನೇ RSS ವಿಷಯದಲ್ಲೂ ತಾವು ಮಾಡಿದ್ದಾಗಿ ಹೇಳಿದ್ದಾರೆ. ನಾನು ನನ್ನದೇ ರೀತಿಯಲ್ಲಿ ಪ್ರತಿಯೊಂದು ರಾಜಕೀಯ

RSS ಗುಣಗಾನ ‌ಮಾಡಿ ಮತ್ತೆ ಸುದ್ದಿಯಾದ ‌ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್ ಮೊದಲ ಪತ್ನಿಯಿಂದ ‌ಸ್ಪೋಟಕ ಹೇಳಿಕೆ

ಮಾಸ್ಕ್‌ಮ್ಯಾನ್ ರಹಸ್ಯಕ್ಕೆ ಮತ್ತೊಂದು ಟ್ವಿಸ್ಟ್ ಮಂಡ್ಯ: ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್‌ನ ಮೊದಲ ಪತ್ನಿ ಆತನ ಬಗ್ಗೆ ಹೇಳಿಕೆ ನೀಡಿದ್ದು, ಆಕೆಯ ಹೇಳಿಕೆ ವ್ಯಾಪಕವಾಗಿ ವೈರಲ್ ಆಗುತ್ತಿದೆ. ಮಾಧ್ಯಮಗಳ ಜೊತೆ ಮಾತನಾಡಿದ ಮಾಸ್ಕ್‌ಮ್ಯಾನ್ ಪತ್ನಿ, ಆತ ಮಹಾ ಸುಳ್ಳುಗಾರ, ಮೋಸಗಾರ ಎಂದಿದ್ದಾರೆ. ನಾನು ಅವನ ಜೊತೆ 7 ವರ್ಷ ಸಂಸಾರ ಮಾಡಿದ್ದೆ. ನಮಗೆ ಒಂದು ಗಂಡು, ಒಂದು ಹೆಣ್ಣು ಮಕ್ಕಳಿದ್ದಾರೆ. ಅವನ ಬಳಿ ಒಂದೇ ಒಂದು ಒಳ್ಳೆಯ ಗುಣಗಳಿರಲಿಲ್ಲ. ನನಗೆ ಹೊಡೆಯುವುದು, ಬಡಿಯುವುದು ಮಾಡುತ್ತಿದ್ದ. ವಿಚ್ಚೇದನ ವೇಳೆ ಜೀವನಾಂಶ

ಧರ್ಮಸ್ಥಳ ಪ್ರಕರಣದ ಮಾಸ್ಕ್‌ಮ್ಯಾನ್ ಮೊದಲ ಪತ್ನಿಯಿಂದ ‌ಸ್ಪೋಟಕ ಹೇಳಿಕೆ Read More »

ಕಾಂಗ್ರೆಸ್ ನಾಯಕಿ ಕುಸುಮಾ ‌ಮನೆ ಮೇಲೆ ED ದಾಳಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ ನಡೆಸಿದೆ. ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಎಂಬವರ ಜೊತೆಗೆ ಹಣಕಾಸಿನ ವ್ಯವಹಾರ ಮಾಡಿದ್ದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇಂದು ಬೆಳಗ್ಗಿನಿಂದಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇಂದು ED ಅಧಿಕಾರಿಗಳು ರಾಜ್ಯದ ವಿವಿಧ ಕಡೆಗಳಲ್ಲಿ ಮತ್ತು ಗೋವಾದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಕಾಂಗ್ರೆಸ್ ನಾಯಕಿ ಕುಸುಮಾ ‌ಮನೆ ಮೇಲೆ ED ದಾಳಿ Read More »

RSS ಗೀತೆ ಹಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಆರ್‌ಎಸ್‌ಎಸ್ ಗೀತೆ ‘ನಮಸ್ತೇ ಸದಾ ವತ್ಸಲೇ’ ಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಕಾಂಗ್ರೆಸ್ ನಾಯಕ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ವಿಧಾನ‌ಸೌಧದಲ್ಲಿ ಕೆಲ ಸಮಯದ ಹಿಂದೆ ನಡೆದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದ ಚರ್ಚೆ ವೇಳೆ ಈ ಘಟನೆ ನಡೆದಿದೆ. RCB ಗೆಲುವಿನಲ್ಲಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡ ಪ್ರಸ್ತಾಪ ಬಂದಾಗ ಉತ್ತರಿಸಿದ ಅವರು, ನಾನು ಕ್ರಿಕೆಟ್ ಅಭಿಮಾನಿ. ಕೆ.ಎಸ್.ಸಿ.ಎ. ಸದಸ್ಯ, ಕ್ರೀಡಾಂಗಣಕ್ಕೆ ಹೋಗಿ ಕಪ್‌ಗೂ ಮುತ್ತು ಕೊಟ್ಟು ಬಂದಿದ್ದೆ ಎಂದರು. ಹಾಗೆಯೇ

RSS ಗೀತೆ ಹಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ Read More »

ಭಾರತ ಯಾವುದೇ ಶತ್ರುಗಳನ್ನು ಶಿಕ್ಷಿಸದೆ ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಪಾಕಿಸ್ತಾನದ ವಿರುದ್ಧ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ದೇಶದ ರಕ್ಷಣಾ ನೀತಿಯಲ್ಲಿ ಹೊಸ ರೇಖೆಯನ್ನು ಎಳೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದ್ದಾರೆ. ಈ ಕಾರ್ಯಾಚರಣೆಯ ಮೂಲಕ ಭಾರತ ಯಾವುದೇ ಶತ್ರುಗಳನ್ನು ಶಿಕ್ಷಿಸದೆ ಬಿಡುವುದಿಲ್ಲ. ಹಾಗೆಯೇ ಉಗ್ರರು ಯಾವುದೇ ನರಕದಲ್ಲಿ ಅವಿತಿದ್ದರೂ ಭಾರತದ ಕ್ಷಿಪಣಿಗಳು ಅವರನ್ನು ಹೊಡೆದುರುಳಿಸುತ್ತವೆ ಎನ್ನುವ ಸ್ಪಷ್ಟ ಸಂದೇಶವನ್ನು ರವಾನೆ ಮಾಡಿದೆ ಎಂದು ಹೇಳಿದ್ದಾರೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಭಯೋತ್ಪಾದಕ ದಾಳಿಯ ಸಮಯದಲ್ಲಿ ಉಗ್ರರನ್ನು ಭೂಮಿಯಿಂದ ಧೂಳೀಪಟ ಮಾಡುವ ಪ್ರತಿಜ್ಞೆ

ಭಾರತ ಯಾವುದೇ ಶತ್ರುಗಳನ್ನು ಶಿಕ್ಷಿಸದೆ ಬಿಡುವುದಿಲ್ಲ: ಪ್ರಧಾನಿ ಮೋದಿ Read More »

ಈ ಬಾರಿಯ ದಸಾರದಲ್ಲಿ ‌ರಾರಾಜಿಸಲಿದೆಯೇ ಏರ್ ಶೋ?

ಮೈಸೂರು: ಈ ಬಾರಿಯ ನಾಡ ಹಬ್ಬ ದಸರಾ ಹಬ್ಬದ ಮೆರುಗು ಹೆಚ್ಚಿಸುವ ಸಲುವಾಗಿ ವೈಮಾನಿಕ ಪ್ರದರ್ಶನ (ಏರ್ ಶೋ) ಆಯೋಜನೆ ಮಾಡಲಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಬರೆದಿರುವ ಧನ್ಯವಾದ ಪತ್ರದಲ್ಲಿ ಈ ಮಾಹಿತಿ ಲಭ್ಯವಾಗಿದೆ. ಆದರೆ ಈ ಏರ್ ಶೋ ಎಲ್ಲಿ ಮತ್ತು ಯಾವಾಗ ಆಯೋಜನೆ ಮಾಡಲಾಗುತ್ತದೆ ಎನ್ನುವ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ‌. ಎರಡು ತಿಂಗಳ ಹಿಂದೆ ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಸಿಎಂ ಸಿದ್ದರಾಮಯ್ಯ

ಈ ಬಾರಿಯ ದಸಾರದಲ್ಲಿ ‌ರಾರಾಜಿಸಲಿದೆಯೇ ಏರ್ ಶೋ? Read More »

ಪಿಒಪಿ ಗಣೇಶನ ಮೂರ್ತಿ ಬಳಸದಂತೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಈ ಬಾರಿಯ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಗಣೇಶನ ಮೂರ್ತಿಗಳನ್ನೇ ಬಳಕೆ ಮಾಡುವಂತೆ ಸಚಿವ ಈಶ್ವರ ಖಂಡ್ರೆ ಅವರು ಮನವಿ ಮಾಡಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ಮೂರ್ತಿಗಳ ಬಳಕೆ ಮಾಡುವುದಿಲ್ಲ ಎಂದು ಗಣೇಶ ಕೂರಿಸುವವರಿಂದ ಮುಚ್ಚಳಿಕೆ ಬರೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮೊದಲಾದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಣ್ಣಿನ ಗಣಪತಿಯನ್ನೇ ‌ಪೂಜೆಗೆ ಕೂರಿಸುತ್ತಾರೆ. ಹಾಗಿರುವಾಗ ಇದು ಉಳಿದ ಜಿಲ್ಲೆಗಳಲ್ಲಿ ಏಕೆ ಸಾಧ್ಯವಿಲ್ಲ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಆಡಳಿತ

ಪಿಒಪಿ ಗಣೇಶನ ಮೂರ್ತಿ ಬಳಸದಂತೆ ಈಶ್ವರ ಖಂಡ್ರೆ ಸೂಚನೆ Read More »

RCB ವಿಜಯೋತ್ಸವದಲ್ಲಿ ಕಾಲ್ತುಳಿತ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಆರ್. ಅಶೋಕ್

ಬೆಂಗಳೂರು: ಸರ್ಕಾರ ಆಯೋಜಿಸಿದ RCB ವಿಜಯೋತ್ಸವ ಕಾರ್ಯಕ್ರಮದಲ್ಲಿ 11 ಮಂದಿ ಮೃತಪಟ್ಚಿದ್ದಾರೆ. ಸರ್ಕಾರದಿಂದ ತಪ್ಪು ನಡೆದಿದ್ದು, ಕ್ಷಮಾಪಣೆ ಕೇಳುವಂತೆ ವಿಪಕ್ಷ ‌ನಾಯಕ R. ಅಶೋಕ್ ಅವರು ಆಗ್ರಹಿಸಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಉತ್ತರ ನೀಡಿದ್ದು, ಈ ಸಂದರ್ಭದಲ್ಲಿ ಅಶೋಕ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವುದಾಗಿದೆ. ಈ ದುರಂತದಲ್ಲಿ ಸರ್ಕಾರದಿಂದ ತಪ್ಪಾಗಿದೆ‌. ಕ್ಷಮೆಯನ್ನೂ ನೀವು ಕೇಳಿಲ್ಲ. ವರದಿಯಲ್ಲಿ ಎಲ್ಲಾ ತಪ್ಪುಗಳನ್ನು ಪೊಲೀಸ್ ಆಯುಕ್ತರ ಮೇಲೆಯೇ ಹಾಕಲಾಗಿದೆ. ಅವರನ್ನು ಅಮಾನತು ಮಾಡಿ‌

RCB ವಿಜಯೋತ್ಸವದಲ್ಲಿ ಕಾಲ್ತುಳಿತ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಆರ್. ಅಶೋಕ್ Read More »

error: Content is protected !!
Scroll to Top