Uncategorized

ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್‌ನಲ್ಲೂ ಸಿಕ್ಕಿಲ್ಲ ಶವದ ಕುರುಹು

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದೂರುದಾರ ಅನಾಮಿಕ ಗುರುತಿಸಿದ 17 ನೇ ಸ್ಥಳದಲ್ಲಿ SIT ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ರೀತಿಯ ಶವದ ಕುರುಹು ಲಭ್ಯವಾಗಿಲ್ಲ ಎನ್ನಲಾಗಿದೆ. ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ಒಳಗಿನ ಸರ್ಕಾರಿ ಜಾಗದಲ್ಲಿ 17 ನೇ ಪಾಯಿಂಟ್ ಇದ್ದು, ಅಲ್ಲಿ ಕಾರ್ಯಾಚರಣೆ ನಡೆಸಲು ದೂರುದಾರನ ಜೊತೆಗೆ SIT ಆಗಮಿಸಿದೆ. ಈ ಸ್ಥಳಕ್ಕೆ ಖಾಸಗಿ ಗೇಟ್ ಒಂದನ್ನು ಹಾದು ಹೋಗಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ವ್ಯಕ್ತಿಯನ್ನು ಕರೆಸಿ ಗೇಟ್ ಬೀಗ […]

ಧರ್ಮಸ್ಥಳ ಪ್ರಕರಣ: 17 ನೇ ಪಾಯಿಂಟ್‌ನಲ್ಲೂ ಸಿಕ್ಕಿಲ್ಲ ಶವದ ಕುರುಹು Read More »

79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ

ನವದೆಹಲಿ: ಐತಿಹಾಸಿಕ ಕೆಂಪು ಕೋಟೆಯ ಮೇಲೆ ನಾಳೆ 79 ನೇರ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಪ್ರಧಾನಿ ಮೋದಿ ಅವರು ಧ್ವಜಾರೋಹಣ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪು ಕೋಟೆ ಸರ್ವ ರೀತಿಯಲ್ಲಿ ಸಜ್ಜಾಗಿದೆ. ಸ್ವಾತಂತ್ರ್ಯ ದಿನದ ಬೆಳಗ್ಗೆ 9 ಗಂಟೆಗೆ ಕೆಂಪು ಕೋಟೆಯಲ್ಲಿ ಸಶಸ್ತ್ರ ಪಡೆಗಳು ಮತ್ತು ದೆಹಲಿ ಪೊಲೀಸರಿಂದ ಗೌರವ ವಂದನೆಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜ ಹಾರಿಸಲಿದ್ದಾರೆ. ನಂತರ ರಾಷ್ಟ್ರಗೀತೆ ಹಾಡಲಾಗುವುದು. 21 ಗುಂಡುಗಳ ಗೌರವ ವಂದನೆ ಮತ್ತು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ಗಳಿಂದ ಹೂವಿನ

79 ನೇ ಸ್ವಾತಂತ್ರ್ಯ ದಿನಕ್ಕೆ ಸಜ್ಜಾದ ಕೆಂಪುಕೋಟೆ Read More »

ದರ್ಶನ್ ಜಾಮೀನು ರದ್ದು: ಸಂತಸ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಕುಟುಂಬ

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ದರ್ಶನ್ ತೂಗುದೀಪ್, ಪವಿತ್ರ ಗೌಡ ಮತ್ತು ಇತರ ಆರೋಪಿಗಳ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಮೃತನ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ರೇಣುಕಾಸ್ವಾಮಿ ತಾಯಿ ರತ್ನಪ್ರಭಾ ಮಾತನಾಡಿ, ತಮ್ಮ ಮಗನ ಸಾವಿಗೆ ನ್ಯಾಯ ಒದಗಿಸುವ ಭರವಸೆ ಇದೆ ಎಂದು ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಬೇಕು. ನಮ್ಮ ಮನೆಯವರು ಪೂಜೆಗೆ ಕುಳಿತ ಸಮಯದಲ್ಲೇ ಸುಪ್ರೀಂ ಕೋರ್ಟ್ ಆದೇಶ ಬಂದಿದೆ‌. ಈ ತೀರ್ಪಿನಿಂದ ಸಂತೋಷವಾಗಿದ್ದು, ನನ್ನ ಪತಿ

ದರ್ಶನ್ ಜಾಮೀನು ರದ್ದು: ಸಂತಸ ವ್ಯಕ್ತಪಡಿಸಿದ ರೇಣುಕಾಸ್ವಾಮಿ ಕುಟುಂಬ Read More »

ದರ್ಶನ್ ಜಾಮೀನು ರದ್ದು: ನಟಿ ರಮ್ಯಾ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದ್ದು, ಈ ಹಿನ್ನೆಲೆ‌ಯಲ್ಲಿ ನಟಿ ರಮ್ಯಾ ಅವರು ಇನ್ಸ್ಟಾಗ್ರಾಮ್‌ನಲ್ಲಿ ‌ಸ್ಟೋರಿ ಹಾಕಿಕೊಂಡಿದ್ದಾರೆ. ರೇಣುಕಾಸ್ವಾಮಿ ‌ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರ ಜಾಮೀನು ರದ್ದುಗೊಳಿಸಿರುವ ಸುಪ್ರೀಂ ಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎನ್ನುವ ಬಲವಾದ ಸಂದೇಶವನ್ನು ರವಾನಿಸಿದೆ. ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ ಎಂದು ನಾನು ಉಳಿದವರಿಗೂ ಹೇಳಲು ಬಯಸುತ್ತೇನೆ. ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಡಿ. ಈ ಪ್ರಯಾಣ ಧೀರ್ಘ ಮತ್ತು ಕಠಿಣ.

ದರ್ಶನ್ ಜಾಮೀನು ರದ್ದು: ನಟಿ ರಮ್ಯಾ ಹೇಳಿದ್ದೇನು ಗೊತ್ತಾ? Read More »

ಆ. 16 – 18: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ

ಬೆಂಗಳೂರು: 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಆಗಸ್ಟ್ 16, 17 ಮತ್ತು 18 ರಂದು ಒಟ್ಟು ಮೂರು ದಿನಗಳು ರಾಜಭವನದ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಜಭವನ ಮಾಹಿತಿ ನೀಡಿದೆ. ಸದರಿ ಮೂರು ದಿನಗಳು ಸಂಜೆ 6 ರಿಂದ 7:30 ಗಂಟೆಯವರೆಗೆ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ರಾಜಭವನದ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರು ಸರ್ಕಾರದಿಂದ ವಿತರಿಸಿರುವ/ಸ್ಪಷ್ಟವಾಗಿ ಭಾವಚಿತ್ರವಿರುವ ಐ.ಡಿ. ಕಾರ್ಡ್ ಅನ್ನು ಕಡ್ಡಾಯವಾಗಿ ತರುವುದು. ರಾಜಭವನದ ಪ್ರವೇಶದ ಸಂದರ್ಭದಲ್ಲಿ ಕಡ್ಡಾಯವಾಗಿ ಭದ್ರತಾ ತಪಾಸಣೆಗೆ ಒಳಪಡುವುದು.

ಆ. 16 – 18: ರಾಜಭವನ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ Read More »

ಅನಾಮಿಕ ದೂರುದಾರನನ್ನು ಒದ್ದು ಒಳಗೆ ಹಾಕಿ: ಈರಣ್ಣ ಕಡಾಡಿ

ಬೆಳಗಾವಿ: ಧಾರ್ಮಿಕ ಶ್ರದ್ಧಾ ಕೇಂದ್ರ ಧರ್ಮಸ್ಥಳದ ಮೇಲೆ ಅಪಪ್ರಚಾರ ಮಾಡುತ್ತಿರು‌ವವರ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಮಿಕ ದೂರುದಾರನನ್ನು ಬಂಧಿಸಿ ಈ ನಾಟಕಕ್ಕೆ ಮಂಗಳ ಹಾಡುವಂತೆ ಅವರು ರಾಜ್ಯ ಸರ್ಕಾರ, SIT ತಂಡಕ್ಕೆ ಒತ್ತಾಯಿಸಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ನೂರಾರು ಹೆಣಗಳನ್ನು ಹೂತಿದ್ದಾಗಿ ದೂರುದಾರನ ದೂರಿನನ್ವಯ, ಹಲವು ಕಡೆಗಳಲ್ಲಿ ಈಗಾಗಲೇ SIT ಅಧಿಕಾರಿಗಳು ಹಲವಾರು ಕಡೆಗಳಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಯಾವುದೇ ಕುರುಹುಗಳು ಸಿಕ್ಕಿಲ್ಲ. ಈ

ಅನಾಮಿಕ ದೂರುದಾರನನ್ನು ಒದ್ದು ಒಳಗೆ ಹಾಕಿ: ಈರಣ್ಣ ಕಡಾಡಿ Read More »

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ವಚ್ಛತೆ, ಗೌರವಾರ್ಪಣೆ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕಾರ್ಯಕ್ರಮ ಮಂಗಳೂರು: ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ಮಹಿಳಾ ಮೋರ್ಚಾದ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಸ್ವಚ್ಛತಾ ಮತ್ತು ಗೌರವಾರ್ಪಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಸ್ವಾತಂತ್ರ್ಯ ಹೋರಾಟಗಾರ ಜ ಕೆದಂಬಾಡಿ ರಾಮಯ್ಯಗೌಡರ ಸ್ವಾತಂತ್ರ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆ ಸ್ವಚ್ಛತೆ, ಗೌರವಾರ್ಪಣೆ Read More »

ಮಹಿಳೆಯರ ಸುರಕ್ಷತೆಗೆ ರಾಜ್ಯದಲ್ಲಿ ಅಕ್ಕ ಪಡೆ ಜಾರಿ?

ಈ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಏನಂದ್ರು ಗೊತ್ತಾ? ಬೆಂಗಳೂರು: ಶಾಲೆ, ಕಾಲೇಜು ವಿದ್ಯಾರ್ಥಿನಿಯರು, ಮಹಿಳೆಯರ ಸುರಕ್ಷತಾ ದೃಷ್ಟಿಯಿಂದ ಮಹಿಳಾ ಪೊಲೀಸರನ್ನೊಳಗೊಂಡ ಅಕ್ಕ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈಗಾಗಲೇ ಬೀದರ್ ಜಿಲ್ಲೆಯಲ್ಲಿ ಅಕ್ಕ ಕಾರ್ಯ ಪಡೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಆಗಸ್ಟ್ 15 ರಿಂದ ಬೆಳಗಾವಿ, ಮೈಸೂರು ಮತ್ತು ಮಂಗಳೂರಿನಲ್ಲಿ ಅಕ್ಕ ಪಡೆ ಆರಂಭ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಮಳೆಗಾಲದ ಅಧಿವೇಶನದ ಮೂರನೇ ದಿನ ಚಿಕ್ಕನಾಯಕನಹಳ್ಳಿ ಕ್ಷೇತ್ರದ

ಮಹಿಳೆಯರ ಸುರಕ್ಷತೆಗೆ ರಾಜ್ಯದಲ್ಲಿ ಅಕ್ಕ ಪಡೆ ಜಾರಿ? Read More »

ಹಬ್ಬಗಳ ಹಿನ್ನೆಲೆ ಡಿಜೆ ನಿಷೇಧಕ್ಕೆ ‌ಸರ್ಕಾರ ಆದೇಶ

ಬೆಂಗಳೂರು: ಗಣೇಶ ಚತುರ್ಥಿ ಮತ್ತು ಈದ್ ಹಬ್ಬದ ಆಚರಣೆಗಳು ಮುಗಿಯುವ ವರೆಗೆ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಿಸುವಂತೆ ರಾಜ್ಯದ ಜಿಲ್ಲಾಧಿಕಾರಿಗಳಿಗೆ ‌ಸರ್ಕಾರ ಆದೇಶ ನೀಡಿದೆ. ದಿನಾಂಕ ಆ. 27 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಹೀಗಾಗಿ ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ಸೆ.

ಹಬ್ಬಗಳ ಹಿನ್ನೆಲೆ ಡಿಜೆ ನಿಷೇಧಕ್ಕೆ ‌ಸರ್ಕಾರ ಆದೇಶ Read More »

ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ‌ ಸವಾರ ಸಾವು

ಮಂಗಳೂರು: ಉಳ್ಳಾಲದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆಯಲ್ಲಿ ಸ್ಕಿಡ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮನೆಯ ಕಾಂಪೌಂಡ್ ಗೋಡೆಯೊಂದಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಚ ಘಟನೆ ನಡೆದಿದೆ. ಪಿಲಾರು ‌ಮಹಾಲಕ್ಷ್ಮೀ ಮಂದಿರದ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್ ಅವರೇ ಮೃತ ದುರ್ದೈವಿ. ಮೃತರು ಖಾಸಗಿ ಕಂಪೆನಿಯೊಂದರ ಎಲೆಕ್ಟ್ರಿಕ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಮಂಗಳವಾರ ರಾತ್ರಿ ಕೆಲಸ‌ ಮುಗಿಸಿ ಮನೆಗೆ ಮರಳಿನ ವೇಳೆ ಈ ದುರಂತ ನಡೆದಿದೆ. ರಾಘವೇಂದ್ರ ಅವರ

ಬೈಕ್ ಸ್ಕಿಡ್: ಗಂಭೀರ ಗಾಯಗೊಂಡ‌ ಸವಾರ ಸಾವು Read More »

error: Content is protected !!
Scroll to Top