Uncategorized

ಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?

ಬೆಂಗಳೂರು: ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಧರ್ಮಸ್ಥಳ ಪ್ರಕರಣ ಸದನದಲ್ಲಿ ಕೋಲಾಹಲ ಎಬ್ಬಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಸದನದಲ್ಲಿ ಉತ್ತರ ನೀಡಿದ್ದು, ರಾಜ್ಯ ಸರ್ಕಾರ ರಚನೆ ಮಾಡಿದ SIT ತಂಡದ ಕಾರ್ಯಾಚರಣೆಯಲ್ಲಿ ಎರಡು ಕಡೆಗಳಲ್ಲಿ ಒಂದು ಅಸ್ಥಿಪಂಜರ ಮತ್ತು ಒಂದಷ್ಟು ಮೂಳೆಗಳು ದೊರಕಿವೆ. ಅದನ್ನು ಎಸ್‌ಎಫ್‌ಎಲ್ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿ ಲಭ್ಯವಾಗಿಲ್ಲ. ವರದಿ ದೊರೆಯುವ ವರೆಗೆ ಉತ್ಖನನ ಸ್ಥಗಿತಗೊಳಿಸಲಾಗುತ್ತದೆ ಎಂದಿದ್ದಾರೆ. ಅಗೆದ ಇತರೆ ಜಾಗಗಳಲ್ಲಿ ಮೂಳೆಗಳು ಕೆಂಪು […]

ಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ? Read More »

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ‌ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ 24 ಕೊಲೆಗಳ ಆರೋಪ ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು ಎಫ್.ಐ.ಆರ್. ದಾಖಲಿಸಿ ಬಂಧಿಸುವಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ. ಬಿಎನ್‌ಎಸ್ ಕಾಯ್ದೆಯಡಿ ಅವಹೇಳನ ಮಾಡಿದ ಆರೋಪದಲ್ಲಿ ಬಂಧಿಸಲು ಸೂಚನೆ ನೀಡಲಾಗಿದೆ. ಇತ್ತೀಚೆಗಷ್ಟೇ ಮಾಧ್ಯಮಗಳ ಮುಂದೆ ತಿಮರೋಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಗೃಹ ಸಚಿವರ ಆದೇಶದ ಅನ್ವಯ

ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ‌ಸೂಚನೆ Read More »

ಸಂವಿಧಾನ ಉಳಿಸುವುದಾಗಿ ಹೇಳುವವರೇ ಅದನ್ನು ತುಳಿಯುತ್ತಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಸಂವಿಧಾನವನ್ನು ತಲೆ ಮೇಲೆ ಹೊತ್ತು ಕುಣಿದಾಡಿದವರು ಸಂವಿಧಾನವನ್ನು ತುಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ. ದಶಕಗಳಿಂದ ದಬ್ಬಾಳಿಕೆಯ ಕಾನೂನುಗಳನ್ನು ಉಳಿಸಿಕೊಂಡು ಬಂದು ಡಾ. ಅಂಬೇಡ್ಕರ್ ಅವರ ನಿಲುವುಗಳಿಗೆ ಧಕ್ಕೆ ತರಲಾಗಿದೆ. ಹಿಂದಿನ ಸರ್ಕಾರಗಳು ಪೌರ ಕಾರ್ಮಿಕರನ್ನು ಗುಲಾಮರ ಹಾಗೆ ನಡೆಸಿಕೊಂಡಿದ್ದವು. ಹಾಗೆಯೇ . ದಿಲ್ಲಿ ಪಾಲಿಕೆಯ ನಿಯಮದನ್ವಯ ಅನುಮತಿ ಪಡೆಯದೆ ರಜೆ‌‌ ಮಾಡುವ ಪೌರ ಕಾರ್ಮಿಕರಿಗೆ 1 ತಿಂಗಳ ಜೈಲು ಶಿಕ್ಷೆ ನೀಡಲಾಗುತ್ತಿತ್ತು. ಸಾಮಾಜಿಕ ನ್ಯಾಯದ ಬಗ್ಗೆ ಭಾಷಣ ಮಾಡುವವರೇ ಇಂತಹ

ಸಂವಿಧಾನ ಉಳಿಸುವುದಾಗಿ ಹೇಳುವವರೇ ಅದನ್ನು ತುಳಿಯುತ್ತಿದ್ದಾರೆ: ಪ್ರಧಾನಿ ಮೋದಿ Read More »

ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ

ನವದೆಹಲಿ: ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾತನಾಡುವ ಸಾಧ್ಯತೆ ಇರುವುದಾಗಿ ಮೂಲಗಳು ಹೇಳಿವೆ. ಶುಭಾಂಶು ಅವರು ಪ್ರಧಾನಿ ಅವರೊಂದಿಗೆ ತಮ್ಮ ಅಂತರಾಷ್ಟ್ರೀಯ ಬಾಹ್ಯಾಕಾಶ ಯಾನದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಆ‌ ಬಳಿಕ ಅವರು ತಮ್ಮ ತವರೂರು ಲಕ್ನೋ‌ಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆಕ್ಸಿಯಂ-4 ಮಿಷನ್ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ಎನ್ನುವ ಖ್ಯಾತಿಗೆ ಭಾಜನರಾದವರು. ಅವರು ಭೂಮಿಗೆ ಬಂದಿಳಿದ ಬಳಿಕ

ಗಗನಯಾತ್ರಿ ಶುಭಾಂಶು ಶುಕ್ಲಾ ಅವರಿಂದ ಪ್ರಧಾನಿ ಮೋದಿ ಭೇಟಿ ಸಾಧ್ಯತೆ Read More »

ಮುಸುಕುಧಾರಿ ವ್ಯಕ್ತಿಯನ್ನು SIT ತನಿಖೆ ನಡೆಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ

ಕಾರವಾರ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ದೂರು ನೀಡಿದ ಮುಸುಕುಧಾರಿ ‌ವ್ಯಕ್ತಿಯನ್ನು ಸರಿಯಾಗಿ ತನಿಖೆ ನಡೆಸಿ, ಷಡ್ಯಂತ್ರ ಬಯಲು ಮಾಡುವ ಕೆಲಸವನ್ನು ಸರ್ಕಾರ ಮಾಡಲಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ‌ತಿಳಿಸಿದ್ದಾರೆ. ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ಸರ್ಕಾರ SIT ರಚನೆ ಮಾಡಿದ್ದರ ಬಗ್ಗೆಯೇ ಅನುಮಾನವಿದೆ. ಕ್ಷೇತ್ರದ ಹೆಸರು ಹಾಳು ಮಾಡಲು ಎಡಪಂಥೀಯರ ಜೊತೆಗೆ ಸಿಎಂ ಸಿದ್ದರಾಮಯ್ಯ ಕೈಜೋಡಿಸಿದ್ದಾರೆಯೇ ಎಂಬ ಬಗ್ಗೆ ಸಂದೇಹ ಇದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಸುಕುಧಾರಿ ವ್ಯಕ್ತಿಯನ್ನು SIT ತನಿಖೆ ನಡೆಸಲಿ: ವಿಶ್ವೇಶ್ವರ ಹೆಗಡೆ ಕಾಗೇರಿ Read More »

ಆಪರೇಷನ್ ಸಿಂಧೂರ್‌ನಲ್ಲಿ 150 ಪಾಕ್ ಸೈನಿಕರು ಹತ: ಪಾಕ್ ಟಿವಿ ಮಾಧ್ಯಮದಲ್ಲಿ ವರದಿ

ಇಸ್ಲಾಮಾಬಾದ್: ಪಾಕಿಸ್ತಾನದ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಇಸ್ಲಾಮಾಬಾದ್ 150 ಕ್ಕೂ ಅಧಿಕ ಸೈನಿಕರನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನದ ಸಮಾ ಟಿವಿ ವರದಿ ಮಾಡಿದ್ದು, ನಂತರ ಆ ವರದಿಯನ್ನು ಅಳಿಸಿ ಹಾಕಿದೆ. ಈ ಸುದ್ದಿಯಲ್ಲಿ ಪಾಕ್ ಅಧ್ಯಕ್ಷರು, ಆಪರೇಷನ್ ಬುನ್ಯಾನುನ್ ಮಾರ್ಸೂಸ್ ಸಮಯದಲ್ಲಿ ಧೈರ್ಯ ಮತ್ತು ಸರ್ವೋಚ್ಚ ತ್ಯಾಗಕ್ಕಾಗಿ” ನೀಡಿದ ಶೌರ್ಯ ಪ್ರಶಸ್ತಿಗಳ ಪಟ್ಟಿಯನ್ನು ಸಹ ಒಳಗೊಂಡಿದೆ. ಆಪರೇಷನ್ ಬುನ್ಯಾನುನ್ ಮಾರ್ಸೂಸ್ ಪಾಕ್ ತನ್ನ ವಾಯುನೆಲೆಗಳ ಮೇಲೆ ಭಾರತೀಯ ದಾಳಿಗೆ ಪಾಕಿಸ್ತಾನ ನೀಡಿದ ಪ್ರತೀಕಾರದ

ಆಪರೇಷನ್ ಸಿಂಧೂರ್‌ನಲ್ಲಿ 150 ಪಾಕ್ ಸೈನಿಕರು ಹತ: ಪಾಕ್ ಟಿವಿ ಮಾಧ್ಯಮದಲ್ಲಿ ವರದಿ Read More »

ಸೆ.28 : ಪುತ್ತೂರು ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಪಿಲಿಗೊಬ್ಬು ಸೀಸನ್‍-3, ಫುಡ್‍ ಫೆಸ್ಟ್ : ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ, ಜನಪರ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಮಾಡುತ್ತಾ ಬಂದಿರುವ ವಿಜಯ ಸಾಮ್ರಾಟ್ ಪುತ್ತೂರು ಇದರ ಸ್ಥಾಪಕ ಅಧ್ಯಕ್ಷ ಹಾಗು ಗೌರವಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ಮುಂದಾಳುತ್ವದಲ್ಲಿ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ನಡೆಯುವ ಪುತ್ತೂರುದ ಪಿಲಿಗೊಬ್ಬು ಸೀಸನ್‍ 3 ಹಾಗೂ ಫುಡ್ ಫೆಸ್ಟ್ ಸೆ.28ರಂದು ನಡೆಯಲಿದ್ದು ಅದರ ಆಮಂತ್ರಣ ಪತ್ರ ಭಾನುವಾರ  ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ ಇದರ ಸ್ಥಾಪಕ

ಸೆ.28 : ಪುತ್ತೂರು ವಿಜಯ ಸಾಮ್ರಾಟ್ ನೇತೃತ್ವದಲ್ಲಿ ಪಿಲಿಗೊಬ್ಬು ಸೀಸನ್‍-3, ಫುಡ್‍ ಫೆಸ್ಟ್ : ಆಮಂತ್ರಣ ಪತ್ರಿಕೆ ಬಿಡುಗಡೆ Read More »

ಧರ್ಮಸ್ಥಳ ಕ್ಷೇತ್ರ ಅಪವಿತ್ರ ಮಾಡಲು ಬಿಡುವುದಿಲ್ಲ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಹೇಳಿದ್ದಾರೆ. ಆನಂದಪುರದಲ್ಲಿ ‌ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಭಕ್ತಾದಿಗಳ ನಂಬಿಕೆಯ ಕ್ಷೇತ್ರ ಧರ್ಮಸ್ಥಳ. ಅಂತಹ ಕ್ಷೇತ್ರವನ್ನು ಅಪವಿತ್ರ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ. ಅನಾಮಿಕ ದೂರುದಾರ ‌ನ್ಯಾಯಾಲಯದ ಮೊರೆ ಹೋದ ಹಿನ್ನೆಲೆಯಲ್ಲಿ SIT ತಂಡವನ್ನು ಈ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ರಾಜ್ಯ ಸರ್ಕಾರ ರಚನೆ ಮಾಡಿದೆ. ಆದರೆ ಆತ ಗುರುತಿಸಿದ ಯಾವ ಸ್ಥಳದಲ್ಲೂ ಕುರುಹುಗಳು ಸಿಕ್ಕಿಲ್ಲ. ಧರ್ಮಸ್ಥಳ ಎಂಬ ಪವಿತ್ರ

ಧರ್ಮಸ್ಥಳ ಕ್ಷೇತ್ರ ಅಪವಿತ್ರ ಮಾಡಲು ಬಿಡುವುದಿಲ್ಲ: ಬೇಳೂರು ಗೋಪಾಲಕೃಷ್ಣ Read More »

ಶತಮಾನ ಕಂಡ RSS: ಪ್ರಧಾನಿ ಮೋದಿ ಹರ್ಷ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಪ್ರಧಾನಿ ಮೋದಿ ಅವರು 100 ವರ್ಷಗಳ ಸೇವೆಯನ್ನು ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಶ್ಲಾಘಿಸಿದ್ದಾರೆ. ಶತಮಾನಗಳ ಇತಿಹಾಸ ಹೊಂದಿದ RSS ದೇಶ ಕಟ್ಟುವಲ್ಲಿ ಸಲ್ಲಿಸಿದ ಸೇವೆ ಅಪಾರವಾದುದು ಎಂದು ತಿಳಿಸಿದ್ದಾರೆ. ಈ ಸ್ವಾತಂತ್ರ್ಯ ಸಂಭ್ರಮದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಉಲ್ಲೇಖಿಸಲು ನಾನು ಹೆಮ್ಮೆ ಪಡುತ್ತೇನೆ. ನೂರು ವರ್ಷಗಳಿಂದ ಸಲ್ಲಿಸುತ್ತಿರುವುದು ಹೆಮ್ಮೆಯ ಮತ್ತು ಸುವರ್ಣ ಅಧ್ಯಾಯವಾಗಿದೆ. ವ್ಯಕ್ತಿ‌ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ ಎಂಬ ಸಂಕಲ್ಪ ಮತ್ತು ಭಾರತದ ಕಲ್ಯಾಣ ಗುರಿಗಳ ಜೊತೆಗೆ

ಶತಮಾನ ಕಂಡ RSS: ಪ್ರಧಾನಿ ಮೋದಿ ಹರ್ಷ Read More »

ರಾಷ್ಟ್ರಪತಿ ಮುರ್ಮು ಅವರಿಂದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ‌ಗೌರವಾರ್ಪಣೆ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಧೈರ್ಯಶಾಲಿಗಳಿಗೆ ಗೌರವ ಸಲ್ಲಿಸಿ, ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವಾರ್ಪಣೆ ಮಾಡಿದರು. ಈ‌ಸಂದರ್ಭದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಅನಿಲ್‌ ಚೌಹಾಣ್‌, ವಾಯುಪಡೆಯ ಮುಖ್ಯಸ್ಥ ಅಮರ್ ಪ್ರೀತ್ ಸಿಂಗ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರು ರಾಷ್ಚ್ರಪತಿಗಳ ಜೊತೆಗಿದ್ದರು. ವಾಯುಪಡೆಯ ಇಬ್ಬರು ಮಹಿಳಾ ಅಧಿಕಾರಿಗಳು ಮಾಲಾರ್ಪಣೆ ಮಾಡಿದರು. ರಕ್ಷಣಾ

ರಾಷ್ಟ್ರಪತಿ ಮುರ್ಮು ಅವರಿಂದ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ವೀರ ಯೋಧರಿಗೆ ‌ಗೌರವಾರ್ಪಣೆ Read More »

error: Content is protected !!
Scroll to Top