Uncategorized

ಶಬರಿಮಲೆ ಯಾತ್ರೆಗೆ ಸರ್ಕಾರದಿಂದ ಮಾನ್ಯತೆ ನೀಡಿದ ಶ್ರೀಲಂಕಾ

ಕೊಲಂಬೊ: ಶ್ರೀಲಂಕಾದ ಅಯ್ಯಪ್ಪ ಭಕ್ತರು ವಾರ್ಷಿಕ ತೀರ್ಥಯಾತ್ರೆಯನ್ನು ‌ಶಬರಿಮಲೆಗೆ ಕೈಗೊಳ್ಳಬಹುದು ಎಂದು ಅಲ್ಲಿನ ಸರ್ಕಾರ ನಿರ್ಧರಿಸಿದೆ. ಶ್ರೀಲಂಕಾದ ಭಕ್ತರು ಸಹ ಅಯ್ಯಪ್ಪನನ್ನು ಆರಾಧಿಸುತ್ತಾರೆ. ಹಾಗೆಯೇ ಸುಮಾರು ಹದಿನೈದು ಸಾವಿರಕ್ಕೂ ಅಧಿಕ ಅಯ್ಯಪ್ಪ ಭಕ್ತರು ಪ್ರತಿ ವರ್ಷ ಶಬರಿಮಲೆಗೆ ಭೇಟಿ ನೀಡುತ್ತಾರೆ. ಈ ಕಾರಣದಿಂದ ಶಬರಿಮಲೆ ಯಾತ್ರೆಗೆ ಸರ್ಕಾರದ ಮಾನ್ಯತೆಯನ್ನು ಅಲ್ಲಿನ ಸರ್ಕಾರ ನೀಡಿರುವುದಾಗಿದೆ. ವರ್ಷದ ಪ್ರತಿ ನವೆಂಬರ್ ತಿಂಗಳಿನಿಂದ ಡಿಸೆಂಬರ್‌ ವರೆಗೆ ಮಂಡಲ ಪೂಜೆ ಮತ್ತು ಜನವರಿಯಲ್ಲಿ ಮರಕ ಸಂಕ್ರಮಣ ಶಬರಿಮಲೆಯಲ್ಲಿ ನಡೆಯುತ್ತದೆ.

ಶಬರಿಮಲೆ ಯಾತ್ರೆಗೆ ಸರ್ಕಾರದಿಂದ ಮಾನ್ಯತೆ ನೀಡಿದ ಶ್ರೀಲಂಕಾ Read More »

ಪ್ರಧಾನಿ ಅವರಿಗೆ ನೀಡಿದ ಬೆಳ್ಳಿ ಗಣೇಶನ ಪ್ರತಿಮೆ ಸ್ವಂತ ಹಣದಲ್ಲಿ ತಂದದ್ದು: ಡಿ.ಕೆ. ಶಿವಕುಮಾರ್

ಬೆಂಗಳೂರು: ಮೆಟ್ರೋ ಉದ್ಘಾಟನಾ ಸಂದರ್ಭದಲ್ಲಿ ಡಿಸಿಎಂ ‌ಡಿಕೆ ಶಿವಕುಮಾರ್ ಅವರು ಪ್ರಧಾನಿ ಮೋದಿ ಅವರಿಗೆ ನೀಡಿದ ಬೆಳ್ಳಿ ವಿಗ್ರಹದ ಬಗ್ಗೆ ಸ್ಪಷ್ಟ ನೆ ನೀಡಿದ್ದು, ಬೇರೆಯವರ ಉಡುಗೊರೆಯನ್ನು ಇನ್ನೊಬ್ಬರಿಗೆ ನೀಡುವ ದುಸ್ಥಿತಿ ‌ತಮಗೆ ಬಂದಿಲ್ಲ ಎಂದು ಹೇಳಿದ್ದಾರೆ. ಆ ಮೂಲಕ ಪ್ರಧಾನಿ ಮೋದಿ ಅವರಿಗೆ ನೀಡಿದ ಬೆಳ್ಳಿ ಗಣಪತಿ ಸ್ವಂತದ್ದು ಎಂದು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಿದ ಗಣೇಶನನ್ನು ಬಿಜೆಪಿಯವರೊಬ್ಬರು ತಂದಿದ್ದು ಎಂಬ ವರದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಈ ವಿಷಯಕ್ಕೆ ಡಿಕೆಶಿ ‌ಸ್ಪಷ್ಟನೆ ನೀಡಿರುವುದಾಗಿದೆ.

ಪ್ರಧಾನಿ ಅವರಿಗೆ ನೀಡಿದ ಬೆಳ್ಳಿ ಗಣೇಶನ ಪ್ರತಿಮೆ ಸ್ವಂತ ಹಣದಲ್ಲಿ ತಂದದ್ದು: ಡಿ.ಕೆ. ಶಿವಕುಮಾರ್ Read More »

ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯಲ್ಲಿ ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಇದರಲ್ಲಿ ಗೋ ಸಾಗಾಟ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ. ಇನ್ನೋವಾ ‌ಕಾರಿನಲ್ಲಿ ಆರೋಪಿಗಳು ಗೋವುಗಳನ್ನು ‌ಸಾಗಾಟ ಮಾಡುತ್ತಿದ್ದು, ಎರಡು ನಂಬರ್ ಪ್ಲೇಟ್‌ಗಳನ್ನು ಬಳಸಿ ಈ ಕೃತ್ಯ ನಡೆಸಲಾಗಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಸಂಚಾರ ಅಸ್ತವ್ಯಸ್ತವಾಗಿತ್ತು. ಅಪಘಾತದಿಂದ ಕಾರಿನಲ್ಲಿದ್ದ ಹಸು ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ಅಕ್ರಮ

ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ: ಸಂಚಾರ ಅಸ್ತವ್ಯಸ್ತ Read More »

ಸ್ವಾತಂತ್ರ್ಯ ಸಂಭ್ರಮ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಅಮಿತ್ ಶಾ

ನವದೆಹಲಿ: ದೇಶದ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ತುಂಬೆಲ್ಲಾ ‌ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದಾರೆ. ಶಾ ಅವರು ತಮ್ಮ ಪತ್ನಿಯ ಜೊತೆ‌ ನವದೆಹಲಿಯ ತಮ್ಮ ಮನೆಯಲ್ಲಿ ತಿರಂಗಾ ಹಾರಿಸಿದ್ದು, ಈ‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಅಭಿಯಾನ ಅಝಾದಿ ಕಾ ಅಮೃತ ಮಹೋತ್ಸವದ ಕಾಲದಲ್ಲಿ ಆರಂಭವಾಗಿದ್ದು, ಇದನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ಭಾರತೀಯರೆಲ್ಲರೂ ತಿರಂಗಾವನ್ನು ತಮ್ಮ ಮನೆಗಳ ಮೇಲೆ

ಸ್ವಾತಂತ್ರ್ಯ ಸಂಭ್ರಮ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಅಮಿತ್ ಶಾ Read More »

ಜಿಪಿಆರ್ ಸಿಗ್ನಲ್ ಅಸ್ಪಷ್ಟ: ಅನಾಮಿಕನ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ದೂರುದಾರ ಮಾಸ್ಕ್‌ಮ್ಯಾನ್ ಗುರುತಿಸಿದ 13 ನೇ ಸ್ಥಳದಲ್ಲಿ ಕಾರ್ಯಾಚರಣೆ ಆರಂಭ ಮಾಡಿದೆ. ಜಿಪಿಆರ್ ಸಿಗ್ನಲ್ ಸ್ಪಷ್ಚವಿಲ್ಲದಿದ್ದರೂ ಅನಾಮಿಕ ದೂರುದಾರನ ಸೂಚನೆಯಂತೆ ಈ ಸ್ಥಳದಲ್ಲಿ ಶವದ ಕಳೇಬರದ ಹುಡುಕಾಟ ನಡೆಸಲಾಗುತ್ತಿದೆ. ಧರ್ಮಸ್ಥಳ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಸಮೀಪ ಈ ಕಾರ್ಯಾಚರಣೆ ನಡೆಸಲಾಗಿದೆ. ಎಸಿ ಸ್ಟೆಲ್ಲಾ ವರ್ಗೀಸ್, SIT ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಿಪಿಆರ್ ಸಿಗ್ನಲ್ ಅಸ್ಪಷ್ಟ: ಅನಾಮಿಕನ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು Read More »

ಸೋನಿಯಾ ಗಾಂಧಿ ಆಪ್ತನ ಪುತ್ರನಿಂದ ಪ್ರಧಾನಿ ಮೋದಿ ಅವರಿಗೆ ಬಹುಪರಾಕ್

ಕಾಂಗ್ರೆಸ್ ಬಗ್ಗೆ ಫೈಸಲ್ ‌ಪಟೇಲ್ ಹೇಳಿದ್ದೇನು ಗೊತ್ತಾ? ನವದೆಹಲಿ: ಕಾಂಗ್ರೆಸ್ ನಾಯಕಿ, ಸೋನಿಯಾ ಗಾಂಧಿ ಆಪ್ತ ದಿವಂಗತ ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಜೈ ಎಂದಿದ್ದು, ಅವರ ಕೈಯಲ್ಲಿ ದೇಶ‌ ಸುರಕ್ಷಿತವಾಗಿದೆ ಎಂದು ಕೊಂಡಾಡಿದ್ದಾರೆ. ಹಾಗೆಯೇ ತನಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವ ಅಸಮಾಧಾನ ಸಹ ಇಲ್ಲ. ಆದರೆ ಸಾರ್ವಜನಿಕ ಜೀವನದಿಂದ ಕೆಲಕಾಲ ದೂರವಿರುವುದಾಗಿ ಹೇಳಿದ್ದಾರೆ. ಜೊತೆಗೆ ತಾನು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವುದನ್ನು ನಿಲ್ಲಿಸಿದ್ದು, ತಮ್ಮ ತಂದೆಯ

ಸೋನಿಯಾ ಗಾಂಧಿ ಆಪ್ತನ ಪುತ್ರನಿಂದ ಪ್ರಧಾನಿ ಮೋದಿ ಅವರಿಗೆ ಬಹುಪರಾಕ್ Read More »

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳುವವರಿಗೆ ಜಾಗವಿಲ್ಲ: ಅರವಿಂದ ಬೆಲ್ಲದ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಕಲಹಕ್ಕೆ ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ತಲೆದಂಡವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯ ಹೇಳುವವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನವಿಲ್ಲ. ಸ್ವತಃ ರಾಜಣ್ಣ ಅವರೇ ತಮ್ಮ ಉಚ್ಛಾಟನೆಯ ಹಿಂದೆ ಷಡ್ಯಂತ್ರ ಇರುವುದಾಗಿ ಹೇಳಿಕೊಂಡಿದ್ದಾರೆ. ಅವರು ಮಾಡಿರುವ ಆರೋಪ ನೂರಕ್ಕೆ ನೂರು ಸತ್ಯ ಎಂದು ಬೆಲ್ಲದ್ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕಿವಿಗೆ ರಾಜಣ್ಣ ಎಲ್ಲೋ

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳುವವರಿಗೆ ಜಾಗವಿಲ್ಲ: ಅರವಿಂದ ಬೆಲ್ಲದ್ Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಜಿಪಿಆರ್ ಕಾರ್ಯಾಚರಣೆಯಲ್ಲೂ ಸಿಕ್ಕಿಲ್ಲ ಯಾವುದೇ ಸುಳಿವು

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ 13 ನೇ ಪಾಯಿಂಟ್ ನಲ್ಲಿ ಜಿಪಿಆರ್ ಬಳಸಿ ಶೋಧ ಮಾಡಲಾಗಿದ್ದು, ಸುತ್ತಮುತ್ತಲ 200 ಮೀ. ಸ್ಥಳದಲ್ಲಿ ಕಳೇಬರದ ಯಾವುದೇ ಕುರುಹುಗಳ ಸಿಗ್ನಲ್ ಸಿಕ್ಕಿಲ್ಲ ಎಂದು ಹೇಳಲಾಗಿದೆ. ಸಿಗ್ನಲ್ ಸಿಕ್ಕಲ್ಲಿ ‌ಆ ಪ್ರದೇಶವನ್ನು ಅಗೆಯಲು ಹಿಟಾಚಿಯ ವ್ಯವಸ್ಥೆ ಸಹ ಮಾಡಲಾಗಿತ್ತು. ಆದರೆ ಗುರುತಿಸಲಾದ ಪ್ರದೇಶದಲ್ಲಿ ಮತ್ತು ಅಜಿಕುರಿ ರಸ್ತೆಯಲ್ಲಿಯೂ ಜಿಪಿಆರ್ ಬಳಸಿ ಸಿಗ್ನಲ್ ಸಿಗುವುದೋ ಎಂದು ಪರಿಶೀಲನೆ ನಡೆಸಲಾಗಿದ್ದು, ಕಳೇಬರದ ಕುರುಹುಗಳಿರುವ ಯಾವುದೇ ಸಿಗ್ನಲ್ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಜಿಪಿಆರ್ ಕಾರ್ಯಾಚರಣೆಯಲ್ಲೂ ಸಿಕ್ಕಿಲ್ಲ ಯಾವುದೇ ಸುಳಿವು Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಅನಾಮಿಕ ದೂರುದಾರ ಗುರುತು ಮಾಡಿದ 13 ನೇ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಕಾರ್ಯಾಚರಣೆಯನ್ನು SIT ತಂಡ ಆರಂಭ ಮಾಡಿದೆ. ಈ ಕಾರ್ಯಾಚರಣೆಯ ಹಿನ್ನಲೆಯಲ್ಲಿ ಆ. 11 ರಂದು ಜಿಪಿಆರ್ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು. ಇಂದು ಬೆಳಗ್ಗೆ 11.15 ರ ಸುಮಾರಿಗೆ ಈ ಕಾರ್ಯಾಚರಣೆಯನ್ನು ಅಧಿಕಾರಿಗಳು ಆರಂಭ ಮಾಡಿದ್ದು, ಇಲ್ಲೇನು ‌ಸಿಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಆರಂಭ Read More »

ರೇಣುಕಾಸ್ವಾಮಿ ಹತ್ಯೆ: ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳು ಕೋರ್ಟ್‌ಗೆ ಹಾಜರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿಗಳಾಗ ನಟ ದರ್ಶನ್ ತೂಗುದೀಪ್, ಪವಿತ್ರಾ ಸೇರಿದಂತೆ ಇತರರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಿಸಿಎಚ್ 63 ರ ನ್ಯಾಯಾಧೀಶ ಮುಂದೆ ಆರೋಪಿಗಳು ಹಾಜರಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆ. 9 ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಮತ್ತು ಪವಿತ್ರಾ ಇಬ್ಬರೂ ಕೋರ್ಟ್ ಆವರಣದಲ್ಲೇ ಇದ್ದರೂ ಪರಸ್ಪರ ಮಾತನಾಡಿಲ್ಲ ಎಂದು ತಿಳಿದು ಬಂದಿದೆ. ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳಿಗೆ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ

ರೇಣುಕಾಸ್ವಾಮಿ ಹತ್ಯೆ: ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳು ಕೋರ್ಟ್‌ಗೆ ಹಾಜರು Read More »

error: Content is protected !!
Scroll to Top