Uncategorized

ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ: ಸಂಚಾರ ಅಸ್ತವ್ಯಸ್ತ

ಬೆಳ್ತಂಗಡಿ: ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಗುರುವಾಯನಕೆರೆಯಲ್ಲಿ ಪಲ್ಟಿಯಾಗಿದ್ದು, ಆ ಸಂದರ್ಭದಲ್ಲಿ ಇದರಲ್ಲಿ ಗೋ ಸಾಗಾಟ ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ. ಇನ್ನೋವಾ ‌ಕಾರಿನಲ್ಲಿ ಆರೋಪಿಗಳು ಗೋವುಗಳನ್ನು ‌ಸಾಗಾಟ ಮಾಡುತ್ತಿದ್ದು, ಎರಡು ನಂಬರ್ ಪ್ಲೇಟ್‌ಗಳನ್ನು ಬಳಸಿ ಈ ಕೃತ್ಯ ನಡೆಸಲಾಗಿತ್ತು. ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಸಂಚಾರ ಅಸ್ತವ್ಯಸ್ತವಾಗಿತ್ತು. ಅಪಘಾತದಿಂದ ಕಾರಿನಲ್ಲಿದ್ದ ಹಸು ರಸ್ತೆಗೆ ಬಿದ್ದಿದ್ದು, ಇದರಿಂದಾಗಿ ಅಕ್ರಮ […]

ಗೋ ಸಾಗಾಟ ಮಾಡುತ್ತಿದ್ದ ಕಾರು ಢಿಕ್ಕಿ: ಸಂಚಾರ ಅಸ್ತವ್ಯಸ್ತ Read More »

ಸ್ವಾತಂತ್ರ್ಯ ಸಂಭ್ರಮ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಅಮಿತ್ ಶಾ

ನವದೆಹಲಿ: ದೇಶದ ಸ್ವಾತಂತ್ರ್ಯ ಸಂಭ್ರಮದ ಹಿನ್ನೆಲೆಯಲ್ಲಿ ದೇಶದ ತುಂಬೆಲ್ಲಾ ‌ನಡೆಯುತ್ತಿರುವ ಹರ್ ಘರ್ ತಿರಂಗಾ ಅಭಿಯಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಚಾಲನೆ ನೀಡಿದ್ದಾರೆ. ಶಾ ಅವರು ತಮ್ಮ ಪತ್ನಿಯ ಜೊತೆ‌ ನವದೆಹಲಿಯ ತಮ್ಮ ಮನೆಯಲ್ಲಿ ತಿರಂಗಾ ಹಾರಿಸಿದ್ದು, ಈ‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಅಭಿಯಾನ ಅಝಾದಿ ಕಾ ಅಮೃತ ಮಹೋತ್ಸವದ ಕಾಲದಲ್ಲಿ ಆರಂಭವಾಗಿದ್ದು, ಇದನ್ನು ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಘೋಷಿಸಿತು. ಭಾರತೀಯರೆಲ್ಲರೂ ತಿರಂಗಾವನ್ನು ತಮ್ಮ ಮನೆಗಳ ಮೇಲೆ

ಸ್ವಾತಂತ್ರ್ಯ ಸಂಭ್ರಮ: ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದ ಅಮಿತ್ ಶಾ Read More »

ಜಿಪಿಆರ್ ಸಿಗ್ನಲ್ ಅಸ್ಪಷ್ಟ: ಅನಾಮಿಕನ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಅಧಿಕಾರಿಗಳು ದೂರುದಾರ ಮಾಸ್ಕ್‌ಮ್ಯಾನ್ ಗುರುತಿಸಿದ 13 ನೇ ಸ್ಥಳದಲ್ಲಿ ಕಾರ್ಯಾಚರಣೆ ಆರಂಭ ಮಾಡಿದೆ. ಜಿಪಿಆರ್ ಸಿಗ್ನಲ್ ಸ್ಪಷ್ಚವಿಲ್ಲದಿದ್ದರೂ ಅನಾಮಿಕ ದೂರುದಾರನ ಸೂಚನೆಯಂತೆ ಈ ಸ್ಥಳದಲ್ಲಿ ಶವದ ಕಳೇಬರದ ಹುಡುಕಾಟ ನಡೆಸಲಾಗುತ್ತಿದೆ. ಧರ್ಮಸ್ಥಳ ಸ್ನಾನಘಟ್ಟದ ಕಿಂಡಿ ಅಣೆಕಟ್ಟಿನ ಸಮೀಪ ಈ ಕಾರ್ಯಾಚರಣೆ ನಡೆಸಲಾಗಿದೆ. ಎಸಿ ಸ್ಟೆಲ್ಲಾ ವರ್ಗೀಸ್, SIT ಅಧಿಕಾರಿಗಳು ಸ್ಥಳದಲ್ಲಿದ್ದು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಜಿಪಿಆರ್ ಸಿಗ್ನಲ್ ಅಸ್ಪಷ್ಟ: ಅನಾಮಿಕನ ಸೂಚನೆಯಂತೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು Read More »

ಸೋನಿಯಾ ಗಾಂಧಿ ಆಪ್ತನ ಪುತ್ರನಿಂದ ಪ್ರಧಾನಿ ಮೋದಿ ಅವರಿಗೆ ಬಹುಪರಾಕ್

ಕಾಂಗ್ರೆಸ್ ಬಗ್ಗೆ ಫೈಸಲ್ ‌ಪಟೇಲ್ ಹೇಳಿದ್ದೇನು ಗೊತ್ತಾ? ನವದೆಹಲಿ: ಕಾಂಗ್ರೆಸ್ ನಾಯಕಿ, ಸೋನಿಯಾ ಗಾಂಧಿ ಆಪ್ತ ದಿವಂಗತ ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಕ್ಕೆ ಜೈ ಎಂದಿದ್ದು, ಅವರ ಕೈಯಲ್ಲಿ ದೇಶ‌ ಸುರಕ್ಷಿತವಾಗಿದೆ ಎಂದು ಕೊಂಡಾಡಿದ್ದಾರೆ. ಹಾಗೆಯೇ ತನಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವ ಅಸಮಾಧಾನ ಸಹ ಇಲ್ಲ. ಆದರೆ ಸಾರ್ವಜನಿಕ ಜೀವನದಿಂದ ಕೆಲಕಾಲ ದೂರವಿರುವುದಾಗಿ ಹೇಳಿದ್ದಾರೆ. ಜೊತೆಗೆ ತಾನು ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವುದನ್ನು ನಿಲ್ಲಿಸಿದ್ದು, ತಮ್ಮ ತಂದೆಯ

ಸೋನಿಯಾ ಗಾಂಧಿ ಆಪ್ತನ ಪುತ್ರನಿಂದ ಪ್ರಧಾನಿ ಮೋದಿ ಅವರಿಗೆ ಬಹುಪರಾಕ್ Read More »

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳುವವರಿಗೆ ಜಾಗವಿಲ್ಲ: ಅರವಿಂದ ಬೆಲ್ಲದ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ನಡುವಿನ ಕಲಹಕ್ಕೆ ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರ ತಲೆದಂಡವಾಗಿದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯ ಹೇಳುವವರಿಗೆ ಕಾಂಗ್ರೆಸ್ ಪಕ್ಷದಲ್ಲಿ ಸ್ಥಾನವಿಲ್ಲ. ಸ್ವತಃ ರಾಜಣ್ಣ ಅವರೇ ತಮ್ಮ ಉಚ್ಛಾಟನೆಯ ಹಿಂದೆ ಷಡ್ಯಂತ್ರ ಇರುವುದಾಗಿ ಹೇಳಿಕೊಂಡಿದ್ದಾರೆ. ಅವರು ಮಾಡಿರುವ ಆರೋಪ ನೂರಕ್ಕೆ ನೂರು ಸತ್ಯ ಎಂದು ಬೆಲ್ಲದ್ ತಿಳಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕಿವಿಗೆ ರಾಜಣ್ಣ ಎಲ್ಲೋ

ಕಾಂಗ್ರೆಸ್ ಪಕ್ಷದಲ್ಲಿ ಸತ್ಯ ಹೇಳುವವರಿಗೆ ಜಾಗವಿಲ್ಲ: ಅರವಿಂದ ಬೆಲ್ಲದ್ Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಜಿಪಿಆರ್ ಕಾರ್ಯಾಚರಣೆಯಲ್ಲೂ ಸಿಕ್ಕಿಲ್ಲ ಯಾವುದೇ ಸುಳಿವು

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿ 13 ನೇ ಪಾಯಿಂಟ್ ನಲ್ಲಿ ಜಿಪಿಆರ್ ಬಳಸಿ ಶೋಧ ಮಾಡಲಾಗಿದ್ದು, ಸುತ್ತಮುತ್ತಲ 200 ಮೀ. ಸ್ಥಳದಲ್ಲಿ ಕಳೇಬರದ ಯಾವುದೇ ಕುರುಹುಗಳ ಸಿಗ್ನಲ್ ಸಿಕ್ಕಿಲ್ಲ ಎಂದು ಹೇಳಲಾಗಿದೆ. ಸಿಗ್ನಲ್ ಸಿಕ್ಕಲ್ಲಿ ‌ಆ ಪ್ರದೇಶವನ್ನು ಅಗೆಯಲು ಹಿಟಾಚಿಯ ವ್ಯವಸ್ಥೆ ಸಹ ಮಾಡಲಾಗಿತ್ತು. ಆದರೆ ಗುರುತಿಸಲಾದ ಪ್ರದೇಶದಲ್ಲಿ ಮತ್ತು ಅಜಿಕುರಿ ರಸ್ತೆಯಲ್ಲಿಯೂ ಜಿಪಿಆರ್ ಬಳಸಿ ಸಿಗ್ನಲ್ ಸಿಗುವುದೋ ಎಂದು ಪರಿಶೀಲನೆ ನಡೆಸಲಾಗಿದ್ದು, ಕಳೇಬರದ ಕುರುಹುಗಳಿರುವ ಯಾವುದೇ ಸಿಗ್ನಲ್ ದೊರೆತಿಲ್ಲ ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಜಿಪಿಆರ್ ಕಾರ್ಯಾಚರಣೆಯಲ್ಲೂ ಸಿಕ್ಕಿಲ್ಲ ಯಾವುದೇ ಸುಳಿವು Read More »

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಆರಂಭ

ಧರ್ಮಸ್ಥಳ: ನೂರಾರು ಶವಗಳನ್ನು ‌ಹೂಳಲಾಗಿದೆ ಎನ್ನುವ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಅನಾಮಿಕ ದೂರುದಾರ ಗುರುತು ಮಾಡಿದ 13 ನೇ ಸ್ಥಳದಲ್ಲಿ ಜಿಪಿಆರ್ ಯಂತ್ರ ಬಳಸಿ ಕಾರ್ಯಾಚರಣೆಯನ್ನು SIT ತಂಡ ಆರಂಭ ಮಾಡಿದೆ. ಈ ಕಾರ್ಯಾಚರಣೆಯ ಹಿನ್ನಲೆಯಲ್ಲಿ ಆ. 11 ರಂದು ಜಿಪಿಆರ್ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ ನಡೆದಿತ್ತು. ಇಂದು ಬೆಳಗ್ಗೆ 11.15 ರ ಸುಮಾರಿಗೆ ಈ ಕಾರ್ಯಾಚರಣೆಯನ್ನು ಅಧಿಕಾರಿಗಳು ಆರಂಭ ಮಾಡಿದ್ದು, ಇಲ್ಲೇನು ‌ಸಿಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿ ಮನೆ ಮಾಡಿದೆ.

ಧರ್ಮಸ್ಥಳ ಪ್ರಕರಣ: 13 ನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ಆರಂಭ Read More »

ರೇಣುಕಾಸ್ವಾಮಿ ಹತ್ಯೆ: ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳು ಕೋರ್ಟ್‌ಗೆ ಹಾಜರು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಆರೋಪಿಗಳಾಗ ನಟ ದರ್ಶನ್ ತೂಗುದೀಪ್, ಪವಿತ್ರಾ ಸೇರಿದಂತೆ ಇತರರು ಇಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಿಸಿಎಚ್ 63 ರ ನ್ಯಾಯಾಧೀಶ ಮುಂದೆ ಆರೋಪಿಗಳು ಹಾಜರಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆ. 9 ಕ್ಕೆ ಮುಂದೂಡಿ ಆದೇಶ ಹೊರಡಿಸಲಾಗಿದೆ. ದರ್ಶನ್ ಮತ್ತು ಪವಿತ್ರಾ ಇಬ್ಬರೂ ಕೋರ್ಟ್ ಆವರಣದಲ್ಲೇ ಇದ್ದರೂ ಪರಸ್ಪರ ಮಾತನಾಡಿಲ್ಲ ಎಂದು ತಿಳಿದು ಬಂದಿದೆ. ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳಿಗೆ ನೀಡಿದ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ

ರೇಣುಕಾಸ್ವಾಮಿ ಹತ್ಯೆ: ದರ್ಶನ್, ಪವಿತ್ರಾ ಸೇರಿದಂತೆ ಇತರ ಆರೋಪಿಗಳು ಕೋರ್ಟ್‌ಗೆ ಹಾಜರು Read More »

ಧರ್ಮಸ್ಥಳ ದೂರುದಾರ ಹೇಳಿದಲ್ಲಿ ಶವಗಳು ಸಿಗದೇ ಹೋದರೆ ಆತನನ್ನೇ ನೇಣಿಗೆ ಹಾಕಿ: ಬೇಳೂರು ಗೋಪಾಲಕೃಷ್ಣ

ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ ಪ್ರಸ್ತುತ SIT ಶೋಧಿಸಿದ ಸ್ಥಳಗಳಲ್ಲಿ ಅನಾಮಿಕ ದೂರುದಾರ ಹೇಳಿದ ಯಾವುದೇ ಕುರುಹುಗಳು ಸಿಗದೇ ಹೋದಲ್ಲಿ ಆತನನ್ನೇ ನೇಣಿಗೆ ಹಾಕಬೇಕು ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ. ಈ ಸಂಬಂಧ ಸುದ್ದಿಗಾರರ ಜೊತೆ ಮಾತನಾಡಿದ ಅವರು,‌ ಧರ್ಮಸ್ಥಳ ದೇಗುಲ ಮತ್ತು ಅಲ್ಲಿನ ಧರ್ಮಾಧಿಕಾರಿಗಳಿಗೆ ಯಾವುದೇ ಕಳಂಕ ಬಾಧಿಸಲು ಬಿಡುವುದಿಲ್ಲ. ಸದ್ಯ ತನಿಖೆ ನಡೆಯುತ್ತಿದೆ. ಆದರೆ ಶವಗಳು ಸಿಗುತ್ತಿಲ್ಲ. ಒಂದು ವೇಳೆ ಈ ತನಿಖೆಯಲ್ಲಿ ದೂರುದಾರ ಹೇಳಿದಂತೆ ಶವಗಳು ದೊರೆಯದಲ್ಲಿ ಆತನನ್ನು ಸುಮ್ಮನೆ ಬಿಡಬಾರದು,

ಧರ್ಮಸ್ಥಳ ದೂರುದಾರ ಹೇಳಿದಲ್ಲಿ ಶವಗಳು ಸಿಗದೇ ಹೋದರೆ ಆತನನ್ನೇ ನೇಣಿಗೆ ಹಾಕಿ: ಬೇಳೂರು ಗೋಪಾಲಕೃಷ್ಣ Read More »

ಬಾಬಾ ಬುಡನ್ ದರ್ಗಾದಲ್ಲೂ SIT ಉತ್ಖನನ ನಡೆಸಲು ರಾಜ್ಯ ಸರ್ಕಾರಕ್ಕೆ ಆಗ್ರಹ

ಚಿಕ್ಕಮಗಳೂರು: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಆರೋಪದಡಿ ಧರ್ಮಸ್ಥಳದ ಸುತ್ತಮುತ್ತ SIT ತನಿಖೆ ನಡೆಯುತ್ತಿದ್ದು, ಇದೇ ರೀತಿಯಲ್ಲಿ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿಯೂ ಉತ್ಖನನ ಕಾರ್ಯ ನಡೆಸುವಂತೆ ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಈ ಸಂಬಂಧ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ವಕ್ತಾರ ಸಿ.ಎಚ್. ಲೋಕೇಶ್ ಮಾಧ್ಯಮಗಳ ಜೊತೆ ಮಾತನಾಡಿದ್ದು, ದತ್ತಪೀಠದ ಆವರಣದಲ್ಲಿ ಗೋರಿಗಳಿದ್ದು, ಇವು ನಕಲಿಯೋ ಅಸಲಿಯೋ ಎಂಬ ಬಗ್ಗೆ ಉತ್ಖನನ ನಡೆಸುವುದು ಅಗತ್ಯವಾಗಿದೆ. ಇದಕ್ಕಾಗಿ ಸರ್ಕಾರ SIT ರಚಿಸುವಂತೆಯೂ ಆಗ್ರಹಿಸಿದ್ದಾರೆ. ದತ್ತಪೀಠ ಹಿಂದೂಗಳ ಧಾರ್ಮಿಕ ಸ್ಥಳ. ಅಲ್ಲಿ

ಬಾಬಾ ಬುಡನ್ ದರ್ಗಾದಲ್ಲೂ SIT ಉತ್ಖನನ ನಡೆಸಲು ರಾಜ್ಯ ಸರ್ಕಾರಕ್ಕೆ ಆಗ್ರಹ Read More »

error: Content is protected !!
Scroll to Top