Uncategorized

ಧರ್ಮಸ್ಥಳ: ಅನಾಮಿಕ ದೂರುದಾರನಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ?

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ SIT ತಂಡದ ಪೊಲೀಸ್ ಇನ್ಸ್‌ಪೆಕ್ಟರ್ ಮಂಜುನಾಥ್ ಅವರು ದೂರುದಾರನನ್ನು ಕೇಸ್ ಹಿಂಪಡೆಯುವಂತೆ ಬೆದರಿಸುತ್ತಿದ್ದಾರೆ ಎಂದು ದೂರುದಾರನ ಪರ ವಕೀಲ SIT ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಅವರು ಆ. 1 ರಂದು ದೂರುದಾರನನ್ನು ಕೋಣೆಯಲ್ಲಿ ಕೂಡಿ ಹಾಕಿ ಕೇಸನ್ನು ಹಿಂಪಡೆಯುವಂತೆ ಮತ್ತು ಜೈಲಿಗೆ ಕಳಿಸುವುದಾಗಿ ಬೆದರಿಕೆ ಹಾಕಲಾಗಿದೆ. ಹಾಗೆಯೇ ವಿಡಿಯೋ ರೆಕಾರ್ಡ್ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಸಂಬಂಧ SIT […]

ಧರ್ಮಸ್ಥಳ: ಅನಾಮಿಕ ದೂರುದಾರನಿಗೆ ಪೊಲೀಸ್ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ? Read More »

ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ

ಶಿವಮೊಗ್ಗ: ಕರ್ನಾಟಕದ ಸಿಎಂ ‌ಸಿದ್ದರಾಮಯ್ಯ ಅವರಿಗೆ ರೈತರ ಮೇಲೆ ದ್ವೇಷ ಮತ್ತು ತಾತ್ಸಾರ ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಬಿಜೆಪಿ ರೈತ ಮೋರ್ಚಾ‌ದಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ರೈತ ನೀತಿ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಆಳ್ವಿಕೆಯಲ್ಲಿ ರೈತರು ಕಂಗಾಲಾಗಿದ್ದಾರೆ. ನಾಡಿಗೆ ಅನ್ನ ಕೊಡುವ ರೈತರ ಮೇಲೆ ಸಿದ್ದರಾಮಯ್ಯ ಸರ್ಕಾರಕ್ಕೆ ತಾತ್ಸಾರ ಯಾಕೆ ಎಂದು ಗುಡುಗಿದ್ದಾರೆ. ಕಾಂಗ್ರೆಸ್ ನಾಯಕರು ರೈತರ ಮೇಲೆ ಕಾಳಜಿ ಇದೆ ಎಂಬಂತೆ ನಾಟಕವಾಡಿ ಮೊಸಳೆ

ರೈತರ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಯಾಕೆ ದ್ವೇಷ?: ಬಿ.ವೈ. ವಿಜಯೇಂದ್ರ Read More »

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು?

ನವದೆಹಲಿ: ಕೇರಳದ ನರ್ಸ್ ‌ನಿಮಿಷಾ ಪ್ರಿಯಾ ಅವರ ಮರಣ ದಂಡನೆ ಶಿಕ್ಷೆಯನ್ನು ಯೆಮನ್ ಸರ್ಕಾರ ರದ್ದು ಮಾಡಿಲ್ಲ ಬದಲಾಗಿ ಮುಂದೂಡಿದೆ‌ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಇದೊಂದು ಸೂಕ್ಷ್ಮ ವಿಷಯವಾಗಿದ್ದು, ಇನ್ನೂ ದೃಢೀಕರಣವಾಗದ ‌ವಿಷಯದ ಬಗ್ಗೆ ಹರಡುತ್ತಿರುವ ವದಂತಿಯ ಕುರಿತು ಎಚ್ಚರಿಕೆ ವಹಿಸುವಂತೆ ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಯೆಮನ್ ಅಧಿಕಾರಿಗಳು ಮತ್ತು ಇತರ ಮಿತ್ರ ರಾಷ್ಚ್ರಗಳು ಭಾರತಕ್ಕೆ ಸಹಕರಿಸುತ್ತಿವೆ ಎಂದು ಸಚಿವಾಲಯ ತಿಳಿಸಿದೆ. ಯೆಮನ್ ಸರ್ಕಾರದ ಜೊತೆಗೆ ಭಾರತ ನಿರಂತರ ಮಾತುಕತೆ ನಡೆಸಿದ್ದು,

ಯೆಮನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು?: ವಿದೇಶಾಂಗ ಸಚಿವಾಲಯ ಹೇಳಿದ್ದೇನು? Read More »

ಚು. ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗದ ಮೇಲೆ ಮತ್ತೆ ಕೆಂಡ ಕಾರಿದ್ದಾರೆ. ಮತಕಳ್ಳತನದಲ್ಲಿ ಚುನಾವಣಾ ಆಯೋಗ ಭಾಗಿಯಾಗಿದೆ ಎನ್ನುವ ಮೂಲಕ ಈ ಬಾರಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಇತ್ತೀಚಿನ ಚುನಾವಣೆಗಳಿಗೆ ಸಂಬಂಧಿಸಿದ ಹಾಗೆ ಚುನಾವಣಾ ಆಯೋಗದ ಗಂಭೀರ ದುಷ್ಕೃತ್ಯವನ್ನು ಸ್ವತಂತ್ರ ತನಿಖೆ ಬಹಿರಂಗ ಮಾಡಿದೆ. ಬಿಜೆಪಿ‌ಗೆ ಸಹಾಯವಾಗುವಂತೆ ದೊಡ್ಡ ಮಟ್ಟದ ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂದು ಹೇಳಿದ್ದಾರೆ.

ಚು. ಆಯೋಗದ ಮೇಲೆ ಮತಗಳ್ಳತನದ ಆರೋಪ ಮಾಡಿದ ರಾಹುಲ್ ಗಾಂಧಿ Read More »

ಆ. 3: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಮಹಾಸಭೆ

ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರಿನ ವಾರ್ಷಿಕ ಮಹಾಸಭೆಯು ಒಕ್ಕಲಿಗ ಗೌಡ ಸಮುದಾಯ ಭವನ ತೆಂಕಿಲದಲ್ಲಿ ಆಗಸ್ಟ್ 3 ಭಾನುವಾರ ಬೆಳಗ್ಗೆ ಗಂಟೆ 10 ಕ್ಕೆ ಸರಿಯಾಗಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಮುದಾಯ ಬಾಂಧವರು ಹಾಜರಿರುವಂತೆ ಪ್ರಕಟಣೆಯಲ್ಲಿ ‌ತಿಳಿಸಲಾಗಿದೆ.

ಆ. 3: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ನಿ. ಪುತ್ತೂರು ಇದರ ಮಹಾಸಭೆ Read More »

ದಿ. ನೇಮಣ್ಣ ಗೌಡರ ಧರ್ಮಪತ್ನಿ ಗಿರಿಜಾ ನಿಧನ

ಪುತ್ತೂರು: ಕರ್ಮಲ, ಬೊಳ್ವಾರು ನಿವಾಸಿ ದಿ. ನೇಮಣ್ಣ ಗೌಡ ಇವರ ಧರ್ಮಪತ್ನಿ ಗಿರಿಜಾ ಅವರು ಆ. 2 ರಂದು ನಿಧನರಾದರು. ಅವರಿಗೆ 92 ವರ್ಷವಾಗಿದ್ದು ಕಳೆದ ಆರು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ರಾತ್ರಿ ಮೇರ್ಲದಲ್ಲಿರುವ ತಮ್ಮ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದರು. ಮೃತರು ಪುತ್ರರಾದ ಸುರೇಶ್ ಗೌಡ, ಸತೀಶ್ ಪಿ., ರಾಜೇಶ್ ಕುಮಾರ್, ಪುತ್ರಿಯರಾದ ಯಶೋಧ, ವಿನೋದ, ಸರೋಜ, ಸೊಸೆಯಂದಿರಾದ ವಿಲಾಸಿನಿ ‌ಸುಂದರ ಗೌಡ, ಉಷಾಕಿರಣ್, ಪ್ರತಿಮಾ ಸತೀಶ್, ಮಮತಾ ರಾಜೇಶ್ ಮತ್ತು ಅಳಿಯಂದಿರು, ಮೊಮ್ಮಕ್ಕಳು, ಮರಿಮಕ್ಕಳು

ದಿ. ನೇಮಣ್ಣ ಗೌಡರ ಧರ್ಮಪತ್ನಿ ಗಿರಿಜಾ ನಿಧನ Read More »

ಧರ್ಮಸ್ಥಳ ಕೇಸ್: ಏಳನೇ ಪಾಯಿಂಟ್‌ನಲ್ಲೂ ‌ಸಿಗಲಿಲ್ಲ ಕಳೇಬರದ ಕುರುಹು

ಧರ್ಮಸ್ಥಳ: ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ SIT ಇಂದೂ ಸಹ ಅನಾಮಿಕ ದೂರುದಾರ ‌ಗುರುತಿಸಿದ ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಸಿದೆ. ನಿನ್ನೆ ಆರನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ನಡೆಸಿದ್ದು, ಈ ಸಂದರ್ಭದಲ್ಲಿ ಮಾನವ ದೇಹದ ಅವಶೇಷಗಳು ಪತ್ತೆಯಾಗಿತ್ತು. ಇಂದು ಏಳನೇ ಪಾಯಿಂಟ್‌ನಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಇದರಲ್ಲಿ ಸುಮಾರು ಆರು ಅಡಿಗಳಷ್ಟು ಗುಂಡಿಯಲ್ಲಿ ಹುಡುಕಿದರೂ ಯಾವುದೇ ಶವದ ಕುರುಹುಗಳು ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಅಧಿಕಾರಿಗಳು ಎಂಟನೇ ಪಾಯಿಂಟ್ ಬಳಿ ಉತ್ಖನನ ಆರಂಭ ಮಾಡಿದ್ದು, ಅಲ್ಲೇನಾದರೂ

ಧರ್ಮಸ್ಥಳ ಕೇಸ್: ಏಳನೇ ಪಾಯಿಂಟ್‌ನಲ್ಲೂ ‌ಸಿಗಲಿಲ್ಲ ಕಳೇಬರದ ಕುರುಹು Read More »

ಆ. 10: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಕಡಬ ತಾಲೂಕು ಮಾತೃ ಸಮಿತಿಯಿಂದ ಆಟಿಡೊಂಜಿ ದಿನ

ಕಡಬ: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಕಡಬ ತಾಲೂಕು ಇದರ ಮಾತೃ ಸಮಿತಿಯ ಆಶ್ರಯದಲ್ಲಿ , ತಾಲೂಕು ಮಹಿಳಾ ಘಟಕದ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಲಿದೆ. ಒಕ್ಕಲಿಗ ಸಮುದಾಯ ಭವನ ಹೊಸಮಠದಲ್ಲಿ ಆಗಸ್ಟ್ 10 ಭಾನುವಾರ ಬೆಳಗ್ಗೆ ಗಂಟೆ 9 ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸುರೇಶ್ ಗೌಡ ಬೈಲು ವಹಿಸಿಕೊಳ್ಳಲಿದ್ದು, ರಾಜ್ಯ ಒಕ್ಕಲಿಗರ ಸಂಘ ಬೆಂಗಳೂರು ಇದರ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ. ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಆ. 10: ಒಕ್ಕಲಿಗ ಗೌಡ ಸೇವಾ ಸಂಘ (ರಿ) ಕಡಬ ತಾಲೂಕು ಮಾತೃ ಸಮಿತಿಯಿಂದ ಆಟಿಡೊಂಜಿ ದಿನ Read More »

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಡೇಟ್ ಫಿಕ್ಸ್

ನವದೆಹಲಿ: ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆ. 9 ರಂದು ಚುನಾವಣೆ ನಡೆಸಲು ಚುನಾವಣಾ ಆಯೋಗ ದಿನ ನಿಗದಿ ಮಾಡಿದೆ. ಚು. ಆಯೋಗದ ಪ್ರಕಾರ ಆ. 7 ರಂದು ಉಪರಾಷ್ಟ್ರಪತಿ ಚುನಾವಣೆಯ ಅಧಿಸೂಚನೆ ಬಿಡುಗಡೆಯಾಗಲಿದೆ. ಆ. 29 ನಾಮಪತ್ರ ‌ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಆ.22 ರಿಂದ ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ಆ. 25 ರ ವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ಇದೆ. ಸೆ. 9 ರಂದು ಬೆಳಗ್ಗೆ 10 ಗಂಟೆಯಿಂದ

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಡೇಟ್ ಫಿಕ್ಸ್ Read More »

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದ ನ್ಯಾಯಾಲಯ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ‌ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ. ಕಳೆದ ಹದಿನಾಲ್ಕು ತಿಂಗಳುಗಳಿಂದ ಜೈಲು ಹಕ್ಕಿಯಾಗಿರುವ ಪ್ರಜ್ವಲ್ ಸದ್ಯ ಕೋರ್ಟ್ ನೀಡಿರುವ ತೀರ್ಪಿನಿಂದ ಮತ್ತೆ ಜೈಲಿನಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯ ಆಗಸ್ಟ್ 2 ರಂದು ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ. ಸಿಐಡಿ ತನಿಖಾಧಿಕಾರಿಗಳು ಮತ್ತು ಆರೋಪಿಯ ಪರ ವಕೀಲರಿಂದ ಕೆಲವು ಸ್ಪಷ್ಟನೆಗಳ ಅಗತ್ಯತೆ

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದ ನ್ಯಾಯಾಲಯ Read More »

error: Content is protected !!
Scroll to Top