Uncategorized

ಯುವತಿ ನಾಪತ್ತೆ: ಲವ್ ಜಿಹಾದ್ ಶಂಕೆ

ಕಲಬುರ್ಗಿ: ನಗರದ ಖಾಸಗಿ ಕಾಲೇಜೊಂದರಲ್ಲಿ ಬಿ.ಎಸ್ಸಿ. ಓದುತ್ತಿದ್ದ ಜೈನ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಗೊಬ್ಬುರ ಗ್ರಾಮದ ಯುವತಿ ನಾಪತ್ತೆಯಾಗಿರುವುದಾಗಿದೆ. ಜುಲೈ 30 ರಂದು ಬಿ.ಎಸ್ಸಿ. ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ ಆಕೆ ಬಳಿಕ ಮನೆಗೆ ಹಿಂದಿರುಗದೆ‌ ನಾಪತ್ತೆಯಾಗಿದ್ದಾಳೆ. ಈಕೆ ನಾಪತ್ತೆಯಾಗಿರುವುದರ ಹಿಂದೆ ಮುಸ್ಲಿಂ ಯುವಕನ ಕೈವಾರ ಇದೆ ಎಂದು ಶಂಕಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಯುವತಿ ಮುಸ್ಲಿಂ ಯುವಕ ಮಶಾಕ್ ಎಂಬಾತನ ಜೊತೆಗೆ ಸಲುಗೆಯಿಂದಿದ್ದಳು. ಇದೇ […]

ಯುವತಿ ನಾಪತ್ತೆ: ಲವ್ ಜಿಹಾದ್ ಶಂಕೆ Read More »

ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾ ಭೇಟಿ

ನವದೆಹಲಿ: ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ರಷ್ಯಾ‌ಗೆ ಭೇಟಿ ನೀಡಿದ್ದು, ಅಮೆರಿಕಾ ಜೊತೆ ಭಾರತದ ವ್ಯಾಪಾರ ಸಂಬಂಧ ಬಿಗಡಾಯಿಸಿರುವ ನಡುವೆಯೇ ದೋವಲ್ ರಷ್ಯಾ ಭೇಟಿ ಸಾಕಷ್ಟು ಕುತೂಹಲಕ್ಕೆ ‌ಕಾರಣವಾಗಿದೆ. TASS ವರದಿಯ ಪ್ರಕಾರ ಈ ಭೇಟಿ ಯೋಜಿತ ವೇಳಾಪಟ್ಟಿಯ ಭಾಗವಾಗಿದೆ. ಉಭಯ ರಾಷ್ಟ್ರಗಳ ರಕ್ಷಣಾ ಸಹಕಾರದ ಮೇಲೆ ಕೇಂದ್ರೀಕೃತವಾಗಿದೆ. ಪ್ರಸ್ತುತ ನಡೆಯುತ್ತಿರುವ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಚರ್ಚೆ, ರಷ್ಯಾದಿಂದ ಭಾರತಕ್ಕೆ ತೈಲ ಪೂರೈಕೆಗೆ ಸಂಬಂಧಿಸಿದ ಹಾಗೆ ಕೆಲ ಮಹತ್ವದ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ.

ಭದ್ರತಾ ಸಲಹೆಗಾರ ಅಜಿತ್ ದೋವಲ್ ರಷ್ಯಾ ಭೇಟಿ Read More »

98 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್

ಬೆಂಗಳೂರು: ವಾಟ್ಸಾಪ್ ಆ್ಯಪ್ಲಿಕೇಶನ್ 98 ಲಕ್ಷ ಭಾರತೀಯ ಬಳಕೆದಾರರ ಖಾತೆಗಳನ್ನು ತನ್ನ ಫ್ಲಾಟ್‌ಫಾರ್ಮ್‌ನಿಂದ ನಿಷೇಧಿಸಿದೆ. ಈ ವಿಚಾರವನ್ನು ಮೆಟಾ ಬಹಿರಂಗ ಮಾಡಿದ್ದು, ವದಂತಿಗಳನ್ನು ಹಬ್ಬುವುದು, ವೇದಿಕೆಯನ್ನು ದುರುಪಯೋಗ ಮಾಡಿಕೊಳ್ಳುವುದು ಇತ್ಯಾದಿ ಕಾರಣಗಳಿಗಾಗಿ ಈ ಕ್ರಮ ಕೈಗೊಂಡಿರುವುದಾಗಿದೆ. ಈ ಹಿಂದೆಯೂ ವಾಟ್ಸಾಪ್ ಇಂತಹ ಕ್ರಮಗಳನ್ನು ಕೈಗೊಂಡಿದ್ದು, ಪ್ರತಿ ತಿಂಗಳು ಸಹ ವಾಟ್ಸಾಪ್ ಇಂತಹ ಕ್ರಮಗಳನ್ನು ತೆಗೆದುಕೊಳ್ಳುತ್ತಲೇ ಇರುತ್ತದೆ. ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ವಾಟ್ಸಾಪ್ ಈ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ.

98 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »

ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು: ಪ್ರೊ. ವಿ. ಬಿ. ಅರ್ತಿಕಜೆ

ಜಿ. ಎಲ್. ಆಚಾರ್ಯ ಶತಮಾನೋತ್ಸವ ಆಚಾರ್ಯ ಕವಿಗೋಷ್ಠಿ ಪುತ್ತೂರು: ಶಿಕ್ಷಕರಲ್ಲಿ ಕನ್ನಡ ಸಾಹಿತ್ಯದ ಬಗೆಗಿನ ಓದುವಿಕೆ ನಿರಂತರವಾಗಿರಬೇಕು . ಮಾತನಾಡುವಾಗ ಅರ್ಥ ಸಹಿತ ತಿಳಿದುಕೊಂಡು ಪದ ಬಳಕೆ ಮಾಡಬೇಕು. ರಸಭರಿತ ವಿಚಾರದಿಂದ ಕೂಡಿದ ಮಾತುಗಳನ್ನು ಹಾಸ್ಯಾಸ್ಪದ ಎಂದು ಟೀಕೆ ಮಾಡಬಾರದು ಎಂದು ಹಿರಿಯ ಪತ್ರಕರ್ತ ನಿವೃತ್ತ ಪ್ರಾಧ್ಯಾಪಕ ಪ್ರೋ. ವಿ. ಬಿ. ಅರ್ತಿಕಜೆ ಹೇಳಿದರು. ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ದ.ಕ. ಜಿಲ್ಲೆ, ಸ್ವರ್ಣೋದ್ಯಮಿ ಜಿ. ಎಲ್. ಆಚಾರ್ಯ ಶತಮಾನೋತ್ಸವ ಸಮಿತಿ ವತಿಯಿಂದ ಪುತ್ತೂರಿನ ರೋಟರಿ ಜಿ.

ಶಿಕ್ಷಕರು ಸಾಹಿತ್ಯದ ಭಾಷೆಯನ್ನು ಅರ್ಥಮಾಡಿಕೊಳ್ಳಬೇಕು: ಪ್ರೊ. ವಿ. ಬಿ. ಅರ್ತಿಕಜೆ Read More »

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ

ಉತ್ತರಾಖಂಡ: ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಪೋಟಕ್ಕೆ ಮನೆಗಳು ಕೊಚ್ಚಿ ಹೋಗಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ. ಉತ್ತರಕಾಶಿಯ ಧರೇಲಿ ಗ್ರಾಮದಲ್ಲಿ ಗಂಗಾ ನದಿಯಲ್ಲಿ ಭಾರೀ ಮಳೆಯ ಕಾರಣಕ್ಕೆ ಪ್ರವಾಹ ಉಂಟಾಗಿದೆ. ಪರಿಣಾಮ ಪ್ರವಾಹಕ್ಕೆ ಹಲವಾರು ಮನೆಗಳು ಕೊಚ್ಚಿ ಹೋಗಿವೆ. ಸುಮಾರು 50 ಕ್ಕೂ ಹೆಚ್ಚು ಜನರು ಈ ಘಟನೆಯಲ್ಲಿ ನಾಪತ್ತೆಯಾಗಿದ್ದಾಗಿ ಸಂಬಂಧಿಸಿದ ಅಧಿಕಾರಿಗಳು ಸಂದೇಹ ವ್ಯಕ್ತಪಡಿಸಿದ್ದಾರೆ. ಬೆಟ್ಟ ಪ್ರದೇಶದಿಂದ ಏಕಾಏಕಿ ಮೇಘಸ್ಪೋಟ ಸಂಭವಿಸಿದ್ದು, ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನದಿ ತೀರದಲ್ಲಿನ ‌ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಪೋಟ Read More »

NDA ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ಸಮರ್ಪಣೆ

ಆಪರೇಷನ್ ಸಿಂಧೂರ್, ಆಪರೇಷನ್ ಮಹಾದೇವ್ ಯಶಸ್ಸಿಗಾಗಿ ಪ್ರಧಾನಿ ಮೋದಿ ಅವರಿಗೆ ಗೌರವ ಸಲ್ಲಿಕೆ ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಯ ವಿರುದ್ಧ ಭಾರತ ನಡೆಸಿದ ಆಪರೇಷನ್ ಸಿಂಧೂರ್ ಮತ್ತು ಆಪರೇಷನ್ ಮಹಾದೇವ್ ಯಶಸ್ಸಿನ ಹಿನ್ನೆಲೆ NDA ಪಕ್ಷದ ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರನ್ನು ಗೌರವಿಸಲಾಯಿತು. ಈ‌ ಸಂದರ್ಭದಲ್ಲಿ ಸಭೆಯಲ್ಲಿ ಹರ ಹರ ಮಹಾದೇವ್ ಘೋಷಣೆ ಮೊಳಗಿತು. ಉಗ್ರರ ವಿರುದ್ಧ ಭಾರತ ತೆಗೆದುಕೊಂಡ ಕ್ರಮಗಳನ್ನು ಶ್ಲಾಘಿಸಲಾಯಿತು. ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಶ್ಲಾಘಿಸಲಾಯಿತು. ಆ. 7 ರಂದು ಉಪರಾಷ್ಟ್ರಪತಿ

NDA ಸಂಸದೀಯ ಸಭೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಗೌರವ ಸಮರ್ಪಣೆ Read More »

ಸರ್ಕಾರದ ಜೊತೆ ಕೈಜೋಡಿಸಿ: ಸಾರಿಗೆ‌ ನೌಕರರಿಗೆ ಡಿ ಕೆ ಶಿವಕುಮಾರ್ ಮನವಿ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ನ್ಯಾಯಯುತವಾದದ್ದೇ. ಆದರೆ ಸರ್ಕಾರದ ಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ನೌಕರರಿಗೆ ನೆರವಾಗುವ ಮನಸ್ಥಿತಿಯನ್ನು ಸಿ ಎಂ, ಸಾರಿಗೆ ಸಚಿವರು ಹೊಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಇದನ್ನು ನೌಕರರು ಅರಿತು ಸರ್ಕಾರದ ಜೊತೆಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಮುಷ್ಕರವಿದ್ದರೂ ಕೆಲವು ನೌಕರರು ಕರ್ತವ್ಯ ನಿರ್ವಹಿಸಿದ್ದಾರೆ. ಅವರಿಗೆ ಅಭಿನಂದನೆಗಳು. ಸಾರ್ವಜನಿಕರ ಜೀವನ ಮುಖ್ಯ‌. ಹಾಗಾಗಿ ಸರ್ಕಾರದ ಜೊತೆ ಕೈ ಜೋಡಿಸಿ. ಸರ್ಕಾರ

ಸರ್ಕಾರದ ಜೊತೆ ಕೈಜೋಡಿಸಿ: ಸಾರಿಗೆ‌ ನೌಕರರಿಗೆ ಡಿ ಕೆ ಶಿವಕುಮಾರ್ ಮನವಿ Read More »

ಕೆಂಪುಕೋಟೆಗೆ ಅಕ್ರಮ ಪ್ರವೇಶ ಯತ್ನ: ಬಾಂಗ್ಲಾ ಅಕ್ರಮ ವಲಸಿಗರ ಬಂಧನ

ನವದೆಹಲಿ: ಕೆಂಪು ಕೋಟೆಯ ಆವರಣದೊಳಕ್ಕೆ ಪ್ರವೇಶಿಸಲು ಪ್ರಯತ್ನ ನಡೆಸಿದ ಐವರು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಹತ್ತೇ ದಿನಗಳು ಉಳಿದಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಕೆಂಪು ಕೋಟೆಯ ಸುತ್ತ ಭದ್ರತೆ ಹೆಚ್ಚಿಸಿದ್ದಾರೆ. ಕೆಂಪು ಕೋಟೆಯ ಪ್ರವೇಶ ನಿಯಂತ್ರಣ ಬಿಂದುವಿನಲ್ಲಿ ನಿಯೋಜನೆ ಮಾಡಲಾದ ಪೊಲೀಸರ ತಂಡ ಆರೋಪಿಗಳನ್ನು ಬಂಧಿಸಿದೆ. ನಿಯಮಿತವಾದ ದಾಖಲೆ ತೋರಿಸದ ಕಾರಣ ಆರೋಪಿಗಳನ್ನು ಹೆಚ್ಚಿನ ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ಅವರು ಅಕ್ರಮವಾಗಿ ನೆಲೆಸಿರುವ ವಿಚಾರ ಬೆಳಕಿಗೆ ಬಂದಿದೆ.

ಕೆಂಪುಕೋಟೆಗೆ ಅಕ್ರಮ ಪ್ರವೇಶ ಯತ್ನ: ಬಾಂಗ್ಲಾ ಅಕ್ರಮ ವಲಸಿಗರ ಬಂಧನ Read More »

ಸನಾತನ ಧರ್ಮದ ಬಗ್ಗೆ ನಾಲಿಗೆ ಹರಿಬಿಟ್ಟ ನಟ ಕಮಲ್ ಹಾಸನ್

ಚೆನೈ: ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೆಲ ಸಮಯದ ಹಿಂದೆ ವಿವಾದ ಸೃಷ್ಟಿಸಿಕೊಂಡಿದ್ದ ನಟ ಕಮಲ್ ಹಾಸನ್ ಈಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕಮಲ್ ಸನಾತನ ಧರ್ಮದ ಬಗ್ಗೆ ನಾಲಿಗೆ ಬಿಟ್ಟಿದ್ದು, ಶಿಕ್ಷಣ ಸನಾತನ ಧರ್ಮ ಮತ್ತು ಸರ್ವಾಧಿಕಾರದ ಸಂಕೋಲೆಗಳನ್ನು ತುಂಡು ಮಾಡಬಲ್ಲ ಏಕೈಕ ಅಸ್ತ್ರ ಎಂದು ಹೇಳಿದ್ದಾರೆ. ಸನಾತನ ಧರ್ಮವನ್ನು ಸಂಕೋಲೆಗೆ ಹೋಲಿಕೆ ಮಾಡಿ ಮತ್ತೊಮ್ಮೆ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಕಮಲ್ ಹಾಸನ್ ಹೇಳಿಕೆಯನ್ನು ತಮಿಳುನಾಡಿನ ಬಿಜೆಪಿ ಖಂಡಿಸಿದ್ದು, ಹಿಂದೆ ಭಾಷೆಗೆ ಸಂಬಂಧಿಸಿದ

ಸನಾತನ ಧರ್ಮದ ಬಗ್ಗೆ ನಾಲಿಗೆ ಹರಿಬಿಟ್ಟ ನಟ ಕಮಲ್ ಹಾಸನ್ Read More »

ಆಪರೇಷನ್ ಮಹಾದೇವ್‌ನಲ್ಲಿ ಹತರಾದವರು ಪಾಕಿಸ್ತಾನಿ ಉಗ್ರರು ಎಂಬುದಕ್ಕೆ ದಾಖಲೆ ಇದೆ: ಭದ್ರತಾ ಪಡೆ

ಶ್ರೀನಗರ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಉಗ್ರರ ವಿರುದ್ಧ ಭಾರತ ನಡೆಸಿದ ಆಪರೇಷನ್ ಮಹಾದೇವ್ ಕಾರ್ಯಾಚರಣೆಯಲ್ಲಿ ಮೃತಪಟ್ಟ‌ ಉಗ್ರರು ಪಾಕಿಸ್ತಾನಕ್ಕೆ ಸೇರಿದವರು ಎಂಬುದಕ್ಕೆ ಭದ್ರತಾ ಪಡೆಗಳು ಸಾಕ್ಷ್ಯ ಸಂಗ್ರಹ ಮಾಡಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮೃತರ ಬಳಿಯಲ್ಲಿ ಪಾಕಿಸ್ತಾನದ ಮತದಾರರ ಗುರುತಿನ ಚೀಟಿ, ಬಯೋಮೆಟ್ರಿಕ್, ಸ್ಯಾಟಲೈಟ್ ಕರೆ ದತ್ತಾಂಶಗಳು, GPS ವೇಪಾಯಿಂಟ್‌ಗಳು, ಪಾಕ್‌ನಲ್ಲಿ ತಯಾರು ಮಾಡಲಾದ ಚಾಕಲೇಟುಗಳು ಮತ್ತು ಸಾಕ್ಷ್ಯಗಳ ಹೇಳಿಕೆಯಿಂದ ಅವರು ಪಾಕಿಸ್ತಾನದ ನಾಗರಿಕರು ಎಂದು ಸಾಬೀತಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ರಾಷ್ಟ್ರೀಯತೆಯ ಬಗ್ಗೆ ಯಾವುದೇ ಸಂದೇಹಕ್ಕೆ

ಆಪರೇಷನ್ ಮಹಾದೇವ್‌ನಲ್ಲಿ ಹತರಾದವರು ಪಾಕಿಸ್ತಾನಿ ಉಗ್ರರು ಎಂಬುದಕ್ಕೆ ದಾಖಲೆ ಇದೆ: ಭದ್ರತಾ ಪಡೆ Read More »

error: Content is protected !!
Scroll to Top