Uncategorized

ನಾಯಿ ಕಡಿತ, ರೇಬಿಸ್ ಕುರಿತು ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚಿ ರೇಬಿಸ್‌ಗೆ ತುತ್ತಾಗಿರುವ ‌ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾಧ್ಯಮಗಳ ವರದಿಗಳಿಂದ ತಿಳಿದು ಬಂದಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿರುವ ನ್ಯಾಯಾಲಯ ‘ಆತಂಕಕಾರಿ ‌ಮತ್ತು ಗಾಬರಿಗೊಳಿಸುವಂತಹ ವಿಷಯ’ ಎಂದು ಹೇಳಿದೆ. ನವದೆಹಲಿ ಮತ್ತು ಹೊರ ವಲಯದಲ್ಲಿ ನಾಯಿ ಕಡಿತಕ್ಕೆ ಸಂಬಂಧಿಸಿದ ಹಾಗೆ ನೂರಾರು ಪ್ರಕರಣಗಳು ವರದಿಯಾಗುತ್ತಿವೆ. ಇದು ಅಂತಿಮವಾಗಿ ರೇಬಿಸ್‌ಗೆ ಕಾರಣವಾಗುತ್ತಿದೆ. ಮಕ್ಕಳು, ವೃದ್ಧರು ಸಹ ಈ ಭಯಾನಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ. ಈ‌ […]

ನಾಯಿ ಕಡಿತ, ರೇಬಿಸ್ ಕುರಿತು ಆತಂಕ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ Read More »

ಆಪರೇಷನ್ ಮಹಾದೇವ್ ನಡೆಸಿ‌ ಪಹಲ್ಗಾಮ್ ದಾಳಿ ನಡೆಸಿದ ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದ ಸೇನೆ

ಶ್ರೀನಗರ: ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ಗೆ ಪಹಲ್ಗಾಮ್ ದಾಳಿಯಲ್ಲಿ ಭಾಗವಹಿಸಿದ ಮೂವರು ಶಂಕಿತ ಪಾಕ್ ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಮೃತ ಉಗ್ರರಿಂದ ಗ್ರೆನೇಡ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಲಿಡ್ವಾಸ್ ಪ್ರದೇಶದಲ್ಲಿ ಮೂವರು ಉಗ್ರರು ನೆಲೆ ಬಿಟ್ಟಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಶಸ್ತ್ರ ಪಡೆಗಳು ದಾಳಿ ನಡೆಸಿ ಈ ಎನ್‌ಕೌಂಟರ್ ನಡೆಸಿದೆ. ಆಪರೇಷನ್ ಮಹಾದೇವ್ ಹೆಸರಿನಲ್ಲಿ ಈ ಕಾರ್ಯಾಚರಣೆಯನ್ನು ಸೇನೆ, ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರದ ಪೊಲೀಸರು ನಡೆಸಿವೆ. ಎರಡು ದಿನಗಳ‌ ಹಿಂದಷ್ಟೇ ದಚಿಗಮ್ ಕಾಡಿನಲ್ಲಿ ಅನುಮಾನಾಸ್ಪದ

ಆಪರೇಷನ್ ಮಹಾದೇವ್ ನಡೆಸಿ‌ ಪಹಲ್ಗಾಮ್ ದಾಳಿ ನಡೆಸಿದ ಶಂಕಿತ ಉಗ್ರರನ್ನು ಎನ್‌ಕೌಂಟರ್ ಮಾಡಿದ ಸೇನೆ Read More »

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ

ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದ ಹಾಗೆ ತನಿಖೆ ನಡೆಸಲು ರಾಜ್ಯ ಸರ್ಕಾರ SIT ಮುಖ್ಯಸ್ಥರನ್ನಾಗಿ ಪ್ರಣವ್ ಮೊಹಂತಿ ಅವರನ್ನು ಆಯ್ಕೆ ಮಾಡಿದ್ದು, ಅವರು ಆ ತನಿಖೆಗೆ ಸೂಕ್ತ ವ್ಯಕ್ತಿ ಅಲ್ಲ ಎಂದು ಮಾಜಿ ಡಿವೈಎಸ್‌ಪಿ ಅನುಪಮಾ ಶೆಣೈ ಆಕ್ಷೇಪ ಸಲ್ಲಿಸಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಅವರು ನರಹತ್ಯೆ, ಅತ್ಯಾಚಾರ ಕುರಿತಾದ ತನಿಖೆಗೆ ಮೊಹಂತಿ ಸೂಕ್ತ ವ್ಯಕ್ತಿ ಅಲ್ಲ. ಮೊಹಂತಿ ಅವರನ್ನು ನೇಮಕ ಮಾಡಿರುವುದರಲ್ಲಿ ಕೆ. ಎ. ಜಾರ್ಜ್ ಕೈವಾಡ ಇದೆ ಎಂಬ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ SIT ಮುಖ್ಯಸ್ಥರಾಗಿ ಪ್ರಣವ್ ಮೊಹಂತಿ ಆಯ್ಕೆ ಸರಿ ಇಲ್ಲ: ಅನುಪಮಾ ಶೆಣೈ Read More »

ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ

ಮೇಳೈಸಿದ ತುಳು ಆಹಾರ ಮೇಳ, ಸಂಪನ್ಮೂಲ ವ್ಯಕ್ತಿಗಳ ಮಾತುಕತೆ, ತುಳು ಯಕ್ಷಗಾನ ತಾಳಮದ್ದಳೆ ಪುತ್ತೂರು: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಪಿಎಂಶ್ರೀ ಸಮುದಾಯದ ಸಹಭಾಗಿತ್ವದಲ್ಲಿ ಇಕೋಕ್ಲಬ್, ಸ್ಕೌಟ್ & ಗೈಡ್, ಸಾಹಿತ್ಯ ಕ್ಲಬ್ ಸೇವಾದಳ, ಸಾಂಸ್ಕೃತಿಕ ಕ್ಲಬ್ ಆಯೋಜಿಸಿದ ತುಳು ನಾಡಿನ ಸಂಸ್ಕೃತಿಗಳ ಪರಿಚಯವನ್ನು ಮಾಡುವ ಉದ್ದೇಶದಿಂದ ಸಂಪನ್ಮೂಲ ವ್ಯಕ್ತಿಗಳಿಂದ ಮಾತುಕತೆ, ತುಳುನಾಡಿನ ಆಷಾಡ ಮಾಸದ ತಿನಿಸುಗಳು, ಹಾಗೂ ತುಳುನಾಡ ಬಲಿಯೇಂದ್ರೆ ಎಂಬ ಯಕ್ಷಗಾನ ತಾಳಮದ್ದಳೆಯು ಶಾಲಾ ಸಭಾಂಗಣದಲ್ಲಿ ನಡೆಯಿತು. ಉದ್ಘಾಟನೆಯನ್ನು ಶಾಲಾಭಿವೃದ್ಧಿ ಸಮಿತಿಯ

ಪಿ ಎಂ ಶ್ರೀ ಶಾಲೆ ವೀರಮಂಗಲದಲ್ಲಿ ಆಟಿಯಲ್ಲಿ ಒಂದು ದಿನ ಕಾರ್ಯಕ್ರಮ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

ಪುತ್ತೂರು: ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮತ್ತು ಕೆವಿಜಿ ವೈದ್ಯಕೀಯ ಮಹಾವಿದ್ಯಾಲಯಗಳ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಕೆವಿಜಿ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲ್ ಉದ್ಘಾಟಿಸಿದರು. ಸುಳ್ಯದಲ್ಲಿ ಕೆವಿಜಿ – ಪುತ್ತೂರಿನಲ್ಲಿ ಎವಿಜಿಉದ್ಘಾಟಕರು ಮಾತನಾಡಿ ಸುಳ್ಯದ ಬೆಳವಣಿಗೆಯಲ್ಲಿ ಡಾ. ಕುರುಂಜಿ ವೆಂಕಟ್ರಮಣ ಗೌಡರು ಮಾಡಿದ ಶೈಕ್ಷಣಿಕ ಮತ್ತು ಸಾಮಾಜಿಕ ಸಾಧನೆಯಿಂದಾಗಿ ಇಂದು ಇಂತಹ ಉಚಿತ ವೈದ್ಯಕೀಯ ತಪಾಸಣಾ ಶಿಬಿರಗಳು ನಡೆಯಲು ಸಾಧ್ಯವಾಗಿದೆ ಎಂದರು. ಕುರುಂಜಿಯವರ ಕೈಂಕರ್ಯವನ್ನು

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ Read More »

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ

ನವದೆಹಲಿ: ಕೊರೋನಾ ಅವಧಿಯಲ್ಲಿ ಪ್ರಪಂಚದ 25 ಲಕ್ಷಕ್ಕೂ ಅಧಿಕ ಜನರ ಜೀವವನ್ನು ಕೊರೋನಾ ‌ಲಸಿಕೆ ಕಾಪಾಡಿದೆ ಎಂದು ವರದಿಯೊಂದು ತಿಳಿಸಿದೆ. ಇಟಲಿ ಮತ್ತು ಅಮೆರಿಕದ ವಿಶ್ವವಿದ್ಯಾಲಯಗಳು ಜಂಟಿಯಾಗಿ ನಡೆಸಿದ ಈ ಅಧ್ಯಯನದಲ್ಲಿ ಪ್ರತಿ 5,400 ಡೋಸ್‌ಗಳಿಗೆ ಒಂದು ಸಾವನ್ನು ತಪ್ಪಿಸಲಾಗಿದೆ. ಕೊರೋನಾ ಲಸಿಕೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಹಿರಿಯರ ಸಾವಿನ ಪ್ರಮಾಣವನ್ನು ತಪ್ಪಿಸಲಾಗಿದೆ ಎಂದು ಈ ವರದಿ ಹೇಳಿದೆ. ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಜರ್ನಲ್ ಒಂದರಲ್ಲಿ ಈ ವರದಿ ಪ್ರಕಟವಾಗಿದೆ. ಇನ್ನು ಕೊರೋನಾ ಲಸಿಕೆಯ ಕಾರಣಕ್ಕೆ ಹೃದಯಾಘಾತವಾಗುತ್ತಿಲ್ಲ

ಹೃದಯಾಘಾತಕ್ಕೂ ಕೊರೋನಾ ಲಸಿಕೆಗೂ ನಂಟಿಲ್ಲ: ಅಧ್ಯಯನ Read More »

ಪಾಕ್ ಜೊತೆಗಿನ ಕದನ ವಿರಾಮಕ್ಕೆ ಕಾರಣ ತಿಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಭಾರತ ಮತ್ತು ಪಾಕ್‌ ರಾಷ್ಟ್ರಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರುಗಳ ನಡುವಿನ ನೇರ ಮಾತುಕತೆಯೇ ಕದನ ವಿರಾಮಕ್ಕೆ ಕಾರಣ ಎಂದು ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಉಭಯ ರಾಷ್ಟ್ರಗಳ ನಡುವಿನ ಕದನ ವಿರಾಮಕ್ಕೆ ಅಮೆರಿಕಾದ ಮಧ್ಯಸ್ಥಿಕೆ ಕಾರಣವೇ ಎಂಬ ಪ್ರಶ್ನೆಗೆ ವಿದೇಶಾಂಗ ಸಚಿವಾಲಯ ಈ ಮಾಹಿತಿಯನ್ನು ಲಿಖಿತ ರೂಪದಲ್ಲಿ ತಿಳಿಸಿರುವುದಾಗಿದೆ. ಮೊದಲು ಪಾಕಿಸ್ತಾನವೇ ಕದನ ವಿರಾಮದ ಪ್ರಸ್ತಾಪ ಮಾಡಿದೆ. ಮೇ 10 ರಂದು ಎರಡೂ ರಾಷ್ಟ್ರಗಳ DGMOs ನೇರ ಮಾತುಕತೆ ನಡೆಸಿದ್ದು, ಇದರ ಪರಿಣಾಮ ಎಂಬಂತೆ

ಪಾಕ್ ಜೊತೆಗಿನ ಕದನ ವಿರಾಮಕ್ಕೆ ಕಾರಣ ತಿಳಿಸಿದ ಕೇಂದ್ರ ಸರ್ಕಾರ Read More »

ಕರಾವಳಿ ಭಾಗದ ಕಡಲಿನಲ್ಲಿ ಪ್ರಕ್ಷುಬ್ಧ ಅಲೆಗಳ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮಂಗಳೂರು: ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಮುದ್ರದ ಅಲೆಗಳು ಪ್ರಕ್ಷುಬ್ಧವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶನಿವಾರ ಸಂಜೆಯಿಂದ ಕರಾವಳಿ ಭಾಗದಲ್ಲಿ 3.2 ರಿಂದ 4.2 ಮೀ. ಎತ್ತರದ ಅಲೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಜು. 27 ಭಾನುವಾರದ ತಡರಾತ್ರಿ ವರೆಗೆ ಮೀನುಗಾರರು ಸೇರಿದಂತೆ ಯಾರೇ ಕಡಲ ತೀರ ಕ್ಕೆ ಹೋಗುವುದಿದ್ದರೂ ಎಚ್ಚರ ವಹಿಸುವಂತೆ ಎಚ್ಚರಿಕೆ ನೀಡಿದೆ. ಕಡಲ ತೀರದ ಜನರು, ಮೀನುಗಾರರು

ಕರಾವಳಿ ಭಾಗದ ಕಡಲಿನಲ್ಲಿ ಪ್ರಕ್ಷುಬ್ಧ ಅಲೆಗಳ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ

ಕಡಬ: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆಯು ಕಚೇರಿಯ ದೀನದಯಾಳು ರೈತ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮಹಾಸಭೆಯ ತಿಳುವಳಿಕೆ ಪತ್ರವನ್ನು ಓದಿ ದಾಖಲು ಮಾಡುವುದು, 2023-24 ನೇ ಸಾಲಿನ ಮಹಾಸಭೆಯ ನಡವಳಿಕೆಯನ್ನು ಓದಿ ದಾಖಲಿಸುವುದು, 2024-25 ನೇ ಸಾಲಿನ ವರದಿ ಮಂಡನೆ, 2024-25 ನೇ ಸಾಲಿನ ಆಡಿಟ್ ವರದಿ ಅಂಗೀಕಾರ ಮತ್ತು ಆಡಿಟ್ ನ್ಯೂನತೆಗಳಿಗೆ ಆಡಳಿತ ಮಂಡಳಿ ತಯಾರಿಸಿದ ಸಮಜಾಯಿಷಿಕೆ ವರದಿ ಅಂಗೀಕರಿಸುವ ಕುರಿತು ಚರ್ಚೆ ನಡೆಸಲಾಯಿತು.

ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ Read More »

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ

ನವದೆಹಲಿ: ವಿಪಕ್ಷ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಮಾಡಿದ್ದ ಆರೋಪಕ್ಕೆ ಚುನಾವಣಾ ಆಯೋಗ ಪ್ರತಿಕ್ರಿಯೆ ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಚುನಾವಣಾ ಆಯೋಗದ ಫ್ಯಾಕ್ಟ್ ಚೆಕ್ಕಿಂಗ್ ವಿಭಾಗ, ರಾಹುಲ್ ಗಾಂಧಿ ಆರೋಪ ತಳ್ಳಿ ಹಾಕಿರುವ ಚು. ಆಯೋಗ, ಅವರ ಹೇಳಿಕೆಗಳು ನಿರ್ಧಾರ ಮತ್ತು ಜನರನ್ನು ದಾರಿ ತಪ್ಪಿಸುವಂತಹವು ಎಂದು ಹೇಳಿದೆ. ಜನ ಪ್ರತಿನಿಧಿಗಳ ಕಾಯ್ದೆಯಡಿ ಈ ಬಗ್ಗೆ ದೂರು ನೀಡದ ರಾಹುಲ್ ಗಾಂಧಿ ಆಧಾರವಿಲ್ಲದೆ ಈ ರೀತಿ ಆರೋಪಗಳನ್ನು ಮಾಡುತ್ತಿರುವುದು

ಕರ್ನಾಟಕದಲ್ಲಿ ಚುನಾವಣಾ ಅಕ್ರಮ ಆರೋಪ ಮಾಡಿದ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡ ಚುನಾವಣಾ ಆಯೋಗ Read More »

error: Content is protected !!
Scroll to Top