Uncategorized

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು

ಧಾರವಾಡ: ಜಯ ನಗರದ 4 ನೇ ಕ್ರಾಸ್‌ನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕೆ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸದಸ್ಯೆ ಸರೋಜಾ ಪಾಟೀಲ ಎಂಬವರ ಪುತ್ರಿ‌ ಸವಿತಾ ಹೊಂಗಲಮಠ ಎಂಬವರೇ ‌ಮೃತ ದುರ್ದೈವಿ. ಸವಿತಾ ಅವರು ಪತಿಯ ಮನೆಯಲ್ಲೇ ನೇಣಿಗೆ ಶರಣಾಗಿರುವುದಾಗಿದೆ. ಆದರೆ ಸವಿತಾ ಮನೆಯವರು ಇದು ಕೊಲೆ, ಆತ್ಮಹತ್ಯೆ ಅಲ್ಲ ಎಂಬುದಾಗಿ ಆರೋಪಿಸಿದ್ದಾರೆ. ಸವಿತಾ ಅವರಿಗೆ ಪತಿ ಮನೆಯಲ್ಲಿ ಸಾಕಷ್ಟು ಕಿರುಕುಳ ನೀಡಲಾಗುತ್ತಿತ್ತು. ಆಕೆಯ ಪತಿಯೇ ಕೊಲೆ ಮಾಡಿರುವುದಾಗಿ ಆರೋಪಿಸಿದ್ದಾರೆ. […]

ಕೌಟುಂಬಿಕ ಕಲಹದಿಂದ ‌ಮಹಿಳೆ ಆತ್ಮಹತ್ಯೆ: ಪತಿ ಮನೆಯವರ ವಿರುದ್ದ ದೂರು ದಾಖಲು Read More »

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು

ಉಪ್ಪಿನಂಗಡಿ: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಮಾಡಿಕೊಂಡು ವಿವಾಹವಾಗುವುದಾಗಿ ‌ನಂಬಿಸಿ, ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ವಾಟ್ಸಾಪ್ ಮೂಲಕ ಹಂಚಿದ ಪ್ರಕರಣವೊಂದಕ್ಕೆ ಸಂಬಂಧಿಸಿದ ಹಾಗೆ ಉಪ್ಪಿನಂಗಡಿ ‌ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 20 ವರ್ಷದ ಯುವತಿ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿಯಾಗಿದ್ದು, ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ. ಸುಮಾರು ಆರು ತಿಂಗಳ ಹಿಂದೆ ಆರೋಪಿತ ಸುಶಾಂತ್ ಪೂಜಾರಿ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದಾನೆ. ಬಳಿಕ ಇಬ್ಬರ ನಡುವೆ ಸ್ನೇಹ ಪ್ರೀತಿಗೆ ತಿರುಗಿ, ಮದುವೆಯಾಗುವುದಾಗಿ ನಿರ್ಧರಿಸಿದ್ದಾಗಿ

ಯುವತಿಯ ಖಾಸಗಿ ವಿಡಿಯೋ ವಾಟ್ಸಾಪ್‌ನಲ್ಲಿ ಹಂಚಿದ ಆರೋಪಿಗಳ ವಿರುದ್ಧ ದೂರು ದಾಖಲು Read More »

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ?

ಸಿಬಿಐಗೆ ನೋಟಿಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್‌ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ 13 ವರ್ಷಗಳ ಹಿಂದೆ ನಡೆದಿದ್ದ ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿ ಸೌಜನ್ಯ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಸುಪ್ರೀಂಕೋರ್ಟ್ ಸಿಬಿಐಗೆ ನೊಟೀಸ್ ಜಾರಿ ಮಾಡಿದೆ.ಸೌಜನ್ಯ ತಾಯಿ ಕುಸುಮಾತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ಜಾರಿ ಮಾಡಿರುವುದರಿಂದ ಈ ಪ್ರಕರಣ ಮರಳಿ ತನಿಖೆಯಾಗುವ ನಿರೀಕ್ಷೆ ಮೂಡಿದೆ. 2012ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದ ಧರ್ಮಸ್ಥಳ ಗ್ರಾಮದ ಪಾಂಗಳ

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆ? Read More »

ಹರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲಿವೆ ಮತ್ತೆರಡು ಎಲ್‌ಪಿ‌ಜಿ ಹೊತ್ತ ಹಡಗುಗಳು?

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಭಾರತದ ಎರಡು ದ್ರವೀಕೃತ ಪೆಟ್ರೋಲಿಯಂ ಅನಿಲ ಟ್ಯಾಂಕರ್‌ಗಳು ಭಾರತೀಯ ಧ್ವಜದೊಂದಿಗೆ ಹರ್ಮುಜ್ ಜಲಸಂಧಿ ದಾಟಲು ಸಿದ್ಧತೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ. ಇರಾನ್ ಮತ್ತು ಇಸ್ರೇಲ್, ಅಮೆರಿಕಾ ನಡುವಿನ ಯುದ್ಧ ಆರಂಭವಾದಾಗಿಂದ ಈ ಜಲಸಂಧಿಯ ಮೂಲಕ ಈ ವರೆಗೆ ಭಾರತದ ಅನಿಲ ತುಂಬಿದ ಹಡಗುಗಳನ್ನು ಬಿಟ್ಟು ಬೇರೆ ಯಾವ ರಾಷ್ಟ್ರದ ಹಡಗುಗಳಿಗೂ ಅನಿಲ ರವಾನೆಗೆ ಇರಾನ್ ಅವಕಾಶ ನೀಡಿಲ್ಲ. ಆದರೆ ಭಾರತದ ರಾಜತಾಂತ್ರಿಕ ನೀತಿಯಿಂದಾಗಿ ಭಾರತದ ಶಿವಾಲಿಕ್ ಮತ್ತು ನಂದಾದೇವಿ

ಹರ್ಮುಜ್ ಜಲಸಂಧಿ ದಾಟಿ ಭಾರತಕ್ಕೆ ಬರಲಿವೆ ಮತ್ತೆರಡು ಎಲ್‌ಪಿ‌ಜಿ ಹೊತ್ತ ಹಡಗುಗಳು? Read More »

ಫಾರ್ಚೂನರ್ ಕಾರಿನಲ್ಲಿ ಜಾನುವಾರು ಸಾಗಿಸಿದ ಆರೋಪಿಗಳು ಸೆರೆ

ಪೊಲೀಸರು ತಡೆದಾಗ ಕಾರು ಬಿಟ್ಟು ಪಲಾಯನ ಮಾಡಿದ್ದ ಆರೋಪಿಗಳು ಮಂಗಳೂರು: ಬಡಗ ಎಡಪದವು ಗ್ರಾಮದ ಸಾಸ್ತಾವು ದೇವಸ್ಥಾನದ ಸಮೀಪ ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವೇಳೆ ಪೊಲೀಸರು ತಡೆದಾಗ ಸ್ಥಳದಿಂದ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪೆರ್ಮುದೆಯ ಭಟ್ರಕೆರೆ ನಿವಾಸಿಯಾಗಿ ಪೇಜಾವರ ಕೊಂಚಾರ ಮೂಲದ ನಿಸಾರ್ ಅಲಿಯಾಸ್ ನಿಸಾರುದ್ದೀನ್ ಅಲಿಯಾಸ್ ಪಾರಿವಾಳ ನಿಸಾರ್ (28) ಮತ್ತು ಉಳಾಯಿಬೆಟ್ಟು ಪೆರ್ಮಂಕಿಯ ಅಕ್ಕೋಡಿ ಹೌಸ್ ನಿವಾಸಿ ಮೊಹಮ್ಮದ್ ಜಮಾಲುದ್ದೀನ್ ಅಲಿಯಾಸ್ ಜಮಾಲ್ (24)

ಫಾರ್ಚೂನರ್ ಕಾರಿನಲ್ಲಿ ಜಾನುವಾರು ಸಾಗಿಸಿದ ಆರೋಪಿಗಳು ಸೆರೆ Read More »

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಮನೆಯಿಂದ ಪರೀಕ್ಷಾ ಕೇಂದ್ರದ ತನಕ ಪ್ರಯಾಣಿಸಲು ಸೌಲಭ್ಯ ಬೆಂಗಳೂರು : ರಾಜ್ಯದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಬುಧವಾರದಿಂದ ಆರಂಭವಾಗಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದು ದೊಡ್ಡ ಸಮಾಧಾನ ತಂದಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿದ್ದು, ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ಪರೀಕ್ಷೆಗಳು ಇರುತ್ತವೆ. ರಾಜ್ಯಾದ್ಯಂತ ಲಕ್ಷಾಂತರ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ Read More »

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಸಂಘರ್ಷದ ಕಾರಣಕ್ಕೆ ರಾಜ್ಯದಲ್ಲೂ ‘ಗ್ಯಾಸ್ ಟ್ರಬಲ್’ ಸಮಸ್ಯೆ ತಲೆದೋರಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಟೇಲ್ ಉದ್ಯಮಕ್ಕೆ ಶಾಕ್ ನೀಡಿದೆ. ಸಚಿವ ಕೆ. ಎಚ್. ಮುನಿಯಪ್ಪ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ತೈಲ ಕಂಪನಿಗಳ ಜೊತೆ ಈಗಾಗಲೇ ಈ ಸಂಬಂಧ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿರುವ ಹೊಟೇಲ್‌ಗಳಿಗೆ ಸದ್ಯದ ಸ್ಥಿತಿಯಲ್ಲಿ ಗ್ಯಾಸ್ ಪೂರೈಕೆ ಕಷ್ಟಸಾಧ್ಯ ಎಂದಿದ್ದಾರೆ. ಆಸ್ಪತ್ರೆಗಳು, ಶೈಕ್ಷಣಿಕ ಸಂಸ್ಥೆಗಳು, ಏರ್‌ಲೈನ್ಸ್ ಮತ್ತು ರೈಲ್ವೆ ಕ್ಯಾಂಟೀನ್‌ಗಳಿಗೆ ಯಾವುದೇ ಅಡೆತಡೆ ಇಲ್ಲದೆ ಗ್ಯಾಸ್ ಪೂರೈಕೆಗೆ

ರಾಜ್ಯದ ಹೊಟೇಲ್ ಉದ್ಯಮಕ್ಕೆ ಗ್ಯಾಸ್ ಪೂರೈಕೆ ಬಗ್ಗೆ ಸರ್ಕಾರ ಹೇಳಿದ್ದೇನು ಗೊತ್ತಾ? Read More »

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ

ಹುಣಸೂರು: ಅಪಾಯಕಾರಿ ಎನ್ನುವ ರೀತಿಯಲ್ಲಿ ಬೈಕ್ ವ್ಹೀಲಿಂಗ್ ಮಾಡಿ, ಅದರ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಇಬ್ಬರು ಯುವಕರು ಸದ್ಯ ಹುಣಸೂರು ಪೊಲೀಸರ ಅತಿಥಿಗಳಾಗಿದ್ದಾರೆ. ಬಂಧಿತರನ್ನು ಶಬ್ಬೀರ್ ‌ನಗರದ ನಿವಾಸಿ ಫುರ್ಸಾನ್ ಮತ್ತು ಅವನ ಗೆಳೆಯ ಎಂದು ಗುರುತಿಸಲಾಗಿದೆ. ಈ ಇಬ್ಬರು ಹುಣಸೂರು – ಮಡಿಕೇರಿ ಹೆದ್ದಾರಿಯ ಹಾಳಗೆರೆ ಸಮೀಪ ಬೈಕ್ ವ್ಹೀಲಿಂಗ್ ಮಾಡಿ, ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದರು. ಈ ಪ್ರಕರಣದ ಮಾಹಿತಿ ಪಡೆದ ಹುಣಸೂರು ಪೊಲೀಸರು, ಇದನ್ನು

ಅಪಾಯಕಾರಿ ವ್ಹೀಲಿಂಗ್: ಇಬ್ಬರು ಯುವಕರ ಬಂಧನ Read More »

ಉಡುಪಿ : ಅಬಕಾರಿ ಉಪಾಯುಕ್ತರ ಬಳಿ 8.69 ಕೋ. ರೂ. ಆಸ್ತಿ ಪತ್ತೆ

11 ಸೈಟ್‌, 6 ಮನೆ, 31 ಎಕರೆ ಕೃಷಿಭೂಮಿ ಸಂಪಾದಿಸಿದ್ದ ಉಪಾಯುಕ್ತ ಉಡುಪಿ : ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಅಬಕಾರಿ ಉಪಆಯುಕ್ತ ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ 15 ವಿವಿಧ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸರಣಿ ದಾಳಿ ನಡೆಸಿದ್ದಾರೆ. ಮಾ.11 ಮತ್ತು 12ರಂದು ಬರೋಬ್ಬರಿ ಎರಡು ದಿನ ನಡೆಸಿದ ಈ ಕಾರ್ಯಾಚರಣೆಯಲ್ಲಿ ಒಟ್ಟು 8 ಕೋಟಿ 69 ಲಕ್ಷ ರೂಪಾಯಿ ಮೌಲ್ಯದ ಅಸಮತೋಲನ ಆಸ್ತಿ ಪತ್ತೆಯಾಗಿದೆ. ಲೋಕಾಯುಕ್ತ ಮಂಗಳೂರು ವಿಭಾಗದ

ಉಡುಪಿ : ಅಬಕಾರಿ ಉಪಾಯುಕ್ತರ ಬಳಿ 8.69 ಕೋ. ರೂ. ಆಸ್ತಿ ಪತ್ತೆ Read More »

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ‌ರಕ್ಷಣೆ

ಮಂಗಳೂರು: ನೇತ್ರಾವತಿ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ ಘಟನೆ ನಡೆದಿದೆ. ಆತ್ಮಹತ್ಯಾ ಪಾಯಿಂಟ್ ಎಂದೇ ಗುರುತಿಸಲಾಗಿದೆ. ಸೇತುವೆಯ ತಡೆಬೇಲಿಗೆ ವಾಹನವೊಂದು ‌ಗುದ್ದಿದ ಪರಿಣಾಮ ಹಾನಿಯಾಗಿ ಕೆಲವು ದಿನಗಳಾಗಿದೆ. ಇಲ್ಲಿಂದಲೇ ವ್ಯಕ್ತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವುದಾಗಿ ‌ತಿಳಿದು ಬಂದಿದೆ. ಅವರನ್ನು ಸಮೀಪದಲ್ಲೇ ಇದ್ದ ಮೀನುಗಾರರು ರಕ್ಷಿಸಿದ್ದಾಗಿ ತಿಳಿದು ಬಂದಿದೆ. ಆತ್ಮಹತ್ಯೆಗೆ ಯತ್ನಿಸಿದ ‌ವ್ಯಕ್ತಿ ನಾಗುರಿ ಪ್ರದೇಶದವರಾಗಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ‌ರಕ್ಷಣೆ Read More »

error: Content is protected !!
Scroll to Top