Uncategorized

ಮಂಗಳೂರು ನಗರದಲ್ಲೂ ಚಿರತೆ ಓಡಾಟ!

ಜನವಸತಿ ಪ್ರದೇಶದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿರುವ ಚಿರತೆಯಿಂದ ಆತಂಕ ಮಂಗಳೂರು: ನಗರದ ಮರೋಳಿ ಮತ್ತು ಶಕ್ತಿನಗರ ಪರಿಸರದಲ್ಲಿ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಭಾನುವಾರ ಬೆಳಗ್ಗೆಯೂ ಚಿರತೆ ಪ್ರತ್ಯಕ್ಷವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಫೆಬ್ರವರಿ 17ರಿಂದ ಶಕ್ತಿನಗರ, ಮರೋಳಿ ಮತ್ತು ಹತ್ತಿರದ ರೈಲ್ವೆ ಹಳಿ ಬಳಿ ಪ್ರತಿದಿನ ಚಿರತೆ ಕಾಣಿಸಿಕೊಳ್ಳುತ್ತಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶಕ್ತಿನಗರದ ಮನೆಯೊಂದರ ಕಾಂಪೌಂಡ್ ಒಳಗೆ ಚಿರತೆಯು ಗೇಟ್ ಮೂಲಕ ಪ್ರವೇಶಿಸುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಸತಿ […]

ಮಂಗಳೂರು ನಗರದಲ್ಲೂ ಚಿರತೆ ಓಡಾಟ! Read More »

ಬುಲೆಟ್‌ನಲ್ಲಿ ಜಾಲಿ ರೈಡ್‌ ಮಾಡುವಾಗ ಅಪಘಾತ : ಓರ್ವ ಯುವತಿ ಸಾವು, ಇನ್ನೋರ್ವ ಗಂಭೀರ

ಹೆಲ್ಮೆಟ್‌ ಧರಿಸದೆ ಬೈಕ್‌ ಚಲಾಯಿಸುವಾಗ ಹಂಪ್‌ನಲ್ಲಿ ಪಲ್ಟಿ ಬೆಂಗಳೂರು : ಬುಲೆಟ್ ಬೈಕ್‌ನಲ್ಲಿ ಸ್ನೇಹಿತೆಯರಿಬ್ಬರು ಜಾಲಿ ರೈಡ್‌ ಮಾಡುವಾಗ ಅಪಘಾತ ಸಂಭವಿಸಿದ ಓರ್ವ ಯುವತಿ ಮೃತಪಟ್ಟು ಇನ್ನೋರ್ವ ಯುವತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ಸಂಭವಿಸಿದೆ. ಬೈಕ್‌ ವೇಗವಾಗಿ ಚಲಾಯಿಸುವಾಗ ಹಂಪ್ಸ್ ಕಾಣದೆ ಬೈಕ್‌ ಪಲ್ಟಿಯಾಗಿ ಯುವತಿಯವರು ರಸ್ತೆಗೆ ಹಾರಿ ಬಿದ್ದಿದ್ದು, ಪರಿಣಾಮ ಓರ್ವ ಯುವತಿ ಸಾವನ್ನಪ್ಪಿದ್ದಾಳೆ. ಹಾಸನ ನಗರ ಕೈಗಾರಿಕಾ ಪ್ರದೇಶದಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರೂ ಹೆಲ್ಮೆಟ್‌ ಧರಿಸಿರಲಿಲ್ಲ ಎನ್ನಲಾಗಿದೆ. ಸತ್ಯಮಂಗಲ ಬಡಾವಣೆಯ ಪ್ರಿಯಾ

ಬುಲೆಟ್‌ನಲ್ಲಿ ಜಾಲಿ ರೈಡ್‌ ಮಾಡುವಾಗ ಅಪಘಾತ : ಓರ್ವ ಯುವತಿ ಸಾವು, ಇನ್ನೋರ್ವ ಗಂಭೀರ Read More »

ಭೀಕರ ಅಪಘಾತ : ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಟ್ಟೆಕೆರೆ ಸಮೀಪ ಶನಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್‌ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ

ಭೀಕರ ಅಪಘಾತ : ಮಗು ಸಹಿತ ನಾಲ್ವರು ಸ್ಥಳದಲ್ಲೇ ಸಾವು Read More »

ಮಂಗಳೂರು : ಬಿಎಸ್‌ಎನ್‌ಎಲ್‌ ಅಧಿಕಾರಿಗಳಿಂದಲೇ ಕಾಪರ್‌ ಕೇಬಲ್‌ ಕಳವು

ಮಂಗಳೂರು: ಬಿಎಸ್​ಎನ್ಎಲ್​​​​​ ಕಚೇರಿಯ ಅಧಿಕಾರಿಗಳೇ 70 ಲಕ್ಷ ಮೌಲ್ಯದ ಕಾಪರ್ ಕೇಬಲ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪ್ರಕರಣ ಸಂಬಂಧ ಮಂಗಳೂರು ದಕ್ಷಿಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಿಎಸ್‌ಎನ್‌ಎಲ್‌ ಅಸಿಸ್ಟೆಂಟ್​​ ಆಫೀಸ್​​ ಸೂಪರಿಂಟೆಂಡೆಂಟ್ ತನ್ವೀರ್ ಪಾಷಾ(50), ಟೆಲಿಕಾಂ ಟೆಕ್ನಿಶಿಯನ್ ಕೆ.ಕೆ.ಚಾಮಿ(59) ಹಾಗೂ L&T ಕಂಪನಿ ಕೇಬಲ್ ಜಾಯಿಂಟರ್ ಡಿ.ಮಂಜುನಾಥ್ ಬಂಧಿತರಾಗಿದ್ದಾರೆ. ಆರೋಪಿಗಳಿಂದ 2.5 ಲಕ್ಷ ರೂ. ಮೌಲ್ಯದ ಕಾಪರ್ ಕೇಬಲ್ ಮತ್ತು 10 ಲಕ್ಷ ನಗದನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು : ಬಿಎಸ್‌ಎನ್‌ಎಲ್‌ ಅಧಿಕಾರಿಗಳಿಂದಲೇ ಕಾಪರ್‌ ಕೇಬಲ್‌ ಕಳವು Read More »

ಭೀಕರ ಅಪಘಾತ : 7 ಮಂದಿ ಸ್ಥಳದಲ್ಲೇ ಸಾವು

ಕಾರು, ಕ್ಯಾಂಟರ್‌, ಬೈಕ್‌ ನಡುವೆ ಡಿಕ್ಕಿ ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಕ್ಸ್

ಭೀಕರ ಅಪಘಾತ : 7 ಮಂದಿ ಸ್ಥಳದಲ್ಲೇ ಸಾವು Read More »

ಮಂಗಳೂರು: ಸಂಸದರ ಜೊತೆಗೆ ಪತ್ನಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ್ದ ಗಂಡನಿಗೆ ಜೈಲು ಶಿಕ್ಷೆ

ದಾಂಪತ್ಯ ವಿರಸದ ಹಿನ್ನೆಲೆಯಲ್ಲಿ ಪತ್ನಿ ಮತ್ತು ಸಂಸದರ ಚಾರಿತ್ರ್ಯಹನನ ಮಾಡಿದ್ದ ಅಪರಾಧಿ ಮಂಗಳೂರು: ದಕ್ಷಿಣ ಕನ್ನಡದ ಮಾಜಿ ಸಂಸದರ ಜೊತೆಗೆ ತನ್ನ ಪತ್ನಿಗೆ ಸಂಬಂದ ಕಲ್ಪಿಸಿ ಅಪಪ್ರಚಾರ ಮಾಡಿದ್ದ ದುಷ್ಟ ಪತಿಗೆ ಮಂಗಳೂರಿನ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿದೆ. ಮುಂಬೈಯ ಮಿರಾರೋಡ್‌ ನಿವಾಸಿ ಸತೀಶ್‌ ಶೆಟ್ಟಿ ಶಿಕ್ಷೆಗೊಳಗಾದ ಅಪರಾಧಿ. ಸತೀಶ್‌ ಶೆಟ್ಟಿಗೆ ಪತ್ನಿ ಜೊತೆ ಮನಸ್ತಾಪ ಇತ್ತು. ಮಕ್ಕಳಾದ ಮೇಲೆ ಮನೆಯಲ್ಲಿ ನಿತ್ಯ ಜಗಳ ನಡೆಯುತ್ತಿತ್ತು. ಇದರಿಂದ

ಮಂಗಳೂರು: ಸಂಸದರ ಜೊತೆಗೆ ಪತ್ನಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ಮಾಡಿದ್ದ ಗಂಡನಿಗೆ ಜೈಲು ಶಿಕ್ಷೆ Read More »

ಸೊಸೆ ಮೇಲೆ ಮಾವನಿಂದ ಅನುಚಿತ ವರ್ತನೆ, ಹಲ್ಲೆ, ಬೆದರಿಕೆ: ದೂರು ದಾಖಲು

ಬಂಟ್ವಾಳ: ಅಕ್ರಮವಾಗಿ ಮನೆ ಪ್ರವೇಶಿಸಿ ಮಾವನೇ (ಗಂಡನ ತಂದೆ) ‌ಸೊಸೆಯೊಂದಿಗೆ ಅನುಚಿತವಾಗಿ ‌ವರ್ತಿಸಿ, ಹಲ್ಲೆ ನಡೆಸಿರುವ ಮತ್ತು ಜೀವ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಈ ವೇಳೆ ಮಹಿಳೆ ಮಾವನಿಂದ ತಪ್ಪಿಸಿಕೊಂಡು ಹೊರಕ್ಕೆ ಓಡಿ ಬಂದಿದ್ದು, ಈ ವೇಳೆ ಪತಿಯೂ ಸಹ ಮಾವನ ಪರವಾಗಿಯೇ ಇದ್ದು, ಹಲ್ಲೆಗೊಳಗಾದ ಪತ್ನಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾನೆ. ಆ ಬಳಿಕ ಮಹಿಳೆಯ ಹೆತ್ತವರು ಆಕೆಗೆ ಸಂಪಾಜೆಯ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳದ ಸರ್ಕಾರಿ ಆಸ್ಪತ್ರೆಗೆ

ಸೊಸೆ ಮೇಲೆ ಮಾವನಿಂದ ಅನುಚಿತ ವರ್ತನೆ, ಹಲ್ಲೆ, ಬೆದರಿಕೆ: ದೂರು ದಾಖಲು Read More »

ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ

ಸ್ವಾತಂತ್ರ್ಯ, ಸಂವಿಧಾನ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಬಲಪಡಿಸುವ ಸಂದೇಶ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಜನತೆಗೆ 77ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯುತ್ತಿರುವ ಭವ್ಯ ಗಣರಾಜ್ಯೋತ್ಸವ ಪರೇಡ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧ್ಯಕ್ಷತೆ ವಹಿಸಿದ್ದಾರೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ X ಖಾತೆಯ ಮೂಲಕ ದೇಶದ ಜನತೆಗೆ ಹೃತ್ಪೂರ್ವಕವಾಗಿ ಶುಭಾಶಯ ಕೋರಿದ್ದಾರೆ. ಭಾರತದ ಗೌರವ, ಹೆಮ್ಮೆ ಮತ್ತು ವೈಭವದ ಸಂಕೇತವಾದ

ರಾಷ್ಟ್ರಪತಿ, ಪ್ರಧಾನಿಯಿಂದ ಗಣರಾಜ್ಯೋತ್ಸವ ಶುಭಾಶಯ Read More »

ಖೈದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಧಾರವಾಡ: ಪತ್ನಿಯನ್ನು ಹತ್ಯೆಗೈದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಖೈದಿ ಧಾರವಾಡ ಕೇಂದ್ರ ಕಾರಾಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತನನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ. ಪತ್ನಿ ಕೊಲೆಗೆ ಸಂಬಂಧಿಸಿದ ಹಾಗೆ ಈಶ್ವರಪ್ಪ ಅವರಿಗೆ 14 ವರ್ಷಗಳ ಜೈಲು ಶಿಕ್ಷೆಯಾಗಿದ್ದು, ಅದರಲ್ಲಿ 7 ವರ್ಷಗಳನ್ನು ಕಳೆದಿದ್ದರು. ಕೆಲಸ ಮುಗಿದ ಬಳಿಕ ಅವರು ತಮ್ಮ ಸೆಲ್ ‌ಗೆ ಮರಳದೇ ಇದ್ದು ಜೈಲು ಸಿಬ್ಬಂದಿ ಹುಡುಕಾಟ ನಡೆಸಿದಾಗ ನಿರ್ಮಾಣ

ಖೈದಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು Read More »

ಬೆಳ್ತಂಗಡಿಯಲ್ಲಿ ಅರೆಭಾಷಾ ದಿನಾಚರಣೆ

ಉಜಿರೆ: ಬೆಳ್ತಂಗಡಿ ತಾಲೂಕು ಅರೆಭಾಷೆ ಅಭಿಮಾನಿ ಬಳಗದ ವತಿಯಿಂದ ಅರೆಭಾಷೆ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮವು ಉಜಿರೆಯ ಅಮೃತ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಮೂಡಿಬಂತು. ಸ್ವಯಂ ತೊಡಗಿಸಿಕೊಳ್ಳುವಿಕೆಯೊಂದೇ ಭಾಷೆಯ ಬೆಳವಣಿಗೆಗೆ ಆಧಾರ – ಸೀತಾರಾಮ ಕೇವಳಯಾವುದೇ ಭಾಷೆಯಾದರೂ ಕೇವಲ ಕಾರ್ಯಕ್ರಮಗಳಿಂದ ಸಶಕ್ತವಾಗಿ ಉಳಿಯಲಾರದು. ಬದಲಾಗಿ ಭಾಷೆಯನ್ನು ನೈಮಿತ್ತಿಕ ಜೀವನದಲ್ಲಿ ಬಳಸಿದಾಗ ಮಾತ್ರವೇ ಅದು ಉಳಿಯಲು ಸಾಧ್ಯ ಎಂದು ಕೇವಳ ಪ್ರತಿಪಾದಿಸಿದರು. ಅಕಾಡೆಮಿಯ ನಿರ್ದೇಶಕರಾದ ತೇಜಕುಮಾರ್ ಬಡ್ಡಡ್ಕ

ಬೆಳ್ತಂಗಡಿಯಲ್ಲಿ ಅರೆಭಾಷಾ ದಿನಾಚರಣೆ Read More »

error: Content is protected !!
Scroll to Top