Uncategorized

ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಯಶ್‌ಪಾಲ್ ಸುವರ್ಣ

ಉಡುಪಿ: ಭಾರತದ ಮೀನುಗಾರಿಕೆ ಹಾಗೂ ಕೃಷಿ ಉತ್ಪನ್ನಗಳ ರಫ್ತಿನ ಮೇಲೆ ಬ್ರಿಟನ್ ವಿಧಿಸುತ್ತಿದ್ದ ‌ಸುಂಕವು ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ರದ್ದಾಗಿದ್ದು, ಇದರಿಂದ ಮೀನುಗಾರಿಕಾ ವಲಯಕ್ಕೆ ಸಾಕಷ್ಟು ಅನುಕೂಲಗಳಾಗಲಿವೆ ಎಂದು ಶಾಸಕ ಯಶಪಾಲ್ ಸುವರ್ಣ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜನಕೇಂದ್ರಿತ ವ್ಯಾಪಾರ ರಾಜತಾಂತ್ರಿಕ ಮುಂದಾಲೋಚನೆಗೆ ಈ ಕ್ರಮ ಸಾಕ್ಷಿಯಾಗಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ. ಕೃಷಿ ರಫ್ತು ವಿಷಯಕ್ಕೆ ಸಂಬಂಧಿಸಿದ ಹಾಗೆ 95% ಕೃಷಿ ರಫ್ತು ಸುಂಕ ಮನ್ನಾ ಮಾಡಿರುವುದು […]

ಭಾರತ – ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದದಿಂದ ಮೀನುಗಾರರಿಗೆ ಅನುಕೂಲ: ಯಶ್‌ಪಾಲ್ ಸುವರ್ಣ Read More »

ಧರ್ಮಸ್ಥಳ ಪ್ರಕರಣ: ದೂರುದಾರ ವ್ಯಕ್ತಿ SIT ಮುಂದೆ ಹಾಜರ್

ಮಂಗಳೂರು: ದೇಶ ವಿದೇಶಗಳಲ್ಲಿ ಸುದ್ದಿ ಮಾಡುತ್ತಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ‌ಸಂಬಂಧಿಸಿದಂತೆ SIT ಅಧಿಕಾರಿಗಳು ದೂರುದಾರ ವ್ಯಕ್ತಿಯ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಮಲ್ಲಿಕಟ್ಟೆಯಲ್ಲಿರುವ ‌SIT ಕಚೇರಿಗೆ ತನ್ನ ವಕೀಲರ ಜೊತೆಗೆ ದೂರುದಾರ ಅನಾಮಧೇಯ ಇಂದು ಆಗಮಿಸಿದ್ದಾಗಿ ತಿಳಿದು ಬಂದಿದೆ. ಆತನನ್ನು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಕ್ಕೆ ಸಂಬಂಧಿಸಿದ ಹಾಗೆ SIT ಅಧಿಕಾರಿಗಳು ಈಗಾಗಲೇ ಸಂಬಂಧಪಟ್ಟ ಠಾಣೆಗೆ ತೆರಳಿ ಮಾಹಿತಿ ಕಲೆ ಹಾಕಿದ್ದಾರೆ ಎಂದು ಮಾಹಿತಿ ಇದೆ.

ಧರ್ಮಸ್ಥಳ ಪ್ರಕರಣ: ದೂರುದಾರ ವ್ಯಕ್ತಿ SIT ಮುಂದೆ ಹಾಜರ್ Read More »

ಕಾರ್ಗಿಲ್ ವಿಜಯ ದಿವಸ್: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರಿಂದ ಯೋಧರಿಗೆ ಗೌರವ ನಮನ

ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದ ವೀರ ಯೋಧರ ಶೌರ್ಯ ಎಲ್ಲರಿಗೂ ಸ್ಪೂರ್ತಿ ನವದೆಹಲಿ: ಕಾರ್ಗಿಲ್ ವಿಜಯ್ ದಿವಸ್ ಹಿನ್ನೆಲೆಯಲ್ಲಿ ಈ ಯುದ್ಧದಲ್ಲಿ ಹೋರಾಡಿದ ಧೀರ ಯೋಧರಿಗೆ, ಹುತಾತ್ಮರಾದ ಯೋಧರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರು ಗೌರವ ನಮನಗಳನ್ನು ‌ಸಲ್ಲಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಯೋಧರ ತ್ಯಾಗವನ್ನು ಸ್ಮರಿಸಿ ಟ್ವೀಟ್ ಮಾಡಿದ್ದು, ಕಾರ್ಗಿಲ್ ವಿಜಯ ದಿವಸ್‌ ಸಂದರ್ಭದಲ್ಲಿ ಮಾತೃಭೂಮಿಗಾಗಿ ‌ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ವೀರ ಯೋಧರಿಗೆ ಹೃತ್ಪೂರ್ವಕ ಗೌರವಗಳನ್ನು ಅರ್ಪಿಸುತ್ತೇನೆ. ಈ ದಿನವು ನಮ್ಮ ಯೋಧರ

ಕಾರ್ಗಿಲ್ ವಿಜಯ ದಿವಸ್: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಅವರಿಂದ ಯೋಧರಿಗೆ ಗೌರವ ನಮನ Read More »

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌ಸಂಪನ್ನ

ಕಡಬ: ತಾಲೂಕಿನ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ಇಲ್ಲಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ ಮತ್ತು ಕುಂಕುಮಾರ್ಚನೆ ‌ನಡೆಯಿತು. ಬ್ರಹ್ಮಶ್ರೀ ವೇದಮೂರ್ತಿ ಶ್ರೀ ಕುಡುಪು ನರಸಿಂಹ ತಂತ್ರಗಳ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ನಡೆದಿದ್ದು, ಸಾವಿರಾರು ಭಕ್ತರು ಭಾಗವಹಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು. ಹಾಗೆಯೇ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಅನುದಾನ ಬಿಡುಗಡೆ ಮಾಡುವ ಭರವಸೆಯನ್ನು

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಶರವೂರಿನಲ್ಲಿ ಸಾಮೂಹಿಕ ದುರ್ಗಾನಮಸ್ಕಾರ ಪೂಜೆ, ಕುಂಕುಮಾರ್ಚನೆ ‌ಸಂಪನ್ನ Read More »

ಗೋ ಕಳ್ಳತನ, ಸಾಗಾಟ – ಆರೋಪಿಗಳ ಬಂಧನ

ಬೈಂದೂರು: ಗೋ ಕಳ್ಳರಿಬ್ಬರನ್ನು ಬಂಧಿಸಿ, ದನಗಳ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಬೈಂದೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೊಹಮ್ಮದ್ ಕೈಫ್ ಸಸ್ತಾನ ಮತ್ತು ಸುಹೇಲ್ ಖಾದರ್ ಉಚ್ಚಿಲ ಎಂದು ಗುರುತಿಸಲಾಗಿದೆ. ಆರೋಪಿಗಳು ಕಾರು ಬಳಸಿ ನಾಲ್ಕು ದನಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿ, ಗೋಶಾಲೆಗೆ ಒಪ್ಪಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ, ಕಾರನ್ನು ವಶಕ್ಕೆ ಪಡೆದಿರುವುದಾಗಿದೆ.

ಗೋ ಕಳ್ಳತನ, ಸಾಗಾಟ – ಆರೋಪಿಗಳ ಬಂಧನ Read More »

ಶಕ್ತಿ ಯೋಜನೆಯಡಿ 500 ಕೋಟಿ ಟಿಕೆಟ್ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರೇ 500ನೇ ಕೋಟಿಯ ಟಿಕೆಟ್ ಅನ್ನು ಸಾಂಕೇತಿಕವಾಗಿ ವಿತರಣೆ ಮಾಡಿದರು. ರಾಜ್ಯ ಸರ್ಕಾರ ನೀಡಿದ ಉಚಿತ ಟಿಕೆಟ್ ಪಡೆದು 500 ನೇ ಕೋಟಿ ಬಾರಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಪ್ರಯಾಣ ನಡೆಸಿದ್ದಾರೆ. 500 ಕೋಟಿ ಪ್ರಯಾಣದ ಹಿನ್ನೆಲೆಯಲ್ಲಿ ಸಿಎಂ ‌ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಾಂಕೇತಿಕವಾಗಿ ಮಹಿಳೆಯೊಬ್ಬರಿಗೆ ಟಿಕೇಟ್ ವಿತರಿಸಿದರು.

ಶಕ್ತಿ ಯೋಜನೆಯಡಿ 500 ಕೋಟಿ ಟಿಕೆಟ್ ವಿತರಣೆ Read More »

ಪುತ್ತೂರಿನಿಂದ ಮಂಗಳೂರಿಗೆ ನಾನ್‍ ಸ್ಟಾಫ್‍ ಬಸ್‍ ವ್ಯವಸ್ಥೆ | ಚಾಲನೆ ನೀಡಿದ ಶಾಸಕ ಅಶೋಕ್‍ ಕುಮಾರ್ ರೈ

ಪುತ್ತೂರು: ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು-ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ಪ್ರಾರಂಭಗೊಂಡಿದ್ದು, ಶಾಸಕ ಅಶೋಕ್ ಕುಮಾರ್ ರೈ ನೂತನ ಬಸ್‍ ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದರು. ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪುತ್ತೂರಿನಿಂದ 5. ಸುಳ್ಯದಿಂದ 2

ಪುತ್ತೂರಿನಿಂದ ಮಂಗಳೂರಿಗೆ ನಾನ್‍ ಸ್ಟಾಫ್‍ ಬಸ್‍ ವ್ಯವಸ್ಥೆ | ಚಾಲನೆ ನೀಡಿದ ಶಾಸಕ ಅಶೋಕ್‍ ಕುಮಾರ್ ರೈ Read More »

ಭಾರತ – ನೇಪಾಳ ಗಡಿಯಲ್ಲಿ ಡ್ರಗ್ಸ್ ವಶ, ಮಹಿಳೆ ಬಂಧನ

ನವದೆಹಲಿ: ಭಾರತ ಮತ್ತು ನೇಪಾಳ ಗಡಿ ಉತ್ತರಾಖಂಡದ ಚಂಪಾವತ್ ಜಿಲ್ಲೆಯ ಬನ್ಬಾಸಾ ಪ್ರದೇಶದಲ್ಲಿ ಭಾರೀ ಪ್ರಮಾಣದ ಮಾದಕ ದ್ರವ್ಯವನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮಹಿಳೆಯೊಬ್ಬಳನ್ನು ಬಂಧಿಸಿದ್ದಾರೆ. ಇಶಾ (22) ಬಂಧಿತ ಮಹಿಳೆಯಾಗಿದ್ದು, ಕಪ್ಪು ಬಣ್ಣದ ಬ್ಯಾಗ್ ಧರಿಸಿ ಓಡಾಡುತ್ತಿದ್ದಳು. ಈಕೆಯನ್ನು ಗಮನಿಸಿದ ಗಸ್ತು ಪಡೆ ತಪಾಸಣೆ ನಡೆಸಿತ್ತು. ಬ್ಯಾಗಿನಲ್ಲಿ 2 ಪ್ಯಾಕೆಟ್ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಸುಮಾರು 10.23 ಕೋಟಿ ರೂ. ಮೌಲ್ಯದ 5.688 ಕೆ.ಜಿ. ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. ಬಂಧಿತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದು,

ಭಾರತ – ನೇಪಾಳ ಗಡಿಯಲ್ಲಿ ಡ್ರಗ್ಸ್ ವಶ, ಮಹಿಳೆ ಬಂಧನ Read More »

ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ಮಂಗಳೂರು: ಜಿಲ್ಲೆಯಲ್ಲಾಗುತ್ತಿರುವ ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬಿಜೆಪಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮರಳು ನೀತಿ ಮಾಡುವುದಾಗಿ ಹೇಳಿದ್ದು, ಆ ಭರವಸೆಯನ್ನು ಈ ವರೆಗೆ ಈಡೇರಿಸಿಲ್ಲ. ಇದರಿಂದಾಗಿ ಕಾರ್ಮಿಕರು ಕೆಲಸವಿಲ್ಲದೆ ಬೀದಿಗೆ ಬಿದ್ದಿದ್ದಾರೆ. ವ್ಯಾಪಾರಸ್ಥರು ಸಹ ಸಮಸ್ಯೆ ಅನುಭವಿಸುವ ಹಾಗಾಗಿದೆ. ಜೊತೆಗೆ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡವರಿಗೂ ಕಲ್ಲು, ಮರಳಿನ ಸಮಸ್ಯೆ ಎದುರಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಂಪುಕಲ್ಲು, ಮರಳು ಸಮಸ್ಯೆಗೆ ಪರಿಹಾರ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ Read More »

RSS ಬಗ್ಗೆ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಯೋಗ್ಯತೆ ಇಲ್ಲ: ಕೆ. ಎಸ್. ಈಶ್ವರಪ್ಪ

ಬೆಂಗಳೂರು: RSS ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆಗೆ ಇಲ್ಲ. ಈ ದೇಶ ಉಳಿದಿರುವುದು ಕೇವಲ ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ಎಂದು ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಯಾವುದೇ ಕಾರಣವಿಲ್ಲದೆ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿ ಮತ್ತು RSS ಬಗ್ಗೆ ಟೀಕೆ ಮಾಡುತ್ತಾರೆ. ಈ ದೇಶದಲ್ಲಿ RSS ಇಲ್ಲದೇ ಹೋಗಿದ್ದರೆ ನಮಗೆಲ್ಲರಿಗೂ ವಿಚಿತ್ರ ಪರಿಸ್ಥಿತಿ ತಂದೊಡ್ಡಿ ಮತಾಂತರ ಮಾಡುವ ಸ್ಥಿತಿ ಎದುರಾಗುತ್ತಿತ್ತು ಎಂದು ಅವರು ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಬಿರಗಳಲ್ಲಿ

RSS ಬಗ್ಗೆ ಮಾತನಾಡಲು ಪ್ರಿಯಾಂಕ್ ಖರ್ಗೆಗೆ ಯೋಗ್ಯತೆ ಇಲ್ಲ: ಕೆ. ಎಸ್. ಈಶ್ವರಪ್ಪ Read More »

error: Content is protected !!
Scroll to Top