Uncategorized

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ

ವಿಟ್ಲ: ಅಂಗಡಿಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ ಹೆಚ್ಚಿನ ಅನಾಹುತತಪ್ಪಿದ ಘಟನೆ ವಿಟ್ಲದ ನಾಲ್ಕು ಮಾರ್ಗ ಜಂಕ್ಷನ್ ನಲ್ಲಿರುವ ಅಂಗಡಿಯಲ್ಲಿ ಸಂಭವಿಸಿದೆ. ವಿಟ್ಲ-ಮಂಗಳೂರು ರಸ್ತೆಯಲ್ಲಿರುವ ನೆತ್ರಕೆರೆ ನಿವಾಸಿ ಮಹೇಶ್ ಭಟ್ ಅವರಿಗೆ ಸೇರಿದ ನೆತ್ರಕೆರೆ ಜನರಲ್ ಸ್ಟೋರ್ ನಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ ವೇಳೆ ಅಂಗಡಿ ಮಾಲಕ ಬಂದ್ ಮಾಡಿ ತೆರಳಿದ್ದರು. ಅಂಗಡಿ ಒಳಗಡೆಯಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೇ ಬಾಗಿಲು ತೆರೆದಾಗ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯ ಕಿಟ್ ಕ್ಯಾಟ್ ಪೆಟ್ […]

ದಿನಸಿ ಅಂಗಡಿಯಲ್ಲಿ ಬೆಂಕಿ ಅವಘಡ | ಸ್ಥಳೀಯರ ಕಾರ್ಯಾಚರಣೆಯಿಂದ ತಪ್ಪಿದ ಭಾರೀ ದುರಂತ Read More »

ಹೈಕೋರ್ಟ್‌ ಜಡ್ಜ್‌ ಮನೆಯಲ್ಲಿತ್ತು ನೋಟಿನ ರಾಶಿ

ಬೆಂಕಿ ಅವಘಡ ಸಂದರ್ಭದಲ್ಲಿ ಪತ್ತೆಯಾಯಿತು ಹಣ ಹೊಸದಿಲ್ಲಿ: ಬೆಂಕಿ ಅವಘಡ ಸಂದರ್ಭದಲ್ಲಿ ಹೈಕೋರ್ಟ್‌ ನ್ಯಾಯಾಧೀಶರೊಬ್ಬರ ಮನೆಯಲ್ಲಿ ನೋಟಿನ ರಾಶಿಯೇ ಪತ್ತೆಯಾಗಿದೆ. ಜಸ್ಟಿಸ್‌ ಯಶವಂತ್‌ ವರ್ಮ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಪಡೆಯನ್ನು ಕರೆಸಲಾಗಿತ್ತು. ಅಗ್ನಿಶಾಮಕ ಪಡೆಯವರು ಬೆಂಕಿ ನಂದಿಸಿದ ಬಳಿಕ ಮನೆಯ ಬೇರೆ ಬೇರೆ ಕೋಣೆಗಳಲ್ಲಿ ನೋಟಿನ ರಾಶಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸುಪ್ರೀಂ ಕೋರ್ಟ್‌ ಈ ನ್ಯಾಯಾಧೀಶರನ್ನು ವರ್ಗಾಯಿಸಲು ಆದೇಶಿಸಿದೆ. ಯಶವಂತ್‌ ವರ್ಮ ಅವರಿಗೆ ನೀಡಿದ್ದ ಸರಕಾರಿ ಬಂಗಲೆಯಲ್ಲೇ

ಹೈಕೋರ್ಟ್‌ ಜಡ್ಜ್‌ ಮನೆಯಲ್ಲಿತ್ತು ನೋಟಿನ ರಾಶಿ Read More »

ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ

ಶುಕ್ರವಾರ ಹೋಳಿ ಹಬ್ಬ ಬಂದ ಕಾರಣ ಬಿಗುವಿನ ವಾತಾವರಣ ಲಖನೌ: ಈ ವರ್ಷ ಹೋಳಿ ಹಬ್ಬ ಶುಕ್ರವಾರ ಬಂದಿರುವುದರಿಂದ ದೇಶದ ಕೆಲವೆಡೆ ಬಿಗುವಿನ ಪರಿಸ್ಥಿತಿ ಉಂಟಾಗಿದೆ. ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಪೊಲೀಸ್‌ ಉನ್ನತಾಧಿಕಾರಿಯೊಬ್ಬರು ಹೋಳಿ ಹಬ್ಬ ವರ್ಷಕ್ಕೊಮ್ಮೆ ಮಾತ್ರ ಬರುತ್ತದೆ, ಶುಕ್ರವಾರ ವರ್ಷದಲ್ಲಿ 52 ಸಲ ಬರುತ್ತದೆ, ಹೋಳಿಯ ಬಣ್ಣ ಇಷ್ಟವಾಗದವರು ಆ ದಿನ ಮನೆಯಲ್ಲೇ ನಮಾಜ್‌ ಮಾಡಿ ಎಂದು ಹೇಳಿದ ಬಳಿಕ ವಿವಾದ ಸೃಷ್ಟಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಈ ಪೊಲೀಸ್‌

ಹೋಳಿ ಹಿನ್ನೆಲೆ : ಮಸೀದಿಗಳಿಗೆ ಟಾರ್ಪಾಲು ಹೊದಿಕೆ Read More »

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ

ಹೊಸದಿಲ್ಲಿ: ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಮುಂದಿನ ಮುಖ್ಯ ಚುನಾವಣಾ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ಕಾನೂನು ಸಚಿವಾಲಯ ತಿಳಿಸಿದೆ. ಚುನಾವಣಾ ಆಯೋಗದ (ಇಸಿ) ಸದಸ್ಯರ ನೇಮಕಾತಿ ಕುರಿತ ಹೊಸ ಕಾನೂನಿನಡಿಯಲ್ಲಿ ನೇಮಕಗೊಂಡ ಮೊದಲ ಸಿಇಸಿ ಜ್ಞಾನೇಶ್‌ ಕುಮಾರ್ ಆಗಿದ್ದಾರೆ. ಜ್ಞಾನೇಶ್ ಕುಮಾರ್ ಅಧಿಕಾರಾವಧಿ ಜನವರಿ 26, 2029ರವರೆಗೆ ಇರಲಿದೆ. ಮುಂದಿನ ಲೋಕಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸುವ ಕೆಲವು ದಿನಗಳ ಮೊದಲು ಜ್ಞಾನೇಶ್ ಕುಮಾರ್ ನಿವೃತ್ತರಾಗಲಿದ್ದಾರೆ. 1989ರ ಬ್ಯಾಚ್ ಹರಿಯಾಣ-ಕೇಡರ್ ಭಾರತೀಯ ಆಡಳಿತ ಸೇವೆ

ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ Read More »

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು

ಸುಳ್ಯ : ಸ್ವಂತ ಅಪ್ಪನೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ನಡೆದಿದ್ದು, ಈ ಬಗ್ಗೆ ಆರೋಪ ಕೇಳಿ ಬಂದಿದೆ. ಘಟನಾನುಸಾರವಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ 17 ವರ್ಷ ಪ್ರಾಯದ ಬಾಲಕಿಯ ಮೇಲೆ ಆಕೆಯ ತಂದೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ. ಘಟನೆಯ ಕುರಿತು ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕ್ರೂರಿ  ತಂದೆ | ಪ್ರಕರಣ ದಾಖಲು Read More »

ಉತ್ಸವದ ವೇಳೆ ಕೆರಳಿದ ಆನೆಗಳು : ಮೂವರು ಬಲಿ

ಕೇರಳದಲ್ಲಿ ವಾರ್ಷಿಕ ಜಾತ್ರೆ ವೇಳೆ ಸಂಭವಿಸಿದ ದುರಂತ ತಿರುವನಂತಪುರಂ: ಕೇರಳದ ಕೊಯಿಲಾಂಡಿ ಬಳಿಯ ಮನಕುಲಂಗರ ಭಗವತಿ ದೇವಸ್ಥಾನದ ಉತ್ಸವದ ವೇಳೆ ಎರಡು ಆನೆಗಳು ಕೆರಳಿ ಕಾದಾಡಿಕೊಂಡ ಪರಿಣಾಂ ಕನಿಷ್ಠ ಮೂವರು ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಗುರುವಾರ ರಾತ್ರಿ ಐದು ದಿನಗಳ ವಾರ್ಷಿಕ ಉತ್ಸವದ ಕೊನೆಯ ದಿನವಾಗಿತ್ತು. ದೇವಾಲಯದ ಉತ್ಸವಕ್ಕೆ ದೇವಾಲಯದ ಉತ್ಸವಕ್ಕಾಗಿ ಆನೆಗಳನ್ನು ತರಲಾಗಿತ್ತು. ಉತ್ಸವದ ಅಂಗವಾಗಿ ಸಿಡಿಮದ್ದು ಸಿಡಿಸಿದಾಗ ಆನೆಗಳು ಬೆದರಿ ಕೆರಳಿ‌ ಅಡ್ಡಾದಿಡ್ಡಿ ಚಲಿಸಿವೆ. ಇದರ

ಉತ್ಸವದ ವೇಳೆ ಕೆರಳಿದ ಆನೆಗಳು : ಮೂವರು ಬಲಿ Read More »

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ

ಮೆಟ್ರೋ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಡಿವಿ ಸದಾನಂದಗೌಡ ಅವರು ಬುಧವಾರ ವಾಗ್ದಾಳಿ ನಡೆಸಿದ್ದಾರೆ. ಟಿ ನರಸೀಪುರದ ತ್ರಿವೇಣಿ ಸಂಗಮದಲ್ಲಿ ಮಾತನಾಡಿದ ಅವರು, ಮೆಟ್ರೋ ದರ ಏರಿಕೆ ಸಂಬಂಧ ರಾಜ್ಯ ಸರ್ಕಾರ ವಿಶೇಷ ಒತ್ತಡ ಹಾಕುವುದು ಪ್ರಥಮ ಜವಾಬ್ದಾರಿ, ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಬಿಡಿ. ಮೆಟ್ರೋ ದರ ಕಡಿಮೆ ಅಗಬೇಕು. ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು. ರಾಜ್ಯ ಸರಕಾರ ಮೊದಲು

ಮೆಟ್ರೋ ಬೆಲೆ ಏರಿಕೆ | ರಾಜ್ಯ ಸರ್ಕಾರದ ವಿರುದ್ಧ ಡಿವಿ ಸದಾನಂದ ಗೌಡ ಆಕ್ರೋಶ Read More »

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣ ಸಂಬಂಧ ಕಲ್ಲು ತೂರಿದ ಸಾವಿರಕ್ಕೂ ಅಧಿಕ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಭೆಯಲ್ಲಿ ಇದ್ದವರು ಒಂದು ಸಾವಿರಕ್ಕೂ ಹೆಚ್ಚು ಎಂದು ಪೊಲಿಸರು ಅಧಿಕೃತವಾಗಿ ನಮೂದಿಸಿದ್ದಾರೆ. ಎಫ್‌ಐಆರ್ ಪ್ರತಿಯಲ್ಲಿ ಘಟನೆಯ ಸಂಪೂರ್ಣ ಮಾಹಿತಿ ಇದೆ.ಆರಂಭದಲ್ಲಿ ವಿವಾದಿತ ಪೋಸ್ಟ್ ಹಾಕಿದ್ದ ಆರೋಪಿಯನ್ನು ಬಂಧಿಸಿ ಠಾಣೆಯಲ್ಲಿ ಪೊಲೀಸರು ಇರಿಸಿದ್ದರು. ಫೆ.9ರಂದು ಕಲ್ಯಾಣಗಿರಿಯ ಪಾಂಡುರಂಗ ಅಲಿಯಾಸ್‌ ಸತೀಶ್‌ನನ್ನು ಠಾಣೆಗೆ ಕರೆತರಲಾಗಿತ್ತು. ರಾತ್ರಿ 8.30ಕ್ಕೆ ಠಾಣೆಯ ಬಳಿ ಮುಸ್ಲಿಂ ಯುವಕರು ಜಮಾಯಿಸಿ ಆರೋಪಿಯನ್ನು ನಮ್ಮ ವಶಕ್ಕೆ

ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ : 1,000ಕ್ಕೂ ಹೆಚ್ಚು ಮಂದಿಯ ವಿರುದ್ಧ ಎಫ್‌ಐಆರ್‌ Read More »

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ

ಚುನಾವಣೆಯಲ್ಲಿ ಆಪ್‌ಗೆ ಹೀನಾಯ ಮುಖಭಂಗ; ಮೂಲೆ ಸೇರಿದ ಪೊರಕೆ ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ ಪರಮೋಚ್ಚ ನಾಯಕಮಾಜಿ ಮುಖ್ಯಮಂತ್ರಿ ಅರವಿಂದ ಕೆಜ್ರಿವಾಲ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಪರಾಭಚ ಅನುಭವಿಸಿದ್ದಾರೆ. ಇದರೊಂದಿಗೆ ಚುನಾವಣೆಯಲ್ಲಿ ಆಡಳಿತಾರೂಢ ಆಪ್‌ಗೆ ಕೂಡ ಭಾರಿ ಮುಖಭಂಗವಾದಂತಾಗಿದೆ. ಸತತ ಎರಡು ಬಾರಿ ದಿಲ್ಲಿಯ ಗದ್ದುಗೆ ಏರಿದ್ದ ಎಎಪಿ ಮತ್ತು ಕೇಜ್ರಿವಾಲ್​ಗೆ ಈ ಬಾರಿ ಅಬಕಾರಿ ನೀತಿ ಹಗರಣದಿಂದ ಭಾರಿ ಹಿನ್ನಡೆಯಾಗಿತ್ತು. ಅದು ಮತದಾನದ ಮೇಲೂ ಪರಿಣಾಮ ಬೀರಿದಂತಿದೆ. ಬಿಜೆಪಿ 40ಕ್ಕೂ ಅಧಿಕ ಸ್ಥಾನಗಳೊಂದಿಗೆ ನಿಚ್ಚಳ ಬಹುಮತದೊಂದಿಗೆ

ಆಪ್‌ ಪರಮೋಚ್ಚ ನಾಯಕರಾದ ಕೇಜ್ರಿವಾಲ್‌, ಸಿಸೋಡಿಯ ಪರಾಭವ Read More »

error: Content is protected !!
Scroll to Top