Uncategorized

ಅಯೋಧ್ಯೆಯಲ್ಲಿ ಬೆಳಗಿದ 26.17 ಲಕ್ಷ ಮಣ್ಣಿನ ಹಣತೆಗಳು : ಎರಡು ಗಿನ್ನಿಸ್‌ ದಾಖಲೆ ನಿರ್ಮಾಣ

ಅತಿದೊಡ್ಡ ದೀಪಗಳ ಪ್ರದರ್ಶನ, ಅತಿಹೆಚ್ಚು ಜನರು ಏಕಕಾಲದಲ್ಲಿ ದೀಪದ ಆರತಿ ಮಾಡಿದ ದಾಖಲೆ ಅಯೋಧ್ಯೆ : ಅಯೋಧ್ಯೆಯ ದೀಪಾವಳಿ ಮತ್ತೊಮ್ಮೆ ವಿಶ್ವ ದಾಖಲೆ ಮಾಡಿದೆ. ಈ ವರ್ಷ ಸರಯೂ ನದಿಯ ದಡದಲ್ಲಿ 26 ಲಕ್ಷಕ್ಕೂ ಅಧಿಕ ಮಣ್ಣಿನ ಹಣತೆಗಳನ್ನು ಬೆಳಗಿಸುವ ಮೂಲಕ ಎರಡು ಗಿನ್ನಿಸ್ ವಿಶ್ವ ದಾಖಲೆಗಳನ್ನು ಮಾಡಲಾಗಿದೆ. ಈ ದೀಪಗಳ ಜಗಮಗಿಸುವ ಬೆಳಕಿನಲ್ಲಿ ಅಯೋಧ್ಯೆ ವಿಶಿಷ್ಟವಾಗಿ ಕಂಗೊಳಿಸಿತು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಗಿನ್ನಿಸ್ ವಿಶ್ವ ದಾಖಲೆಯ ಪ್ರಮಾಣಪತ್ರ ಸ್ವೀಕರಿಸಿದರು. ಉತ್ತರ ಪ್ರದೇಶ […]

ಅಯೋಧ್ಯೆಯಲ್ಲಿ ಬೆಳಗಿದ 26.17 ಲಕ್ಷ ಮಣ್ಣಿನ ಹಣತೆಗಳು : ಎರಡು ಗಿನ್ನಿಸ್‌ ದಾಖಲೆ ನಿರ್ಮಾಣ Read More »

ಸ್ನೇಹಿತೆಯರ ವಿಡಿಯೋ ವೈರಲ್‌ ಮಾಡಿದ್ದ ಯುವತಿ ಸೆರೆ

ಬಟ್ಟೆ ಬದಲಾಯಿವಾಗ ವಿಡಿಯೋ ಮಾಡಿದ್ದ ಯುವತಿ ಮಂಗಳೂರು : ಇಬ್ಬರು ಸ್ನೇಹಿತೆಯರು ಬಟ್ಟೆ ಬದಲಾಯಿಸುವ ವೇಳೆ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ ಆರೋಪದಡಿ ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಕಳಸದ ಪ್ರಸಕ್ತ ನಗರದ ಕಂಕನಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನಿರೀಕ್ಷಾ ಎಂಬಾಕೆಯನ್ನು ಕದ್ರಿ ಪೋಲೀಸರು ಭಾನುವಾರ ಬಂಧಿಸಿದ್ದಾರೆ. ಆರೋಪಿ ನಿರೀಕ್ಷಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆಕೆಗೆ ಎರಡು ವಾರಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನಿರೀಕ್ಷಾಳ ಸ್ನೇಹಿತೆಯರಾದ ಇಬ್ಬರು ಯುವತಿಯರು ಕದ್ರಿ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು

ಸ್ನೇಹಿತೆಯರ ವಿಡಿಯೋ ವೈರಲ್‌ ಮಾಡಿದ್ದ ಯುವತಿ ಸೆರೆ Read More »

ನನ್ನ ತಂದೆ ಶಾಸಕ ಅಲ್ಲ, ನನ್ನ ಪುತ್ರನನ್ನು ಶಾಸಕ ಮಾಡಲ್ಲ : ಪ್ರಿಯಾಂಕ್‌ ಖರ್ಗೆಗೆ ಸುನಿಲ್‌ ಕುಮಾರ್‌ ತಿರುಗೇಟು

ಬಾಲ್ಯದಲ್ಲಿ ತಂದೆಯ ಜೊತೆಗೆ ಗಣವೇಷದಲ್ಲಿದ್ದ ಫೋಟೊ ಹಂಚಿಕೊಂಡು ಉತ್ತರ ಕಾರ್ಕಳ: ನಿಮ್ಮ ಮಕ್ಕಳನ್ನು ಆರ್‌ಎಸ್‌ಎಸ್‌ಗೆ ಸೇರಿಸಿದ್ದೀರಾ. ಅವರಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂಬ ಕಾಂಗ್ರೆಸ್‌ ನಾಯಕರ ಟೀಕೆಗೆ ಕಾರ್ಕಳದ ಬಿಜೆಪಿ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ತನ್ನದೇ ಫೋಟೊಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸುನಿಲ್ ಕುಮಾರ್, ನನ್ನ ತಂದೆಯ ಜೊತೆ ತಾನು ಬಾಲ್ಯದಲ್ಲಿ ಆರ್‌ಎಸ್‌ಎಸ್‌ ಗಣವೇಷದಲ್ಲಿರುವ ಹಾಗೂ ಈಗ ತನ್ನ ಮಗನ ಜೊತೆ ಗಣವೇಷದಲ್ಲಿರುವ ಫೋಟೊ ಹಾಕಿ

ನನ್ನ ತಂದೆ ಶಾಸಕ ಅಲ್ಲ, ನನ್ನ ಪುತ್ರನನ್ನು ಶಾಸಕ ಮಾಡಲ್ಲ : ಪ್ರಿಯಾಂಕ್‌ ಖರ್ಗೆಗೆ ಸುನಿಲ್‌ ಕುಮಾರ್‌ ತಿರುಗೇಟು Read More »

ಸರ್ಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುದ್ಮಾರು ಇಲ್ಲಿನ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವ ಸಲಹೆಗಾರರಾಗಿ ಸತೀಶ್ ಕುಮಾರ್ ಕೆಡೆಂಜಿ, ವಿಠಲ್ ಗೌಡ ಕಾಪೆಜಾಲು, ನಝೀರ್ ಕೂರ ಅಧ್ಯಕ್ಷರಾಗಿ ನ್ಯೂಸ್ ಕಾರ್ಕಳ ವ್ಯವಸ್ಥಾಪಕ ನಿರ್ದೇಶಕ, ಪ್ರಗತಿ ಚಾರಿಟೇಬಲ್ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ರಾಮಚಂದ್ರ ಬರೆಪ್ಪಾಡಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರೇರಣಾ ಸಂಸ್ಥೆಯ ನಿರ್ದೇಶಕ ನಾಗೇಶ್ ಕೆಡೆಂಜಿ, ಉಪಾಧ್ಯಕ್ಷರಾಗಿ ಬಾಲಚಂದ್ರ ನೂಜಿ, ಜೊತೆ ಕಾರ್ಯದರ್ಶಿಯಾಗಿ ದಾಮೋದರ ನಾಕಿರಣ, ಕೋಶಾಧಿಕಾರಿಯಾಗಿ ಯಶೋಧರ ಕೆಡೆಂಜಿಕಟ್ಟ

ಸರ್ಕಾರಿ ಉನ್ನತೀಕರಿಸಿದ ಹಿ. ಪ್ರಾ. ಶಾಲೆ ಕುದ್ಮಾರು: ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಬರೆಪ್ಪಾಡಿ ಅಂಗನವಾಡಿ: ಹಳೆ ವಿದ್ಯಾರ್ಥಿ ಸಂಘ ರಚನೆ

ಪುತ್ತೂರು: ಸರ್ಕಾರ ದ ಆದೇಶದಂತೆ ಅಂಗನವಾಡಿ ಕೇಂದ್ರಗಳಲ್ಲಿ ಹಳೆ ವಿದ್ಯಾರ್ಥಿ ಸಂಘ ರಚನೆಯ ಬಗ್ಗೆ ಬರೆಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸಭೆ ಕರೆಯಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ, ಕಾರ್ಯದರ್ಶಿ ಮೊದಲಾದವರ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಯೋಗೀಶ ಬರೆಪ್ಪಾಡಿ, ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಕಾರ್ಲಾಡಿ, ಸದಸ್ಯರಾಗಿ ರಂಜಿತ್ ಮುದ್ಯ ಬರೆಪ್ಪಾಡಿ, ಉಮೇಶ ಕಾರ್ಲಾಡಿ, ಷಣ್ಮುಖ ಬರೆಪ್ಪಾಡಿ,ಅಕ್ಷಯ್ ಬರೆಪ್ಪಾಡಿ, ಗಣೇಶ ಕಾಪೆಜಾಲು, ಶಿವಪ್ರಸಾದ್ ಹೊಸಹೂಕ್ಲು, ನಿತಿನ್ ಬರೆಪ್ಪಾಡಿ, ಸಂಧ್ಯಾ ಬರೆಪ್ಪಾಡಿ, ಮೀನಾಕ್ಷಿ ಕುವೇತೋಡಿ, ತೃಪ್ತಿ, ಪ್ರತೀಕ್ಷಾ ಬರೆಪ್ಪಾಡಿಅವರನ್ನು ಆಯ್ಕೆ ಮಾಡಲಾಯಿತು. ಅಂಗನವಾಡಿ ಕಾರ್ಯಕರ್ತೆ ಸರಸ್ವತಿ

ಬರೆಪ್ಪಾಡಿ ಅಂಗನವಾಡಿ: ಹಳೆ ವಿದ್ಯಾರ್ಥಿ ಸಂಘ ರಚನೆ Read More »

ರಾಜಕೀಯ ಪಡಸಾಲೆಯಲ್ಲಿ ಸಿದ್ದರಾಮಯ್ಯ ಡಿನ್ನರ್‌ ಮೀಟ್‌ ಸಂಚಲನ

ಕುತೂಹಲ ಕೆರಳಿಸಿದ ಅಕ್ಟೋಬರ್‌ 13ರಂದು ಕರೆದ ಔತಣ ಕೂಟ ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಮತ್ತೆ ಬಿರುಸಿನ ಚರ್ಚೆ ನಡೆಯುತ್ತಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್‌ 13ರಂದು ತನ್ನ ಸಂಪುಟದ ಕೆಲವು ಸಹೋದ್ಯೋಗಿಗಳಿಗಾಗಿ ಏರ್ಪಡಿಸಿರುವ ಔತಣ ಕೂಟ ರಾಜಕೀಯ ಪಡಸಾಲೆಯಲ್ಲಿ ಸಂಚಲನಕ್ಕೆ ಕಾರಣವಾಗಿದೆ. ನವೆಂಬರ್‌ಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷವಾಗುತ್ತಿದೆ. ಕಾಂಗ್ರೆಸ್ ಸರ್ಕಾರ ತನ್ನ ಅರ್ಧ ಅವಧಿಯನ್ನು ಪೂರ್ಣಗೊಳಿಸುವತ್ತ ಸಾಗುತ್ತಿರುವಾಗ ಒಂದೆಡೆ ಸಂಪುಟ ಪುನರಾಚನೆ ಆಗಲಿದೆ ಎನ್ನುವ ಖಚಿತ ಸುದ್ದಿಗಳು

ರಾಜಕೀಯ ಪಡಸಾಲೆಯಲ್ಲಿ ಸಿದ್ದರಾಮಯ್ಯ ಡಿನ್ನರ್‌ ಮೀಟ್‌ ಸಂಚಲನ Read More »

ಅಂಬಿಕಾ ವಿದ್ಯಾಲಯದ ದೃಶಾನ ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ವಿದ್ಯಾಭಾರತಿ ವತಿಯಿಂದ ಖಾನಾಪುರದ ಶಾಂತಿನಿಕೇತನ ಪಬ್ಲಿಕ್ ಶಾಲೆಯಲ್ಲಿ ಇತ್ತೀಚೆಗೆ ಏರ್ಪಡಿಸಲಾಗಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ 17 ವರ್ಷದೊಳಗಿನ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಗೊಂಡಿದ್ದಾರೆ.ಕರಾಟೆ ಅಧ್ಯಾಪಕ ಶಿವಪ್ರಸಾದ್ ಇವರ ಶಿಷ್ಯೆಯಾಗಿದ್ದಾರೆ.ಈಕೆ ಬೆಟ್ಟಂಪಾಡಿಯ ಸುರೇಶ್ ಗೌಡ ಹಾಗೂ ವಿದ್ಯಾಶ್ರೀ ದಂಪತಿ ಪುತ್ರಿ..

ಅಂಬಿಕಾ ವಿದ್ಯಾಲಯದ ದೃಶಾನ ಕರಾಟೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಗಳು ವಜಾ

ದಸರಾ ಉದ್ಘಾಟನೆಯಿಂದ ಹಕ್ಕುಗಳ ಉಲ್ಲಂಘನೆಯಾಗುವುದಿಲ್ಲ ಎಂದು ಅಭಿಪ್ರಯಾಪಟ್ಟು ಪಿಐಎಲ್‌ ವಜಾಗೊಳಿಸಿದ ಹೈಕೋರ್ಟ್‌ ಬೆಂಗಳೂರು : ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ಪೀಠ, ದಸರಾ ಉದ್ಘಾಟನೆ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಗಳು ವಜಾ Read More »

ಪಂದ್ಯದುದ್ದಕ್ಕೂ ಪಾಕಿಸ್ತಾನಕ್ಕೆ ಅವಮಾನದ ಮೇಲೆ ಅವಮಾನ

ಕನಿಷ್ಠ ಹಸ್ತಲಾಘವ ಕೂಡ ಮಾಡದೆ ಬಿಗುವಿನಿಂದ ನಡೆದುಕೊಂಡ ಭಾರತದ ಆಟಗಾರರು ದುಬೈ: ನಿನ್ನೆ ರಾತ್ರಿ ನಡೆದ ಏಷ್ಯಾಕಪ್‌ ಟಿ20 ಪಂದ್ಯದುದ್ದಕ್ಕೂ ಭಾರತದ ಆಟಗಾರರು ಪಾಕಿಸ್ತಾನದ ಆಟಗಾರರ ವಿರುದ್ಧ ಬಿಗುವಿನಿಂದ ನಡೆದುಕೊಂಡು ಉದ್ದಕ್ಕೂ ಪಾಕಿಸ್ತಾನವನ್ನು ಅವಮಾನಿಸಿದ್ದಾರೆ. ಪಹಲ್ಗಾಮ್ ಟೆರರ್ ಅಟ್ಯಾಕ್‌ನಲ್ಲಿ ಮಡಿದ ಕುಟುಂಬಗಳ ಜೊತೆ ನಾವಿದ್ದೀವಿ. ಅಪರಿಮಿತ ಶೌರ್ಯ ಪ್ರದರ್ಶಿಸಿದ ಸೇನೆಗೆ ಈ ಗೆಲುವು ಅರ್ಪಣೆ ಎಂದು ಘೋಷಿಸುವ ಮೂಲಕ ಭಾರತದ ಕ್ಯಾಪ್ಟನ್‌ ಸೂರ್ಯಕುಮಾರ್ ಯಾದವ್ ಪಾಕಿಸ್ತಾನಕ್ಕೆ ಸರಿಯಾಗಿ ತಿರುಗೇಟು ನೀಡಿದ್ದಾರೆ. ಇಡೀ ಪಂದ್ಯದುದ್ದಕ್ಕೂ ಪಾಕ್ ಆಟಗಾರರ ಕೈ

ಪಂದ್ಯದುದ್ದಕ್ಕೂ ಪಾಕಿಸ್ತಾನಕ್ಕೆ ಅವಮಾನದ ಮೇಲೆ ಅವಮಾನ Read More »

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿವಾದ : ಇಂದು ಹೈಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ

ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿರುವ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಗಳೂರು: ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಇಂದು ನಡೆಯಲಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್ ಮತ್ತು ಗೌರವ್‌ ಎಂಬವರಿಂದ ಪಿಐಎಲ್ ಸಲ್ಲಿಕೆಯಾಗಿದ್ದು, ಹೈಕೋರ್ಟ್ ಮುಖ್ಯ ನ್ಯಾ.ವಿಭು ಬಕ್ರು ನೇತೃತ್ವದ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಬೇಕು,

ಬಾನು ಮುಷ್ತಾಕ್‌ ದಸರಾ ಉದ್ಘಾಟನೆ ವಿವಾದ : ಇಂದು ಹೈಕೋರ್ಟ್‌ನಲ್ಲಿ ಅರ್ಜಿಗಳ ವಿಚಾರಣೆ Read More »

error: Content is protected !!
Scroll to Top