Uncategorized

ಯುವಕ ಹೊಳೆಗೆ ಹಾರಿರುವ ಶಂಕೆ | ಮೊಬೈಲ್, ಪರ್ಸ್ ಪತ್ತೆ

ಸವಣೂರು: ಯುವಕನೋರ್ವ ಸರ್ವೆ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದೆ. ಚಂದ್ರ ಪಟ್ಟೆ ಸವಣೂರು ಎಂಬವರ ಪುತ್ರ ಸನ್ಮಿತ್ ಸರ್ವೆ ಹೊಳೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಆತನ ಮೊಬೈಲ್‍, ಪರ್ಸ್‍, ಹೊಳೆ ಸಮೀಪದ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ

ಯುವಕ ಹೊಳೆಗೆ ಹಾರಿರುವ ಶಂಕೆ | ಮೊಬೈಲ್, ಪರ್ಸ್ ಪತ್ತೆ Read More »

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ

ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರುಪಯೋಗ ಮಾಡಿರುವ ಹಗರಣದ ಬೆನ್ನಲ್ಲೇ ಇದೀಗ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ ಮಾಡಿರುವುದು ಬೆಳಕಿಗೆ ಬಂದಿದೆ. ಪ್ರವಾಸೋದ್ಯಮ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಬ್ಯಾಂಕ್ ಖಾತೆಯಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಲ್ಲಿ 2.47 ಕೋಟಿಗೂ ಮಿಕ್ಕಿ  ವಂಚನೆಯಾಗಿದ್ದು, ಬಾಗಲಕೋಟೆ ಐಡಿಬಿಐ ಬ್ಯಾಂಕ್ ಖಾತೆಗಳ ಮೂಲಕ ಹಣ ವಿವಿಧ ಖಾತೆಗೆ ಅಕ್ರಮವಾಗಿ ವರ್ಗಾವಣೆಯಾಗಿದೆ. ಅಕ್ರಮ

ವಾಲ್ಮೀಕಿ ಹಗರಣ ಬೆನ್ನಲ್ಲೇ ಪ್ರವಾಸೋದ್ಯಮ ಇಲಾಖೆಯಲ್ಲೂ ಹಗರಣ Read More »

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ

ಪುತ್ತೂರು: ನಗರದ ಬೈಪಾಸ್ ರಸ್ತೆಯ ತೆಂಕಿಲ ಬೈಪಾಸ್ ರಸ್ತೆಯಲ್ಲಿ ಇಂದು ಬೆಳಿಗ್ಗೆ ಬೃಹತ್ ಗಾತ್ರದ ಮರವೊಂದು ರಸ್ತೆಗಡ್ಡವಾಗಿ ಬಿದ್ದಿದೆ. ಮರ ಬಿದ್ದ ಪರಿಣಾಮ ರಸ್ತೆ ಸಂಚಾರ ಬಂದ್‍ ಆಗಿತ್ತು. ಬೈಪಾಸ್ ರಸ್ತೆಯ ವಿವೇಕಾನಂದ ಶಾಲೆ ಬಳಿ ಇರುವ ಕಿರು ಸೇತುವೆಗೆ ಮರ ಬಿದ್ದಿದೆ. ವಾಹನ ಸವಾರರು ಪುತ್ತೂರು ನಗರಕ್ಕೆ ಬಂದು ಸುಳ್ಯ, ಮಂಗಳೂರು ಕಡೆಗೆ ಚಲಿಸಬೇಕಾಯಿತು. ತೆರವು ಕಾರ್ಯ ಇನ್ನಷ್ಟೇ ನಡೆಯಬೇಕಿದೆ.

ರಸ್ತೆಗೆ ಅಡ್ಡಲಾಗಿ ಬಿದ್ದ ಮರ : ಸಂಚಾರದಲ್ಲಿ ವ್ಯತ್ಯಯ Read More »

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಆರ್ಯಾಪು ಗ್ರಾಮದ ಪಂಜಳದಿಂದ ವರದಿಯಾಗಿದೆ. ವಿಶ್ವನಾಥ ಅಲಿಯಾಸ್ ವೇಣು (32) ಆತ್ಮಹತ್ಯೆ ಮಾಡಿಕೊಂಡವರು. ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿಶ್ವನಾಥ ಮನೆಯಲ್ಲಿ ನೈಲಾನ್‍ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ತಂದೆ ನೀಡಿದ ದೂರಿನಂತೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕ ವಿಶ್ವನಾಥ ನೇಣು ಬಿಗಿದು ಆತ್ಮಹತ್ಯೆ Read More »

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್

ಪುತ್ತೂರು: ಚುನಾವಣಾ ಪ್ರಚಾರದ ವೇಳೆ ನನ್ನ ಕ್ಷೇತ್ರದ ಜನರಿಗೆ ಕೊಟ್ಟ ಮಾತಿನಂತೆ ಗ್ರಾಮದ‌ ಪ್ರತೀ ‌ಮನೆ ಮನೆಗೂ ಹಕ್ಕು ಪತ್ರ ತಲುಪಿಸುವ ಕೆಲಸವನ್ನು ಮಾಡಿಯೇ ಸಿದ್ದ ಶಾಸಕ ಅಶೋಕ್ ರೈ ಹೇಳಿದರು. ಅವರು ನೆಟ್ಟಣಿಗೆ ಮುಡ್ನೂರು ಗ್ರಾಪಂ ಸಭಾಂಗಣದಲ್ಲಿ ನಡೆದ ಅಕ್ರಮ ಸಕ್ರಮ ಬೈಠಕ್ ಹಾಗೂ ಹಕ್ಕು‌ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇಂದು ಅಕ್ರಮ ಸಕ್ರಮ ಹಕ್ಕು ಪತ್ರ ವಿತರಣೆಗೆ ಚಾಲನೆ ನೀಡಲಾಗಿದೆ. ಒಟ್ಟು  13000 ಅರ್ಜಿಗಳು ಇದೆ. ಇವೆಲ್ಲವನ್ನೂ ಹಂತ ಹಂತವಾಗಿ ವಿಲೇವಾರಿ ಮಾಡಿಯೇ

ಮನೆ‌ಮನೆಗೆ ಹಕ್ಕು ಪತ್ರ ವಿತರಣೆ ಮಾಡಿಯೇ ಸಿದ್ಧ: ಶಾಸಕ ಅಶೋಕ್ ರೈ | ಅಕ್ರಮ-ಸಕ್ರಮ ಬೈಠಕ್ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಮಿಯಾವಾಕಿ ಜಪಾನ್ ಶೈಲಿಯ ಶಾಲೆಗೊಂದು ವನ ನಿರ್ಮಾಣ | ಒಂದು ಸಾವಿರ ವಿವಿಧ ಜಾತಿಯ ಹಣ್ಣಿನ ಗಿಡ ಮತ್ತು ಇತರ ಗಿಡಗಳ ನೆಡು ತೋಪು

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆ ಇಂದು ಹಸಿರು ಶಾಲೆಯಾದ ದಿನ. ಪ್ರತಿಯೊಂದು ಮಗುವಿನ, ಹಿರಿಯ ವಿದ್ಯಾರ್ಥಿಗಳ, ಪೋಷಕರ ಕೈಯಲ್ಲಿ ಒಂದೊಂದು ಗಿಡ ನೆಡುವ ಮೂಲಕ ಶಾಲೆಗೊಂದು ವನ ನಿರ್ಮಾಣ ಮಾಡಲಾಯಿತು. ನೂರಾರು ಜಾತಿಯ ಹಣ್ಣಿನ ಗಿಡಗಳು ಜಂಬು ನೇರಳೆ, ಪೇರಳೆ, ನೇರಳೆ, ರಂಬ್ಟನ್,ಮಾವು,ಚಿಕ್ಕು ಹಲಸು, ನೆಲ್ಲಿ ಹೀಗೆ.. ನೂರಾರು ಜಾತಿಯ ಸಸಿಗಳು ಶ್ರೀಗಂಧ,ಕಕ್ಕೆ ಸಾಗುವಾನಿ. ಮಾಗುವನಿ ,ಹುಳಿ ಇತ್ಯಾದಿ. ಒಂದು ಸಾವಿರಕ್ಕಿಂತಲೂ ಮಿಕ್ಕಿದ‌ ವಿವಿಧ ಜಾತಿಯ ಹಣ್ಣಿನ ಗಿಡಗಳು ಮತ್ತು ಇತರೆ ಗಿಡಗಳನ್ನು ಕ್ರೆಂಚ್ ಮಾಡಿ ನೆಡಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಮಿಯಾವಾಕಿ ಜಪಾನ್ ಶೈಲಿಯ ಶಾಲೆಗೊಂದು ವನ ನಿರ್ಮಾಣ | ಒಂದು ಸಾವಿರ ವಿವಿಧ ಜಾತಿಯ ಹಣ್ಣಿನ ಗಿಡ ಮತ್ತು ಇತರ ಗಿಡಗಳ ನೆಡು ತೋಪು Read More »

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್

ಪುತ್ತೂರು: ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ. ಆದ್ದರಿಂದ ಪ್ರಕೃತಿಯ ಸಂರಕ್ಷಣಾ ಜವಾಬ್ದಾರಿಯನ್ನು ನಾವೇ ವಹಿಸಿಕೊಳ್ಳಬೇಕು. ಕೇವಲ ನಮ್ಮ ಪ್ರಾಂತ್ಯವಲ್ಲದೇ ಇಡೀ ಪ್ರಪಂಚದಲ್ಲಿ ಪರಿಸರ ರಕ್ಷಣೆಯಾಗಬೇಕು ಎಂದು ಅರಣ್ಯ ಸಂರಕ್ಷಣಾ ಅಧಿಕಾರಿ ಲತಾ ಜಿ. ಭಟ್ ಹೇಳಿದರು. ಅವರು ನಗರದ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಯೋಜಿಸಲಾದ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ,  ಮನುಷ್ಯ ತನ್ನ ಸ್ವಾರ್ಥದಿಂದ ಪ್ರಕೃತಿಯನ್ನು ದುರುಪಯೋಗಗೊಳಿಸುತ್ತಿದ್ದಾನೆ. ಆದ್ದರಿಂದ ಇಂದಿನ ಪೀಳಿಗೆಯಾದ

ಪ್ರಕೃತಿಯ ವೈಪರೀತ್ಯಗಳಿಗೆ ಮನುಷ್ಯನೇ ಕಾರಣ | ವಿಶ್ವ ಪರಿಸರ ದಿನಾಚರಣೆಯಲ್ಲಿ ಲತಾ ಜಿ. ಭಟ್ Read More »

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ

ಸವಣೂರು: ಮಾರ್ಚ್ 2024 ರಲ್ಲಿ ನಡೆದ ಎಸ್‍.ಎಸ್‍.ಎಲ್‍.ಸಿ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಶಿಫಾಲಿ ರೈ 588 ಅಂಕ ಗಳಿಸಿದ್ದು, ಇದೀಗ ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕಗಳನ್ನು ಗಳಿಸಿ ಒಟ್ಟು 602 (ಶೇ.96.32) ಅಂಕಗಳನ್ನು ಪಡೆದಿದ್ದಾರೆ. ಕನ್ನಡ-124, ಇಂಗ್ಲೀಷ್ 97, ಹಿಂದಿ-100, ಗಣಿತ-93, ವಿಜ್ಞಾನ-91 ಹಾಗೂ ಸಮಾಜ ವಿಜ್ಞಾನದಲ್ಲಿ 97 ಅಂಕಗಳನ್ನು ಪಡೆದಿದ್ದಾರೆ ಶಿಫಾಲಿ ರೈ ಪ್ರವೀಣ ರೈ ಮತ್ತು ಅನಿತಾ ಶೆಟ್ಟಿ ನೂಜಾಜೆ ದಂಪತಿ ಪುತ್ರಿ. ವಿದ್ಯಾರ್ಥಿನಿಯನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ

ಸವಣೂರು ವಿದ್ಯಾರಶ್ಮಿ ಶಿಫಾಲಿ ರೈ ಎಸ್‍.ಎಸ್‍.ಎಲ್‍.ಸಿ ಯಲ್ಲಿ 602 ಅಂಕಗಳು | ಮರು ಮೌಲ್ಯಮಾಪನದಲ್ಲಿ ಹೆಚ್ಚುವರಿ 14 ಅಂಕ ಗಳಿಕೆ Read More »

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ

ಉಪ್ಪಿನಂಗಡಿ: ಪತಿ ಕೆಲಸಕ್ಕೆಂದು ಹೋದಾಗ ಪತ್ನಿ ಮಗು ನಾಪತ್ತೆಯಾಗಿರುವ ಘಟನೆ ಕೌಕ್ರಾಡಿ ಗ್ರಾಮದ ಕಟ್ಟೆ ಮಜಲಿನಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಉತ್ತರ ಪ್ರದೇಶ ಮೂಲದ ಸೋನು ಸೋಂಕ‌ರ್ ಅವರ ಪತ್ನಿ ರೀಮಾ ಸೋಂಕರ್ (26) ಮತ್ತು ಮಗು ರಿಯಾ (1) ಎಂದು ಗುರುತಿಸಲಾಗಿದೆ. ಇಂಟಿರಿಯರ್ ಡೆಕೊರೇಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸೋನು ಸೋಂಕರ್ ಉತ್ತರ ಪ್ರದೇಶದ ಅಜಾಮ್ ಘರ್ ಜಿಲ್ಲೆಯ ಅಮಹಾಮಾಫಿ ಗ್ರಾಮದ ನಿವಾಸಿಯಾಗಿದ್ದು, ಕೌಕ್ರಾಡಿಯಲ್ಲಿ ಕೃಷ್ಣಪ್ಪ ಎಂಬವರ ಬಾಡಿಗೆ ಮನೆಯಲ್ಲಿ ಕುಟುಂಬ ದೊಂದಿಗೆ ವಾಸವಿದ್ದರು. ಸೋನು ಸೋಂಕರ್ ಎ.22

ಉಪ್ಪಿನಂಗಡಿ :  ತಾಯಿ ಮಗು  ನಾಪತ್ತೆ Read More »

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ

ಮಂಡ್ಯ: ನಾನು ಈ ಬಾರಿ ಪಕ್ಷೇತರಳಾಗಿ ಸ್ಪರ್ಧೆ‍ ಮಾಡುವುದಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ನಾನು ಬೆಂಬಲ ನೀಡುತ್ತೇನೆ. ಆದರೆ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ, ರಾಜಕೀಯ ಬಿಟ್ಟು ಹೋಗುವುದಿಲ್ಲ ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ. ಮಂಡ್ಯದಲ್ಲಿ ಇಂದು ನಡೆದ ಬೆಂಬಲಿಗರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಪ್ರಸ್ತುತ ದಿನಗಳಲ್ಲಿ ಮೋದಿ ಅವರು ದೇಶದ ಬಗ್ಗೆ ಹೊಂದಿರುವ ಕನಸಿಗೆ ನಾವು ಬೆಂಬಲವಾಗಿ ನಿಲ್ಲಬೇಕು. ನನ್ನ ಎಂಪಿ ಸ್ಥಾನವನ್ನು ಬಿಟ್ಟು ಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೀನಿ ಎಂದು ಘೋಷಿಸಿದರು.

ಬಿಜೆಪಿ ಸೇರ್ಪಡೆ ನಿರ್ಧಾರ ಪ್ರಕಟಿಸಿದ ಸುಮಲತಾ ಅಂಬರೀಶ್ | ಏ.6 ಕ್ಕೆ ಬಿಜೆಪಿ ಸೇರ್ಪಡೆಗೆ ಮುಹೂರ್ತ ಘೋಷಿಸಿದ ಸುಮಲತಾ Read More »

error: Content is protected !!
Scroll to Top