Uncategorized

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ […]

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನ.25 ಹಾಗೂ 26ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಈ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಂಗಳೂರಿನ ಕಂಬಳ ಯಶಸ್ವಿಯಾಗುವ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ನ. 25ರಂದು ಬೆಳಿಗ್ಗೆ 10.30ಕ್ಕೆ ಕೆರೆ ಮುಹೂರ್ತ ನಡೆಯಲಿದೆ. ಕಂಬಳದ ಯಶಸ್ಸಿಗಾಗಿ ಈಗಾಗಲೇ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವರ ಅನುಗ್ರಹ ಬೇಡಲಾಗಿದ್ದು, ಇದೀಗ ಸೀಮೆ ದೇವರು ಶ್ರೀ ಮಹಾಲಿಂಗೇಶ್ವರನ ಅನುಗ್ರಹಕ್ಕಾಗಿ

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ Read More »

ಮಾಣಿಲ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ, ಸಭಾ ವೇದಿಕೆ ಉದ್ಘಾಟನೆ, ಬೀಳ್ಕೊಡುಗೆ

ವಿಟ್ಲ: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅ. 2ರಂದು ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಿಸಲಾಯಿತು. ಇದೇ ಸಂದರ್ಭ ನವೀಕರಣಗೊಂಡ ಶಾಲಾ ಸಭಾ ವೇದಿಕೆಯ ಉದ್ಘಾಟನೆ ಹಾಗೂ ವರ್ಗಾವಣೆಗೊಂಡ ಶಿಕ್ಷಕ ಭುವನೇಶ್ವರ್ ಸಿ. ಅವರಿಗೆ ಸನ್ಮಾನ, ಬೀಳ್ಕೊಡುಗೆ ನಡೆಯಿತು. ಕುಕ್ಕಾಜೆ ಶ್ರೀ ಕಾಳಿಕಾ ಅಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಮಾತನಾಡಿ, ಗುರುವೃಂದ ಹಾಗೂ ಪೋಷಕರ ಸಮರ್ಪಣಾ ಭಾವದಿಂದ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು. ಹಿರಿಯ ಯಕ್ಷಗಾನ ಕಲಾವಿದ ಹರೀಶ್ ಬಳಂತಿಮೊಗರು ಮಾತನಾಡಿ, 15 ವರ್ಷಗಳ

ಮಾಣಿಲ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ, ಸಭಾ ವೇದಿಕೆ ಉದ್ಘಾಟನೆ, ಬೀಳ್ಕೊಡುಗೆ Read More »

ಸಮವಸ್ತ್ರ ಹಾಕಿಕೊಂಡೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ! | ಪತ್ನಿಯ ಅಗಲುವಿಕೆ ಸಹಿಸದೇ ನೇಣಿಗೆ ಕೊರಳೊಡ್ಡಿದರೇ?

ಶಿವಮೊಗ್ಗ: ಪತ್ನಿಯ ಅಗಲುವಿಕೆಯಿಂದ ಮನನೊಂದ ಪೊಲೀಸ್ ಹೆಡ್ ಕಾನ್ಸ್’ಟೇಬಲ್ ಒಬ್ಬರು ಪೊಲೀಸ್ ಸಮವಸ್ತ್ರ ಧರಿಸಿಕೊಂಡೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗದ ವಿನೋಬನಗರದಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಜಯಪ್ಪ ಎಂದು ಗುರುತಿಸಲಾಗಿದೆ. ಜಯಪ್ಪ ಅವರು ಶಿವಮೊಗ್ಗ ನಗರದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಮುಖ್ಯಪೇದೆಯಾಗಿದ್ದರು. ಮಂಗಳವಾರ ಬೆಳಗ್ಗೆ ಕೆಲಸಕ್ಕೆ ಹಾಜರಾಗಿದ್ದ ಜಯಪ್ಪ ಅವರು ಮನೆಗೆ ವಾಪಸ್ ತೆರಳಿದ್ದರು. ಹೀಗೆ ಹಿಂದಿರುಗುವಾಗ ಹಗ್ಗ ಖರೀದಿಸಿಕೊಂಡಿದ್ದರು. ಮನೆಗೆ ತೆರಳಿದವರೇ, ಮನೆ ಮೇಲ್ಭಾಗದಲ್ಲಿ ಹಾಕಲಾಗಿರುವ

ಸಮವಸ್ತ್ರ ಹಾಕಿಕೊಂಡೇ ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆ! | ಪತ್ನಿಯ ಅಗಲುವಿಕೆ ಸಹಿಸದೇ ನೇಣಿಗೆ ಕೊರಳೊಡ್ಡಿದರೇ? Read More »

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ರಿಗೆ ಕಸಾಪದಿಂದ ಗೌರವ

ಪುತ್ತೂರು: ಪುಸ್ತಕದ ಹಬ್ಬ ಪುಸ್ತಕ ದಾನಿಗಳ ಸಮಾವೇಶ ಹಾಗೂ ಉಪ್ಪಿನಂಗಡಿ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಅಂಗವಾಗಿ ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ಅವರನ್ನು ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಕಸಾಪ ತಾಲೂಕು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಮಾತನಾಡಿ, ನಾವು ನೀಡಿದ ಸನ್ಮಾನವನ್ನು ಶ್ರೀ ಧರ್ಮಸ್ಥಳ ಮಂಜುನಾಥನ ಪ್ರಸಾದವೆಂದು ಸ್ವೀಕರಿಸಿದ ಭಾವಪೂರ್ಣ ಘಟನೆಗೆ ನಾವೆಲ್ಲ ಸಾಕ್ಷಿಯಾಗಿ ಧನ್ಯತಾ ಭಾವವನ್ನು ಇಂದು ಕಂಡಿದ್ದೇವೆ. ವೆಂಕಟರಮಣ ಭಟ್ ಅವರು ಮಾನಸಿಕ, ದೈಹಿಕವಾಗಿ ಆರೋಗ್ಯವಂತರಾಗಿದ್ದಾರೆ.

ಹಿರಿಯ ಯಕ್ಷಗಾನ ಕಲಾವಿದ ಪಾತಾಳ ವೆಂಕಟರಮಣ ಭಟ್ ರಿಗೆ ಕಸಾಪದಿಂದ ಗೌರವ Read More »

ದೇಶ ತೊರೆಯಲು ಕೆನಡಾ ರಾಯಭಾರಿಗೆ ಭಾರತ ಸಮನ್ಸ್ ನೀಡಿದ್ದ್ಯಾಕೆ?

ನವದೆಹಲಿ: ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂಬಂತೆ 5 ದಿನಗಳ ಒಳಗಡೆ ದೇಶವನ್ನು ತೊರೆಯುವಂತೆ ಕೆನಡಾ ರಾಯಭಾರಿಗೆ ಭಾರತ ಸೂಚಿಸಿದೆ. ಕೆನಡಾ ಪ್ರಜೆ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಪಾತ್ರವಿದೆ ಎಂದು ಆರೋಪಿಸಿ ಕೆನಡಾದಲ್ಲಿರುವ ಭಾರತೀಯ ರಾಯಭಾರಿಯನ್ನು ಉಚ್ಚಾಟಿಸಿದ ಬೆನ್ನಲ್ಲೇ ಭಾರತ ಸರ್ಕಾರ ಕೆನಡಾ ರಾಯಭಾರಿಗೆ ಸಮನ್ಸ್‌ ಜಾರಿ ಮಾಡಿದೆ. ಜಿ20 ಶೃಂಗಸಭೆಯ ಸಂದರ್ಭದಲ್ಲಿ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಖಲಿಸ್ತಾನಿಗಳ ಹಿಂಸಾಚಾರ ಹಾಗೂ ವಿದೇಶಿ ಹಸ್ತಕ್ಷೇಪದ ಕುರಿತು

ದೇಶ ತೊರೆಯಲು ಕೆನಡಾ ರಾಯಭಾರಿಗೆ ಭಾರತ ಸಮನ್ಸ್ ನೀಡಿದ್ದ್ಯಾಕೆ? Read More »

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!!

ಬೆಂಗಳೂರು: ಚುನಾವಣೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಮೂರನೇ ಆರೋಪಿ ಅಭಿನವ ಹಾಲಶ್ರೀಯನ್ನು ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಒಡಿಶಾದ ಕಟಕ್ ಬಳಿ ರೈಲಿನಲ್ಲಿ ಭುವನೇಶ್ವರದಿಂದ ಬೋಧಯಾಗೆ ತೆರಳುತ್ತಿದ್ದ ವೇಳೆ ಹಾಲಶ್ರೀಯನ್ನು ಇಂದು ಮುಂಜಾನೆ ಬಂಧಿಸಿ ಬೆಂಗಳೂರಿಗೆ ಕರೆತರಲಾಗಿದೆ. ಈಗಾಗಲೇ ಪ್ರಕರಣ ಮುಖ್ಯ ಆರೋಪಿಗಳಾದ ಚೈತ್ರಾ ಕುಂದಾಪುರ ಹಾಗೂ ಗಗನ್ ಕಡೂರು ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮೂರನೇ ಆರೋಪಿ ವಿಜಯನಗರ ಜಿಲ್ಲೆಯ ಅಭಿನವ ಹಾಲಶ್ರೀ ಬಂಧನಕ್ಕೆ ಸಿಸಿಬಿ ಬಲೆ ಬೀಸಿತ್ತು.

ಅಭಿನವ ಹಾಲಶ್ರೀ ಬಂಧನ! | ಮತ್ತಷ್ಟು ಹೊಸ ಸಾಧ್ಯತೆಗಳಿಗೆ ತೆರೆದುಕೊಂಡ ಚೈತ್ರಾ ವಂಚನೆ ಪ್ರಕರಣ!! Read More »

Education AI Chatbot for Schools, Colleges & Universities

Top 10 Use Cases of Educational Chatbot Today, technologies like conversational AI and natural language processing (NLP) continue to help educators and students world over teach and learn better. Believe it or not, the education sector is now among the top users of chatbots and other smart AI tools like ChatGPT. They can be used

Education AI Chatbot for Schools, Colleges & Universities Read More »

ಚಂದ್ರಯಾನ-3 : ಇಸ್ರೋದಿಂದ ಮಹತ್ವದ ಮಾಹಿತಿ

ಇಸ್ರೋ: ಚಂದ್ರಯಾನ-3 ಯೋಜನೆಯ ಭಾಗವಾಗಿರುವ ವಿಕ್ರಂ ಲ್ಯಾಂಡರ್‌ ಚಂದ್ರನ ನೆಲಕ್ಕಿಳಿದು ಇತಿಹಾಸ ಬರೆಯಲು ಸನ್ನದ್ಧವಾಗಿದ್ದು, ಸಂಜೆ 5.45 ಕ್ಕೆ ಲ್ಯಾಂಡರ್ ಚಂದ್ರನಲ್ಲಿ ಕಾಲೂರಲಿದೆ. ಈ ಮೂಲಕ ಅಲ್ಲಿಗೆ ತಲುಪಿದ ಮೊದಲ ದೇಶ ಎಂಬ ಶ್ರೇಯಕ್ಕೆ ಪಾತ್ರವಾಗಲಿದೆ. ಸಂಜೆ 5.20 ಕ್ಕೆ ಇಸ್ರೋದಿಂದ ನೇರ ಪ್ರಸಾರಗೊಳ್ಳಲಿದೆ.   ಯೋಜನೆಯ ಹೊಣೆ ಹೊತ್ತಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 140 ಕೋಟಿ ಭಾರತೀಯರ ಜೊತೆ ಈ ರೋಚಕ ಕ್ಷಣಕ್ಕಾಗಿ ಉಸಿರು ಬಿಗಿಹಿಡಿದು ಕಾದಿದ್ದರೆ, ಇಡೀ ವಿಶ್ವ ಭಾರತದತ್ತ ಕುತೂಹಲದ

ಚಂದ್ರಯಾನ-3 : ಇಸ್ರೋದಿಂದ ಮಹತ್ವದ ಮಾಹಿತಿ Read More »

ಎದುರ್ಕಳ ಕಿಂಡಿ ಅಣೆಕಟ್ಟು ಸ್ವಚ್ಛತೆ | ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವಿಟ್ಲ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಕೆದಿಲ  ಗ್ರಾಮದ  ಎದುರ್ಕಳ  ಕಿಂಡಿ ಆಣೆಕಟ್ಟಿನಲ್ಲಿ ಸಿಲುಕಿದ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು. ಮಳೆಗೆ ಮರ, ಬಿದಿರು, ಕಸ ಕಡ್ಡಿ ಕುಳಿತು ಮಳೆಯ ನೀರು ಸೇತುವೆಯಲ್ಲಿ ಹೋಗಲು ಕಷ್ಟ ಆಗುತಿದ್ದುದನ್ನು ಗಮನಿಸಿ . ನೀರಿನ ಪ್ರವಾಹವನ್ನು ಲೆಕ್ಕಿಸದೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಕೆದಿಲ ಸದಸ್ಯರಾದ  ಜಗದೀಶ, ಶೀನಪ್ಪ, ಗಿರೀಶ, ವೆಂಕಪ್ಪ, ಪುರಂದರ, ಸ್ವಚ್ಛತೆ ಮಾಡಿದರು.  ಈ

ಎದುರ್ಕಳ ಕಿಂಡಿ ಅಣೆಕಟ್ಟು ಸ್ವಚ್ಛತೆ | ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಸ್ವಚ್ಛತಾ ಕಾರ್ಯ Read More »

error: Content is protected !!
Scroll to Top