Uncategorized

ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 15ನೇ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

ಉಪ್ಪಿನಂಗಡಿ: ಸುಳ್ಯದಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ರಾಜ್ಯಾದ್ಯಂತ ಶಾಖೆಗಳನ್ನು ಹೊಂದಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 15ನೇ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭಗೊಂಡಿತು. ಸರ್ವೆ ಕಾಂಪ್ಲೆಕ್ಸ್ ನಿಂದ ಎಚ್.ಎಂ ಆಡಿಟೋರಿಯಂ ಬಳಿಯ ಬಿ.ಎಂ ಆರ್ಕೇಡ್ ಗೆ ಸ್ಥಳಾಂತರಗೊಂಡ ಶಾಖೆಯನ್ನು ಕೆಎಸ್‌ಆ‌ರ್ ಟಿಸಿ ನಿವೃತ್ತ ಉದ್ಯೋಗಿ ಬೆಳ್ಯಪ್ಪ ಗೌಡ ಕಣಿಯ ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪಿ.ಸಿ. ಜಯರಾಮ ವಹಿಸಿದ್ದರು. ಅತಿಥಿಗಳಾಗಿ ಅಶ್ವಿನಿ ಇಲೆಕ್ಟ್ರಾನಿಕ್ಸ್ ಮಾಲಕ, ಉದ್ಯಮಿ ಪ್ರಕಾಶ್‌, ಬಿ.ಎಂ. […]

ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ 15ನೇ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ Read More »

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ | ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆ

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ  ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ನಡೆದ ಭಾರತೀಯ ಕುಸ್ತಿ ಸಂಘದ ಚುನಾವಣೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಕರ್ನಾಟಕದಿಂದ ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಗಳಾಗಿ  ಕರ್ನಾಟಕ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳ ಪಟ್ಟಿ ಅಧ್ಯಕ್ಷರಾಗಿ ಸಂಜಯ್‌ ಕುಮಾರ್‌ ಸಿಂಗ್‌, ಹಿರಿಯ ಉಪಾಧ್ಯಕ್ಷರಾಗಿ ದೇವೇಂದರ್‌,    ಉಪಾಧ್ಯಕ್ಷರಾಗಿ ಅಸಿತ್‌ ಕುಮಾರ್‌ ಸಹ, ಜಯಪ್ರಕಾಶ್‌, ಕಾರ್‍ತರ್‌ ಸಿಂಗ್‌, ಎನ್‌.ಫೋನಿ, ಪ್ರಧಾನ ಕಾರ್ಯದರ್ಶಿಯಾಗಿ

ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿಯಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ | ಇತಿಹಾಸದಲ್ಲೇ ಪ್ರಥಮ ಬಾರಿಗೆ ಕರ್ನಾಟಕದಿಂದ ಆಯ್ಕೆ Read More »

ಇಹಲೋಕ ತ್ಯಜಿಸಿದ ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗೇಶ್ವರ ಭಟ್ಟರು

ಸುಬ್ರಹ್ಮಣ್ಯ: ಗಿರಿಗದ್ದೆ ಭಟ್ಟರು ಎಂದೇ ಚಿರಪರಿಚಿತರಾದ ಗಿರಿಗದ್ದೆ ಮಹಾಲಿಂಗೇಶ್ವರ ಭಟ್ಟರು ನಿಧನರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ ಕುಮಾರಪರ್ವತದ ಹಾದಿಯ ಗಿರಿಗದ್ದೆಯಲ್ಲಿದ್ದ ಮಹಾಲಿಂಗೇಶ್ವರ ಭಟ್ಟರು ಇತ್ತೀಚಿನವರೆಗೂ ಗಿರಿಗದ್ದೆಯಲ್ಲಿ ವಾಸವಾಗಿದ್ದುಕೊಂಡು ಚಾರಣಿಗರ ಪಾಲಿನ ಅನ್ನದಾತ, ಅನ್ನದೇವರಾಗಿದ್ದರು. ಗಿರಿಗದ್ದೆ ಭಟ್ಟರು ಎಂದೇ ಚಿರಪರಿಚಿತರಾಗಿದ್ದರು. ಈ ಕುಟುಂಬ ಗಿರಿಗದ್ದೆಗೆ ಬಂದದ್ದು 1974 ರಲ್ಲಿ. ಗಿರಿಗದ್ದೆಯಲ್ಲಿ ಮಣ್ಣಿನ ಮನೆ ಕೊಟ್ಟಿಗೆ, ಹಟ್ಟಿ ನಿರ್ಮಿಸಿಕೊಂಡು ಏಕಾಂತ ಬದುಕು ಸಾಗಿಸಿದರು. ಅಡಿಕೆ ತೋಟ, ತರಕಾರಿ ಕೃಷಿ ಎಲ್ಲವೂ ಅವರ ಏಕಾಂತ ಬರ ಸ್ಫೂರ್ತಿ

ಇಹಲೋಕ ತ್ಯಜಿಸಿದ ಕುಮಾರ ಪರ್ವತ ಚಾರಣಿಗರ ಅನ್ನದಾತ ಗಿರಿಗದ್ದೆ ಮಹಾಲಿಂಗೇಶ್ವರ ಭಟ್ಟರು Read More »

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ : ಆಸ್ಪತ್ರೆಗೆ ದಾಖಲು

ಆರೋಗ್ಯ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ತಾನದ ಕರಾಚಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಟ್ಟುನಿಟ್ಟಿನ ಭದ್ರತೆಯಲ್ಲಿ ಇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಆಸ್ಪತ್ರೆಯ ಮಹಡಿಯಲ್ಲಿ ದಾವೂದ್ ನನ್ನು ಮಾತ್ರ ಇರಿಸಲಾಗಿದ್ದು ಹತ್ತಿರದ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶಾವಕಾಶ ನೀಡಲಾಗಿದೆ. ಆತ ವಿಷ ಸೇವಿಸಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದರೂ ಯಾವುದೇ ದೃಢೀಕರಣವಿಲ್ಲ. ಕ್ರಿಮಿನಲ್ ಚಟುವಟಿಕೆಗಳಿಗೆ ಹೆಸರಾದ ಕುಖ್ಯಾತ ವ್ಯಕ್ತಿ ಕಳೆದ ಎರಡು ದಿನಗಳಿಂದ ವೈದ್ಯಕೀಯ ಆರೈಕೆಯಲ್ಲಿದ್ದು, ವಿಷ ಸೇವಿಸಿರಬಹುದು

ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ : ಆಸ್ಪತ್ರೆಗೆ ದಾಖಲು Read More »

ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಬೆಂಬಲಿತರಿಗೆ ಜಯ

ಪುತ್ತೂರು: ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಎಲ್ಲಾ 11 ಮಂದಿ ಜಯಗಳಿಸಿದ್ದಾರೆ. ಶನಿವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಸಹಕಾರಿ ಭಾರತಿ ಬೆಂಬಲಿತರಾದ ಕರುಣಾಕರ, ಕೆ.ಬೆಳ್ಯಪ್ಪ ಗೌಡ, ಎನ್‍.ಮುರಳೀಕೃಷ್ಣ, ವಾಡ್ಯಪ್ಪ ಗೌಡ, ವಿಶ್ವನಾಥ ಶೆಟ್ಟಿ, ಶಿವರಾಮ ಕೆ., ಸಿ.ಆರ್‍.ಸುಬ್ರಹ್ಮಣ್ಯ ಗೌಡ, ಮಹಿಳಾ ಮೀಸಲು ಸ್ಥಾನದಿಂದ ಚಂದ್ರಾವತಿ, ಜಲಜಾಕ್ಷಿ, ಹಿಂದುಳಿದ ವರ್ಗ ಬಿ ಸ್ಥಾನದಿಂದ ಕೆ.ತಿರುಮಲೇಶ್ವರ, ಹಿಂದುಳಿದ ವರ್ಗ ಎ ಸ್ಥಾನದಿಂದ ಧನಂಜಯ

ಕೊಳ್ತಿಗೆ ಹಾಲುತ್ಪಾದಕರ ಸಹಕಾರ ಸಂಘದ ಚುನಾವಣೆ | ಸಹಕಾರ ಭಾರತಿ ಬೆಂಬಲಿತರಿಗೆ ಜಯ Read More »

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ಕಬಡ್ಡಿ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು. ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಮುಖ್ಯಸ್ಥರ ಸಲಹೆಗಾರ್ತಿ, ವಂ. ರೋಶಲ್ ಬಿ.ಎಸ್. ಅಧ್ಯಕ್ಷೆತೆ ವಹಿಸಿ ತಂಡವನ್ನು ಅಭಿನಂದಿಸಿದರು. ಮುಖ್ಯ ಅತಿಥಿಗಳಾಗಿ ಬೆಥನಿ ಸಂಸ್ಥೆಯ ಮಂಗಳೂರು ಪ್ರಾಂತ್ಯದ ಲೆಕ್ಕ ಪರಿಶೋಧಕಿ ವಂ. ಸಿಬಿಲ್ ಬಿ.ಎಸ್., ಶಾಲಾ ಸಂಚಾಲಕಿ ವಂ. ಪ್ರಶಾಂತಿ ಬಿ.ಎಸ್., ಕಾರ್ಯಕ್ರಮ ಪ್ರಾಯೋಜಕರಾದ ಸುನೀತಾ ದಲ್ಮೆದಾ, ಡಾ. ಶ್ರೀಪ್ರಕಾಶ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾದವರಿಗೆ ಅಭಿನಂದನೆ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ

ಪುತ್ತೂರು: ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಜಂಟಿ ಆಶ್ರಯದಲ್ಲಿ ಭಾರತೀಯ ಭಾಷಾ ಉತ್ಸವದ ಅಂಗವಾಗಿ ಕನ್ನಡ ಭಾಷಾ ರಸಪ್ರಶ್ನೆ ಕಾರ್ಯಕ್ರಮ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ಕಲಾವಿದ  ರಂಗಯ್ಯ ಬಳ್ಳಾಲ್ ಕೆದಂಬಾಡಿ ಬೀಡು ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಏರ್ಪಡಿಸಿದ್ದರು. ಒಂದನೇ ತರಗತಿಯಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಕನ್ನಡ ಭಾಷಾ ರಸಪ್ರಶ್ನೆ Read More »

ಥಿಯೇಟರ್ ಒಳಗಡೆ ಸಿಡಿದ ಪಟಾಕಿ: ಪ್ರೇಕ್ಷಕರು ಕಂಗಾಲು!!

ಅಮರಾವತಿ: ಸಿನಿಮಾ ಅಭಿಮಾನಿಗಳ ಅತಿರೇಕದ ವರ್ತನೆಗೆ ಪ್ರೇಕ್ಷಕರು ಕಂಗಾಲಾದ ಘಟನೆ ಟೈಗರ್ 3 ಸಿನಿಮಾ ಪ್ರದರ್ಶನದ ವೇಳೆ ನಡೆದಿದೆ. ಆಂಧ್ರ ಪ್ರದೇಶದ ಥಿಯೇಟರ್ ಒಂದರಲ್ಲಿ ಘಟನೆ ನಡೆದಿದ್ದು, ಥಿಯೇಟರ್ ಒಳಗಡೆಯೇ ಅಭಿಮಾಣಿಗಳು ಪಟಾಕಿ ಸಿಡಿಸಿದ್ದಾರೆ. ಇದ್ದಕ್ಕಿದ್ದಂತೆ ಪಟಾಕಿ ಸಿಡಿದ ಕಾರಣ ಪ್ರೇಕ್ಷಕರು ಏನಾಗುತ್ತಿದೆ ಎನ್ನುವುದು ತಿಳಿಯದಂತಾಗಿ, ಧಿಕ್ಕೆಟ್ಟು ಓಡಿದರು. ಘಟನೆಯಿಂದ ಥಿಯೇಟರಿಗೆ ಹಾನಿಯಾಗಿದ್ದು, ಅಭಿಮಾನಿಗಳ ಅತಿರೇಕದ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.

ಥಿಯೇಟರ್ ಒಳಗಡೆ ಸಿಡಿದ ಪಟಾಕಿ: ಪ್ರೇಕ್ಷಕರು ಕಂಗಾಲು!! Read More »

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು

ಸುಳ್ಯ: ಓಮ್ನಿ ಹಾಗೂ ಅಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ಭಾನುವಾರ ರಾತ್ರಿ ನಡೆದಿದೆ. ಜಾಲ್ಸೂರು ಗ್ರಾಮದ ಅರಿಯಡ್ಕ ನಿವಾಸಿ ಬಾಬು ಪಾಟಾಳಿ ಅಪಘಾತದಿಂದ ಮೃತಪಟ್ಟವರು. ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿಯವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ಮಿಗೆ ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ

ಆಟೋ ರಿಕ್ಷಾ-ಓಮ್ನಿ ಡಿಕ್ಕಿ : ರಿಕ್ಷಾ ಚಾಲಕ ಮೃತ್ಯು Read More »

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ

ಪುತ್ತೂರು: ನ.25 ಹಾಗೂ 26ರಂದು ಬೆಂಗಳೂರಿನಲ್ಲಿ ಕಂಬಳ ನಡೆಯಲಿದ್ದು, ಈ ನಿಟ್ಟಿನಲ್ಲಿ ಪೂರ್ವ ಸಿದ್ಧತೆಗಳು ಭರದಿಂದ ಸಾಗುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಂಗಳೂರಿನ ಕಂಬಳ ಯಶಸ್ವಿಯಾಗುವ ಹಿನ್ನೆಲೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ನ. 25ರಂದು ಬೆಳಿಗ್ಗೆ 10.30ಕ್ಕೆ ಕೆರೆ ಮುಹೂರ್ತ ನಡೆಯಲಿದೆ. ಕಂಬಳದ ಯಶಸ್ಸಿಗಾಗಿ ಈಗಾಗಲೇ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವರ ಅನುಗ್ರಹ ಬೇಡಲಾಗಿದ್ದು, ಇದೀಗ ಸೀಮೆ ದೇವರು ಶ್ರೀ ಮಹಾಲಿಂಗೇಶ್ವರನ ಅನುಗ್ರಹಕ್ಕಾಗಿ

ನ. 25-26ರಂದು ಬೆಂಗಳೂರಿನಲ್ಲಿ 48 ಗಂಟೆಗಳ ಕಂಬಳ | ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ, ಕಂಬಳದ ರೂಪುರೇಷೆ ಬಿಚ್ಚಿಟ್ಟ ಶಾಸಕ ಅಶೋಕ್ ರೈ Read More »

error: Content is protected !!
Scroll to Top