ಮಾಣಿಲ ಶಾಲೆಯಲ್ಲಿ ಗಾಂಧೀ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ, ಸಭಾ ವೇದಿಕೆ ಉದ್ಘಾಟನೆ, ಬೀಳ್ಕೊಡುಗೆ
ವಿಟ್ಲ: ಮಾಣಿಲ ಸರಕಾರಿ ಪ್ರೌಢಶಾಲೆಯಲ್ಲಿ ಅ. 2ರಂದು ಗಾಂಧೀ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಿಸಲಾಯಿತು. ಇದೇ ಸಂದರ್ಭ ನವೀಕರಣಗೊಂಡ ಶಾಲಾ ಸಭಾ ವೇದಿಕೆಯ ಉದ್ಘಾಟನೆ ಹಾಗೂ ವರ್ಗಾವಣೆಗೊಂಡ ಶಿಕ್ಷಕ ಭುವನೇಶ್ವರ್ ಸಿ. ಅವರಿಗೆ ಸನ್ಮಾನ, ಬೀಳ್ಕೊಡುಗೆ ನಡೆಯಿತು. ಕುಕ್ಕಾಜೆ ಶ್ರೀ ಕಾಳಿಕಾ ಅಂಜನೇಯ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಮಾತನಾಡಿ, ಗುರುವೃಂದ ಹಾಗೂ ಪೋಷಕರ ಸಮರ್ಪಣಾ ಭಾವದಿಂದ ಶಾಲೆಗಳ ಅಭಿವೃದ್ಧಿ ಸಾಧ್ಯ ಎಂದರು. ಹಿರಿಯ ಯಕ್ಷಗಾನ ಕಲಾವಿದ ಹರೀಶ್ ಬಳಂತಿಮೊಗರು ಮಾತನಾಡಿ, 15 ವರ್ಷಗಳ […]









