ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಬಂದಿದ್ದ ವ್ಯಕ್ತಿ ಜಲಪಾತದಲ್ಲಿ ಕಾಲು ಜಾರಿ ಬಿದ್ದು ನೀರುಪಾಲು |ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ | ನೀರಿಗೆ ಬಿದ್ದ ವೀಡಿಯೋ ಇಲ್ಲಿದೆ
ಉಡುಪಿ : ಪ್ರವಾಸಕ್ಕೆಂದು ಸ್ನೇಹಿತರೊಂದಿಗೆ ಕೊಲ್ಲೂರಿಗೆ ಆಗಮಿಸಿದ್ದ ಯುವಕನೋರ್ವ ಜಲಪಾತದಲ್ಲಿ ಕಾಲು ಜಾರಿ ನೀರುಪಾಲಾಗಿರುವ ಘಟನೆ ಭಾನುವಾರ ಮಧ್ಯಾಹ್ನ ವರದಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಕೆ.ಎಚ್. ನಗರದ ಸುಣ್ಣದಹಳ್ಳಿ ನಿವಾಸಿ ಶರತ್ ಕುಮಾರ್ (23) ನೀರುಪಾಲಾದ ಯುವಕ ಎಂದು ಗುರುತಿಸಲಾಗಿದೆ. ಭಾನುವಾರ ತನ್ನ ಸ್ನೇಹಿತರೊಂದಿಗೆ ಕೊಲ್ಲೂರಿಗೆ ಕಾರಿನಲ್ಲಿ ಕೊಲ್ಲೂರಿಗೆ ಆಗಮಿಸಿದ್ದರು. ಈ ವೇಳೆ ಶರತ್ ತನ್ನ ಸ್ನೇಹಿತರ ಜತೆಗೂಡಿ ಕೊಲ್ಲೂರು ಬಳಿಯಿರುವ ಅರಶಿನಗುಂಡಿ ಜಲಪಾತದ ವೀಕ್ಷಣೆಗೆ ತೆರಳಿದ್ದರು. ಶರತ್ ಜಲಪಾತದ ಬಳಿಯಲ್ಲಿದ್ದ ಬಂಡೆ ಹತ್ತಿ ನಿಂತಿದ್ದು, […]







