Uncategorized

Pin Up’ın Türkiye’deki Sah Sitesidir

Pin Up’ın Türkiye’deki Sah Sitesidir” Pin-up Türkiye Para Çekme Ve Bonus Avantajları Content Vücut Tipine Uygun Mayo Empieza Bikini Seçimi Bir Bahis Bürosunda Ne Üzerine Bahis Oynayabilirsiniz Ping Up Bahsi Güncel Turnuvalar Pin-up Casino’da “Casino Pin Up Türkiye – Resmi Sitenin Incelemesi, Ücretsiz Ve Paralı Oynayın Pin Up Casino Güvenilir Mi? Pin Up Giyim Tarzı […]

Pin Up’ın Türkiye’deki Sah Sitesidir Read More »

ಫೆ.25 : ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ಗಡಿನಾಡ ಸಮ್ಮೇಳನ – 2023

ಪುತ್ತೂರು : ಗಡಿನಾಡ ಧ್ವನಿ ಮಾಸಪತ್ರಿಕೆ ಹಾಗೂ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಆಶ್ರಯದಲ್ಲಿ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಘಟಕ ಹಾಗೂ ಒಡ್ಯ ುನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಕಾರದೊಂದಿಗೆ 6ನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023 .2ಫೆ5 ಶನಿವಾರ ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ ಎಂದು ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಡಾ.ಹಾಜಿ ಅಬೂಬಕ್ಕರ್ ಆರ್ಲಪದವು ತಿಳಿಸಿದ್ದಾರೆ. ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ಐದು ವರ್ಷಗಳಿಂದ ಯಶಸ್ವಿಯಾಗಿ

ಫೆ.25 : ಒಡ್ಯ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6ನೇ ಗಡಿನಾಡ ಸಮ್ಮೇಳನ – 2023 Read More »

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ

ಬೆಳ್ತಂಗಡಿ : ಪಟ್ರಮೆ ಗ್ರಾಮವನ್ನು ಗ್ರಾಮ ವಿಕಾಸದ ಅಡಿಯಲ್ಲಿ ಬಯಲು ಶೌಚಮುಕ್ತ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಶೌಚಾಲಯ ನಿರ್ಮಿಸದ ಕಲ್ಲಾಪು ಮನೆ ಅಂಬೋಡಿ ಎಂಬವರ ಮನೆಗೆ ಭೇಟಿ ನೀಡಿ ಪರಿಶೀಲಿಸಿ ಶೌಚಾಲು ನಿರ್ಮಿಸುವಂತೆ ಮನವೊಲಿಸಿತು. ಇವರಿಗೆ ಗ್ರಾಮದ ಹಲವರು ಅನೇಕ ಸಲ ಶೌಚಾಲಯ ನಿರ್ಮಿಸುವಂತೆ ಮನವೊಲಿಸಿದರೂ ಶೌಚಾಲಯ ನಿರ್ಮಾಣದ ಕಾರ್ಯ ನಡೆದಿರಲಿಲ್ಲ. ಈ ನಿಟ್ಟಿನಲ್ಲಿ ಭೇಟಿ ಮಾಡಿದ ವಿದ್ಯಾಸಂಸ್ಥೆ ಮನವೊಲಿಸಿದ ನಿಟ್ಟಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಕೈಗೊಳ್ಳಲಾಯಿತು. ಈ ಬಗ್ಗೆ ಶಾಲಾ ಸಂಚಾಲಕ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ ಗ್ರಾಮ ವಿಕಾಸ ಸಮಿತಿ ಭೇಟಿ | ಶೌಚಾಲಯ ನಿರ್ಮಿಸುವಂತೆ ಮನವೊಲಿಕೆ | ಕಾಮಗಾರಿ ಆರಂಭ Read More »

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಕಾರಣಿಕ ಪುರುಷರಾದ ಕೋಟಿ – ಚೆನ್ನಯ ನಾಮಕರಣ | ಪೂರ್ವಭಾವಿ ಸಭೆ

ಪುತ್ತೂರು : ಪುತ್ತೂರು ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಕರಾವಳಿ ಕಾರಣಿಕ ವೀರ ಪುರುಷರಾದ ಕೋಟಿ – ಚೆನ್ನಯ ನಾಮಕರಣ ಮಾಡುವ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆ ಸೋಮವಾರ ಬೆಳಿಗ್ಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮಾತನಾಡಿ, ಈಗಾಗಲೇ ನಗರದ ಬಸ್ ನಿಲ್ದಾಣಕ್ಕೆ ಕಾರಣಿಕ ವೀರ ಪುರುಷರಾದ ಕೋಟಿ – ಚೆನ್ನಯ ಅವರ ಹೆಸರಿಡುವ ಕುರಿತು ಸಮಾನ ಮನಸ್ಕರ ಆಶಯದಂತೆ ಚರ್ಚೆಗಳು ನಡೆದಿವೆ. ಅದರಂತೆ ಸದ್ಯದಲ್ಲೇ ನಾಮಕರಣಗೊಳಿಸುವ ಪ್ರಕ್ರಿಯೆ

ಪುತ್ತೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ಕಾರಣಿಕ ಪುರುಷರಾದ ಕೋಟಿ – ಚೆನ್ನಯ ನಾಮಕರಣ | ಪೂರ್ವಭಾವಿ ಸಭೆ Read More »

ನಾಳೆ (ಫೆ.21) ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

ಪುತ್ತೂರು : ಪುತ್ತೂರು ಶ್ರೀ ಸತ್ಯಸಾಯಿ ಸೇವಾ ಸಮಿತಿ, ದ.ಕ.ಜಿಲ್ಲಾ ವೆನ್‍ಲಾಕ್‍ ಆಸ್ಪತ್ರೆ ಹಾಗೂ ಪುತ್ತೂರು ಸಹಕಾರಿ ಆಸ್ಪತ್ರೆ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಫೆ.21 ಮಂಗಳವಾರ ಬೆಳಗ್ಗೆ 9.30 ಕ್ಕೆ ಕೋರ್ಟ್ ರಸ್ತೆಯಲ್ಲಿರುವ ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಲಿದೆ. ಶಿಬಿರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರ ತನಕ ನಡೆಯಲಿದ್ದು, ಬೆಳಗ್ಗೆ 8.30 ರಿಂದ 11 ಗಂಟೆ ತನಕ ದಾಖಲಾತಿ ನಡೆಯಲಿದೆ. ಮೊದಲು ನೋಂದಾವಣೆ ಮಾಡಿದ 250 ಮಂದಿಗೆ ಮಾತ್ರ ಅವಕಾಶ. ಶಿಬಿರದಲ್ಲಿ

ನಾಳೆ (ಫೆ.21) ಶ್ರೀ ಸತ್ಯಸಾಯಿ ಮಂದಿರದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ Read More »

ಫೆ.26 : ಕರ್ನಾಟಕದ ಇಂದಿನ ಅಗತ್ಯಗಳು ಕುರಿತು “ಜನ ಸಂವಾದ” ಕಾರ್ಯಕ್ರಮ

ಪುತ್ತೂರು : ಗಾಂಧಿ ವಿಚಾರ ವೇದಿಕೆ ಪುತ್ತೂರು ಘಟಕ ಹಾಗೂ ಮಂಗಳೂರು ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಕರ್ನಾಟಕದ ಇಂದಿನ ಅಗತ್ಯಗಳು “ಜನ ಸಂವಾದ” ಕಾರ್ಯಕ್ರಮ ಫೆ.26 ಭಾನುವಾರ ಬೆಳಿಗ್ಗೆ 10 ಗಂಟೆಗೆ ಪುತ್ತೂರು ಜೈನ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ತನಕ ನಡೆಯುವ ಕಾರ್ಯಕ್ರಮದಲ್ಲಿ ನಿವೃತ್ತ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ “ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷ ಆಡಳಿತ”, ಪತ್ರಕರ್ತ ಬಿ.ಎಂ.ಹನೀಫ್ “ಸಾಮಾಜಿಕ ಅಗತ್ಯಗಳು” ಹಾಗೂ ಗಾಂಧಿ

ಫೆ.26 : ಕರ್ನಾಟಕದ ಇಂದಿನ ಅಗತ್ಯಗಳು ಕುರಿತು “ಜನ ಸಂವಾದ” ಕಾರ್ಯಕ್ರಮ Read More »

ಪಯಸ್ವಿನಿ ನದಿಯಲ್ಲಿ ಈಜಲು ತೆರಳಿದ್ದ ಸಂದರ್ಭ ಮೃತಪಟ್ಟಿದ್ದ ಇಬ್ಬರ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಇತ್ತೀಚೆಗೆ ನದಿಗೆ ಈಜಲು ತೆರಳಿದ್ದ ಸಂದರ್ಭ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಇಬ್ಬರ ಮನೆಗೆ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ಮಾಡಿದರು. ಅರಿಯಡ್ಕ ದೇರ್ಲ ನಿವಾಸಿ ನಾರಾಯಣ ಪಾಟಾಳಿ ಪುತ್ರ ಜಿತೇಶ್ ಹಾಗೂ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಕೃಷ್ಣ ನಾಯ್ಕರ ಪುತ್ರ ಪ್ರವೀಣ್ ಮೃತಪಟ್ಟಿದ್ದರು, ಅವರ ಮನೆಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಮತ್ತಿತರರು

ಪಯಸ್ವಿನಿ ನದಿಯಲ್ಲಿ ಈಜಲು ತೆರಳಿದ್ದ ಸಂದರ್ಭ ಮೃತಪಟ್ಟಿದ್ದ ಇಬ್ಬರ ಮನೆಗೆ ಶಾಸಕ ಸಂಜೀವ ಮಠಂದೂರು ಭೇಟಿ Read More »

ದ.ಕ.ಜಿಲ್ಲಾ ಗೃಹರಕ್ಷಕ ದಳದ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರು ಘಟಕಕ್ಕೆ ಭೇಟಿ

ಪುತ್ತೂರು : ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂದರ್ಭ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕದಳದವರನ್ನು ನೇಮಿಸಬೇಕಾದ ಹಿನ್ನಲೆಯಲ್ಲಿ ದ.ಕ.ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ, ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರಿನ ಗೃಹರಕ್ಷಕದಳ ಘಟಕದ ಕಚೇರಿಗೆ ಭಾನುವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಿಷ್ಕ್ರೀಯ ಗೃಹರಕ್ಷಕರನ್ನು ತೆಗೆದುಹಾಕಿ ಕ್ರಿಯಾಶೀಲ ಗೃಹರಕ್ಷಕರನ್ನು ನೇಮಕ ಮಾಡುವಂತೆ ಘಟಕಾಧಿಕಾರಿ ಅಭಿಮನ್ಯು ರೈಯವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು

ದ.ಕ.ಜಿಲ್ಲಾ ಗೃಹರಕ್ಷಕ ದಳದ ಡಾ.ಮುರಲೀ ಮೋಹನ್ ಚೂಂತಾರು ಪುತ್ತೂರು ಘಟಕಕ್ಕೆ ಭೇಟಿ Read More »

ನೇರಪಾವತಿ ಕುರಿತು ಬಜೆಟ್ ನಲ್ಲಿ ಘೋಷಣೆಯಾಗಿಲ್ಲ ಆರೋಪ | ನಗರಸಭೆ ಹೊರಗುತ್ತಿಗೆ ನೌಕರರಿಂದ ಸಾಂಕೇತಿಕ ಪ್ರತಿಭಟನೆ

ಪುತ್ತೂರು : ಬೇಡಿಕೆ ಈಡೇರದ ಹಿನ್ನಲೆಯಲ್ಲಿ ಪುತ್ತೂರು ನಗರಸಭೆಯ ಹೊರಗುತ್ತಿಗೆ ಕಾರ್ಮಿಕರಿಂದ ಸಾಂಕೇತಿಕ ಪ್ರತಿಭಟನೆ ಶನಿವಾರ ನಗರಸಭೆ ಎದುರು ನಡೆಸಯಿತು. ಇತ್ತೀಚೆಗೆ ಕಾರ್ಮಿಕರ ಪ್ರತಿಭಟನೆ ಹಿನ್ನಲೆಯಲ್ಲಿ ನೇರಪಾವತಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೊಷಣೆ ಮಾಡಿಲ್ಲ ಎಂಬ ಕಾರಣಕ್ಕೆ ಹೊರಗುತ್ತಿಗೆ ಕಾರ್ಮಿಕರು ಸಹಿತ ಚಾಲಕರು ಸಾಂಕೇತಿಕ ಪ್ರತಿಭಟನೆ ಮಾಡಿದರು. ಪ್ರತಿಭಟನೆಯನ್ನುದ್ದೇಶಿಸಿ ಹೊರಗುತ್ತಿಗೆ ನೌಕರರ ಕರಾವಳಿ ವಿಭಾಗದ ಸಂಚಾಲಕ ಅಣ್ಣಪ್ಪ ಕಾರೆಕ್ಕಾಡು ಮಾತನಾಡಿ, ಇತ್ತೀಚೆಗೆ ಬೇಡಿಕೆ ಈಡೇರಿಕೆಗಾಗಿ ಸಂಘದ ವತಿಯಿಂದ ನಡೆಸಿದ ಪ್ರತಿಭಟನೆ ಫಲವಾಗಿ

ನೇರಪಾವತಿ ಕುರಿತು ಬಜೆಟ್ ನಲ್ಲಿ ಘೋಷಣೆಯಾಗಿಲ್ಲ ಆರೋಪ | ನಗರಸಭೆ ಹೊರಗುತ್ತಿಗೆ ನೌಕರರಿಂದ ಸಾಂಕೇತಿಕ ಪ್ರತಿಭಟನೆ Read More »

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15ನೇ ಹಣಕಾಸು ಯೋಜನೆಯಡಿ ಬನ್ನೂರಿನಲ್ಲಿ ನಮ್ಮ ಕ್ಲಿನಿಕ್‍ ಉದ್ಘಾಟನೆ

ಪುತ್ತೂರು : ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15 ನೇ ಹಣಕಾಸು ಯೋಜನೆಯಡಿ ಬನ್ನೂರಿನಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಪುತ್ತೂರು ಶಾಸಕ ಸಂಜೀವ ಮಠಂದೂರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಕೋವಿಡ್ ನಂತರ ಎಲ್ಲಾ ಕ್ಷೆತ್ರದಲ್ಲಿಬದಲಾವಣೆ ಆಗುತ್ತಿದೆ. ಮನೆ ಬಾಗಿಲಿಗೆ ಡಾಕ್ಟರ್, ಮನೆ ಬಾಗಿಲಿಗೆ ಆಸ್ಪತ್ರೆ ಎಂಬ ಧ್ಯೇಯ ವಾಕ್ಯದೊಂದಿಗೆ ಕೆಲಸ ಕಾರ್ಯಗಳನ್ನು ಸರಕಾರ ಮಾಡುತ್ತಿದೆ. ನಮ್ಮ ಕ್ಲಿನಿಕ್ ಮೂಲಕ ದಿನದ 8 ಗಂಟೆ ನಿಮ್ಮ ಅರೋಗ್ಯ ತಪಾಸಣೆ ಮಾಡುವ ಕೆಲಸ ನಡೆಯಲಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 15ನೇ ಹಣಕಾಸು ಯೋಜನೆಯಡಿ ಬನ್ನೂರಿನಲ್ಲಿ ನಮ್ಮ ಕ್ಲಿನಿಕ್‍ ಉದ್ಘಾಟನೆ Read More »

error: Content is protected !!
Scroll to Top