Uncategorized

ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಪಡುಮಲೆ : ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವರು ಹಾಗೂ ಸಪರಿವಾರ ದೇವರುಗಳ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.25 ರಿಂದ ಮಾ.6 ರ ತನಕ ವಿವಿಧ ವೈದಿಕ, ಧಾರ್ಮಿಕ ಸಭಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಈ ಕುರಿತು ಜೀಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀನಿವಾಸ ಭಟ್ ಚಂದುಕೂಡ್ಲು ಅವರು ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿ, ಸುಮಾರು 5 ಕೋಟಿಗೂ ಮಿಕ್ಕಿ […]

ಫೆ.25 ರಿಂದ ಮಾ.5 ರ ವರೆಗೆ ಪಡುಮಲೆ ಶ್ರೀ ಕೂವೆಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ Read More »

ಫೆ.20 : ಪುತ್ತೂರು ತಹಶೀಲ್ದಾರ್‍ ರಮೇಶ್‍ ಬಾಬು ಅವರಿಂದ ಕೆದಂಬಾಡಿಯಲ್ಲಿ ಗ್ರಾಮವಾಸ್ತವ್ಯ

ಪುತ್ತೂರು : ಪುತ್ತೂರು ತಾಲೂಕು ತಹಶೀಲ್ದಾರ್‍ ರಮೇಶ್‍ ಬಾಬು ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಫೆ.20 ಸೋಮವಾರ ಕೆದಂಬಾಡಿ ಗ್ರಾಪಂ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ ಸಹಿತ ಇನ್ನಿತರ ಇಲಾಖೆಗಳ ವಿವಿಧ ಸವಲತ್ತುಗಳನ್ನು ವಿತರಿಸಲಾಗುವುದು. ಪುತ್ತೂರು ತಾಲೂಕಿನ ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಭೆಯಲ್ಲಿ ತಮ್ಮ ಇಲಾಖೆಯಿಂದ ಸಾರ್ವಜನಿಕರಿಗೆ ಒದಗಿಸುವ ಸವಲತ್ತುಗಳ ಮಾಹಿತಿ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಅರ್ಜಿ, ಮಾಹಿತಿಯನ್ನು ಪಡೆದು ಅರ್ಹ ಪ್ರಕರಣವನ್ನು ಸ್ಥಳದಲ್ಲೇ

ಫೆ.20 : ಪುತ್ತೂರು ತಹಶೀಲ್ದಾರ್‍ ರಮೇಶ್‍ ಬಾಬು ಅವರಿಂದ ಕೆದಂಬಾಡಿಯಲ್ಲಿ ಗ್ರಾಮವಾಸ್ತವ್ಯ Read More »

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ

ಪುತ್ತೂರು : ರಾಜ್ಯದಲ್ಲಿ ಸ್ಥಳೀಯ ಆಡಳಿತ ಸುಗಮವಾಗಿ ನಡೆಯಲು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಗಳಲ್ಲಿ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಇರಬೇಕಾಗಿದ್ದು, ರಾಜ್ಯ ಸರಕಾರ ಈ ಹುದ್ದೆಗಳನ್ನು ಭರ್ತಿ ಮಾಡುವ ಸಾಧ್ಯತೆ ಕಂಡು ಬರುತ್ತಿದೆ. ರಾಜ್ಯಾದ್ಯಂತ ಸ್ಥಳಿಯ ಆಡಳಿತದಲ್ಲಿ ಸುಧಾರಣೆ ಮಾಡುವ ಸಲುವಾಗಿ ಶೀಘ್ರದಲ್ಲೇ 570 ಪಿಡಿಒ ನೇಮಕ ಮಾಡಲು ಕ್ರಮ ಕೈಗೊಳ್ಳುವ ಭರವಸೆಯನ್ನು ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲರು ಮಾಹಿತಿ ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಪಿಡಿಒ ಹುದ್ದೆಗಳ ಕೊರತೆಯಿರುವುದರಿಂದ ಓರ್ವ ಪಿಡಿಓಗೆ ಪಂಚಾಯಿತಿ ಜವಾಬ್ದಾರಿ ನಿರ್ವಹಿಸಬೇಕಾದ ಅನಿವಾರ್ಯತೆಯಿದೆ.

ಆಡಳಿತ ಸುಗಮದ ಹಿನ್ನಲೆಯಲ್ಲಿ ಪಿಡಿಒ ಹುದ್ದೆಗಳು ಸಧ್ಯದಲ್ಲೇ ಭರ್ತಿ ಆಗುವ ಸಾಧ್ಯತೆ Read More »

ಅಂಚೆ ಇಲಾಖೆ ಪುತ್ತೂರು  ವಿಭಾಗದಿಂದ “ಜೈನ ತೀರ್ಥಂಕರರ ಮೋಕ್ಷ ಭೂಮಿ” ಚಿತ್ರಿತ ಪೋಸ್ಟ್ ಕಾರ್ಡ್ ಅನಾವರಣ

ಪುತ್ತೂರು : ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗವು ಶ್ರೀ ಕ್ಷೇತ್ರ ವರಂಗ ಜೈನ್ ಮಠ ಇವರ ಸಹಯೋಗದೊಂದಿಗೆ “ಜೈನ ತೀರ್ಥಂಕರರ ಮೋಕ್ಷ ಭೂಮಿ” ಎಂಬ ಚಿತ್ರಿತ ಪೋಸ್ಟ್ ಕಾರ್ಡ್ ನ್ನು ಇತ್ತೀಚೆಗೆ ಹಿರಿಯ ಅಂಚೆ ಅಧೀಕ್ಷಕ ಡಾ. ಏಂಜಲ್ ರಾಜ್ ಅವರ ಮೂಲಕ ಅನಾವರಣಗೊಳಿಸಿತು. ಈ ಚಿತ್ರಿತ ಪೋಸ್ಟ್ ಕಾರ್ಡುಗಳು ಜೈನ ಧರ್ಮದ ಎಲ್ಲಾ 24 ಜೈನ ತೀರ್ಥಂಕರರ ಹೆಸರನ್ನು ಹೊಂದಿದ್ದು, ಅವರು ಮೋಕ್ಷಹೊಂದಿದ ಸ್ಥಳದ ಚಿತ್ರವನ್ನೊಳಗೊಂಡಿದೆ. ಈ ಅಂಚೆ ಕಾರ್ಡಿನಲ್ಲಿ ಕ್ಯೂಆರ್ ಕೋಡ್ ಲಭ್ಯವಿದ್ದು,

ಅಂಚೆ ಇಲಾಖೆ ಪುತ್ತೂರು  ವಿಭಾಗದಿಂದ “ಜೈನ ತೀರ್ಥಂಕರರ ಮೋಕ್ಷ ಭೂಮಿ” ಚಿತ್ರಿತ ಪೋಸ್ಟ್ ಕಾರ್ಡ್ ಅನಾವರಣ Read More »

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮರದ ಮುಹೂರ್ತ

ಪುತ್ತೂರು : ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳದ ಜೀರ್ಣೋದ್ಧಾರ ಪ್ರಯುಕ್ತ ಮರದ ಮುಹೂರ್ತ ಮಚ್ಚಿಮಲೆ ರಾಮಭಟ್ ಅವರ ಜಾಗದಲ್ಲಿ ನೆರವೇರಿತು. ಕಿರಾಲುಬೋಗಿ ಮರಕ್ಕೆ ಪೂಜೆಗೈದು ಪ್ರಾರ್ಥಿಸಿ, ಮರದ ಶಿಲ್ಪಿ ಮೂಲಕ ಕೊಡಲಿ ಹಾಕುವ ಮುಹೂರ್ತ ನಡೆಸಲಾಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಧಾಕರ ರಾವ್‍ ಆರ್ಯಾಪು, ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬೂಡಿಯಾರ್‍ ರಾಧಾಕೃಷ್ಣ ರೈ, ಭಕ್ತಾದಿಗಳು ಪಾಲ್ಗೊಂಡಿದ್ದರು.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಪ್ರಯುಕ್ತ ಮರದ ಮುಹೂರ್ತ Read More »

ಮಾಸಾಶನದ ಪ್ರಥಮ ಕಂತು ವಿತರಣೆ

ಪುತ್ತೂರು : ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದ ಮಚ್ಚಿಮಲೆ ನಿವಾಸಿ ಅಕ್ಕಮ್ಮ ಅವರಿಗೆ ಮಾಶಾಸನದ ಪ್ರಥಮ ಕಂತನ್ನು ವಿತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಂಜೂರಾದ ಮಾಸಾಶನ ಪ್ರಥಮ ಕಂತು ರೂ. 750ನ್ನು ಒಕ್ಕೂಟ ಅಧ್ಯಕ್ಷ ಮಹಾಲಿಂಗ ನಾಯ್ಕ  ವಿತರಿಸಿದರು. ಈ ಸಂದರ್ಭದಲ್ಲಿ ಯೋಜನೆಯ ಮೇಲ್ವಿಚಾರಕ ಹರೀಶ್ ಕುಲಾಲ್, ಸೇವಾಪ್ರತಿನಿಧಿ ಆಶಾಲತಾ, ದೀಪಿಕಾ, ಸುವಿಧಾ ಸಹಾಯಕಿ ಸ್ವಾತಿ, ನವದುರ್ಗ ಸಂಘದ ಸದಸ್ಯ ಹೊನ್ನಪ್ಪ ಪೂಜಾರಿ ಉಪಸ್ಥಿತರಿದ್ದರು

ಮಾಸಾಶನದ ಪ್ರಥಮ ಕಂತು ವಿತರಣೆ Read More »

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ

ರಾಜ್ಯಾದ್ಯಂತ ಭಾರಿ ವಿರೋಧ ಮಂಗಳೂರು : ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಪ್ರವೀಣ್ ನೆಟ್ಟಾರು ಕೊಲೆ ಆರೋಪಿ ಶಾಫಿ ಬೆಳ್ಳಾರೆಯನ್ನು ಕಣಕ್ಕಿಳಿಸುವ ಎಸ್‌ಡಿಪಿಐ ನಿರ್ಧಾರಕ್ಕೆ ಭಾರಿ ವಿರೋಧ ವ್ಯಕ್ತವಾಗಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಸದ್ಯ ಎನ್‌ಐಎ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಟಿಕೆಟ್ ನೀಡುವುದಾಗಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕೊಡ್ಲಿಪೇಟೆ ಘೋಷಿಸಿದ್ದಾರೆ. ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಬೆಳ್ಳಾರೆ ತೀರ್ಮಾನಿಸಿದ್ದು, ಇದು ಚುನಾವಣಾ ಕಣದಲ್ಲಿ ಸಂಚಲನ ಮೂಡಿಸಿದೆ. ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಫಿ ಬೆಳ್ಳಾರೆಗೆ

ಶಾಫಿ ಬೆಳ್ಳಾರೆಗೆ ಟಿಕೆಟ್‌ : ಪ್ರವೀಣ್‌ ತಂದೆ-ತಾಯಿಗೆ ಆತಂಕ Read More »

ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ

ಫೆ.14 (ಇಂದು) “ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 2181 ವಲಯರ 5ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ ಪುತ್ತೂರು : ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181, ವಲಯ 5 ರ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ರೋಟರಿ ಜಿಲ್ಲಾ ಗವರ್ನರ್್ ಮೇಜರ್ ಡೋನರ್ ಪ್ರಕಾಶ್ ಕಾರಂತ್ ಫೆ.14 ಮಂಗಳವಾರ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರಕಾಶ್ ಕಾರಂತ್ ಅವರು ರೋಟರಿ ಸೆಂಟ್ರಲ್ ಹಮ್ಮಿಕೊಳ್ಳಲಿರುವ ಸಮಾಜಮುಖಿ ಕಾರ್ಯಕ್ರಮಗಳನ್ನು

ಫೆ.14 (ಇಂದು) ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಗೆ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಭೇಟಿ Read More »

Pin Up Casino Azerbaycan, Pinup Cazino Nadir Pin Up Kazin ครูประถม คอม

Pin Up Casino Azerbaycan, Pinup Cazino Nadir Pin Up Kazin ครูประถม คอมO, cari balans, habelə mövcud bonuslar və onların mərc edilməsi şərtləri haqqında bildiriş verir. Content Vəsaiti Kartadan Çıxarmaq üçün Necə Edə Bilərsiniz? Pin Up Depozit Və Vəsaitlərin Çıxarılması, Depozit Online Pin Up Casino Azerbaycan Rəsmi Saytı 💲 Pinup Depozit Və çıxarma Üsulları Formal Veb

Pin Up Casino Azerbaycan, Pinup Cazino Nadir Pin Up Kazin ครูประถม คอม</tg Read More »

ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದ ಪ್ರಶಾಂತ್ ಲಾವಣ್ಯ ಅವರ ಮಗಳಾದ ಮಾನ್ಯ ಎಂಬ 5 ವರ್ಷದ  ಮಗು ಅಂಗವೈಕಲ್ಯದಿಂದ ಬಳಲುತ್ತಿದ್ದು, ಕುಟುಂಬವು ಚಿಕಿತ್ಸೆಗಾಗಿ ಪರದಾಡುತ್ತಿದೆ. ಇದನ್ನು ಮನಗಂಡು ಸಹಾಯಹಸ್ತ ಲೋಕಸೇವಾ ಟ್ರಸ್ಟ್ ವತಿಯಿಂದ ನೊಂದವರ ಬಾಳಿಗೆ ನೆರವಿನ ಹಸ್ತವಾಗಿ 10111 ರೂಪಾಯಿ ಚೆಕ್ಕ್ ಅನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟಿನ ಗೌರವಾಧ್ಯಕ್ಷ ಉದಯ ಅರ್ಜುನಗೋಳಿ, ಅಧ್ಯಕ್ಷ ಡಿ. ಎಸ್. ಒಡ್ಯ, ಕಾರ್ಯದರ್ಶಿ ಮನೋಹರ್ ಪಲಯಮಜಲು ಉಪಸ್ಥಿತರಿದ್ದರು.

ಸಹಾಯಹಸ್ತ ಲೋಕಸೇವಾ ಟ್ರಸ್ಟ್ ಕರ್ನಾಟಕ |  ನೊಂದವರ ಬಾಳಿಗೆ  ನೆರವಿನ ಹಸ್ತ Read More »

error: Content is protected !!
Scroll to Top