Uncategorized

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಸ್ವಾಗತಾರ್ಹ: ಗೋಪಾಲಕೃಷ್ಣ ಬೇಳೂರು

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಹಬ್ಬವನ್ನು ಬಾನು ಮುಷ್ತಾಕ್ ಉದ್ಘಾಟನೆ ಮಾಡುವುದನ್ನು ನಾನು ಸ್ವಾಗತಿಸುತ್ತೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ದಸರಾ ಹಬ್ಬ ರಾಷ್ಟ್ರೀಯ ಹಬ್ಬ. ಇದನ್ನು ಜಾತ್ಯಾತೀತವಾಗಿ ಆಚರಣೆ ಮಾಡಲಾಗುತ್ತದೆ. ಆದ್ದರಿಂದ ಬಾನು ಮುಷ್ತಾಕ್ ದಸರಾ ಹಬ್ಬ ಉದ್ಘಾಟನೆ ಮಾಡುವ ಸಂಗತಿ ನನಗೆ ಸಂತಸ ತಂದಿದೆ. ಮಹಾರಾಜರು ಸಹ ಇದನ್ನು ಒಪ್ಪಿದ್ದಾರೆ ಎಂದು ಹೇಳಿದ್ದಾರೆ. ಜಾತಿ ಧರ್ಮ ಮರೆತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಬೆರೆಯಬೇಕು. ಇಂತಹ ವಿಷಯಗಳಲ್ಲಿ ಗೊಂದಲ ಸೃಷ್ಟಿ ಮಾಡುವುದನ್ನು ಬಿಜೆಪಿಯವರು […]

ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಸ್ವಾಗತಾರ್ಹ: ಗೋಪಾಲಕೃಷ್ಣ ಬೇಳೂರು Read More »

ಪಾಪಿ ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಅತ್ಯಾಚಾರ: ದೂರು ದಾಖಲಿಸಿದ ತಾಯಿ

ವಿಜಯಪುರ: ಪಾಪಿ ತಂದೆಯಿಂದಲೇ ಐದು ವರ್ಷದ ಮಗುವೊಂದು ಅತ್ಯಾಚಾರಕ್ಕೆ ಒಳಗಾದ ಘಟನೆ ವಿಜಯಪುರ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾಳೆ. ಸುಮಾರು 2 ವರ್ಷಗಳಿಂದ ಇಂಡಿ ತಾಲೂಕಿನ ದಂಪತಿ ತಮ್ಮಿಬ್ಬರು ಹೆಣ್ಣು ಮಕ್ಕಳ ಜೊತೆ ವಿಜಯಪುರದಲ್ಲಿ ವಾಸವಿದ್ದಾರೆ. ಪತಿ, ಪತ್ನಿ ಇಬ್ಬರೂ ಕೂಲಿ ಕೆಲಸ ಮಾಡುತ್ತಿದ್ದು, ಆಗಾಗ ಇವರಿಬ್ಬರ ಮಧ್ಯೆ ವೈಮನಸ್ಸು ಮೂಡುತ್ತಿತ್ತು. ಆ.30ರಂದು ರಾತ್ರಿ 8 ಗಂಟೆ ಸುಮಾರಿಗೆ ಇಬ್ಬರು ಮಕ್ಕಳು ಗಣಪತಿ ನೋಡಲು ಹೋಗಿದ್ದರು. ಮರಳಿ ಬರಬೇಕಾದರೆ

ಪಾಪಿ ತಂದೆಯಿಂದಲೇ 5 ವರ್ಷದ ಮಗಳ ಮೇಲೆ ಅತ್ಯಾಚಾರ: ದೂರು ದಾಖಲಿಸಿದ ತಾಯಿ Read More »

SIT ತನಿಖೆಯಿಂದ ‌ಸತ್ಯ ಬಯಲಾಗುತ್ತಿದೆ: ಡಾ. ಡಿ. ವೀರೇಂದ್ರ ಹೆಗ್ಗಡೆ

ಉಜಿರೆ: ಸತ್ಯದ ಸತ್ವ ಪರೀಕ್ಷೆಯ ಕಾಲ ಇದಾಗಿದ್ದು, ಹಲವಾರು ನ್ಯಾಯಯುತವಾದ ಸಂಗತಿಗಳು SIT ತನಿಖೆಯಿಂದ ಹೊರ ಬರುತ್ತಿವೆ. ಸತ್ಯದ ಸಾಕ್ಷಾತ್ಕಾರ ಆಗುತ್ತಿರುವುದು ಸಂತಸದ ವಿಷಯ ಎಂದು ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಜೈನ ಸಮುದಾಯದವರು ಬೆಳ್ತಂಗಡಿ ತಾಲ್ಲೂಕು ಜೈನಸಮಾಜದ ಆಶ್ರಯದಲ್ಲಿ ಧರ್ಮಸ್ಥಳಕ್ಕೆ ನಡೆದ ವಾಹನ ಜಾಥಾವನ್ನು ಉದ್ದೇಶಿಸಿ ಅವರು ಮಾತನಾಡಿದ್ದಾರೆ. ಧರ್ಮಸ್ಥಳದಲ್ಲಿ ಹುಟ್ಟಿದ ನಮ್ಮ ಕುಟುಂಬಸ್ಥರು ಭಾಗ್ಯವಂತರು. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ, ಚಂದ್ರ ನಾಥ ಸ್ವಾಮಿ, ಧರ್ಮದೇವತೆಗಳ

SIT ತನಿಖೆಯಿಂದ ‌ಸತ್ಯ ಬಯಲಾಗುತ್ತಿದೆ: ಡಾ. ಡಿ. ವೀರೇಂದ್ರ ಹೆಗ್ಗಡೆ Read More »

ಭಯೋತ್ಪಾದನೆ ವಿರುದ್ಧ SCO ಸದಸ್ಯರ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು

ಟಿಯಾಂಜಿನ್: ಪ್ರಧಾನಿ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ‌ ಸಂಸ್ಥೆ ಸದಸ್ಯರ ಅಧಿವೇಶನದಲ್ಲಿ ಭಯೋತ್ಪಾದನೆಯ ವಿರುದ್ಧ ತಮ್ಮ ಬಲವಾದ ಸಂದೇಶವನ್ನು ಸಾರಿದ್ದಾರೆ. ಉಗ್ರವಾದವನ್ನು ಇಡೀ ಮಾನವೀಯತೆಗೆ ಸವಾಲು ಎಂದು ಅವರು ಹೇಳಿದ್ದು, ಈ ಅಪಾಯದಿಂದ ಯಾವುದೇ ದೇಶ ಸುರಕ್ಷಿತವಾಗಿದೆ ಎಂದು ತೀರ್ಮಾನಿಸಲು ಅಸಾಧ್ಯ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ನಾವೆಲ್ಲರೂ ಸರ್ವಾನುಮತದಿಂದ ಭಯೋತ್ಪಾದನೆಯ ಬಗ್ಗೆ ದ್ವಂದ್ವ ಮಾನದಂಡ ಸ್ವೀಕಾರಾರ್ಹ ಅಲ್ಲ ಎಂದು ಹೇಳಬೇಕಾಗಿದೆ. ಪ್ರತ್ಯೇಕವಾದ, ಉಗ್ರ ವಾದ, ಉಗ್ರರಿಗೆ ಹಣಕಾಸು ಬೆಂಬಲ ನೀಡುವುದರ ವಿರುದ್ಧ ಒಗ್ಗಟ್ಟಾಗಿ SCO ರಾಷ್ಟ್ರಗಳು

ಭಯೋತ್ಪಾದನೆ ವಿರುದ್ಧ SCO ಸದಸ್ಯರ ಅಧಿವೇಶನದಲ್ಲಿ ಪ್ರಧಾನಿ ಮೋದಿ ಮಾತು Read More »

ಗ್ಯಾಸ್‌ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ

ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 51.50 ರೂ. ಇಳಿಕೆ ಮಾಡಿವೆ. ಇದರಿಂದ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಆಹಾರೋದ್ಯಮಗಳಿಗೆ ತುಸು ಅನುಕೂಲವಾಗಿದೆ. ಪರಿಷ್ಕೃತ ದರಗಳು ಇಂದಿನಿಂದಲೇ (ಸೆಪ್ಟೆಂಬರ್ 1) ಜಾರಿಗೆ ಬಂದಿವೆ. ಪರಿಷ್ಕೃತ ಬೆಲೆಯ ಪ್ರಕಾರ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಚಿಲ್ಲರೆ ಮಾರಾಟ ಬೆಲೆ ಈಗ 1,580 ರೂ. ಆಗಿದ್ದು, ಪ್ರತಿ ಸಿಲಿಂಡರ್‌ಗೆ 51.50 ರೂ.ಗಳ ಕಡಿತ ಆಗಿದೆ. ಜಾಗತಿಕ ಇಂಧನ ಬೆಲೆ ಮತ್ತು

ಗ್ಯಾಸ್‌ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ Read More »

ಬಾನು ಮುಷ್ತಾಕ್ ತಮ್ಮ ಹಿಂದಿನ ಹೇಳಿಕೆಗಳಿಗೆ ‌ಸ್ಪಷ್ಚನೆ ನೀಡಲಿ: ಸಂಸದ ಯದುವೀರ್

ಮೈಸೂರು: ಕನ್ನಡಾಂಬೆಯ ಬಗ್ಗೆ ಬಾನು ಮುಷ್ತಾಕ್ ಈ ಹಿಂದೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಲಿ. ಇಲ್ಲವಾದರೆ ಅವರಿಂದ ದಸರಾ ಉದ್ಘಾಟನೆಯಾಗುವುದಕ್ಕೆ ನನ್ನ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದಾಗ ನಾನು ಸ್ವಾಗತಿಸಿದ್ದೆ. ಆದರೆ ನಾನು ಅವರ ಹಳೆಯ ಭಾಷಣವನ್ನು ಆ ಬಳಿಕ ಕೇಳಿದ್ದು, ಅದಕ್ಕೆ ಸ್ಪಷ್ಚೀಕರಣ ನೀಡಲಿ. ಇಲ್ಲವಾದರೆ ಅವರು ನಾಡಹಬ್ಬವನ್ನು ಉದ್ಘಾಟನೆ ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದು ತಿಳಿಸಿದ್ದಾರೆ.

ಬಾನು ಮುಷ್ತಾಕ್ ತಮ್ಮ ಹಿಂದಿನ ಹೇಳಿಕೆಗಳಿಗೆ ‌ಸ್ಪಷ್ಚನೆ ನೀಡಲಿ: ಸಂಸದ ಯದುವೀರ್ Read More »

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ

ಬೆಂಗಳೂರು: ಸಿ ಎಂ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಎಡವಟ್ಟುಗಳು ನಡೆಯುತ್ತಲೇ ಇರುವುದಾಗಿ ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಮೈಸೂರು ದಸರಾ, ಧರ್ಮಸ್ಥಳ ಪ್ರಕರಣ ಮೊದಲಾದ ಗೊಂದಲಗಳನ್ನು ಗಮನದಲ್ಲಿಟ್ಚುಕೊಂಡು ಅವರು ಈ ಮಾತುಗಳನ್ನು ಹೇಳಿದ್ದಾರೆ. ಮಾತನಾಡುವುದು ಸುಲಭ. ಆದರೆ ಅದನ್ನು ಜೀರ್ಣ ಮಾಡಿಕೊಳ್ಳುವುದು ಕಷ್ಟ. ಸಿದ್ದರಾಮಯ್ಯ ಲೋಕಸಭೆಗೆ ಸ್ಪರ್ಧಿಸಿದಾಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಆಡಳಿತದಲ್ಲಿತ್ತು ಎನ್ನುವುದು ಅವರು ತಿಳಿದಿದ್ದರೆ, ಅವರು ಯಾರ ಮೇಲೆ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ. ಹೇಳಿಕೆ ನೀಡುವಾಗ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿಂದಲೂ ಒಂದಿಲ್ಲೊಂದು ಎಡವಟ್ಟು ನಡೆಯುತ್ತಲೇ ಇದೆ: ವಿ. ಸೋಮಣ್ಣ Read More »

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ

ಬೆಂಗಳೂರು: ಕೆಲ ಸಮಯದ ಹಿಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಚವರ ಕುಟುಂಬ ವರ್ಗಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು RCB ಘೋಷಣೆ ಮಾಡಿದೆ. ಈ ಘೋಷಣೆಯನ್ನು ಫ್ರಾಂಚೈಸಿಯ ಅಧಿಕೃತ ಖಾತೆಗಳಾದ ಎಕ್ಸ್ ಮತ್ತು ಇನ್ಸ್ಟಾಗ್ರಾಂ ಮೂಲಕ ಹೊಸದಾಗಿ ಆರಂಭ ಮಾಡಲಾದ RCB ಕೋರ್ಸ್ ಅಡಿಯಲ್ಲಿ ಮಾಡಲಾಗಿದೆ. ಐಪಿಎಲ್‌ನಲ್ಲಿ ಚಾಂಪಿಯನ್ಸ್ ಆದ ಸಂಭ್ರಮವನ್ನು ಆಚರಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆಯಲಾಗಿತ್ತು. ಈ ಆಚರಣೆಗೆ ಲಕ್ಷಾಂತರ ಅಭಿಮಾನಿಗಳು ಆಗಮಿಸಿದ್ದು, ಈ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿತ್ತು.

RCB ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ತಂಡ Read More »

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಆಂತರಿಕ ಯೋಜನೆ ಧರ್ಮಸ್ಥಳದ ಆಸ್ತಿಯನ್ನು ಹೊಡೆಯುವುದಾಗಿದೆ ಎಂದು ಡಿಸಿಎಂ ‌ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಧರ್ಮಸ್ಥಳ ಆಸ್ತಿಯನ್ನು ಕಬಳಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ ಎನ್ನುವ ವಿಪಕ್ಷ ನಾಯಕ R. ಅಶೋಕ್ ಅವರಿಗೆ ಮತು ಭ್ರಮಣೆಯಾಗಿದೆ. ತಾನೇನು ಮಾತನಾಡುತ್ತಿದ್ದೇನೆ ಎನ್ನುವ ಅರಿವು ಅವರಿಗೆ ಇಲ್ಲ. ಜಾತಿ ಮತ್ತು ಭಾವನೆಗಳ ಜೊತೆಗೆಯೇ ಬಿಜೆಪಿಯವರು ರಾಜಕೀಯ ಮಾಡಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. RSS ಗೀತೆ ಹಾಡಿ ಡಿಕೆಶಿ ನಾಟಕ ಮಾಡುತ್ತಿದ್ದಾರೆ

ಧರ್ಮಸ್ಥಳ ವಿಷಯದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಡಿ.ಕೆ. ಶಿವಕುಮಾರ್ Read More »

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್

ಬೆಂಗಳೂರು: ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ಬಗ್ಗೆ ವಿಪಕ್ಷ ನಾಯಕ R. ಅಶೋಕ್ ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಾನು ಅವರು ಚಾಮುಂಡೇಶ್ವರಿಯನ್ನು ಆನೆಯ ಮೇಲೆ ಕೂರಿಸುವುದಕ್ಕೂ ಕ್ಯಾತೆ ತೆಗೆಯುವುದಿಲ್ಲ ಎಂದು ಏನು ಗ್ಯಾರಂಟಿ? ನವರಾತ್ರಿ ಮತ್ತು ಮಷ್ತಾಕ್‌ಗೆ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದಾರೆ. ಬಾನು ಅವರ ಕೈಯಲ್ಲಿ ದಸರಾ ಉದ್ಘಾಟಿಸಬೇಕು ಎನ್ನುವ ಉಪಾಯ ಯಾರದ್ದು? ಮುಖ್ಯಮಂತ್ರಿಗಳದ್ದೋ, ಸಂಪುಟ ಸಹೋದ್ಯೋಗಿಗಳದ್ದೋ?, ಅಲ್ಲ ಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಮಸಿ ಬಳಿಯಲು ಹೊರಟ ನಗರ

ವಿವಾದ ಸೃಷ್ಟಿಸುವುದಕ್ಕಾಗಿಯೇ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ: R. ಅಶೋಕ್ Read More »

error: Content is protected !!
Scroll to Top