ಪ್ರಿಯತಮನ ಜೊತೆ ಸೇರಿ ಅತ್ತೆಯನ್ನೇ ಕೊಂದ ಖತರ್ನಾಕ್ ಸೊಸೆ ಪೊಲೀಸ್ ವಶಕ್ಕೆ
ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ತೆಯನ್ನು ಸೊಸೆಯೊಬ್ಬಳು ಹತ್ಯೆ ಮಾಡಿದ ಘಟನೆ ಅಜ್ಜಂಪುರದ ತಡಗ ಗ್ರಾಮದಲ್ಲಿ ನಡೆದಿದೆ. ಪ್ರಿಯಕರ ಆಂಜನೇಯ ಎಂಬಾತನ ಜೊತೆ ಸೇರಿ ಸೊಸೆ ಅಶ್ವಿನಿ ಎಂಬಾಕೆ ಈ ಕುಕೃತ್ಯ ಎಸಗಿದ್ದು, ಬಳಿಕ ಚಿನ್ನಾಭರಣ ಕಳವು ಮಾಡಿದ್ದು, ಸದ್ಯ ಆರೋಪಿಗಳು ಪೊಲೀಸರ ವಶದಲ್ಲಿದ್ದಾರೆ. ದೋಚಿದ್ದ ಚಿನ್ನಾಭರಣವನ್ನು ಪೊಲೀಸರು ಸುಪರ್ದಿಗೆ ತೆಗೆದುಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ಅಶ್ವಿನಿಯ ಅತ್ತೆ ದೇವೀರಮ್ಮ ಮೃತಪಟ್ಟಿದ್ದು, ಇದನ್ನು ಸಹಜ ಮರಣ ಎಂದು ಭಾವಿಸಿ ಕುಟುಂಬಸ್ಥರು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ […]
ಪ್ರಿಯತಮನ ಜೊತೆ ಸೇರಿ ಅತ್ತೆಯನ್ನೇ ಕೊಂದ ಖತರ್ನಾಕ್ ಸೊಸೆ ಪೊಲೀಸ್ ವಶಕ್ಕೆ Read More »










