ಅಪಘಾತ

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು

ಗದಗ: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸಾವಿಗೀಡಾಗಿ, ಓರ್ವ ಗಾಯಗೊಂಡ ದುರ್ಘಟನೆ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ. ರೋಣದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಶನಿವಾರ ಸಂಜೆ ಮಹಾರಥೋತ್ಸವ ನಡೆಯಿತು. ಈ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯವಾಗಿದೆ. ಮೃತ ಭಕ್ತರು ರೋಣ ಮೂಲದ ನಿವಾಸಿಗಳು ಎನ್ನಲಾಗುತ್ತಿದೆ. ಮಲ್ಲಪ್ಪ ಲಿಂಗನ ಗೌಡ್ರ(55) ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೋರ್ವನ ಹೆಸರು ತಿಳಿದು ಬಂದಿಲ್ಲ. ಮುಖದ ಮೇಲೆ […]

ರೋಣದ ವೀರಭದ್ರೇಶ್ವರ ಜಾತ್ರೆ : ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೆ ಮೃತ್ಯು Read More »

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮೇ ಒಂದರಂದು ರಾತ್ರಿ  ನಡೆದ ಗೋ ಕಳ್ಳತನವಾದ ಬಗ್ಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ವತಿಯಿಂದ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು. ದೇವಸ್ಥಾನದ ವಠಾರದಿಂದ ಎರಡು ಗೋ ಕಳ್ಳತನವಾಗಿದ್ದು ಈ ಕುರಿತು ತನಿಖೆ ನಡೆಸಿ ಗೋಕಳ್ಳರನ್ನು ಬಂಧಿಸುವಂತೆ ದೂರು ನೀಡಲಾಯಿತು. ಈ ಸಂದರ್ಭ ಬಜರಂಗದಳ ನಗರ ಪ್ರಖಂಡ ಸಂಯೋಜಕ ಜಯಂತ್ ಕುಂಜೂರುಪಂಜ , ಸಹ ಸಂಯೋಜಕ ಪ್ರವೀಣ್ ಕಲ್ಲೇಗ, ಗ್ರಾಮಾಂತರ ಸಂಯೋಜಕ ವಿಶಾಖ್ ಸಸಿಹಿತ್ಲು, ಹರ್ಷಿತ್ ಬಲ್ನಾಡ್,

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಿಂದ ಗೋಕಳ್ಳತನ | ತನಿಖೆ ನಡೆಸಿ ಗೋ ಕಳ್ಳರನ್ನು ಬಂಧಿಸುವಂತೆ ನಗರ ಠಾಣೆಗೆ ದೂರು Read More »

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ

ಪುತ್ತೂರು: ತಾಲೂಕು ಸರ್ವೆ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಇಂದು ಅಪರಾಹ್ನ ಸುಮಾರು 12.30 ಕ್ಕೆ ಸಂಭವಿಸಿದೆ. ಎರಡೂ ಕಾರುಗಳಲ್ಲಿ ಇದ್ದ ಪ್ರಯಾಣಿಕರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುತ್ತೂರು ಕಡೆಗೆ ವಸಂತ ಎಂಬವರು ಚಲಾಯಿಸುತ್ತಿದ್ದ ಟಾಟಾ ಪಂಚ್ ಕಾರು ಹಾಗೂ ಸವಣೂರು ಕಡೆಗೆ ಚಲಾಯಿಸುತ್ತಿದ್ದ ಚಿದಾನಂದ ಎಂಬವರ ಮಾರುತಿ ಸಿಲಿರಿಯೊ ಕಾರುಗಳು ಡಿಕ್ಕಿಯಾಗಿವೆ. ಸರ್ವೆ ಬಳಿಯ ಅಪಾಯಕಾರಿ ತಿರುವಿನಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸಿತ್ತಿರುವುದು ವಿಷಾದನೀಯವಾಗಿದೆ. ಈ ಕುರಿತು ಸಂಬಂಧಿಸಿದ ಇಲಾಖೆಯವರು ಸೂಕ್ತ ಎಚ್ಚರಿಕೆಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಪ್ರಯಾಣಿಕರಿಗೆ ಗಾಯ Read More »

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು !

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ(24) ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ. ಬಸ್ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು ಸವಾರ ಮೋಕ್ಷಿತ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುರುಷರಕಟ್ಟೆ: ಬೈಕ್- ಬಸ್ ಅಪಘಾತ |ಬೈಕ್ ಸವಾರ ಮೋಕ್ಷಿತ್ ಗೌಡ ಮೃತ್ಯು ! Read More »

ಬೈಕ್- ಬಸ್ ಅಪಘಾತ : ಬೈಕ್ ಸವಾರ ಮೃತ್ಯು !

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಸ್ತೆಯ ಪುರುಷರಕಟ್ಟೆ ಎಂಬಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೇ. 15ರಂದು ಬೆಳಿಗ್ಗೆ ನಡೆದಿದೆ. ಪುರುಷರಕಟ್ಟೆ ಯಲ್ಲಿರುವ ಬಿಂದು ಪ್ಯಾಕ್ಟರಿಯಲ್ಲಿ ಸಿಪಾನ್ ಮೆಷಿನ್ ಆಪರೇಟರ್ ಆಗಿ ಕೆಲಸ ನಿರ್ವಹಿಸುವ ವಿಟ್ಲ ಕುಂಡಡ್ಕ ನಿವಾಸಿ ಮೋಕ್ಷಿತ್ ಗೌಡ ಎನ್ನುವವರು ಅಪಘಾತಕ್ಕೆ ಬಲಿಯಾದ ಯುವಕ. ಇವರು ಪುರುಷರಕಟ್ಟೆಯಲ್ಲಿ ರೂಮ್ ನಲ್ಲಿ ಉಳಿದುಕೊಂಡಿದ್ದು, ಸರ್ವಿಸ್ ಗೆ ಇಟ್ಟ ಬೈಕ್ ಅನ್ನು ವಾಪಾಸ್ ತರುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಬಸ್ ಮತ್ತು

ಬೈಕ್- ಬಸ್ ಅಪಘಾತ : ಬೈಕ್ ಸವಾರ ಮೃತ್ಯು ! Read More »

ಪಿಕಪ್-ಕಾರು ಡಿಕ್ಕಿ : ಕಾರಿನಲ್ಲಿದ್ದ ಮಗುವಿಗೆ ಗಾಯ

ಸಂಪಾಜೆ: ಕಾರು ಹಾಗೂ ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಇದೀಗ ಸಂಪಾಜೆ ಮಸೀದಿ ಸಮೀಪ ಅರೆಕಲ್ಲು ರೋಡಿಗೆ ತಿರುವಿನಲ್ಲಿ ಸಂಭವಿಸಿದೆ. ಕಾರು ಮಡಿಕೇರಿ ಕಡೆಯಿಂದ ಬರುತ್ತಿದ್ದು ಎನ್ನಲಾಗಿದ್ದು, ಕಾರಿನಲ್ಲಿದ್ದ ಮಗುವಿಗೆ ಅಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ. ನಿನ್ನೆ ಇದೇ ಜಾಗದಲ್ಲಿ ಮೂರು ಹಸುವಿಗೆ ವಾಹನವೊಂದು ಡಿಕ್ಕಿ ಹೊಡೆದು ಒಂದು ಹಸು ಮೃಪಟ್ಟಿತ್ತು. ಈ ಹಿಂದೆಯೂ ಕೂಡ ಹಲವು ಅಪಘಾತ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪಿಕಪ್-ಕಾರು ಡಿಕ್ಕಿ : ಕಾರಿನಲ್ಲಿದ್ದ ಮಗುವಿಗೆ ಗಾಯ Read More »

ರಸ್ತೆಗೆ ಅಡ್ಡ ಬಂದ ಆನೆ: ಬೊಲೇರೊ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ

ಬೆಳ್ತಂಗಡಿ: ಒಂಟಿ ಸಲಗವೊಂದು  ರಸ್ತೆ ಮಧ್ಯೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ನಡೆದಿದೆ. ಒಂಟಿ ಸಲಗವೊಂದು ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ತಿರುಗಾಡುತ್ತಿತ್ತು, ನಿನ್ನೆ ಚಾರ್ಮಾಡಿ ಘಾಟ್ ಒಂದನೇ ತಿರುವಿನಲ್ಲಿ ಒಂಟಿ ಸಲಗ ಮತ್ತೆ ಪ್ರತ್ಯಕ್ಷವಾಗಿದೆ. ಬೊಲೇರೊ ವಾಹನಕ್ಕೆ ಒಂಟಿ ಸಲಗ ಅಡ್ಡ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ. ಚಿಕ್ಕಮಗಳೂರಿನಿಂದ ಮಂಗಳೂರು

ರಸ್ತೆಗೆ ಅಡ್ಡ ಬಂದ ಆನೆ: ಬೊಲೇರೊ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ Read More »

ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ

ಪುತ್ತೂರು: ಯುವಕನೋರ್ವ ನಿಲ್ಲಿಸಿದ್ದ ಓಮ್ನಿ ಕಾರೊಂದನ್ನು ಚಲಾಯಿಸಿಕೊಂಡು ಬಂದು ರಸ್ತೆ ಮಧ್ಯೆ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಸಂಪ್ಯದಲ್ಲಿ ನಡೆದಿದೆ. ಕುಂಬ್ರ ಸೇತುವೆಯ ಬಳಿ ವಾಹನ ಚಾಲಕರು ಆತನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆಯೂ ನಡೆಯಿತು.. ಬುದ್ದಿಮಾಂದ್ಯ ಯುವಕ ಕೈಯ್ಯಲ್ಲಿ ಕೋಲೊಂದನ್ನು ಹಿಡಿದು ಮಧ್ಯಾಹ್ನದ ವೇಳೆ ಸಂಪ್ಯದಲ್ಲಿ ರಸ್ತೆ ಬದಿಯಲ್ಲಿ ಸುತ್ತಾಡುತ್ತಿದ್ದ. ಸಂಜೆ ವೇಳೆ ಈತ ಯಾರೋ ರಸ್ತೆ ಬದಿ ನಿಲ್ಲಿಸಿದ್ದ ಕಾರನ್ನು ಚಲಾಯಿಸಿಕೊಂಡು ಬಂದಿದ್ದಾನೆ. ಅಡ್ಡಾದಿಡ್ಡಿ ವಾಹನ ಚಲಾಯಿಸಿದ ಪರಿಣಾಮ ನಾಲ್ಕೈದು ಕಾರುಗಳಿಗೆ ಡಿಕ್ಕಿ ಹೊಡೆದಿದ್ದಾನೆ.

ರಸ್ತೆ ಬದಿ ನಿಲ್ಲಿಸಿದ್ದ ಕಾರು ಚಲಾಯಿಸಿದ ಬುದ್ಧಿಮಾಂದ್ಯ ಯುವಕ : ನಾಲ್ಕೈದು ವಾಹನಗಳಿಗೆ ಡಿಕ್ಕಿ Read More »

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ(60) ಮೃತಪಟ್ಟವರು. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ

ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

ಕಡಬ: ಶೆಡ್ ಗೆ ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಇಂದು ಸಂಜೆ ನಡೆದಿದೆ. ಉತ್ತರಪ್ರದೇಶ ಚೈನ್ ಪುರ್ ಮೂಲದ ಶ್ರೀಕಿಸುನ್ ಮೃತಪಟ್ಟವರು. ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಘಟನೆ ಸಂಭವಿಸಿದ್ದು, ಮರಳು ತೆಗೆಯುವ ಉತ್ತರ ಪ್ರದೇಶದ ಕಾರ್ಮಿಕರು ಎನ್ನಲಾಗಿದೆ. ಗಾಯಗೊಂಡವರು ಕುರಿತು ಮಾಹಿತಿ ತಿಳಿದು ಬಂದಿಲ್ಲ.

ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ Read More »

error: Content is protected !!
Scroll to Top