ಅಪಘಾತ

ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು

ಸವಣೂರು: ತೆಂಗಿನಕಾಯಿ ಕೀಳುವ ಸಂದರ್ಭ ತೆಂಗಿನ ಮರದಿಂದ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿಯಲ್ಲಿ ನಡೆದಿದೆ. ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದ ಸುಚಿತ್ರ (30) ಮೃತಪಟ್ಟವರು. ಸುಚಿತ್ರ ಅವರು ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದು, ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದರು. ಸುಚಿತ್ರ ರವರ ಈ ಕಾಯಕಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಹಲವಾರು ಸಂಘ-ಸಂಸ್ಥೆಗಳು ಪ್ರಶಸ್ತಿ ನೀಡಿ ಗೌರವಿಸಿತ್ತು. ಮೃತರು ಪತಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ತೆಂಗಿನ ಮರದಿಂದ ಬಿದ್ದು ಮಹಿಳೆ ಮೃತ್ಯು Read More »

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007,

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಬೈಕ್-ಆಟೋ ಡಿಕ್ಕಿ : ಇಬ್ಬರಿಗೆ ಗಾಯ

ಪುತ್ತೂರು: ಬೈಕ್ ಹಾಗೂ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸಹಸವಾರ, ಆಟೋ ಚಾಲಕ ಇಬ್ಬರಿಗೂ ಗಾಯಗೊಂಡ ಘಟನೆ ನೆಹರುನಗರದ ಕಲ್ಲೇಗ ಸಮೀಪ ನಡೆದಿದೆ. ಬಂಟ್ವಾಳ ಬುಡೋಲಿ ನಿವಾಸಿ ಶ್ರವಣ್ ಕೆ ಪುತ್ತೂರು ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಎದುರಿನಿಂದ ಕಾರೊಂದನ್ನು ಹಿಂದಿಕ್ಕಿ ಬರುತ್ತಿದ್ದ ಆಟೋರಿಕ್ಷಾ ಡಿಕ್ಕಿಯಾಗಿದೆ. ಬೈಕ್ ಸಹಸವಾರ ಅವಿಷ್ ಹಾಗೂ ಆಟೋ ಚಾಲಕ ದಿನೇಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್-ಆಟೋ ಡಿಕ್ಕಿ : ಇಬ್ಬರಿಗೆ ಗಾಯ Read More »

ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯ ಗೇಟ್ ಬಳಿ ಇರುವ ಬೃಹತ್ ಮರವೊಂದು ಧರೆಗುರುಳಿದ ಘಟನೆ ಆ.1ರಂದು ನಡೆದಿದೆ. ಮರ ಬಿದ್ದ ಪರಿಣಾಮ ಸರಕಾರಿ ಆಸ್ಪತ್ರೆಯ ಆಂಬುಲೆನ್ಸ್ ಚಾಲಕರ ಕೊಠಡಿಗೆ ಹಾನಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಮರದ ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಸರಕಾರಿ ಆಸ್ಪತ್ರೆ ಆಂಬುಲೆನ್ಸ್ ಚಾಲಕರ ಕೊಠಡಿ ಮೇಲೆ ಬಿದ್ದ ಮರ Read More »

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಗಳೂರು: ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಯೊಬ್ಬ ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಜು.31 ರಂದು  ಮಂಗಳೂರಿನಲ್ಲಿ ನಡೆದಿದೆ. ಅಡ್ಯಾರು ನಿವಾಸಿ, ಪ್ರಸ್ತುತ ಕದ್ರಿ ಶಿವಭಾಗ್‌ನಲ್ಲಿ ವಾಸವಾಗಿದ್ದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಸಮಯ್‌ (21) ಮೃತಪಟ್ಟವರು. ಸಮಯ್‌ ಅವರು ಫ್ಲ್ಯಾಟ್‌ನ ಬಾಲ್ಕನಿಯಲ್ಲಿ ಬೆಳಗ್ಗಿನ ಸಮಯದಲ್ಲಿ ಓದುತ್ತಿದ್ದಾಗ ಅವರ ತಾಯಿ ಕಾರು ವಾಷ್‌ ಮಾಡಲು ನೆಲಮಹಡಿಗೆ ಹೋಗೋಣ ಎಂದು ಹೇಳಿ ಕೆಳಗೆ ಹೋಗಿದ್ದರು. ಅವರಿಗೆ ಸಹಾಯ ಮಾಡಲು ಬಕೆಟ್‌ ತೆಗೆದುಕೊಂಡು ಬರಲು

ಅಪಾರ್ಟ್ ಮೆಂಟ್ ನ ಮಹಡಿಯಿಂದ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿ ಮೃತ್ಯು Read More »

ದೆಹಲಿ ಸೇರಿದಂತೆ ಉತ್ತರಭಾರತ ಜಲಾವೃತ | ನೀರಿನಲ್ಲಿ ತೇಲುತ್ತಿರುವ 200 ಕ್ಕೂ ಅಧಿಕ ಕಾರುಗಳು

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತ ಮಳೆಯಿಂದ ಜಲಾವೃತವಾಗಿದ್ದು, ಪ್ರವಾಹದ ನೀರಿನಲ್ಲಿ 200 ಹೆಚ್ಚು ಕಾರುಗಳು ಮುಳುಗಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ ನಡೆದಿದ್ದು, ಹಿಂಡೋನ್ ನಲ್ಲಿ ನೀರಿನ ಮಟ್ಟ ಹೆಚ್ಚಾದ ಕಾರಣ ಸಮೀಪದ ಮನೆಯ ಜನರನ್ನು ಸ್ಥಳಾಂತರಿಸಲಾಗಿದೆ. ಪೀಡಿತ ಪ್ರದೇಶದಲ್ಲಿ ನೋಯ್ಡಾ ಸೆಕ್ಟರ್ 63 ರಲ್ಲಿ ಇಕೋಟೆಕ್  ಮತ್ತು ಚಿರ್ಜಾಸಿ ಸೇರಿವೆ. ಇಂದು ಮುಂಜಾನೆ ನೋಯ್ಡಾ ಮತ್ತು ದೆಹಲಿ ಪ್ರದೇಶದ ಇತರ ಭಾಗಗಳಲ್ಲಿ ಸಾಧಾರಣ

ದೆಹಲಿ ಸೇರಿದಂತೆ ಉತ್ತರಭಾರತ ಜಲಾವೃತ | ನೀರಿನಲ್ಲಿ ತೇಲುತ್ತಿರುವ 200 ಕ್ಕೂ ಅಧಿಕ ಕಾರುಗಳು Read More »

ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು

ನೆಲ್ಯಾಡಿ: ಬೈಕೊಂದು ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ನೆಲ್ಯಾಡಿ ಮೊರಂಕಳ ನಿವಾಸಿ ಬೈಕ್ ಸವಾರ ಇಕ್ಬಾಲ್ ಮೃತಪಟ್ಟ ಯುವಕ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಣ್ಣಂಪಾಡಿ ಬಳಿ ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ರಸ್ತೆ ಬದಿ ಕೆಟ್ಟು ನಿಂತಿದ್ದ ಪಾರ್ಸೆಲ್ ಲಾರಿಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಮೃತದೇಹವನ್ನು ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ ಎಂದು ತಿಳಿದು ಬಂದಿದೆ.

ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು Read More »

ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ

ವಿಟ್ಲ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೋಟ್ಟು ಎಂಬಲ್ಲಿ ನಡೆದಿದೆ. ಮುಂಬೈ ಮೂಲದ ಪ್ರಯಾಣಿಕರು ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಾರು ಹಾಗೂ ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದಾಗಿ

ಕಾರು-ಟಿಪ್ಪರ್ ಲಾರಿ ನಡುವೆ ಅಪಘಾತ | ನಾಲ್ವರಿಗೆ ಗಂಭೀರ ಗಾಯ Read More »

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು

ಪುತ್ತೂರು: ಪುತ್ತೂರು: ಕಟ್ಟಿಗೆಗಾಗಿ ಮನೆಯ ಪಕ್ಕದ ಗುಡ್ಡೆಗೆ ಹೋಗಿದ್ದ ವೇಳೆ ಹೆಜ್ಜೇನು(ಪಿಲಿಕುಡೊಲು)ಕಡಿದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಳಮೊಗ್ರು ಗ್ರಾಮದ ಕೈಕಾರ ನಿವಾಸಿ ಮಾಯಿಲ ಎಂಬವರ ಪುತ್ರ ಗುರುವ (55)  ಮೃತಪಟ್ಟವರು. ಅವರು ಜು.23ರಂದು ಮಧಾಹ್ನ ಕಟ್ಟಿಗೆಗೆಂದು ಮನೆ ಪಕ್ಕದ ಗುಡ್ಡೆಗೆ ಹೋದವರು ಅರ್ಧ ಗಂಟೆ ಬಿಟ್ಟು ಗುಡ್ಡೆಯಿಂದ ಓಡೋಡಿ ಬಂದಾಗ ಅವರ ಮುಖ, ಕುತ್ತಿಗೆ, ಮೈಯೆಲ್ಲಾಯಾವುದೋ ಊದಿಕೊಂಡಿರುವುದು ಕಂಡು ಬಂದಿತ್ತು. ಈ ಕುರಿತು ಅವರ ತಾಯಿ ವಿಚಾರಿಸಿದಾಗ ಹೆಚ್ಚೇನು

ಹೆಜ್ಜೇನು ಕಡಿದು ವ್ಯಕ್ತಿಯೋರ್ವರು ಮೃತ್ಯು Read More »

ಮುಡಿಪಿನಲ್ಲಿ ಬಸ್-ಕಾರು ಅಪಘಾತ

ಮುಡಿಪು : ಮುಡಿಪು ಜಂಕ್ಷನ್ ನಲ್ಲಿ ಸೋಮವಾರ ರಾತ್ರಿ  ಬಸ್‌ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. ಎನ್‌ ಎಸ್‌ ಟ್ರಾವೆಲ್ಸ್‌ ಎಂಬ ಬಸ್ಸು ಮಂಗಳೂರಿನಿಂದ ಬಿ ಸಿ ರೋಡಿನತ್ತ ಸಂಚರಿಸುತ್ತಿದ್ದಾಗ, ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭದಲ್ಲಿ ಭಾರತಿ ಶಾಲೆ ಕಡೆಯಿಂದ ಬಂದ ಝೆನ್‌ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಸೀದಾ ಬಸ್ಸಿನ ಮುಂಭಾಗಕ್ಕೆ ನುಗ್ಗಿದ್ದು, ಕಾರು ಚಾಲಕ ಪಾರಾಗಿದ್ದಾನೆ. ಮಂಗಳೂರು ದಕ್ಷಿಣ ಸಂಚಾರಿ

ಮುಡಿಪಿನಲ್ಲಿ ಬಸ್-ಕಾರು ಅಪಘಾತ Read More »

error: Content is protected !!
Scroll to Top