ಅಪಘಾತ

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆಯೋರ್ವಳು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೆಗಡೆ ಹೊಸಬಾಳೆ ಪತ್ನಿ ಶೋಭಾ ಎನ್ನಲಾಗಿದೆ. ಶೋಭಾ ಮನೆಯಲ್ಲಿ ಅಡಕೆ ಸುಲಿಯುವ ಕಾರ್ಯ ನಡೆಯುತ್ತಿತ್ತು. ಶೋಭಾ ಹೆಗಡೆ ಕೆಲಸಗಾರರನ್ನು ನೋಡಿಕೊಳ್ಳಲು ಹೋಗಿದ್ದರು. ಈ ವೇಳೆ ಚಾಲಿ ಸುಲಿಯುವ ಯಂತ್ರಕ್ಕೆ ಆಕಸ್ಮಿಕವಾಗಿ ಶೋಭಾ ಸೀರೆಯ ಸೆರಗು ಸಿಲುಕಿ ಪ್ರಾಣಬಿಟ್ಟಿದ್ದಾರೆ. ಕೆಲಸಗಾರರು ಅಲ್ಲಿಯೇ ಇದ್ದರೂ ಕ್ಷಣಾರ್ಧದಲ್ಲಿ ಘಟನೆ ಸಂಭವಿಸಿದೆ. ಯಂತ್ರ ಶೋಭಾರನ್ನು ಎತ್ತಿ ಬಿಸಾಡಿದ್ದು, ರಕ್ತಸ್ರಾವವಾಗಿ ಸಾವನಪ್ಪಿದ್ದಾರೆ.  ಕಳೆದ ಮೂರು […]

ಅಡಿಕೆ ಯಂತ್ರಕ್ಕೆ ಸೀರೆ ಸೆರಗು ಸಿಲುಕಿ  ಮಹಿಳೆ ಮೃತ್ಯು Read More »

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು

ಸುಳ್ಯ: ಲಾರಿ ಮತ್ತು ಬೈಕ್ ನಡುವೆ ತೀರ್ವ ಅಪಘಾತವಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಮಡಿಕೇರಿ ಸಮೀಪದ ಕಾಟಿಕೇರಿ ಸಮೀಪ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರ ಕಕ್ಕಬೆ ನಿವಾಸಿ ಶರತ್ (28) ಎಂದು ಪತ್ತೆಹಚ್ಚಲಾಗಿದೆ. ಕಾರನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಲಾರಿ ಅಡಿಗೆ ಬೈಕ್ ಸಮೇತ ಯುವಕ ಬಿದ್ದಿದ್ದಾನೆ ಎನ್ನಲಾಗಿದೆ. ಮಡಿಕೇರಿ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಹಾಗೂ ಎನ್ ಡಿ ಆರ್

ಲಾರಿ – ಬೈಕ್ ನಡುವೆ ಅಪಘಾತ | ಬೈಕ್‍ ಸವಾರ ಮೃತ್ಯು Read More »

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ

ಪುತ್ತೂರು: ಯುವಕನೋರ್ವ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಬಿದ್ದು, 15 ಗಂಟೆ ಬಳಿಕ ಸವಣೂರಿನಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮಾ 25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ರಾತ್ರಿ ವೇಳೆ ಯುವಕ ರೈಲಿನಿಂದ ಬೀಳುವುದನ್ನು ಸಹ ಪ್ರಯಾಣಿಕರು ಗಮನಿಸಿದ್ದು ನೆಟ್ಟಣ ತಲುಪಿದ ವೇಳೆ ರೈಲ್ವೆ ಮಾಸ್ಟ‌ರ್ ಗಮನಕ್ಕೆ ತಂದಿದ್ದರು. ಆದರೆ ಯುವಕ ಬಿದ್ದ ಜಾಗ ಯಾವುದು

ಮಂಗಳೂರು-ಬೆಂಗಳೂರು ರೈಲಿನಿಂದ ಕೆಳಗೆ ಬಿದ್ದ ವ್ಯಕ್ತಿ | ಸವಣೂರಿನಲ್ಲಿ ಪತ್ತೆ Read More »

ಕಾರು ಓವರ್ ಟೇಕ್‍ ಮಾಡುವ ಸಂದರ್ಭ ರಸ್ತೆಗೆ ಬಿದ್ದ ಬೈಕ್‍ : ಸವಾರ ಮೃತ್ಯು

ಬೆಳ್ತಂಗಡಿ: ಕಾರು ಓವರ್‍ ಟೇಕ್‍ ಮಾಡುವ ಸಂದರ್ಭ ಬೈಕೊಂದು ರಸ್ತೆಗೆ ಬಿದ್ದ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬೆಳ್ತಂಗಡಿ ಚರ್ಚ್‍ ರಸ್ತೆಯ ಕಲ್ಕಣಿ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ಕಲ್ಲಗುಡ್ಡೆ ನಿವಾಸಿ ಸಯ್ಯದ್ ಪಾಶ (42) ಅಪಘಾತದಿಂದ ಮೃತಪಟ್ಟವರು. ಸಯ್ಯದ್ ಪಾಶ ಅವರು ತಮ್ಮ ಬೈಕ್‌ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಕಲ್ಕಣಿ ಬಳಿಯಲ್ಲಿ ಕಾರನ್ನು ಓವ‌ರ್ ಟೇಕ್ ಮಾಡುವ ಯತ್ನದಲ್ಲಿ ಅಪಘಾತ ಸಂಭವಿಸಿತು. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಕಾರು ಓವರ್ ಟೇಕ್‍ ಮಾಡುವ ಸಂದರ್ಭ ರಸ್ತೆಗೆ ಬಿದ್ದ ಬೈಕ್‍ : ಸವಾರ ಮೃತ್ಯು Read More »

ಎರಡೂವರೆ ವರ್ಷದ ಮಗು ಮಲಗಿದಲ್ಲೇ ಮೃತ್ಯು

ಕಡಬ: ಮಲಗಿದ್ದ ಎರಡೂವರೆ ವರ್ಷದ ಮಗುವೊಂದು ಮೃತಪಟ್ಟ ಘಟನೆ ಕಡಬ ತಾಲೂಕಿನ ಕೊಣಾಜೆ ಗ್ರಾಮದ ಮಾಲ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಉತ್ತರ ಪ್ರದೇಶ ಮೂಲದ ರಾಜಾ ಸಿಂಗ್ ಮತ್ತು ದಿವ್ಯಾಂಶಿ ಸಿಂಗ್ ದಂಪತಿಯ ಪುತ್ರ ಎರಡೂವರೆ ವರ್ಷದ ರುದ್ರ ಪ್ರತಾಪ್ ಸಿಂಗ್ ಮೃತಪಟ್ಟ ಮಗು. ಈ ದಂಪತಿ ಕೊಣಾಜೆ ಮಾಲ ನಿವಾಸಿ ಲಿಂಡೋರಾಜ್ ಎಂಬವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗಳವಾರ ಮಧ್ಯಾಹ್ನ ಊಟ ಮಾಡಿ ಮಲಗಿದ್ದ ಮಗುವನ್ನು ಎಬ್ಬಿಸಲೆಂದು ನೋಡುವಾಗ ಏಳದೇ ಇದ್ದುದರಿಂದ ತಕ್ಷಣವೇ ಕಡಬದ ಖಾಸಗಿ

ಎರಡೂವರೆ ವರ್ಷದ ಮಗು ಮಲಗಿದಲ್ಲೇ ಮೃತ್ಯು Read More »

ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ  ಬೆಂಕಿ ಅವಘಡ

ಬಂಟ್ವಾಳ: ತಾಲೂಕಿನ ಮಾಣಿ ಪೆರಾಜೆಯಲ್ಲಿರುವ ಶ್ರೀರಾಮಚಂದ್ರಾಪುರ ಮಠದ ಗುಡ್ಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ಹಿನ್ನಲೆ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 1,000 ಕೋಕಂ ಸಸಿಗಳು ಸುಟ್ಟೋಗಿದೆ ಎನ್ನಲಾಗಿದೆ. ಸ್ಥಳೀಯರು ನೀರು ಸುರಿದು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಆದರೆ ಹೊತ್ತಿಕೊಂಡ ಬೆಂಕಿ ನಂದಿ ಹೋಗಲಿಲ್ಲ ಎನ್ನಲಾಗಿದೆ. ತೀವ್ರ ಶಾಖದಿಂದಾಗಿ ಬೆಂಕಿ ಬೆಟ್ಟದಾದ್ಯಂತ ಹರಡಿದೆ. ಬಳಿಕ  ಬಂಟ್ವಾಳ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಬೆಂಕಿಯಲ್ಲಿ ಸುಮಾರು 50 ಹಣ್ಣು ಬಿಡುವ

ಮಾಣಿ ಶ್ರೀರಾಮಚಂದ್ರಾಪುರ ಮಠದ ಗುಡ್ಡಕ್ಕೆ  ಬೆಂಕಿ ಅವಘಡ Read More »

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಶರಣು

ಸುಳ್ಯ : ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ನಡೆದಿದೆ . ಮೃತಪಟ್ಟ ಮಹಿಳೆಯನ್ನು ರೇವತಿ (51) ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುವುದು ತಿಳಿದು ಬಂದಿಲ್ಲ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಷ ಸೇವಿಸಿ ಮಹಿಳೆ ಆತ್ಮಹತ್ಯೆಗೆ ಶರಣು Read More »

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ತಗುಲಿದ ಬೆಂಕಿ

ಕಾಸರಗೋಡು: ಮನೆಯೊಂದಕ್ಕೆ ಬೆಂಕಿ ತಗುಲಿದ ಘಟನೆ ಚೆಂಗಳದಲ್ಲಿ ನಡೆದಿದೆ. ಚೆಂಗಳದ ಶಾಫಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು ಶಾರ್ಟ್ ಸರ್ಕ್ಯೂಟ್ ಘಟನೆಗೆ ಕಾರಣ ಎನ್ನಲಾಗಿದೆ. ಬೆಂಕಿ ತಗುಲಿದ ಹಿನ್ನಲೆ ಮನೆ ಅಪಾರ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಅಡುಗೆ ಕೋಣೆ ಸಂಪೂರ್ಣ ಅಗ್ನಿಗಾಹುತಿಯಾಗಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ. ಕೂಡಲೇ ಕಾಸರಗೋಡಿನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ತಗುಲಿದ ಬೆಂಕಿ Read More »

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ

ಮಂಗಳೂರು:  ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ಸಾವನ್ನಪ್ಪಿರುವ ಘಟನೆ ಕಿನ್ನಿಗೋಳಿಯ ಬಟ್ಟಕೋಡಿಯಲ್ಲಿ ನಡೆದಿದೆ. ಧಾರವಾಡದ ಕಲ್ಲೂರು ನಿವಾಸಿ ಆತ್ಮಾನಂದ ಅಂಬಿಗರ (27) ಹಾಗೂ ನವೀನ್ ಹೂಗಾರ (26) ಮೃತ ದುರ್ದೈವಿಗಳು. ಅತೀ ವೇಗವಾಗಿ ಬಂದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ಆತ್ಮಾನಂದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನವೀನ್ ಹೂಗಾರ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್‍ ಕಂಬಕ್ಕೆ ಬೈಕ್‍ ಡಿಕ್ಕಿಯಾಗಿ ಯುವಕರಿಬ್ಬರ ದುರ್ಮರಣ Read More »

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ

ಪುತ್ತೂರು : ಆರ್ಯಾಪು ಗ್ರಾಮದ ಕಾರ್ಪಾಡಿ ಬೈಲಿನ ಮನೆ ಪಕ್ಕದ ದನದ ಕೊಟ್ಟಿಗೆಗೆ ಬೆಂಕಿ ಹೊತ್ತಿಕೊಂಡು, ಉರಿದ ಘಟನೆ ಭಾನುವಾರ ಸಂಜೆ ನಡೆದಿದೆ. ಮೋಹನ್ ಭಂಡಾರಿ ಎಂಬವರ ಮನೆ ಇದಾಗಿದ್ದು, ಘಟನೆ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗಿದೆ. ಮನೆ ಪಕ್ಕದಲ್ಲೇ ಇದ್ದ ಹಟ್ಟಿಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಸ್ಥಳಕ್ಕಾಗಮಿಸಿದ ನೆರೆಮನೆಯವರು ತಕ್ಷಣ ಜಾಗೃತರಾಗಿ ದನಗಳನ್ನು ಹೊರ ಕರೆದೊಯ್ದಿದ್ದಾರೆ. ಆದರೆ ಬೆಂಕಿ ಆರಿಸಲು ಹರಸಾಹಸ ಪಟ್ಟ ಘಟನೆ ಮಾತ್ರ ಅರಣ್ಯ ರೋಧನವಾಯಿತು. ಕಾರ್ಪಾಡಿ ದೇವಸ್ಥಾನದ ಮಗ್ಗುಲಲ್ಲೇ

ದನದ  ಹಟ್ಟಿಗೆ ಬೆಂಕಿ ಅವಘಡ | ರಸ್ತೆಯಿಲ್ಲದೆ ಬೆಂಕಿ ನಂದಿಸಲು ಅಗ್ನಿಶಾಮಕದಳದವರ ಹರಸಾಹಸ Read More »

error: Content is protected !!
Scroll to Top