ಅಪಘಾತ

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು

ಸುಳ್ಯ : ಬೈಕ್ ಸ್ಕಿಡ್‌ ಆಗಿ ರಸ್ತೆಗೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲ ನೀಡದೆ ಮಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್ಣ (52) ಮೃತಪಟ್ಟವರು. ಅವರು ನ.19ರಂದು ರಾತ್ರಿ ಹಳೆಗೇಟಿನಿಂದ ತಮಿಳು ಕಾಲನಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‌ ಸ್ಕಿಡ್ ಆಗಿ ರಸ್ತೆಗೆ ಬಿದ್ದಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ […]

ರಸ್ತೆ ಅಪಘಾತ ಗಾಯಾಳು ಚಿಕಿತ್ಸೆ ಫಲಿಸದೆ ಸಾವು Read More »

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ

ಬೆಳ್ತಂಗಡಿ: ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವೇಣೂರಿನ ‌ಮಹಮ್ಮದ್ ಇರ್ಷಾದ್ ಮತ್ತು ಪಡಂಗಡಿಯ ಸಾದಿಕ್ ಖಾನ್ ಬಂಧಿತ‌ ಆರೋಪಿಗಳು. ಬೆಳ್ತಂಗಡಿ ಕುಕ್ಕೇಡಿಯ ಸಂಪತ್ ಕುಮಾರ್ ಎಂಬವರಿಗೆ ‌ಸೇರಿದ ವಾಹನ ಇದಾಗಿತ್ತು. ಆರೋಪಿಗಳಿಂದ ಪೊಲೀಸರು ಕದ್ದೊಯ್ದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ದ್ವಿಚಕ್ರ ವಾಹನ ಕಳ್ಳತನ: ಇಬ್ಬರ ಬಂಧನ Read More »

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ

ಭಾರತಕ್ಕೆ ಆಘಾತ ನೀಡಿದ ಯುದ್ಧ ವಿಮಾನ ಪತನ; ತನಿಖೆಗೆ ಆದೇಶ ನವದೆಹಲಿ: ದುಬೈ ವೈಮಾನಿಕ ಪ್ರದರ್ಶನದ ವೇಳೆ ಎಚ್‌ಎಎಲ್‌ ನಿರ್ಮಿತ ತೇಜಸ್‌ ಯುದ್ಧ ವಿಮಾನ (ಎಲ್‌ಸಿಎ ಎಂಕೆ -1) ಪತನಗೊಂಡು, ಭಾರತೀಯ ವಾಯುಪಡೆಯ ಪೈಲಟ್‌ ವಿಂಗ್‌ ಕಮಾಂಡರ್‌ ನಮಾಂಶ್‌ ಸ್ಯಾಲ್ ಮೃತಪಟ್ಟಿದ್ದಾರೆಂದು ದೃಢಪಡಿಸಲಾಗಿದೆ. ಕಾರ್ಯಕ್ರಮದ ಕೊನೆಯ ದಿನದಂದು 37 ವರ್ಷದ ಪೈಲಟ್‌ ಕೆಳಮಟ್ಟದ ಏರೋಬ್ಯಾಟಿಕ್ ಕೌಶಲ ನಿರ್ವಹಿಸುತ್ತಿದ್ದಾಗ ಫೈಟರ್ ಜೆಟ್ ಪತನಗೊಂಡಿದೆ. ದುರದೃಷ್ಟಕರ ಘಟನೆಯಲ್ಲಿ ವಿಂಗ್‌ ಕಮಾಂಡರ್‌ ಸಾವಿಗೀಡಾಗಿದರು. ವಿಂಗ್ ಕಮಾಂಡರ್ ನಮಾಂಶ್ ಸ್ಯಾಲ್ ಹಿಮಾಚಲ ಪ್ರದೇಶದ

ದುಬೈ ಏರ್‌ಶೋನಲ್ಲಿ ತೇಜಸ್‌ ಪತನ : 37 ವರ್ಷದ ಪೈಲಟ್‌ ದುರ್ಮರಣ Read More »

ಸುಳ್ಯ : ಕಾರು ಮೋರಿಗೆ ಗುದ್ದಿ ಮೂವರಿಗೆ ಗಾಯ

ಸುಳ್ಯ : ಕಾರು ರಸ್ತೆ ಬದಿಯ ಮೋರಿಗೆ ಗುದ್ದಿದ ಪರಿಣಾಮ ಮೂವರು ಗಾಯಗೊಂಡ ಘಟನೆ ಶುಕ್ರವಾರ ಕನಕಮಜಲು ಸಮೀಪ ಕನ್ನಡ್ಕ ಎಂಬಲ್ಲಿ ನಡೆದಿದೆ. ಕಾರು ಚಾಲಕ ಮಂಡೆಕೋಲಿನ ಖಲೀಲ್ ಸಹಿತ ಮೂವರು ಗಾಯಗೊಂಡಿದ್ದಾರೆ. ಪುತ್ತೂರು ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಗೆ ಗುದ್ದಿದೆ. ಗಾಯಾಳುಗಳನ್ನು ಕೂಡಲೇ ಆಟೊ ರಿಕ್ಷಾದಲ್ಲಿ ಸುಳ್ಯದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಯಿತು.

ಸುಳ್ಯ : ಕಾರು ಮೋರಿಗೆ ಗುದ್ದಿ ಮೂವರಿಗೆ ಗಾಯ Read More »

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ

ಅಡಿ ಭಾಗದ ಫೈಬರ್‌ ಪ್ಲೇಟ್‌ ಒಡೆದು ಒಳನುಗ್ಗಿದ ನೀರು ಉಡುಪಿ : ಮೀನುಗಾರಿಗೆ ತೆರಳಿದ ದೋಣಿಯೊಂದು ಸಮುದ್ರ ಮಧ್ಯದಲ್ಲಿ ಮುಳುಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು ಸಮುದ್ರಪಾಲಾಗಿ ಲಕ್ಷಾಂತರ ರೂ. ನಷ್ಟವಾಗಿದೆ. ಸಾಸ್ತಾನಾ ಕೋಡಿಕನ್ಯಾನದ ರವೀಂದ್ರ ಎನ್. ಪೂಜಾರಿ ಅವರಿಗೆ ಸೇರಿದ ‘ವೀರಕಲ್ಕುಡ’ ಎಂಬ ಹೆಸರಿನ ಬೋಟ್‌ ನವೆಂಬರ್ 17ರ ಸಂಜೆ ತಂಡೇಲ್ (ಮುಖಂಡ) ಮತ್ತು ನಾಲ್ವರು ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಹೊರಟಿತ್ತು. ಅವರು ಪಣಂಬೂರು

ನಡು ಸಮುದ್ರದಲ್ಲಿ ಮುಳುಗಿದ ಮೀನುಗಾರಿಕೆ ಬೋಟ್‌ : ಐವರು ಮೀನುಗಾರರ ರಕ್ಷಣೆ Read More »

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು

ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿ ಎಂದು ತಿಳಿದು ಬಂದಿದೆ. ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ವೃದ್ಧ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದನ್ನು ಚಲಾಯಿಸುತ್ತಾ ಬಂದ ಚಾಲಕ ವೃದ್ಧನನ್ನು ಗಮನಿಸದೆ ವಾಹನ ಚಲಾಯಿಸಿದ್ದು ವೃದ್ಧ ವಾಹನದ ಅಡಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

ರಸ್ತೆ ಕಾಮಗಾರಿಯ ವಾಹನದಡಿಗೆ ಬಿದ್ದು ವೃದ್ಧ ಸಾವು Read More »

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು

ಬೆಳ್ತಂಗಡಿ: ಇಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಸಂಚರಿಸುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮತ್ತೋರ್ವ ವಿದ್ಯಾರ್ಥಿನಿ ಗಂಭೀರ ಗಾಯಗೊಂಡ ಘಟನೆ ಕಾವಳಕಟ್ಟೆ ಸಮೀಪದ ಎನ್.ಸಿ.ರೋಡ್ ಬಳಿ ಬುಧವಾರ ಸಂಭವಿಸಿದೆ. ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯ (21) ಮೃತ ವಿದ್ಯಾರ್ಥಿನಿ. ಗುರುವಾಯನಕೆರೆ ನಿವಾಸಿ ಪೃಥ್ವಿ ರಾವ್ ಎಂಬವರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರೂ ಮಂಗಳೂರಿನ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನಾ

ಸ್ಕೂಟಿಗೆ ಕಾರು ಡಿಕ್ಕಿ : ಇಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು Read More »

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ

ವಿಟ್ಲ : ಕೊಳ್ನಾಡು ಗ್ರಾಮದ ಬಾರೆಬೆಟ್ಟು ನಿವಾಸಿ ಅಬ್ದುಲ್ ಲತೀಫ್ ಎಂಬವರ ಮನೆಗೆ ನ.18ರಂದು ರಾತ್ರಿ ಸಿಡಿಲು ಬಡಿದು ಹಾನಿಯಾಗಿದೆ. ಸಿಡಿಲು ಬಡಿದ ಸಂದರ್ಭದಲ್ಲಿ ಮನೆಯೊಳಗೆ ಪುಟಾಣಿ ಮಗು ಹಾಗೂ ಇಬ್ಬರು ಮಹಿಳೆಯರಿದ್ದರು. ಮಗುವಿನ ಕಿವಿಗೆ ಗಾಯವಾಗಿದೆ.

ವಿಟ್ಲ: ಸಿಡಿಲು ಬಡಿದು ಮನೆಗೆ ಹಾನಿ Read More »

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ

ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಹೊತ್ತಿ ಉರಿದ ಬಸ್‌ ನವದೆಹಲಿ : ಸೌದಿ ಅರೇಬಿಯಾದಲ್ಲಿ ಮಕ್ಕಾ ಸಮೀಪ ಸೋಮವಾರ ಮುಂಜಾನೆ ಬಸ್‌ ಮತ್ತು ಡೀಸೆಲ್‌ ಟ್ಯಾಂಕರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 42 ಭಾರತೀಯ ಮಕ್ಕಾ ಯಾತ್ರಿಕರು ಮೃತಪಟ್ಟಿದ್ದಾರೆಂದು ವರದಿಯಾಗಿದೆ. ಮಕ್ಕಾದಿಂದ ಮದೀನಾಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ ಸೋಮವಾರ ಮುಂಜಾನೆ 1.30ರ ವೇಳೆಗೆ ಮುಫ್ರಿಹತ್‌ ಎಂಬ ಸ್ಥಳದಲ್ಲಿ ಅಪಘಾತಕ್ಕೀಡಾಗಿದೆ. ಅಪಘಾತದಿಂದ ತೀವ್ರತೆಯಿಂದಾಗಿ ಬಸ್‌ಗೆ ಬೆಂಕಿ ಹತ್ತಿಕೊಂಡು ಸುಟ್ಟು ಕರಕಲಾಗಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಬಸ್‌ನಲ್ಲಿದ್ದವರೆಲ್ಲ ಹೈದರಾಬಾದ್‌ನ

ಮಕ್ಕಾದಲ್ಲಿ ಭೀಕರ ಅಪಘಾತ : 42 ಭಾರತೀಯ ಉಮ್ರಾ ಯಾತ್ರಿಕರು ದುರ್ಮರಣ Read More »

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಎಂಬ ಬಾಲಕ ಮೃತಪಟ್ಟಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್‌ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ

ಬೆಳ್ತಂಗಡಿ : ಆಟೋರಿಕ್ಷಾ ಪಲ್ಟಿಯಾಗಿ ಬಾಲಕ ಸಾವು; 5 ಮಂದಿಗೆ ಗಾಯ Read More »

error: Content is protected !!
Scroll to Top