ಅಪಘಾತ

ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಎದುರು ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿವದಾಸ ಗಣಪತಿ ನಾಯ್ಕ್ ಎಂದು ಗುರುತಿಸಲಾಗಿದೆ. ಅವರು ಬೈಕಂಪಾಡಿಯ ಔಷಧ ತಯಾರಿಕಾ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಅವರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು […]

ಲಾರಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ನಿಂತಿದ್ದ ಲಾರಿಗೆ ಗುದ್ದಿದ ಕಾರು: ಮೂರು ಮಂದಿ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಒಂದೇ ಕುಟುಂಬದ ಮೂರು ಮಂದಿ ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಸಮೀಪ ನಡೆದಿದೆ. ಒಂದೇ ಕುಟುಂಬದ ಐದು ಜನರು ಮಂತ್ರಾಲಯಕ್ಕೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ರಾಯರ ದರ್ಶನ ಪಡೆದು ಹಿಂದಿರುಗುತ್ತಿದ್ದ ಸಮಯದಲ್ಲಿ ಭೀಕರ ಅಪಘಾತ ನಡೆದಿರುವುದಾಗಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಮೃತರನ್ನು ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹ ಮೂರ್ತಿ, ಗಂಗಾಧರ್ ಮತ್ತು ಲೋಹಿತ್ ಎಂದು ಗುರುತಿಸಲಾಗಿದೆ.

ನಿಂತಿದ್ದ ಲಾರಿಗೆ ಗುದ್ದಿದ ಕಾರು: ಮೂರು ಮಂದಿ ಸಾವು Read More »

ಕೈಕಾರದಲ್ಲಿ ಭೀಕರ ಅಪಘಾತ: ಚಾಲಕ ಗಂಭೀರ

ಪುತ್ತೂರು: ಕೈಕಾರಗಲ್ಲಿ ಪಿಕಪ್ ಮತ್ತು ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಚಾಲಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಪ್ರಕರಣದಲ್ಲಿ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು,‌ ಗಂಭೀರ ಗಾಯಗೊಂಡ ಚಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

ಕೈಕಾರದಲ್ಲಿ ಭೀಕರ ಅಪಘಾತ: ಚಾಲಕ ಗಂಭೀರ Read More »

ಅಪಘಾತದಲ್ಲಿ ಬೋಳಿಯಾರ್‌ನ ಚಾಲಕ ಸಾವು

ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತ ಕೊಣಾಜೆ: ಮಹಾರಾಷ್ಟ್ರದ ರತ್ನಗಿರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮುಡಿಪು ಸಮೀಪದ ಬೋಳಿಯಾರ್ ನಿವಾಸಿ ವಿವಾಹಿತ ಯುವಕ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೋಳಿಯಾರ್ ನಿವಾಸಿ ಬಿ.ಎಚ್ ಕರೀಂ ಎಂಬವರ ಪುತ್ರ ಮುಹಮ್ಮದ್ ರಿಝ್ವಾನ್ (28) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ. ಹಲವಾರು ವರ್ಷಗಳಿಂದ ಕಂಪನಿಯೊಂದರ ಮೀನಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದ ರಿಝ್ವಾನ್ ಮಹಾರಾಷ್ಟ್ರಕ್ಕೆ ಮೀನಿನ ಲೋಡ್‌ ಕೊಂಡೊಯ್ಯುತ್ತಿದ್ದಾಗ ಮಹಾರಾಷ್ಟ್ರದ ರತ್ನಗಿರಿ ಎಂಬಲ್ಲಿ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು

ಅಪಘಾತದಲ್ಲಿ ಬೋಳಿಯಾರ್‌ನ ಚಾಲಕ ಸಾವು Read More »

ಹೃದಯಾಘಾತಕ್ಕೆ ಯುವಕ ಬಲಿ

ಬಂಟ್ವಾಳ: ಕೃಷಿ ಸಂಬಂಧಿ ಕೆಲಸದಲ್ಲಿ ತೊಡಗಿಕೊಂಡಿದ್ದ ಯುವಕನೊಬ್ಬ ಎದೆನೋವಿನ ಕಾರಣಕ್ಕೆ ಹೃದಯಾಘಾತದಿಂದ ಮೃತಪಟ್ಚ ಘಟನೆ ಕುಕ್ಕಿಪಾಡಿ ಎಂಬಲ್ಲಿ ನಡೆದಿದೆ. ಮೃತನನ್ನು ‌ಪ್ರಶಾಂತ್ ಆಚಾರ್ಯ (24) ಎಂದು ಗುರುತಿಸಲಾಗಿದೆ. ಇವರು ಕುಕ್ಕಿಪಾಡಿ ಗ್ರಾಮದ ಮಾಡಮೆ ‌ಎಂಬಲ್ಲಿನ ಶ್ರೀರಾಮ ಆಚಾರ್ಯ ಅವರ ಎರಡನೇ ಪುತ್ರ. ಸಿದ್ಧಕಟ್ಟೆಯ ಯಂತ್ರೋಪಕರಣದ ಅಂಗಡಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಭಾನುವಾರ ಅರಂತಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಸಿದ್ಧಕಟ್ಟೆಯ ‌ಆಸ್ಪತ್ರೆಯ ವೈದ್ಯರ ನಿರ್ದೇಶನದಂತೆ ಮೂಡುಬಿದಿರೆ ಆಸ್ಪತ್ರೆಗೆ ಸಾಗಿಸಲಾಯಿತಾದರೂ,

ಹೃದಯಾಘಾತಕ್ಕೆ ಯುವಕ ಬಲಿ Read More »

ಬೃಹತ್ ಮರ ಮುರಿದು ಬಿದ್ದು ಕಾರು ಜಖಂ

ಸುಳ್ಯ: ಚಲಿಸುತ್ತಿದ್ದ ಕಾರೊಂದರ ಮೇಲೆ ಮರ ಮುರಿದು ಬಿದ್ದ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪವಾಡ ಸದೃಶ ಎಂಬಂತೆ ಪಾರಾದ ಘಟನೆ ಬೇಂಗಮಲೆ ಎಂಬಲ್ಲಿ ನಡೆದಿದೆ. ಬೆಳ್ಳಾರೆಯ ಪಂಜದ ಕಡೆಗೆ ಉಮ್ಮರ್ ಎಂಬವರ ಬಾಡಿಗೆ ಕಾರಿನಲ್ಲಿ ಸಾಲ ವಸೂಲಾತಿ ಕೆಲಸಕ್ಕೆ ಬ್ಯಾಂಕ್ ಮೆನೇಜರ್ ಉತ್ಸವ್ ಚಕ್ರವರ್ತಿ ಅವರು ಪ್ರಯಾಣಿಸುತ್ತಿದ್ದರು. ಕೆಲಸ ಮುಗಿಸಿ ಮರಳುವ ವೇಳೆ ಬೃಹತ್ ಮರ ಕಾರಿನ ಮೇಲೆ ಬಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ದೊಡ್ಡ ಮಟ್ಟದ

ಬೃಹತ್ ಮರ ಮುರಿದು ಬಿದ್ದು ಕಾರು ಜಖಂ Read More »

ಏರ್‌ ಆಂಬುಲೆನ್ಸ್‌ ಪತನಗೊಂಡು ಏಳು ಮಂದಿ ಸಾವು

ಗಾಯಾಳುವನ್ನು ತುರ್ತು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಖಾಸಗಿ ಏರ್‌ ಆಂಬುಲೆನ್ಸ್‌ ಪತನ ಹೊಸದಿಲ್ಲಿ: ಜಾರ್ಖಂಡ್‌ನ ಚಾತ್ರ ಜಿಲ್ಲೆಯ ಸಿಮಾರಿಯಾ ಎಂಬಲ್ಲಿ ಸೋಮವಾರ ಸಂಜೆ ಏರ್‌ ಆಂಬುಲೆನ್ಸ್‌ ಪತನಗೊಂಡು ಅದರಲ್ಲಿದ್ದ ಎಲ್ಲ ಏಳು ಮಂದಿ ಮೃತಪಟ್ಟಿದ್ದಾರೆ. ಅಪಘಾತಕ್ಕೀಡಾದ ಏರ್ ಆ್ಯಂಬುಲೆನ್ಸ್‌ನಲ್ಲಿದ್ದ ಎಲ್ಲ ಏಳು ಮಂದಿ ಮೃತಪಟ್ಟಿದ್ದಾರೆ. ವಿಮಾನ ರಾಂಚಿಯಿಂದ ದೆಹಲಿಗೆ ತೆರಳುತ್ತಿತ್ತು ಎಂದು ಚಾತ್ರ ಜಿಲ್ಲಾಧಿಕಾರಿ ಕೀರ್ತಿಶ್ರೀ ಜಿ ಹೇಳಿದ್ದಾರೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದ್ದ ಬೀಚ್ಕ್ರಾಫ್ಟ್ ಸಿ90 (ವಿಐ-ಎಜೆವಿ) ರಾಂಚಿ ವಿಮಾನ ನಿಲ್ದಾಣದಿಂದ ರಾತ್ರಿ 7.11ಕ್ಕೆ ಟೇಕಾಫ್‌

ಏರ್‌ ಆಂಬುಲೆನ್ಸ್‌ ಪತನಗೊಂಡು ಏಳು ಮಂದಿ ಸಾವು Read More »

ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ

ವಿಟ್ಲ: ನಗರದ ಕೊಡಂಗಾಯಿ ಬಳಿಯ ಮೂರುಕಜೆಯ ವಿದ್ಯಾ ಸಂಸ್ಥೆಯೊಂದರ ಹತ್ತನೇ ತರಗತಿಯ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆಯಾಗಿದೆ. ಬೆಂಗಳೂರು ಮೂಲದ ವೈಗಲಕ್ಷ್ಮೀ ಎಂಬಾಕೆಯೇ ಮೃತ ವಿದ್ಯಾರ್ಥಿನಿ. ಆಕೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ‌ಮರಣೋತ್ತರ ಪರೀಕ್ಷಾ ಹಿನ್ನೆಲೆಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

ಹತ್ತನೇ ತರಗತಿ ವಿದ್ಯಾರ್ಥಿನಿಯ ಮೃತದೇಹ ಕೆರೆಯಲ್ಲಿ ಪತ್ತೆ Read More »

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ

ನವದೆಹಲಿ: ಎರಡು ವರ್ಷದ ಮಗುವನ್ನು ಸ್ವಂತ ಚಿಕ್ಕಮ್ಮನೇ ಕತ್ತು ಹಿಸುಕಿ ‌ಕೊಂದಿರುವ ಘಟನೆ ನವದೆಹಲಿಯ ಮುಖರ್ಜಿ ನಗರದ SFS ಫ್ಲ್ಯಾ‌ಟ್‌ಗಳ ಹತ್ತಿರದ ಉದ್ಯಾನವನದಲ್ಲಿ ನಡೆದಿದೆ. ಆರೋಪಿ ಅಜ್ರಾ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಬಾಲಕನನ್ನು ಹಾದಿ ಎಂದು ಗುರುತಿಸಲಾಗಿದ್ದು, ಆತ ತನ್ನ ತಾಯಿಯ ಜೊತೆ ಅಜ್ಜಿ ಮನೆಗೆ ಬಂದಿದ್ದ. ಮಧ್ಯಾಹ್ನದ ವೇಳೆ ಮಗುವಿನ ತಾಯಿಯ ತಂಗಿ ಹಾದಿಯನ್ನು ಉದ್ಯಾನಕ್ಕೆ ‌ಕರೆದೊಯ್ದಿದ್ದಾಳೆ. ಅಲ್ಲಿ ಅವಳು ಮಗುವನ್ನು ಕೊಂದಿರುವ ಆರೋಪ ಕೇಳಿ ಬಂದಿದೆ. ಆ ಬಳಿಕ ಶವವನ್ನು ತನ್ನ

ಎರಡು ವರ್ಷದ ಕಂದನನ್ನು ಕೊಂದ ಚಿಕ್ಕಮ್ಮ ಪೊಲೀಸರ ವಶಕ್ಕೆ Read More »

ಅತಿವೇಗದಿಂದ ಬಂದ ಕಾರು ಸರ್ಕಾರಿ ಬಸ್ಸಿಗೆ ಢಿಕ್ಕಿ

ಕಾಸರಗೋಡು: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆ.ಎಸ್.ಆರ್.ಟಿ.ಸಿ. ಬಸ್‌ಗೆ ಗುದ್ದಿರುವ‌ ಘಟನೆ ಕಾಸರಗೋಡಿನ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಕರ್ನಾಟಕದ ಪುತ್ತೂರು ವಿಭಾಗದ ಬಸ್ಸು ಇದಾಗಿದ್ದು ಕಾಸರಗೋಡಿನಿಂದ ಪ್ರಯಾಣಿಕರನ್ನು ಹೊತ್ತು ಪುತ್ತೂರಿನ ಕಡೆಗೆ ಬರುತ್ತಿತ್ತು. ಈ ವೇಳೆ ಅತಿ ವೇಗದಿಂದ ಬಂದ ಸ್ವಿಫ್ಟ್ ಕಾರು ಬಸ್‌ಗೆ ಗುದ್ದಿದೆ. ಢಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ‌ಇಬ್ಬರಿಗೆ ಗಾಯಗಳಾಗಿರುವುದಾಗಿಯೂ ವರದಿಯಾಗಿದೆ.

ಅತಿವೇಗದಿಂದ ಬಂದ ಕಾರು ಸರ್ಕಾರಿ ಬಸ್ಸಿಗೆ ಢಿಕ್ಕಿ Read More »

error: Content is protected !!
Scroll to Top