ಅಪಘಾತ

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು

ಪುತ್ತೂರು: ಶಾಮಿಯಾನ ಲಾರಿಗೆ ಹಿಂದಿನಿಂದ ಬೈಕ್‍ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಸುದೀಪ್‍ ಚೊಕ್ಕಾಡಿ ಮೃತಪಟ್ಟ ಬೈಕ್‍ ಸವಾರ ಗಂಭೀರ ಗಾಯಗೊಂಡ ಸುದೀಪ್‍ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸುದೀಪ್‍ ಮುರ ಸಮೀಪ ಆಯುರ್ವೇದಿಕ್‍ ಔಷಧಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಕುರಿತು ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಬೈಕ್‍ : ಬೈಕ್‍ ಸವಾರ ಮೃತ್ಯು Read More »

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು

ಪುತ್ತೂರು” ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ ಏರಿದ ಘಟನೆ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿಯಲ್ಲಿ ನಡೆದಿದೆ. ಅಪಘಾತದಿಂದ ಕಾರು ಚಾಲಕ ಅಪಾಯದಿಂದ ಪಾರಾಗಿದ್ದು, ಕಾರಿಗೆ ಹಾನಿಯಾಗಿದೆ. ಈ ಸಂದರ್ಭದಲ್ಲಿ ಅದೇ ಮಾರ್ಗದಿಂದ ತೆರಳುತ್ತಿದ್ದ ಅರುಣ್‍ ಕುಮಾರ್‍ ಪುತ್ತಿಲ ಕಾರನ್ನು ಬದಿಗೆ ಸರಿಸುವಲ್ಲಿ ಸಹಕರಿಸಿದರು.

ಡಿವೈಡರ್ ಏರಿದ ಕಾರು : ಚಾಲಕ ಅಪಾಯದಿಂದ ಪಾರು Read More »

ಗುಲ್ಜಾರ್‌ ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ : 17 ಮಂದಿ ಜೀವಂತ ದಹನ

ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಸಂಭವಿಸಿದ ದುರಂತ ಹೈದರಾಬಾದ್: ಇಲ್ಲಿನ ಚಾರ್‌ಮಿನಾರ್ ಬಳಿಯಿರುವ ಗುಲ್ಜಾರ್ ಹೌಸ್‌ನಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ 17 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ಇಂದು ಬೆಳಗ್ಗೆ ನಡೆದಿದೆ.ಮುಂಜಾನೆ 5.30ರ ಸುಮಾರಿಗೆ ಬೆಂಕಿಹತ್ತಿಕೊಂಡಿದೆ. ಗುಲ್ಜಾರ್ ಹೌಸ್‌ನಲ್ಲಿ 30ಕ್ಕೂ ಹೆಚ್ಚು ಮಂದಿ ಇರುವ ಶಂಕೆಯಿದ್ದು, ಬೆಂಕಿ ಅವಘಡದ ಪರಿಣಾಮ ಉಸಿರಾಟದ ತೊಂದರೆಯಿಂದಾಗಿ 16ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ರಾಜೇಂದ್ರ ಕುಮಾರ್ (67), ಅಭಿಷೇಕ್ ಮೋದಿ, ಸುಮಿತ್ರಾ, ಮುನ್ನಿಬಾಯ್, ಆರುಷಿ ಜೈನ್,

ಗುಲ್ಜಾರ್‌ ಹೌಸ್‌ನಲ್ಲಿ ಭೀಕರ ಅಗ್ನಿ ಅವಘಡ : 17 ಮಂದಿ ಜೀವಂತ ದಹನ Read More »

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ

ಪುತ್ತೂರು: ಮಾಡೂರು ಗ್ರಾಮದ ಕೌಡಿಚಾರ್ನಲ್ಲಿ 2009 ರಲ್ಲಿ ಮನೆ ಕಳ್ಳತನ ಮಾಡಿದ ಆರೋಪಿ ಸುಮಾರು 16 ವರ್ಷಗಳಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ. ಘೋಷಿತ ಅಪರಾಧಿ (Proclaimed Offender) ಮಾಡಾ ಸ್ವಾಮಿ ಎಂಬವನನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿನ್ನು ತಮಿಳುನಾಡು ರಾಜ್ಯದ ತಿರುನಲ್ವೆ ಜಿಲ್ಲೆಯ ತಂಗಮಾಳಾಪುರಂ ನಿವಾಸಿಯಾದ ಮಾಡಾಸ್ವಾಮಿ(17ವ) ಬಂಧಿತ ಆರೋಪಿ ಎನ್ನಲಾಗಿದೆ.                                     ಪ್ರಕರಣದ ಹಿನ್ನೆಲೆ: ದಿ. ಜು 5 2009 ರಂದು ರಾತ್ರಿ ಕೌಡಿಚಾರ್ ನಿವಾಸಿ ಗಣಪಯ್ಯ ಎಂಬವರ ಮನೆಯ ಬೀಗವನ್ನು

2009ರಲ್ಲಿ ನಡೆದ ಮನೆ ಕಳ್ಳತನ ಪ್ರಕರಣ |  ಆರೋಪಿ ಬಂಧನ Read More »

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ

ವಿಟ್ಲ: ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತವಾದ ಘಟನೆ ವಿಟ್ಲ-ಕನ್ಯಾನ ರಸ್ತೆಯ ಕಾಂತಡ್ಕದಲ್ಲಿ ನಡೆದಿದೆ. ಅಪಘಾತದ ಪರಿಣಾಮ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ. ಅಪಘಾತದಿಂದ ಆಟೋ ಚಾಲಕ ಒಕ್ಕೆತ್ತೂರು ನಿವಾಸಿ ಹುಸೈನ್ ಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುವನ್ನು   ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಆಟೋದಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿದ್ದು, ವಿಟ್ಲ ಸಮುದಾಯ ಆಸ್ಪತ್ರೆಗೆ ಪ್ರಯಾಣಿಕರನ್ನು ದಾಖಲಿಸಲಾಗಿದೆ.

ಕಾರು – ಆಟೋ ನಡುವೆ ಅಪಘಾತ | ಆಟೋ ಚಾಲಕ ಗಂಭೀರ Read More »

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು

ಬಂಟ್ವಾಳ : ಲಾರಿಗಳ ನಡುವೆ ಭೀಕರ ಅಪಘಾತ ನಡೆದರಿಂದ ಲಾರಿಯಲ್ಲಿದ್ದ ಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ದುರಂತ ಘಟನೆ ಸಜೀಪದಲ್ಲಿ ಇಂದು ಬೆಳಗ್ಗೆ ನಡೆದಿದೆ. ಸಜೀಪನಡು ಗೋಳಿಪಡ್ಡು ನಿವಾಸಿ ರಫೀಕ್ ( 45) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕ್ಲೀನರ್‍ ಯೂಸುಫ್‍ ಎಂಬಾತನ ಕೈಕಾಲುಗಳ ಮೇಲೆಯೂ ಡಾಮರು ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ, ಇನ್ನೊಂದು ಲಾರಿಯ ಚಾಲಕ ರಿಜ್ವಾನ್‍ ಹಾಗೂ ಅಲ್ಪಾಸ್‍ ಎಂಬಾತನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಕಂಚಿನಡ್ಕಪದವು ಕಡೆಯಿಂದ ಸಜೀಪನಡು

ಲಾರಿಗಳ ನಡುವೆ ಭೀಕರ ಅಪಘಾತ |  ಬಿಸಿ ಡಾಮರು ಮೈಮೇಲೆ ಹರಿದು ಚಾಲಕ ಮೃತ್ಯು Read More »

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು

ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ಹಡಗು ಮಂಗಳೂರು: ಲಕ್ಷದ್ವೀಪಕ್ಕೆ ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಿಸುತ್ತಿದ್ದ ಹಡಗೊಂದು ಅರಬ್ಬಿ ಸಮುದ್ರದಲ್ಲಿ ಮುಳುಗಿದೆ. ಮಂಗಳೂರು ಬಂದರಿನಿಂದ ಹೊರಟಿದ್ದ ಹಡಗು ಸುಮಾರು 60 ನಾಟಿಕಲ್‌ ಮೈಲು ದೂರದಲ್ಲಿ ಮುಳುಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು

ಮಂಗಳೂರಿನ ಹಡಗು ಲಕ್ಷದ್ವೀಪದ ಸಮೀಪ ಮುಳುಗಡೆ : ಸಿಬ್ಬಂದಿ ಪಾರು Read More »

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು

ತಿರುಪತಿ: ತಿರುಪತಿ ಯಾತ್ರೆಗೆ ತೆರಳಿದ್ದ ಟಿಟಿ ವಾಹನ ಅಪಘಾತಕ್ಕೀಡಾಗಿ ಬಿಳಿನೆಲೆ ಕೈಕಂಬದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಿರುಪತಿ-ಶ್ರೀ ಕಾಳಹಸ್ತಿ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಘಟನೆ ನಡೆದಿದೆ. ಶೇಷಮ್ಮ (70) ಅಪಘಾತದಿಂದ ಮೃತಪಟ್ಟವರು. ಕಡಬ ತಾಲ್ಲೂಕು ಬಿಳಿನೆಲೆ ಗ್ರಾಮದ ಕೈಕಂಬದ ಕುಟುಂಬ ಹಾಗೂ ಅವರ ಸಂಬಂಧಿಕರು ಪ್ಯಾಕೇಜ್ ಟೂರ್ ಯೋಜನೆಯಡಿ ಟಿಟಿಯಲ್ಲಿ ತಿರುಪತಿ ಯಾತ್ರೆ ಕೈಗೊಂಡಿದ್ದರು. ಒಟ್ಟು ಮೂರು ವಾಹನಗಳಲ್ಲಿ ಕರ್ನಾಟಕದ ಇತರ ಭಾಗದವರೂ ವಾಹನದಲ್ಲಿದ್ದರು. ಮಂಗಳವಾರ ಗುಂಡ್ಯದಿಂದ ವಾಹನ ಹೊರಟಿತ್ತು. ಬುಧವಾರ ಸಂಜೆ ತಿರುಪತಿಯಲ್ಲಿ ದರ್ಶನ ನೆರವೇರಿಸುವುದಕ್ಕೂ

ತಿರುಪತಿಯಲ್ಲಿ ಟಿಟಿ ವಾಹನ ಅಪಘಾತ | ಬಿಳಿನೆಲೆ ಕೈಕಂಬ ಮೂಲದ ಮಹಿಳೆ ಮೃತ್ಯು Read More »

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು

ಬಳ್ಳಾರಿ : ಕುರಿ ಮೇಯಿಸಲು ಹೋದ ವೇಳೆ ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ನಡೆದಿದೆ. ಕುರಿ ಮೇಯಿಸಲು ಹೋದಾಗ ಜೋರು ಮಳೆ ಬಂದ ಕಾರಣ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದರು. ಈ ಮರಕ್ಕೇ ಸಿಡಿಲು ಬಡಿದು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಭೀರಪ್ಪ (45), ಸುನೀಲ್ (26) ಮತ್ತು ವಿನೋದ್ (14) ಮೃತಪಟ್ಟವರು. ಸಿರಗುಪ್ಪ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸಾವು Read More »

ಹಾವು ಕಚ್ಚಿ ಮಹಿಳೆ ಮೃತ್ಯು

ಬೆಳ್ತಂಗಡಿ: ವಿಷಪೂರಿತ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಧರ್ಮಸ್ಥಳ ಗ್ರಾಮದ ನಾರ್ಯ ಎಂಬಲ್ಲಿ ನಡೆದಿದೆ. ಧರ್ಮಸ್ಥಳ ನಾರ್ಯ ನಿವಾಸಿ ಶಾಂತಾ (68) ಮೃತಪಟ್ಟವರು. ಮನೆಯ ಹಿಂಬದಿಗೆ ಬಟ್ಟೆಯನ್ನು ಒಗೆಯಲು  ಸಾಬೂನು ತೆಗೆಯುವ ಸಂದರ್ಭದಲ್ಲಿ ಕಿಟಕಿಯಲ್ಲಿ ಯಾವುದೋ ವಿಷದ  ಹಾವು ಎಡಗೈ ಕಿರು ಬೆರಳಿಗೆ ಕಚ್ಚಿತ್ತು..ಮನೆ ಮದ್ದು ಮಾಡಿ ಬಳಿಕ ಉಜಿರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾವು ಕಚ್ಚಿ ಮಹಿಳೆ ಮೃತ್ಯು Read More »

error: Content is protected !!
Scroll to Top