ಅಪಘಾತ

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ

ಡಿಎನ್‌ಎ ಪರೀಕ್ಷೆ ವರದಿ ಬಂದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರ ಅಹಮದಾಬಾದ್‌: ಇಲ್ಲಿ ಕಳೆದ ಗುರುವಾರ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಪೈಕಿ ಈವರೆಗೆ 215 ಮಂದಿಯ ಗುರುತು ಪತ್ತೆಯಾಗಿದ್ದು, 198 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಅಹಮದಾಬಾದ್ ಸಿವಿಲ್ ಹಾಸ್ಪಿಟಲ್ ಅಧೀಕ್ಷಕ ರಾಕೇಶ್ ಜೋಶಿ ತಿಳಿಸಿದ್ದಾರೆ. ಒಟ್ಟು 215 ಡಿಎನ್‌ಎ ವರದಿಗಳು ಮ್ಯಾಚ್‌ ಆಗಿವೆ. 198 ಮೃತದೇಹಗಳನ್ನ ಹಸ್ತಾಂತರಿಸಲಾಗಿದೆ. ಈ ಪೈಕಿ 149 ಭಾರತೀಯರು, 7 ಪೋರ್ಚುಗೀಸ್‌, 32 ಬ್ರಿಟಿಷ್‌ ಮತ್ತು ಕೆನಡಿಯನ್‌ ಪ್ರಜೆಗಳ […]

ಅಹಮದಾಬಾದ್‌ ವಿಮಾನ ದುರಂತ : 215 ಮೃತದೇಹಗಳ ಗುರುತು ದೃಢ Read More »

ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ

ಡ್ರಿಂಕ್​ & ಡ್ರೈವ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಂಗಳೂರು: ಮಂಗಳೂರು ಹೊರವಲಯದ ಜಪ್ಪಿನಮೊಗರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ನಸುಕಿನ ಹೊತ್ತು ಸಂಭವಿಸಿದ ಭೀಕರ ಅಪಘಾತಕ್ಕೆ ಶರಾಬಿನ ಮತ್ತಿನಲ್ಲಿ ಕಾರನ್ನು ವಿಪರೀತ ವೇಗದಲ್ಲಿ ಚಲಾಯಿಸಿದ್ದೇ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭೀಕರ ಅಪಘಾತದಲ್ಲಿ ಎನ್ಎಸ್​ಯುಐ ಜಿಲ್ಲಾ ಉಪಾಧ್ಯಕ್ಷ ಓಂಶ್ರೀ ಪೂಜಾರಿ ಹಾಗೂ ಅವರ ಸ್ನೇಹಿತ ಕದ್ರಿ‌ ನಿವಾಸಿ ಅಮನ್ ರಾವ್​ ಮೃತಪಟ್ಟಿದ್ದಾರೆ. ಕಾರಿನಲ್ಲಿ ಓರ್ವ ಇಟಲಿ ಪ್ರಜೆಯ ಸಹಿತ ಇತರ ಮೂವರಿದ್ದರು. ಇಬ್ಬರಿಗೆ ಗಾಯಗಳಾಗಿವೆ.

ಮಂಗಳೂರು : ಶರಾಬಿನ ಮತ್ತಿನಲ್ಲಿ ಅತಿವೇಗದ ಚಾಲನೆಯಿಂದ ಭೀಕರ ಅಪಘಾತ Read More »

ಕಾರು-ಬೈಕ್‍ ಡಿಕ್ಕಿ : ಬೈಕ್‍ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಬೈಕ್‍ ಹಾಗೂ ಕಾರು ಡಿಕ್ಕಿಯಾದ ಘಟನೆ ನೆಹರುನಗರದಲ್ಲಿ ಇಂದು ಸಂಜೆ ನಡೆದಿದೆ. ಘಟನೆ ಪರಿಣಾಮ ಬೈಕ್ ಸವಾರ ಮುರ ನಿವಾಸಿ ತನ್ನೀರ್ ಗಂಭೀರ ಗಾಯಗೊಂಡಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರು-ಬೈಕ್‍ ಡಿಕ್ಕಿ : ಬೈಕ್‍ ಸವಾರನಿಗೆ ಗಂಭೀರ ಗಾಯ Read More »

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು

ನಗರದ ಹೊರವಲಯ ಜಪ್ಪಿನಮೊಗರಿನಲ್ಲಿ ಸಂಭವಿಸಿದ ಅಪಘಾತ ಮಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಜಪ್ಪಿನಮೊಗರು ಬಳಿ ಮಂಗಳವಾರ ರಾತ್ರಿ ಸಂಭವಿಸಿದೆ.ಮೃತರನ್ನು ಅಮನ್ ರಾವ್ ಮತ್ತು ಓಂಶ್ರೀ ಪೂಜಾರಿ ಎಂದು ಗುರುತಿಸಲಾಗಿದೆ. ಕದ್ರಿ ನಿವಾಸಿಗಳಾದ ಈ ಇಬ್ಬರು ಯುವಕರು ಕಾರಿನಲ್ಲಿ ತಲಪಾಡಿಗೆ ಊಟಕ್ಕೆ ಹೋಗಿದ್ದರು. ಹಿಂತಿರುಗುತ್ತಿದ್ದಾಗ ಜಪ್ಪಿನಮೊಗರು ಬಳಿ ಅವರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಓಂಶ್ರೀ ಪೂಜಾರಿ ಅವರು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ

ಮಂಗಳೂರು : ಭೀಕರ ಅಪಘಾತದಲ್ಲಿ ಕಾಂಗ್ರೆಸ್‌ ಯುವ ನಾಯಕನ ಸಹಿತ ಇಬ್ಬರು ದಾರುಣ ಸಾವು Read More »

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು | ಯುವ ವೈದ್ಯ ಡಾ.ಮೊಹಮ್ಮದ್ ಅಮಲ್‍ ಮೃತ್ಯು

ಮಂಗಳೂರು: ಭಾನುವಾರ ರಾತ್ರಿ ಸುರಿದ ಭಾರೀ ಮಳೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ನಂತೂರು ಬಳಿ ನಡೆದಿದೆ. ಕೇರಳದ ಆಲಪ್ಪುಝ ಮೂಲದ ಡಾ. ಮೊಹಮ್ಮದ್ ಅಮಲ್ (29) ಮೃತಪಟ್ಟವರು. ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿಸ್ಟ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೊಹಮ್ಮದ್ ಅಮಲ್‍ ಭಾನುವಾರ ರಾತ್ರಿ 11:45 ರ ವೇಳೆ ತಮ್ಮ ಸಿಯಾಝ್ ಕಾರಿನಲ್ಲಿ ಕೇರಳ ಮೂಲದ ವೈದ್ಯಕೀಯ ವಿದ್ಯಾರ್ಥಿನಿಯೊಂದಿಗೆ ನಂತೂರಿನಿಂದ ಪಂಪೈಲ್

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು | ಯುವ ವೈದ್ಯ ಡಾ.ಮೊಹಮ್ಮದ್ ಅಮಲ್‍ ಮೃತ್ಯು Read More »

ದರ್ಬೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ

ಪುತ್ತೂರು: ಅಂಗಡಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇದೀಗ ದರ್ಬೆ ವೃತ್ತದ ಬಳಿ ನಡೆದಿದೆ. ದರ್ಬೆ ವೃತ್ತದ ಬಳಿ ಡಾಲ್ಫಿ ಬಿಲ್ಡಿಂಗ್‍ ನಲ್ಲಿರುವ ನಂದಿಕೇಶ್ವರ ಇಲೆಕ್ಟ್ರಿಕಲ್‍ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಬೆಂಕಿ ಅವಘಡಕ್ಕೆ ಕಾರಣಗಳು ಇನ್ನಷ್ಟೇ ತಿಳಿಯಬೇಕಿದೆ.

ದರ್ಬೆಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ Read More »

ಮನೆ ಮೇಲೆ ಬಿದ್ದ ಬೃಹತ್‍ ಗಾತ್ರದ ಮರ | ಮನೆ ಮಂದಿ ಪ್ರಾಣಾಪಾಯದಿಂದ ಪಾರು

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ನೇರೋಳ್ತಡ್ಕ ದಲ್ಲಿ ಮನೆಯೊಂದರ ಮೇಲೆ ಬೃಹದಾಕಾರದ ಮರವೊಂದು ಉರುಳಿಬಿದ್ದ ಪರಿಣಾಮ ಮನೆಗೆ ತೀವ್ರ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ನೇರೋಳ್ತಡ್ಕ ಜಯಂತಿ ಎಂಬುವವರ ಮನೆಯ ಮೇಲೆ ಬೃಹತ್‍ ಗಾತ್ರದ ಮರ ಬಿದ್ದಿದ್ದು, ಘಟನೆ ನಡೆದಾಗ ಜಯಂತಿ ಹಾಗೂ ಅವರ ಮಕ್ಕಳಾದ ಧನರಾಜ್ ಮತ್ತು ಚೇತನ್‌ ರಾಜ್ ಮನೆಯೊಳಗೇ ಇದ್ದರು. ಮರ ಬಿದ್ದ ರಭಸಕ್ಕೆ ಮನೆಯ ಸಿಮೆಂಟ್ ಶೀಟ್‌ಗಳು ಸಂಪೂರ್ಣವಾಗಿ ಪುಡಿಪುಡಿಯಾಗಿದ್ದು ಸುಮಾರು 2 ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿದೆ ಎಂದು

ಮನೆ ಮೇಲೆ ಬಿದ್ದ ಬೃಹತ್‍ ಗಾತ್ರದ ಮರ | ಮನೆ ಮಂದಿ ಪ್ರಾಣಾಪಾಯದಿಂದ ಪಾರು Read More »

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ

ಮೂರು ಮನೆಗಳಿಗೆ ಹಾನಿ; 40 ಮನೆಗಳು ಅಪಾಯದಲ್ಲಿ ಮಂಗಳೂರು: ಮಂಗಳೂರಿನಲ್ಲಿ ಸೋಮವಾರ ಮಳೆ ಅಬ್ಬರ ತುಸು ತಡಿಮೆಯಾಗಿದ್ದರೂ ಗುಡ್ಡ ಕುಸಿತ ಸಂಭವಿಸಿದೆ. ಮಂಗಳೂರು ಸಮೀಪದ ಕಣ್ಣೂರಿನ ದಯಂಬು ಎಂಬಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದಿದ್ದು, ಕುಟುಂಬವೊಂದು ಕೂದಲೆಲೆ ಅಂತರದಲ್ಲಿ ಪಾರಾಗಿದೆ. ಗುಡ್ಡದ ಕೆಳಭಾಗದಲ್ಲೇ ಇದ್ದ ಮನೆಯಲ್ಲಿ ವಾಸವಿದ್ದ ಕುಟುಂಬದವರು, ಗುಡ್ಡ ಕುಸಿತದ ಸದ್ದು ಕೇಳುತ್ತಿದ್ದಂತೆಯೇ ಓಡಿಹೋಗಿ ಬಚಾವಾಗಿದ್ದಾರೆ. ಮೂರು ಮನೆಗಳಿಗೆ ಕುಸಿತದಿಂದ ಹಾನಿಯಾಗಿದೆ. ಕಳೆದ ಶನಿವಾರದಿಂದೀಚೆಗೆ ಸುರಿಯುತ್ತಿರುವ ಭೀಕರ ಮಳೆಗೆ ಮಂಗಳೂರು ನಗರದಲ್ಲಿ ಅನೇಕ ಅನಾಹುತಗಳು

ಮಂಗಳೂರಿನಲ್ಲಿ ಮತ್ತೆ ಮಳೆ ಅನಾಹುತ : ಮನೆ ಮೇಲೆ ಕುಸಿದು ಬಿದ್ದ ಗುಡ್ಡ Read More »

ವಿದ್ಯುತ್‍ ಶಾಕ್‍ ಹೊಡೆದು ಮಹಿಳೆ ಮೃತ್ಯು

ಕಡಬ: ಮಹಿಳೆಯೊಬ್ಬರು ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ತಾಲೂಕಿನ ಎಡಮಂಗಲ ಸಮೀಪದ ಚಾರ್ವಾಕ ಎಂಬಲ್ಲಿ ನಡೆದಿದೆ. ದೋಳಾಡಿ ನಿವಾಸಿ ಪುರಂದರ ಎಂಬವರ ಪತ್ನಿ ರೇಖಾ(35) ಮೃತಪಟ್ಟವರು. ನೀರಿನ ಪಂಪ್‌ ಸ್ವಿಚ್‌ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದು ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ತಕ್ಷಣ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಆಸ್ಪತ್ರೆಗೆ ತಲುಪುವಷ್ಟರಲ್ಲಿಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯುತ್‍ ಶಾಕ್‍ ಹೊಡೆದು ಮಹಿಳೆ ಮೃತ್ಯು Read More »

ಕನ್ಯಾನ ಗ್ರಾಮದ ಮುಂಡೂರಿನಲ್ಲಿ ಕಂಪಿಸಿದ ಭೂಮಿ | ಆತಂಕಗೊಂಡ ಸಾರ್ವಜನಿಕರು

‍ ವಿಟ್ಲ: ಕನ್ಯಾನ ಗ್ರಾಮದ ಮಂಡ್ಕೂರು ಎಂಬಲ್ಲಿ ಜನರಿಗೆ ಒಂದು ಕ್ಷಣಕ್ಕೆ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು, ಇದರಿಂದ ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಕಂಪಿಸಿದ ಅನುಭವ ಕೇವಲ ಒಂದೆರಡು ಸೆಕೆಂಡ್‍  ಮಾತ್ರ ಉಂಟಾಗಿದೆ. ಘಟನೆ ಬಗ್ಗೆ ವ್ಯಕ್ತಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿಯಬಿಟ್ಟಿದ್ದು, ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಕನ್ಯಾನ ಗ್ರಾಮದ ಮುಂಡೂರಿನಲ್ಲಿ ಕಂಪಿಸಿದ ಭೂಮಿ | ಆತಂಕಗೊಂಡ ಸಾರ್ವಜನಿಕರು Read More »

error: Content is protected !!
Scroll to Top