ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು
ಕಡಬ: ಕೊಯಿಲ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬೃಹತ್ ಗಾತ್ರದ ಮಾವಿನ ಮರವೊಂದು ಕಾರಿನ ಮೇಲೆ ಬಿದ್ದ ಘಟನೆ ಇಂದು ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಮಾರುತಿ-800 ಕಾರಿನ ಮೇಲೆ ಬಿದ್ದಿದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಮೂರು ಮಂದಿ ಇದ್ದು, ಅಪಾಯದ ಅರಿವು ಆಗುತ್ತಿದ್ದಂತೆ ಕಾರಿನಿಂದ ಇಳಿದು ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ನಿಂತಿದ್ದ ಕಾರಿನ ಮೇಲೆ ಬಿದ್ದ ಮರ | ಕಾರಿನಲ್ಲಿದ್ದ ಮೂವರು ಅಪಾಯದಿಂದ ಪಾರು Read More »










