ಅಪಘಾತ

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ

ಉಪ್ಪಿನಂಗಡಿ: ಬೇಕರಿಯೊಂದಕ್ಕೆ ಶಾರ್ಟ್‍ ಸರ್ಕ್ಯೂಟ್‍ ನಿಂದ ಬೆಂಕಿ ಬಿದ್ದ ಪರಿಣಾಮ ಬೇಕರಿ ಸಂಪೂರ್ಣ ಭಸ್ಮವಾದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸ್ ನಿಲ್ದಾಣದ ಬಳಿಯಿರುವ ಸಮತ ಬೇಕರಿಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ. ಅಂಗಡಿ ಸಂಪೂರ್ಣ ಸುಟ್ಟಿದ್ದು ಬೆಂಕಿ ನಂದಿಸುವ ಪ್ರಯತ್ನ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

ಶಾರ್ಟ್ ಸರ್ಕ್ಯೂಟ್‍ ನಿಂದ ಬೇಕರಿಗೆ ಬೆಂಕಿ : ಸಂಪೂರ್ಣ ಭಸ್ಮ Read More »

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು

ಹುಬ್ಬಳ್ಳಿ: ಮಲಗಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳಿಗೆ ತೀವ್ರ ಗಾಯಗಳಾಗಿದ್ದ ಘಟನೆಗೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳನ್ನು ನಿಜಲಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ್ ಪ್ರಕಾಶ್ ಸವದತ್ತಿ (17) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಕಳೆದ ಮೂರು ದಿನಗಳಿಂದ ಹುಬ್ಬಳ್ಳಿ ಕಿಮ್ಸ್

ಸಿಲಿಂಡರ್ ಸ್ಪೋಟದಲ್ಲಿ ಚಿಕಿತ್ಸೆ ಫಲಿಸದೆ  ಇಬ್ಬರು ಮಾಲಾದಾರಿಗಳು ಮೃತ್ಯು Read More »

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..!

ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಹೋಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ. ಶಾಪ್, ಎಲೆಕ್ನಿಕಲ್ ಹಾಗೂ ಹೋಟೆಲ್ ಅಂಗಡಿಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ಬಲೆಗೆ ಸಿಲುಕಿ ಅಂಗಡಿಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಭಸ್ಮವಾಗಿದೆ.  ಎಲೆಕ್ನಿಕ್ ಬ್ಯಾಟರಿಗಳು, ಎಲೆಕ್ನಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಒಟ್ಟು ಅಂದಾಜು 30 ಲಕ್ಷದ ವಸ್ತುಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ತಗುಲಿ ಸುತ್ತಲೆಲ್ಲಾ

ಬಳ್ಳಾರಿ : ಬೆಂಕಿಗೆ ಆಹುತಿಯಾದ ಮೂರು ಅಂಗಡಿ..! Read More »

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ

ಮುಲ್ಕಿ:  ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ. ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್‍ ತುಂಡಾಗಿದ್ದು. ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ರೈಲ್ವೇ ಗೇಟ್ ಸಿಬ್ಬಂದಿ ರೈಲು ಬರುವ ಹೊತ್ತಿನಲ್ಲಿ ಗೇಟ್ ಹಾಕಲು ಮುಂದಾಗುವ ವೇಳೆ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಇಂದ್ರ ನಗರ ರೈಲ್ವೇ ಗೇಟ್ ತಲುಪುತ್ತಿದ್ದಂತೆ ಪಿಕಪ್ ಚಾಲಕ

ಚಾಲಕನ ನಿರ್ಲ್ಯಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಪಿಕಪ್‍ ಡಿಕ್ಕಿ Read More »

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು

ಮಣಿಪಾಲ : ಬಾವಿಯೊಳಗೆ ಬಿದ್ದ ಕೊಡಪಾನವನ್ನು  ತೆಗೆಯಲು ಹೋಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸರಳೆಬೆಟ್ಟುವಿನ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ(50) ಎಂದು ಗುರುತಿಸಲಾಗಿದೆ. ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿಯುವಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಭೇಟಿ ನೀಡಿ,  ಶಿವ ನಾಯ್ಕ ಅವರನ್ನು ಬಾವಿಯಿಂದ ಮೇಲೆಕ್ಕೆತ್ತಿ,  ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ

ಕೊಡಪಾನ  ತೆಗೆಯುವಾಗ ಬಾವಿಯೊಳಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು

ಬೆಳ್ತಂಗಡಿ : ಕಾಡಿಗೆ ಸೊಪ್ಪು ತರಲು ಹೋದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಮಾಲ್ಯಳ ಕಾಡಿನಲ್ಲಿ ನಡೆದಿದೆ. ಪೊದಿಂಬಿಲ ನಿವಾಸಿ ರಾಜೇಶ್ ಆಚಾರ್ಯ (36) ಮೃತಪಟ್ಟವರು. ಸೋಮವಾರ ಮಾಲ್ಯಳ ಕಾಡಿಗೆ ಮಕ್ಕಳಿಗೆ ಮದ್ದಿನ ಸೊಪ್ಪು ತರಲು ಹೋದ ವ್ಯಕ್ತಿ ವಾಪಾಸು ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟ ನಡೆಸಿದಾಗ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಮೃತರು ತಂದೆ ಆನಂದ ಆಚಾರ್ಯ ಅವರನ್ನು ಅಗಲಿದ್ದಾರೆ. ಮೃತರು ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿ

ಕಾಲು ಜಾರಿ ಬಿದ್ದು ವ್ಯಕ್ತಿ ಮೃತ್ಯು Read More »

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ

ಪುಣೆ: ಫುಟ್‌ಪಾತ್‌ನಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಟ್ರಕ್ ಹರಿದು ಇಬ್ಬರು ಪುಟ್ಟ ಮಕ್ಕಳು ಸೇರಿದಂತೆ ಮೂವರು ಮೃತಪಟ್ಟಿರುವ ದಾರುಣ ಘಟನೆ ಭಾನುವಾರ ತಡರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಚಾಲಕ ಪಾನಮತ್ತನಾಗಿದ್ದು ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾತ್ರಿ ಸುಮಾರು 1 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ.ಮೃತರನ್ನು ವಿಶಾಲ್ ಪವಾರ್ (22) ಮತ್ತು ಪುಟ್ಟ ಮಕ್ಕಳಾದ ವೈಭವಿ ಪವಾರ್(1), ವೈಭವ್ ರಿತೇಶ್ ಪವಾರ್ (2) ಎಂದು ಗುರುತಿಸಲಾಗಿದೆ. ಎಲ್ಲರೂ ಅಮರಾವತಿಯವರಾಗಿದ್ದಾರೆ. ಪುಣೆಯ ವಾಘೋಲಿಯಲ್ಲಿ ಮಧ್ಯರಾತ್ರಿ 1ರ ಸುಮಾರಿಗೆ ಪಾನಮತ್ತ

ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಚಲಿಸಿದ ಟ್ರಕ್‌ : ಮೂವರು ಮೃತ್ಯು, ಆರು ಮಂದಿಗೆ ಗಾಯ Read More »

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು

ಪೆರ್ಲ : ಪೇಟೆಯ ಕಟ್ಟಡವೊಂದಕ್ಕೆ ನಿನ್ನೆ ತಡ ರಾತ್ರಿ ಬೆಂಕಿ ಹೊತ್ತಿದ್ದು, ಐದು ಅಂಗಡಿಗಳು ಸಂಪೂರ್ಣವಾಗಿ  ಉರಿದು ನಾಶವಾದ ಘಟನೆ ನಡೆದಿದೆ. ಇಲ್ಲಿನ ಬದಿಯಡ್ಕ ಪುತ್ತೂರು ರಸ್ತೆಯ ಎಡಭಾಗದಲ್ಲಿರುವ ಪೂಜಾ ಫ್ಯಾನ್ಸಿ, ಪೈಗಳ ಕ್ಲೋತ್ ಸ್ಟೋರ್ ಸಹಿತ ಪೇಪರ್ ವಿತರಣ ಸೆಂಟರ್,ಪ್ರವೀಣ್ ಆಟೋಮೊಬೈಲ್ಸ್,ಸದಾತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಎಂಬಿ ಅಂಗಡಿ ಮುಂಗಟ್ಟು ಈ ಕಟ್ಟಡದಲ್ಲಿ ಕಾರ್ಯಚರಿಸುತ್ತಿದ್ದೂ ಸಂಪೂರ್ಣ ಬೆಂಕಿಗೆ ಅಹುತಿಯಾಗಿದೆ. ಮಧ್ಯರಾತ್ರಿ 12 ಗಂಟೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು ಸ್ಥಳೀಯರು ಸೇರಿದ ಬಳಿಕ ಅಗ್ನಿಶಾಮಕ ದಳಕ್ಕೆ

ಪೆರ್ಲ ಅಂಗಡಿ ಕಟ್ಟಡವೊಂದರಲ್ಲಿ ತಡ ರಾತ್ರಿ ಅಗ್ನಿ ಅವಘಡ | ಹೊತ್ತಿ ಉರಿದ ಐದು ಅಂಗಡಿಗಳು Read More »

ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಪುತ್ತೂರು: ಎಲೆಕ್ಟ್ರಿಕ್ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬೊಳ್ಳಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ. ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಆಟೋ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ವುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬಸ್ಸಿನಡಿಗೆ ಬಿದ್ದು ಸ್ಕೂಟರ್‌ ಸವಾರ ಮೃತ್ಯು

ಬೆನ್ನಟ್ಟಿದ ಟ್ರಾಫಿಕ್‌ ಪೊಲೀಸ್‌ ಬಸ್‌ ಏರಿ ಪಲಾಯನ ಮಂಗಳೂರು: ಹೆಲ್ಮೆಟ್ ಧರಿಸದ ಕಾರಣಕ್ಕೆ ಪೊಲೀಸರು ಬೆನ್ನುಹತ್ತಿದಾಗ ತಪ್ಪಿಸಿಕೊಳ್ಳಲು ವೇಗವಾಗಿ ವಾಹನ ಚಲಾಯಿಸಿದ ಸ್ಕೂಟರ್‌ ಸವಾರ ಬಸ್ಸಿನಡಿಗೆ ಬಿದ್ದು ಸಾವಿಗೀಡಾದ ಘಟನೆ ನಿನ್ನೆ ರಾತ್ರಿ ಸುರತ್ಕಲ್‌ನಲ್ಲಿ ಸಂಭವಿಸಿದೆ. ಸುರತ್ಕಲ್‌ನ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಅಪಘಾತ ಸಂಭವಿಸಿದಾಗ ರಕ್ಷಣೆಗೆ ಧಾವಿಸಬೇಕಾದ ಪೊಲೀಸರು ಬಸ್‌ ಹತ್ತಿ ಪಲಾಯನ ಮಾಡಿರುವುದಕ್ಕೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ದ್ವಿಚಕ್ರ

ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಬಸ್ಸಿನಡಿಗೆ ಬಿದ್ದು ಸ್ಕೂಟರ್‌ ಸವಾರ ಮೃತ್ಯು Read More »

error: Content is protected !!
Scroll to Top