ಅಪಘಾತ

ಕಡಬದಲ್ಲಿ ಆನೆ ದಾಳಿ: ಗಾಯಾಳು ಚೋಮ ಆಸ್ಪತ್ರೆಗೆ

ಕಡಬ: ಕಡಬ ತಾಲೂಕಿನ ಮರ್ಧಾಳ ಸಮೀಪದ ನೆಲ್ಯಡ್ಕ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ಚೋಮ ಎಂಬವರು ಕಾಡಾನೆ ದಾಳಿಯಿಂದ ಗಾಯಗೊಂಡವರು. ಗಾಯಗೊಂಡ ಚೋಮ ಅವರು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೀಗ ಪರಿಸರದಲ್ಲಿ ಮತ್ತೆ ಜನರಲ್ಲಿ ಆತಂಕ ಶುರುವಾಗಿದೆ.

ಕಡಬದಲ್ಲಿ ಆನೆ ದಾಳಿ: ಗಾಯಾಳು ಚೋಮ ಆಸ್ಪತ್ರೆಗೆ Read More »

ರಿಕ್ಷಾ ಚಾಲಕರ ಕಾರ್ಯಾಚರಣೆಯಿಂದ ಪತ್ತೆಯಾಯ್ತು ಹಿಟ್ ಆ್ಯಂಡ್ ರನ್’ಗೈದ ಬೊಲೇರೊ!! | ಬೊಲೇರೊದಲ್ಲಿದ್ದ ಅಧಿಕಾರಿಗಳ್ಯಾರು?

ಸವಣೂರು: ಸರ್ವೆಯಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ರೈಲ್ವೇ ಅಧಿಕಾರಿಗಳಿದ್ದ ಬೊಲೆರೋ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಪರಾರಿಯಾದ ಘಟನೆ ಸೆ.27ರಂದು ನಡೆದಿದೆ. ಅಪಘಾತದಿಂದ ದ್ವಿಚಕ್ರ ವಾಹನ ಜಖಂಗೊಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಗಾಯವಾಗಿದ್ದು, ರಿಕ್ಷಾ ಚಾಲಕ ಅವಿನಾಶ್ ಎಂಬವರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತ ಪರಾರಿಯಾದ ಬೊಲೆರೋ ವಾಹನವನ್ನು ಪತ್ತೆ ಮಾಡುವ ಹಿನ್ನೆಲೆಯಲ್ಲಿ ರಿಕ್ಷಾ ಚಾಲಕರು ಕಾರ್ಯಾಚರಣೆ ನಡೆಸಿ ಸರ್ವೆ ಗೌರಿ ಹೊಳೆಯ ಪಕ್ಕದಲ್ಲಿ ರೈಲ್ವೇ ನಿಲ್ದಾಣಕ್ಕೆ ಹೋಗುವ ಕಾಲುದಾರಿಯಲ್ಲಿ ಮರಗಳ ನಡುವೆ ವಾಹನವನ್ನು ಪತ್ತೆ

ರಿಕ್ಷಾ ಚಾಲಕರ ಕಾರ್ಯಾಚರಣೆಯಿಂದ ಪತ್ತೆಯಾಯ್ತು ಹಿಟ್ ಆ್ಯಂಡ್ ರನ್’ಗೈದ ಬೊಲೇರೊ!! | ಬೊಲೇರೊದಲ್ಲಿದ್ದ ಅಧಿಕಾರಿಗಳ್ಯಾರು? Read More »

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಶಾಲಾ ಬಸ್ ಹಾಗೂ ಆಟೋ ರಿಕ್ಷಾ ಪರಸ್ಪರ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ದಾರುಣ ಘಟನೆ ಸೆ.25 ರಂದು ಸಂಜೆ 5 ಗಂಟೆಗೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ‌ ಪೆರ್ಲ ಭಾಗದಿಂದ ಚಲಿಸುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಬಸ್ ಮತ್ತು ಮೊಗ್ರಲ್ ಪುತ್ತೂರು ಮೂಲದ ರಿಕ್ಷಾ ಅಪಘಾತಕ್ಕಿಡಾಗಿರುವುದಾಗಿ ತಿಳಿದು ಬಂದಿದೆ.  ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಡ್ರೈವರ್ ಸಹಿತ ಓರ್ವ ಪುರುಷ ಹಾಗೂ ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಕ್ಕಳನ್ನು ಪೆರ್ಲ

ಶಾಲಾ ಬಸ್-ರಿಕ್ಷಾ ಡಿಕ್ಕಿ : ಐವರು ಸ್ಥಳದಲ್ಲೇ ಮೃತ್ಯು Read More »

ಸಹಪ್ರಯಾಣಿಕನಿಗಾಗಿ ಜೀವ ಕಳೆದುಕೊಂಡ ಪ್ರಗತಿಪರ ಕೃಷಿಕ ಅಚ್ಯುತ ಗೌಡ | ಚಾಲಕ, ನಿರ್ವಾಹಕರ ಬೇಜವಾಬ್ದಾರಿ ವಿರುದ್ಧ ಪ್ರಕರಣ ದಾಖಲು

ಕಡಬ: ಸಹಪ್ರಯಾಣಿಕನನ್ನು ರಕ್ಷಿಸಲು ಹೋಗಿ ಪ್ರಗತಿಪರ ಕೃಷಿಕರೋರ್ವರು ಜೀವ ಕಳೆದುಕೊಂಡ ಘಟನೆ ಕಡಬದಲ್ಲಿ ನಡೆದಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಗತಿಪರ ಕೃಷಿಕ, ಕಳಾರ ಸಮೀಪದ ಕುದ್ಕೋಳಿ ನಿವಾಸಿ ಅಚ್ಯುತ ಗೌಡ (63) ಮೃತ ಪಟ್ಟವರು. ಬಲ್ಯ ನಿವಾಸಿ ಚಂದ್ರಶೇಖರ ಗಾಯಗೊಂಡವರು. ಅಚ್ಯುತ ಗೌಡರವರು ಸೊಸೈಟಿಗೆ ಹಾಲು ಕೊಡಲು ಬಂದವರು ವಾಪಸ್ಸು ಮನೆಗೆ ತೆರಳುವ ವೇಳೆ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಅಪಘಾತ ನಡೆದ ಬಸ್ಸು, ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿತ್ತು. ಕಡಬ ಬಸ್ಸು ನಿಲ್ದಾಣದಿಂದ

ಸಹಪ್ರಯಾಣಿಕನಿಗಾಗಿ ಜೀವ ಕಳೆದುಕೊಂಡ ಪ್ರಗತಿಪರ ಕೃಷಿಕ ಅಚ್ಯುತ ಗೌಡ | ಚಾಲಕ, ನಿರ್ವಾಹಕರ ಬೇಜವಾಬ್ದಾರಿ ವಿರುದ್ಧ ಪ್ರಕರಣ ದಾಖಲು Read More »

ಕಾರು ಡಿಕ್ಕಿ : ಮದ್ರಸ ವಿದ್ಯಾರ್ಥಿ ಮುಹಮ್ಮದ್ ಅದಿಲ್ ಮೃತ್ಯು

ಪುತ್ತೂರು: ಕಾರು ಅಪಘಾತದಲ್ಲಿ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ಶನಿವಾರ ನಡೆದಿದೆ.ಮುಹಮ್ಮದ್ ಅದಿಲ್ (5) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಎಂಬವರ ಪುತ್ರ, ನುಸ್ರತುಲ್ ಇಸ್ಲಾಂ ಮದ್ರಸದ ವಿದ್ಯಾರ್ಥಿಯಾಗಿರುವ ಮುಹಮ್ಮದ್ ಅದಿಲ್ ಗೆ ಪುತ್ತೂರು ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಬಾಲಕನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಡಿಕ್ಕಿ : ಮದ್ರಸ ವಿದ್ಯಾರ್ಥಿ ಮುಹಮ್ಮದ್ ಅದಿಲ್ ಮೃತ್ಯು Read More »

ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು

ಪುತ್ತೂರು: ಇರ್ದೆ ಗ್ರಾಮದ ಪದರಂಜ ಎಂಬಲ್ಲಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಪದರಂಜ ನಿವಾಸಿ ರಾಮಣ್ಣ ಪೂಜಾರಿ ಮೃತಪಟ್ಟವರು. ಶನಿವಾರ ಮನೆ ಬಳಿಯ ತೆಂಗಿನ ಮರ ಹತ್ತಿದ್ದಾರೆ. ಆಕಸ್ಮಾತ್ ಮರದಿಂದ ಜಾರಿ ಕೆಳಗೆ ಬಿದ್ದು ಮೃತಪಟ್ಟರೆನ್ನಲಾಗಿದೆ. ಈ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದು ಬಂದಿದೆ

ತೆಂಗಿನ ಮರದಿಂದ ಕಾಲು ಜಾರಿ ಬಿದ್ದು ರಾಮಣ್ಣ ಪೂಜಾರಿ ಮೃತ್ಯು Read More »

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು!

ಬಂಟ್ವಾಳ: ಕಾರು ಢಿಕ್ಕಿಯಾಗಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ನಡೆದಿದೆ. ಕೆಂಪುಗುಡ್ಡೆ ನಿವಾಸಿ ವಿನಾಯಕ ಪೈ ಮೃತಪಟ್ಟ ದುರ್ದೈವಿ. ವಿನಾಯಕ ಪೈ ತಮ್ಮ ಮನೆಯಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಬೆಳಗ್ಗಿನ ಉಪಹಾರ ತರಲೆಂದು ವಗ್ಗದ ಹೊಟೇಲೊಂದಕ್ಕೆ ಹೋಗುವ ವೇಳೆ ಈ ಅಪಘಾತ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವ್ಯಾಗನಾರ್ ಕಾರು ರಿಕ್ಷಾಕ್ಕೆ ಡಿಕ್ಕಿಯಾದ ಪರಿಣಾಮ ವಿನಾಯಕ ಪೈ ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಆಸ್ಪತ್ರೆಗೆ

ಕಾರು ಢಿಕ್ಕಿಯಾಗಿ ಆಟೋ ಚಾಲಕ ವಿನಾಯಕ ಪೈ ಮೃತ್ಯು! Read More »

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು

ಬೆಳ್ತಂಗಡಿ : ಮನೆಯ ಪಕ್ಕದಲ್ಲಿದ್ದ ಮರ ಕಡಿಯುವ ಸಂದರ್ಭ ಆಕಸ್ಮಿಕವಾಗಿ ಮರ ವ್ಯಕ್ತಿಯ ಮೇಲೆ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆರಿಯದಲ್ಲಿ ಸೆ. 23ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಮಂಜಲ್ಪಳಿಕೆ ನಿವಾಸಿ ರಾಮಣ್ಣ ಗೌಡ (58) ಸಾವನ್ನಪ್ಪಿದ ವ್ಯಕ್ತಿ. ತಕ್ಷಣ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದರೂ ಪ್ರಯೋಜವಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಬೆಳ್ತಂಗಡಿ ಶವಾಗಾರಕ್ಕೆ ಸಾಗಿಸಲಾಗಿದೆ.

ಕಡಿಯುವಾಗ ವ್ಯಕ್ತಿಯ ಮೇಲೆ ಬಿದ್ದ ಮರ: ಸಾವು Read More »

ಬಿಎಂಡಬ್ಲ್ಯು ಬೈಕ್ ಭೀಕರ ಅಪಘಾತ: ಪಾರ್ಟಿ ಮುಗಿಸಿ ವಾಪಾಸಾಗುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಂಬಕ್ಕೆ ಬಿಎಂಡಬ್ಲ್ಯು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಯಶವಂತಪುರದ ಆರ್‌.ಎಂ.ಸಿ. ಯಾರ್ಡ್‌ ಬಳಿ ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರನ್ನು 31 ವರ್ಷದ ಮನಮೋಹನ್‌ ಹಾಗೂ 25 ವರ್ಷದ ನಿಖಿಲ್‌ ಎಂದು ಗುರುತಿಸಲಾಗಿದೆ. ಯಶವಂತಪುರದಿಂದ ಆರ್‌.ಎಮ್‌.ಸಿ. ಯಾರ್ಡ್ ರೋಡ್ ಕಡೆ ಡ್ರೈವ್ ಮಾಡುತ್ತಿದ್ದ ಇವರು ಮದ್ಯ ಸೇವಿಸಿದ್ದರು ಹಾಗೂ ಅತಿವೇಗದಿಂದ ಚಾಲನೆ ಮಾಡಿದ್ದರು ಎನ್ನಲಾಗಿದೆ. ಇಬ್ಬರೂ ಹೆಲ್ಮೆಟ್ ಕೂಡ ಧರಿಸಿರಲಿಲ್ಲ. ಸ್ನೇಹಿತರ

ಬಿಎಂಡಬ್ಲ್ಯು ಬೈಕ್ ಭೀಕರ ಅಪಘಾತ: ಪಾರ್ಟಿ ಮುಗಿಸಿ ವಾಪಾಸಾಗುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಸಾವು Read More »

ಜೋಡಣೆ ಕಳಚಿದ ಕಾಂಕ್ರೀಟ್ ಮಿಕ್ಸರ್ ಯಂತ್ರ ಪ್ರಪಾತಕ್ಕೆ..!!

ಪುತ್ತೂರು: ಚಲಿಸುತ್ತಿದ್ದ ವಾಹನದಿಂದ ಕಾಂಕ್ರೀಟ್ ಮಿಕ್ಸರ್ ಯಂತ್ರ ಕಳಚಿ, ಪಕ್ಕದ ಬರೆಯಿಂದ ಕೆಳಗೆ ಉರುಳಿದ ಘಟನೆ ಶುಕ್ರವಾರ ಬೆಳಿಗ್ಗೆ ಬೊಳುವಾರಿನಲ್ಲಿ ನಡೆದಿದೆ. ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ವಾಹನವೊಂದಕ್ಕೆ ಜೋಡಿಸಿ, ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಕಾಂಕ್ರೀಟ್ ಮಿಕ್ಸರ್ ಯಂತ್ರ ವಾಹನದ ಜೋಡಣೆಯಿಂದ ಕಳಚಿ, ನಿಯಂತ್ರಣ ಕಳೆದುಕೊಂಡಿದೆ. ಈ ಮಿಕ್ಸರ್ ಯಂತ್ರ ಪಕ್ಕದ ಬರೆಯಿಂದ ಕೆಳಗೆ ಉರುಳಿ ಬಿದ್ದಿದೆ. ಘಟನೆಯಿಂದ ಯಾರಿಗೂ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ.

ಜೋಡಣೆ ಕಳಚಿದ ಕಾಂಕ್ರೀಟ್ ಮಿಕ್ಸರ್ ಯಂತ್ರ ಪ್ರಪಾತಕ್ಕೆ..!! Read More »

error: Content is protected !!
Scroll to Top