ಅಪಘಾತ

ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ಪುತ್ತೂರು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಇಂದು ಮುಂಜಾನೆ ನಡೆದಿದೆ. ನೆಕ್ಕಿಲಾಡಿಯಲ್ಲಿ ಈ ಘಟನೆ ನಡೆದಿದ್ದು, ಪರಿಣಾಮ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಘಟನೆಯಿಂದ ವಿದ್ಯುತ್ ಕಂಬಕ್ಕೆ ಮತ್ತು ಲಾರಿಗೆ ಹಾನಿಯಾಗಿದೆ.

ನಿಯಂತ್ರಣ ತಪ್ಪಿದ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ನೆಲ್ಯಾಡಿ: ಕಾರು ಮತ್ತು ಮಿನಿ ಲಾರಿ ಡಿಕ್ಕಿ ಹೊಡೆದು ಅಪಘಾತಕ್ಕೀಡಾದ ಘಟನೆ ಶಿರಾಡಿ ಗ್ರಾಮದ ಬರ್ಚಿನಹಳ್ಳದಲ್ಲಿ ನಿನ್ನೆ ನಡೆದಿದೆ. ನಿನ್ನೆ ಸಂಜೆ ಕಾರು ಮತ್ತು ಮಿನಿ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಜೈಪುರ ಮೂಲದ ಅಬ್ದುಲ್ ಶುಕ್ರು ಚೌಧರಿ ಮೃತಪಟ್ಟು, ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಹುಂಡೈ ಕಂಪನಿಯ ಕಾರು, ಬೆಂಗಳೂರು ಕಡೆಯಿಂದ ಬರುವ ಮಿನಿ ಲಾರಿ ಎನ್ನಲಾಗಿದೆ. ಕಾರಿನಲ್ಲಿ ಮೃತಪಟ್ಟ ಅಬ್ದುಲ್ ಅವರ ಪತ್ನಿ ಲತಿಕಾ, ಮಗಳು ಅನ್ವೇಷ, ಅಳಿಯ

ಕಾರು- ಮಿನಿ ಲಾರಿ ಡಿಕ್ಕಿ | ಓರ್ವ ಮೃತ್ಯು, ನಾಲ್ವರಿಗೆ ಗಂಭೀರ ಗಾಯ Read More »

ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್‌ : 12 ಮಂದಿ ಸ್ಥಳದಲ್ಲೇ ಸಾವು

ಭೋಪಾಲ : ಮಧ್ಯಪ್ರದೇಶದ ಮಂಡಸೋರ್ ಜಿಲ್ಲೆಯಲ್ಲಿ ಭಾನುವಾರ ವ್ಯಾನ್‌ ಬಾವಿಗೆ ಬಿದ್ದು ಅದರಲ್ಲಿದ್ದ 12 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ವ್ಯಾನ್‌ ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ರಕ್ಷಿಸಲು ಬಾವಿಗೆ ಹಾರಿದ ಯುವಕನೂ ಸಾವಿಗೀಡಾಗಿದ್ದಾನೆ. ಮೃತಪಟ್ಟವರಲ್ಲಿ ನಾಲ್ವರು ಮಹಿಳೆಯರೂ ಸೇರಿದ್ದಾರೆ. ನಾಲ್ಕು ಮಂದಿಯನ್ನು ರಕ್ಷಿಸಲಾಗಿದೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ವ್ಯಾನಿನಲ್ಲಿ ಪ್ರಯಾಣಿಸುತ್ತಿದ್ದರು. ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ

ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ವ್ಯಾನ್‌ : 12 ಮಂದಿ ಸ್ಥಳದಲ್ಲೇ ಸಾವು Read More »

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ

ಪುತ್ತೂರು : ಕಾರು ಮತ್ತು ಅಕ್ಟಿವಾ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ಬಳಿ ನಡೆದಿದೆ. ಘಟನೆಯಿಂದಾಗಿ ಆಕ್ಟಿವಾ ಸಂಪೂರ್ಣ ಜಖಂಗೊಂಡಿದೆ. ಕೊಡಿಪ್ಪಾಡಿ ನಿವಾಸಿ ರಫೀಕ್ ಎಂಬಾತನಿಗೆ ಗಂಭೀರ ಗಾಯಗಳಾಗಿವೆ. ಅದೇ ರಸ್ತೆಯಾಗಿ ತೆರಳುತ್ತಿದ್ದ ಉದ್ಯಮಿ ಉಜ್ವಲ್ ಪ್ರಭು ತಕ್ಷಣ ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾರು-ಆಕ್ಟಿವಾ ಡಿಕ್ಕಿ | ಆಕ್ಟಿವಾ ಸವಾರ ಗಂಭೀರ ಗಾಯ Read More »

ಬಾಲಕನಿಗೆ ಆಟೋರಿಕ್ಷಾ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ 1.41 ಕೋ. ರೂ. ದಂಡ!

ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವಿಗೀಡಾಗಿದ್ದ ಪ್ರಕರಣ ಬೆಂಗಳೂರು: ಬಾಲಕನಿಗೆ ಆಟೋರಿಕ್ಷಾ ನೀಡಿ ಅಪಘಾತದಲ್ಲಿ ಒಬ್ಬರ ಸಾವಿಗೆ ಕಾರಣನಾದ ಆಟೋರಿಕ್ಷಾದ ಮಾಲೀಕನಿಗೆ ನ್ಯಾಯಾಲಯ ಬರೋಬ್ಬರಿ 1.41 ಕೋಟಿ ದಂಡ ವಿಧಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಮಂಗಳವಾರ ವಿಚಾರಣೆ ನಡೆಸಿದ ಹಿರಿಯ ಸಿವಿಲ್ ನ್ಯಾಯಾಧೀಶ ರಮೇಶ ಎಸ್‌.ಗಾಣಿಗೇರ ಈ ದಂಡದ ಮೊತ್ತವನ್ನು ಮೃತನ ಕುಟುಂಬಕ್ಕೆ ನೀಡುವಂತೆ ಆದೇಶಿಸಿದ್ದಾರೆ. 2021ರ ಮಾರ್ಚ್ 10ರಂದು ಯಲಬುರ್ಗಾದಲ್ಲಿ ಅಪಘಾತ ನಡೆದಿತ್ತು. ಈ ಅಪಘಾತದಲ್ಲಿ ಯಲಬುರ್ಗಾದ ಪ್ರಥಮ ದರ್ಜೆ ಕಾಲೇಜಿನ ಸಹಾಯಕ

ಬಾಲಕನಿಗೆ ಆಟೋರಿಕ್ಷಾ ಚಲಾಯಿಸಲು ಕೊಟ್ಟಿದ್ದ ಮಾಲೀಕನಿಗೆ 1.41 ಕೋ. ರೂ. ದಂಡ! Read More »

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು

ಪುತ್ತೂರು: ಬೈಕ್ ಮತ್ತು ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‍ ಸವಾರ ಮೃತಪಟ್ಟ ಘಟನೆ ಕುಂಟಾರು ಬಳಿ ಇಂದು ನಡೆದಿದೆ. ಯೋಗಿ ಎಂಬಾತ ಅಪಘಾತದಲ್ಲಿ ಮೃತಪಟ್ಟವರು ಗಾಳಿಮುಖ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯೋಗಿ ಮೂಲತಃ ಕೊಟ್ಯಾಡಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿಪ್ಪರ್-ಬೈಕ್‍ ಡಿಕ್ಕಿ : ಬೈಕ್‍ ಸವಾರ ಮೃತ್ಯು Read More »

ಕಾರುಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

ಬೆಳ್ತಂಗಡಿ : ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿ ಸಮೀಪ ಕೆದ್ದು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಏ.21ರಂದು ಸಂಜೆ ನಡೆದಿದೆ. ಅಳದಂಗಡಿಯಿಂದ ಗುರುವಾಯನಕೆರೆ ಕಡೆಗೆ ತೆರಳುತ್ತಿದ್ದ ಕಾರು ಗುರುವಾಯನಕೆರೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮತ್ತೊಂದು ಕಾರಿಗೆ ಮುಖಾಮುಖಿ ಡಿಕ್ಕಿಹೊಡೆದಿದೆ. ಗಾಯಗೊಂಡವರನ್ನು ಗೇರುಕಟ್ಟೆಯ ನಿವಾಸಿಗಳಾದ ಕುಸುಮಾವತಿ (75), ಭಾಗ್ಯವತಿ (50) ಮತ್ತು ವೈಭವ್ (23) ಎಂದು ಗುರುತಿಸಲಾಗಿದೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರುಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ Read More »

ವಿಮಾನಕ್ಕೆ ಬೆಂಕಿ ಹತ್ತಿಕೊಂಡರೂ 282 ಪ್ರಯಾಣಿಕರು ಪವಾಡಸದೃಶವಾಗಿ ಪಾರು

ಟೇಕಾಫ್‌ ಆಗುತ್ತಿದ್ದ ವಿಮಾನದ ಎರಡೂ ಇಂಜಿನ್‌ಗಳಲ್ಲಿ ಬೆಂಕಿ ವಾಷಿಂಗ್ಟನ್‌: ಅಮೆರಿಕದ ಫ್ಲೋರಿಡಾದಲ್ಲಿ ಭೀಕರ ವಿಮಾನ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, 282 ಪ್ರಯಾಣಿಕರು ಪವಾಡಸದೃಶವಾಗಿ ಪಾರಾಗಿದ್ದಾರೆ. ಸೋಮವಾರ (ಸ್ಥಳೀಯ ಸಮಯ) ಒರ್ಲ್ಯಾಂಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೆಲ್ಟಾ ಏರ್ ಲೈನ್ಸ್ ವಿಮಾನ ಟೇಕ್ ಆಫ್ ಆಗುವಾಗ ವಿಮಾನದ ಎರಡೂ ಇಂಜಿನ್‌ಗೆ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಗಮನಿಸಿದ ಪೈಲಟ್ ಕೂಡಲೇ ವಿಮಾನವನ್ನು ನಿಲ್ಲಿಸಿದ್ದು, ನಂತರ ಪ್ರಯಾಣಿಕರನ್ನು ತುರ್ತು ಸ್ಲೈಡ್‌ಗಳ ಮೂಲಕ ಸ್ಥಳಾಂತರಿಸಲಾಗಿದೆ.ಅಟ್ಲಾಂಟಾಗೆ ತೆರಳುತ್ತಿದ್ದ ವಿಮಾನ ರನ್‌ವೇಗೆ ಹೊರಟಾಗ ಎರಡು

ವಿಮಾನಕ್ಕೆ ಬೆಂಕಿ ಹತ್ತಿಕೊಂಡರೂ 282 ಪ್ರಯಾಣಿಕರು ಪವಾಡಸದೃಶವಾಗಿ ಪಾರು Read More »

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ಕಾರು ಹಾಗೂ ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯ ಸಮೀಪ ವಾಲ್ತಾಜೆ ಸೇತುವೆ ಬಳಿ ಭಾನುವಾರ ಸಂಜೆ ಸಂಭವಿಸಿದೆ. ಅಡ್ಡಹೊಳೆ ಸಮೀಪದ ಪೇರಮಜಲು ನಿವಾಸಿ ಪ್ರಭಾಕರ (40) ಮೃತಪಟ್ಟವರು. ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ತೆರಳುತ್ತಿದ್ದ ಆಟೋಕ್ಕೆ, ಬೆಂಗಳೂರಿನಿಂದ ಉಪ್ಪಿನಂಗಡಿಯತ್ತ ಬರುತ್ತಿದ್ದ ಕಾರು ಡಿಕ್ಕಿಯಾದ ಪರಿಣಾಮ ಆಟೋ ಚಾಲಕ ರಸ್ತೆ ಮೇಲೆಯೇ ಎಸೆಯಲ್ಪಟ್ಟಿದ್ದು ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ

ಕಾರು-ಆಟೋ ಡಿಕ್ಕಿ: ಆಟೋ ಚಾಲಕ ಸ್ಥಳದಲ್ಲೇ ಮೃತ್ಯು Read More »

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ!

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೆಟ್ಟು ನಿಂತಿದ್ದ ಇಂಡಿಗೋ ವಿಮಾನಕ್ಕೆ ಟೆಂಪೊ ಟ್ರಾವೆಲ್ಲರ್ ಡಿಕ್ಕಿ ಹೊಡೆದ ಘಟನೆ ಶನಿವಾರ ಸಂಜೆ ನಡೆದಿದೆ. ಇಂಜಿನ್ ಸಮಸ್ಯೆಯಿಂದ ಏರ್‌ಪೋರ್ಟ್‌ ಒಳಭಾಗದ ಅಲ್ಪಾ ಪಾರ್ಕಿಂಗ್ ಬೇ-71ರಲ್ಲಿ ಕೆಲವು ದಿನಗಳಿಂದ ವಿಮಾನವನ್ನು ನಿಲ್ಲಿಸಲಾಗಿತ್ತು. ಇದೇ ವಿಮಾನಕ್ಕೆ ಮುಂಭಾಗದ ಮೂತಿ ಬಳಿ ಟೆಂಪೊ ಟ್ರಾವೆಲ್ಲರ್ ಡಿಕ್ಕಿಯಾಗಿದೆ. ಟೆಂಪೊ ಟ್ರಾವೆಲ್ಲರ್ ವಿಮಾನದ ಮೂತಿ ಭಾಗದ ಕೆಳಗೆ ಸಿಲುಕಿಕೊಂಡು ಟಾಪ್ ಜಖಂ ಆಗಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರನ್‌ವೇಗೆ ಸಿಬ್ಬಂದಿಯನ್ನು ಬಿಟ್ಟು ಬರುತ್ತಿದ್ದ

ವಿಮಾನಕ್ಕೆ ಟೆಂಪೊ ಟ್ರಾವೆಲರ್‌ ಡಿಕ್ಕಿ! Read More »

error: Content is protected !!
Scroll to Top