ಹೊಳೆಗೆ ಸ್ನಾನಕ್ಕಿಳಿದ ಯುವಕ ಹೃದಯಾಘಾತದಿಂದ ಮೃತ್ಯು
ಪುತ್ತೂರು: ಇರ್ದೆ ಬೆಂದ್ರ ತೀರ್ಥದ ಬಳಿ ಹೊಳೆಗೆ ಸ್ನಾನಕ್ಕೆಂದು ಇಳಿದ ಯುವಕ ಹೃದಯಘಾತದಿಂಂದ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಸ್ಥಳೀಯ ನೆಂಟರೊಬ್ಬರ ಮನೆಗೆ ಬಂದಿದ್ದ ಬೊಳುವಾರಿನ ಗ್ಯಾರೇಜೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಜಿತ್ (27.ವ) ಎಂಬ ಯುವಕ ಸ್ನಾನಕ್ಕೆಂದು ಹೊಳೆಗೆ ಇಳಿದ ವೇಳೆಯಲ್ಲಿ ಹೃದಯಘಾತವಾಗಿದೆ. .ನೀರಿನಲ್ಲಿ ತೇಲುತ್ತಿದ್ದ ಯುವಕನನ್ನು ತಕ್ಷಣ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಗಾಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಯನ್ನು ತಿಳಿದುಬಂದಿಲ್ಲ.
ಹೊಳೆಗೆ ಸ್ನಾನಕ್ಕಿಳಿದ ಯುವಕ ಹೃದಯಾಘಾತದಿಂದ ಮೃತ್ಯು Read More »