ಅಪಘಾತ

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತೀವ್ರ ಗಾಯಗೊಂಡು ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ. ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತೀವ್ರ […]

ಬೈಕ್ – ಖಾಸಗಿ ಬಸ್ ಅಪಘಾತ | ಬೈಕ್ ಸವಾರ ಸಾವು Read More »

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು

ಹಾವೇರಿ : ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಮಂದಿ ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಮೃತಪಟ್ಟವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.

ಭೀಕರ ರಸ್ತೆ ಅಪಘಾತ  | 13 ಮಂದಿ  ಸಾವು Read More »

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು

ಬೆಳ್ತಂಗಡಿ : ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಮೃತಪಟ್ಟ ‍ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಇಂದು ನಡೆದಿದೆ. ಶಿಬಾಜೆ ಗ್ರಾಮದ ಬರ್ಗುಳ ನಿವಾಸಿ ಗಣೇಶ್ ಶೆಟ್ಟಿ ಮತ್ತು ರೋಹಿಣಿ ದಂಪತಿ ಪುತ್ರಿ ಪ್ರತೀಕ್ಷಾ ಶೆಟ್ಟಿ (21) ಮೃತಪಟ್ಟ ಯುವತಿ. ಪ್ರತೀಕ್ಷಾ ಸಂಜೆ ಮನೆಯ ರಸ್ತೆ ಸಮೀಪ ಪಾರ್ಸೆಲ್ ಬಂದಿದ್ದರಿಂದ ರಸ್ತೆಗೆ ಬಂದಿದ್ದಾರೆ. ಈ ವೇಳೆ ರಸ್ತೆಯಲ್ಲಿ ಹರಿದಾಡುತ್ತಿದ್ದ ನೀರಿನಲ್ಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಅದನ್ನು ಸ್ಪರ್ಶಿಸಿದ ಅವರಿಗೆ ವಿದ್ಯುತ್ ಶಾಕ್ ಹೊಡೆದಿದೆ. ಸ್ಥಳದಲ್ಲಿದ್ದ

ವಿದ್ಯುತ್ ಶಾಕ್ ಹೊಡೆದು ಯುವತಿ ಮೃತ್ಯು Read More »

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ

ಪುತ್ತೂರು: ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು ಸಿಲುಕಿದ ಘಟನೆ ಬನ್ನೂರು ಸಮೀಪದ ಜೈನರಗುರಿಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿದಿದೆ. ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನ ಈ ಸಂದರ್ಭದಲ್ಲಿ ಪಾರು ಮಾಡಿದ್ದಾರೆ. ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿಗೊಂಡಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಬಿದ್ದ ಮಣ್ಣು ಬಿದ್ದಿರುವುದನ್ನು ಗಮನಿಸಿತಕ್ಷಣ ಎಚ್ಚೆತ್ತು

ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿತ | ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳನ್ನು ಪಾರು ಮಾಡಿದ ತಂದೆ Read More »

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು

ಉಳ್ಳಾಲ: ಭಾರೀ ಮಳೆಗೆ ಬೆಳ್ಳಂಬೆಳಗ್ಗೆ ಮನೆಯ ಹಿಂಬದಿಯ ಕಂಪೌಂಡ್ ಕುಸಿದುಬಿದ್ದು ಒಂದೇ ಕುಟುಂಬದ ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಮದನಿ ನಗರ ಎಂಬಲ್ಲಿ ಬುಧವಾರ ನಡೆದಿದೆ. ಮನೆಯೊಳಗೆ ವಾಸ್ತವ್ಯವಿದ್ದ ಯಾಸಿರ್ (45), ಅವರ ಪತ್ನಿ ಮರಿಯಮ್ಮ (40), ಮಕ್ಕಳಾದ ರಿಯಾನ ಮತ್ತು ರಿಫಾನ ಮೃತಪಟ್ಟವರು. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ರಕ್ಷಣ ಕಾರ್ಯಾಚರಣೆ ನಡೆಸಲಾಗಿದೆ. ಮೂವರ ಶವಗಳನ್ನು ಹೊರ ತೆಗೆಯಲಾಗಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದೆ. ಅಬೂಬಕ್ಕರ್ ಎಂಬವರಿಗೆ ಸಂಬಂಧಿಸಿದ

ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ | ಒಂದೇ ಕುಟುಂಬದ ನಾಲ್ವರು ಮೃತ್ಯು Read More »

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ

ಉಪ್ಪಿನಂಗಡಿ : ಸರಣಿ ಅಪಘಾತ ನಡೆದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ನಡೆದಿದೆ. ಟ್ಯಾಂಕರ್ ಲಾರಿಯೊಂದು ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿ ದೂಡಿಕೊಂಡು ಬಂದ ಹಿನ್ನೆಲೆ ಸ್ವಿಫ್ಟ್ ಕಾರು ಹಿಂಬದಿಯಲ್ಲಿ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿಯಾಗಿ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಆಲ್ಟೋ ಕಾರಿನಲ್ಲಿದ್ದ ಬಜತ್ತೂರಿನ ಮೂವರು ಹಾಗೂ ಸ್ವಿಫ್ಟ್ ಕಾರಿನ ಚಾಲಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ದಿನೇಶ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಲಾರಿ, ರಾಷ್ಟ್ರೀಯ ಹೆದ್ದಾರಿ

ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಯಲ್ಲಿ ಸರಣಿ ಅಪಘಾತ | ಹಲವರಿಗೆ ಗಾಯ Read More »

ಕಾರು – ಸ್ಕೂಟರ್ ಡಿಕ್ಕಿ

ಪಂಜ : ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಇಂದು ಮುಂಜಾನೆ ಪಂಜ ಪೇಟೆಯಲ್ಲಿ ನಡೆದಿದೆ. ಸುಬ್ರಹ್ಮಣ್ಯ ಮಂಜೇಶ್ವರ  ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಪಂಜ ಕಡೆಗೆ ಬರುತ್ತಿದ್ದ ಕಾರು ಮತ್ತು ಕಡಬ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಡಿಕ್ಕಿಯಾಗಿದೆ. ಕಾರಿನ ಮುಂಭಾಗ ಹಾಗೂ ಸ್ಕೂಟರ್ ಜಖಂಗೊಂಡಿದೆ. ಸ್ಕೂಟರ್ ಸವಾರ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಕಾರು – ಸ್ಕೂಟರ್ ಡಿಕ್ಕಿ Read More »

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ

ಉಪ್ಪಿನಂಗಡಿ : ಅಗ್ನಿ ಅವಘಡ ಸಂಭವಿಸಿದ ಘಟನೆ ಉಪ್ಪಿನಂಗಡಿ ಪೃಥ್ವಿ ಕಾಂಪ್ಲೆಕ್ಸ್ ನಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಕಾಂಪ್ಲೆಕ್ಸ್ ನಲ್ಲಿರುವ ಮಳಿಗೆಗಳು ಹೊತ್ತಿ ಉರಿದ ಪರಿಣಾಮ ಫ್ಯಾನ್ಸಿಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಸ್ಥಳದಲ್ಲಿರುವವರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ವೇಗವಾಗಿ ಹರಡಿ ಬೆಂಕಿಗಾಹುತಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿ ಬಳಿಕ ಬೆಂಕಿ ನಂದಿಸಿದ್ದಾರೆ ಎನ್ನಲಾಗಿದೆ. ಸಂತ ಫಿಲೋಮಿನಾ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಪ್ಪಿನಂಗಡಿಯಲ್ಲಿ ಬೆಂಕಿ ಅವಘಡ Read More »

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ

ಮಡಿಕೇರಿ : ಹಳೆಯ ಕಟ್ಟಡವೊಂದು ಹಠಾತ್ತನೆ ಕುಸಿದು ಬಿದ್ದಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಡಗು ಜಿಲ್ಲೆಯ ಗೋಣಿಕೊಪ್ಪ ಪಟ್ಟಣದಲ್ಲಿ ಇಂದು ನಡೆದಿದೆ. ಇಂದು ಮಧ್ಯಾಹ್ನ ಕಟ್ಟಡ ಕುಸಿದುಬಿದ್ದು ನೆಲಸಮಗೊಂಡಿದೆ. ಅಗ್ನಿ ಶಾಮಕದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿರುವವರನ್ನು ಮೈಸೂರು ಆಸ್ಪತೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಮೂವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

ಹಳೆಯ ಕಟ್ಟಡ ಹಠಾತ್ತನೆ ಕುಸಿತ | ಹಲವರು ಗಂಭೀರ | ಮೂವರು ಸಿಲುಕಿಕೊಂಡಿರುವ ಶಂಕೆ Read More »

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ !

ಮಂಜೇಶ್ವರ: ಆರೋಗ್ಯ ಅಧಿಕಾರಿಯೊಬ್ಬರ ಮೃತದೇಹ ಶೌಚಾಲಯದಲ್ಲಿ ಪತ್ತೆಯಾದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಪತ್ತನಂತ್ತಿಟ್ಟದ ಮನೋಜ್ (45) ಎಂಬವರ ಶವ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಮಂಜೇಶ್ವರ ಬ್ಲಾಕ್ ಪಂಚಾಯತ್ ಕುಟುಂಬ ಕಲ್ಯಾಣ ಕೇಂದ್ರದ ಆರೋಗ್ಯಾಧಿಕಾರಿ ಆಗಿದ್ದ ಮನೋಜ್ ಅವರು ಮಂಜೇಶ್ವರ ಎಸ್ ಐ ಟಿ ಶಾಲಾ ಸಮೀಪದ ವಸತಿ ಗೃಹದಲ್ಲಿ ವಾಸವಾಗಿದ್ದರು. ದುರ್ವಾಸನೆ ಕಂಡು ಬಂದ ಹಿನ್ನಲೆಯಲ್ಲಿ ಪರಿಸರ ವಾಸಿಗಳು ಗಮನಿಸಿದಾಗ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ಓರ್ವರೇ ಈ ಕೊಠಡಿಯಲ್ಲಿದ್ದರು ಎನ್ನಲಾಗಿದೆ. ಎರಡು ದಿನಗಳ ಹಿಂದೆ ಹೃದಯಘಾತದಿಂದ

ಆರೋಗ್ಯ ಅಧಿಕಾರಿಯ ಮೃತದೇಹ ಶೌಚಾಲಯದಲ್ಲಿ ಪತ್ತೆ ! Read More »

error: Content is protected !!
Scroll to Top