ಅಪಘಾತ

ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಲಾರಿ ಪಲ್ಟಿ.

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಪಲ್ಟಿಯಾದ ಘಟನೆ ವಿಟ್ಲ ಪೆರುವಾಯಿ ಸಮೀಪದ ಮುಚ್ಚಿರಪದವು ಎಂಬಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಗಾಡಿ ಹೊಂಡಕ್ಕೆ ಬಿದ್ದಿದೆ. ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬೋರ್ ವೆಲ್ ಲಾರಿ ಪಲ್ಟಿ. Read More »

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ

ಕಡಬ:  ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಗಂಭೀರ ಗಾಯಗೊಂಡ ಘಟನೆ ಆಲಂಕಾರು ಪೇಟೆಯಲ್ಲಿ ಗುರುವಾರ ನಡೆದಿದೆ. ಗಾಯಗೊಂಡವರನ್ನು ರಾಮಕುಂಜ ಗ್ರಾಮದ ಶಾರದಾನಗರ ನಿವಾಸಿ ಗುಲಾಬಿ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆ.ಎಸ್‌.ಆರ್‌.ಟಿ.ಸಿ. ಬಸ್ಸಿಗೆ ಗೋಳಿತ್ತಡಿಯಲ್ಲಿ ಹತ್ತಿದ ಮಹಿಳೆ ಆಲಂಕಾರು ಮುಟ್ಟುತ್ತಿದ್ದಂತೆ ಇಳಿಯಲು ಯತ್ನಿಸಿ ರಸ್ತೆಗೆ ಎಸೆಯಲ್ಪಟ್ಟರು. ರಸ್ತೆಗೆ ಬಿದ್ದ ಪರಿಣಾಮ ಮಹಿಳೆಯ ತಲೆಗೆ ಗಂಭೀರ ಗಾಯವಾಗಿದೆ. ತಕ್ಷಣ ಅವರಿಗೆ ಸ್ಥಳೀಯ ಕ್ಲೀನಿಕ್‌ ನಲ್ಲಿ  ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ

ಆಲಂಕಾರಿನಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟು ಮಹಿಳೆಗೆ ಗಾಯ Read More »

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಲ್ಲಿದ್ದವರು ಪಾರು

ಪುತ್ತೂರು: ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೌಡಿಚ್ಚಾರು ಮಡ್ಯಂಗಳ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು, ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದುದೇ, ಘಟನೆಗೆ ಕಾರಣ ಎನ್ನಲಾಗಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ಕಾರಲ್ಲಿದ್ದವರು ಪಾರು Read More »

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

ಸುಳ್ಯ: ಬೈಕ್ ಮತ್ತು ಕಾರಿನ ಮಧ್ಯೆ  ಅಪಘಾತ ನಡೆದು ಬೈಕ್ ಸವಾರ ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ. ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಮೃತಪಟ್ಟವರು. ಆದಿತ್ಯವಾರ ರಾತ್ರಿ ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ

ಬೈಕ್-ಕಾರು ಅಪಘಾತ: ಕೆವಿಜಿ ಕಾಲೇಜು ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು Read More »

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು

ಪುತ್ತೂರು : ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ತೀರದ ಬಳಿ ನಡೆದಿದೆ. ಶರೀಫುದ್ದೀನ್ (19) ವಿದ್ಯುತ್ ಶಾಕ್‍ನಿಂದ ಮೃತಪಟ್ಟ ಯುವಕ. ಹಮ್ಮಬ್ಬ ಎಂಬವರ ಅಳಿಯ ಶರೀಪುದ್ದೀನ್ , ದ್ವಿತಿಯ ಪಿಯುಸಿ ಪರೀಕ್ಷೆಯಲ್ಲಿ ಪಾಸಾಗಿದ್ದು, ಮೇ.21 ರಂದು ಸಂಜೆ ಪುತ್ತೂರು ತಾಲೂಕು ಹಿರೇಬಂಡಾಡಿ ಗ್ರಾಮದ ಅಡೆಕ್ಕಲ್ ಕುಮಾರಧಾರ ನದಿ ಕಿನಾರೆಯ ಬಳಿ ವಿದ್ಯುತ್ ಸ್ಪರ್ಶವಾಗಿ ಅಸ್ವಸ್ಥಗೊಂಡವರನ್ನು ಸಾರ್ವಜನಿಕರ ಮೂಲಕ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ ಎಂಬ ಬಗ್ಗೆ

ವಿದ್ಯುತ್ ಸ್ಪರ್ಶ : ಯುವಕ ಮೃತ್ಯು Read More »

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್

ಪುತ್ತೂರು: ಭಾರೀ ಮಳೆಗೆ ಟಿವಿ, ವಿದ್ಯುತ್ ತಂತಿಗಳಿಗೆ ಹಾನಿಯಾಗಿದ್ದು, ಕೌಡಿಚ್ಚಾರು – ಸುಳ್ಯಪದವು ರಸ್ತೆ ಸಂಚಾರಕ್ಕೆ ತೊಡಕಾಗಿದೆ. ರಸ್ತೆಗಡ್ಡವಾಗಿ ಮರ ಬಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಟ್ರಾನ್ಸ್ ಫಾರ್ಮರ್ ಹಾನಿಯಾಗಿರುವುದರಿಂದ ವಿದ್ಯುತ್ ಕಡಿತ ಉಂಟಾಗಿದೆ. ವಿದ್ಯುತ್ ತಂತಿಗಳು ತುಂಡಾಗಿ ರಸ್ತೆಗೆ ಬಿದ್ದಿವೆ. ಇದರಿಂದ ಜನರ ಓಡಾಟಕ್ಕೂ ತೊಂದರೆಯಾಗಿದೆ. ರಸ್ತೆಗೆ ಬಿದ್ದಿರುವ ಮರವನ್ನು ತೆರವು ಮಾಡುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಇಲಾಖೆಯೂ ವಿದ್ಯುತ್ ತಂತಿಗಳ ಸರಿಪಡಿಸುವ ಕಾರ್ಯದಲ್ಲಿ ಮಗ್ನವಾಗಿದೆ.

ವಿದ್ಯುತ್ ತಂತಿ ರಸ್ತೆಗೆ: ಕೌಡಿಚಾರು – ಸುಳ್ಯಪದವು ರಸ್ತೆ ಸಂಚಾರ ಬಂದ್ Read More »

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ

ಪುತ್ತೂರು: ಎರಡು ಕಾರುಗಳ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಗಾಯಗೊಂಡ ಘಟನೆ ಕಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಭಾನುವಾರ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ಬರುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಎದುರಿನಿಂದ ಬರುತ್ತಿದ್ದ ಮಾರುತಿ 800 ವಾಹನ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ತಕ್ಷಣ ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪುತ್ತೂರು ಸಂಚಾರ

ಎರಡು ಕಾರುಗಳ ಮುಖಾಮುಖಿ ಡಿಕ್ಕಿ – ಆರು ಮಂದಿಗೆ ಗಾಯ Read More »

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಮುಂಭಾಗದಲ್ಲಿ ಬಸ್ಸೊಂದು ಹೊತ್ತಿ ಉರಿದ ಘಟನೆ ಬುಧವಾರ ಮಧ್ಯಾಹ್ನ ವರದಿಯಾಗಿದೆ. ಬೆಂಕಿಗೆ ಆಹುತಿಯಾದ ಬಸ್ ಎಂಆರ್‌ಪಿಯಲ್ ಗೆ ಸೇರಿದ್ದು ಎನ್ನಲಾಗಿದೆ. ಇದು ಕಟೀಲು ದೇವಸ್ಥಾನದ ಮುಂಭಾಗವಾಗಿ ಮಂಗಳೂರು ಕಡೆ ತೆರಳುತ್ತಿದ್ದ ಸಂದರ್ಭ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆಗೆ ಬಸ್ಸಿನಲ್ಲಿ ನಡೆದ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ತಕ್ಷಣ ಎಚ್ಚೆತ್ತುಕೊಂಡ ದೇವಸ್ಥಾನದ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿಯನ್ನು ನಂದಿಸುವಲ್ಲಿ ಸಫಲರಾಗಿದ್ದು ಯಾವುದೇ ಪ್ರಾಣ ಹಾನಿ

ಕಟೀಲು ದೇವಳದ ಮುಂಭಾಗ MRPL ಬಸ್ ಬೆಂಕಿಗಾಹುತಿ Read More »

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ

ವಿಟ್ಲ: ವಿಟ್ಲದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಆರೋಪಿ ಕನ್ಯಾನದ ಅಬೂಬಕ್ಕರ್ (46) ಬಂಧಿತ. ದಾರಿ ಕೇಳುವ ನೆಪದಲ್ಲಿ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದ. ಘಟನೆ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ಅವರು ಮನೆಯವರಿಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದರು. ಬಳಿಕ ಪೊಲೀಸ್ ಠಾಣೆಗೂ ಭೇಟಿ ನೀಡಿ, ಆರೋಪಿಯನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಅವರೂ ಕೂಡ

ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದಾತನ ಸೆರೆ Read More »

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ

ಕಡಬ; ಕಡಬ ತಾಲೂಕಿನ ಚಾರ್ವಾಕ ಗ್ರಾಮದಲ್ಲಿ ಮೆಸ್ಕಾಂ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಗೊಳಪಟ್ಟು, ಕಂಬದಿಂದ ಎಸೆಯಲ್ಪಟ್ಟು ಗಾಯಗೊಂಡ ಘಟನೆ ಸೋಮವಾರ  ನಡೆದಿದೆ. ಮೆಸ್ಕಾಂ ಲೈನ್ ಮ್ಯಾನ್ ಎಡಮಂಗಲ‌ ನಿವಾಸಿ ನಾರಾಯಣ ಪಿ ಎಂಬವರು ಗಾಯಗೊಂಡವರು. ಚಾರ್ವಾಕದ ಎಣ್ಮೂರಿನಲ್ಲಿ ವಿದ್ಯುತ್ ಟ್ರಾನ್ಸ್ ಫರ್ಮರ್ ನಲ್ಲಿ  ಸಮಸ್ಯೆ ಇದೆ ಎಂದು ಗ್ರಾಹಕರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ  ಅಲ್ಲಿ ತೆರಳಿ ಟ್ರಾನ್ಸ್ ಫಸರ್ಮರ್ ಏರಿ ಫ್ಯೂಸ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಗೆ ಒಳಗಾಗಿ ಕೆಳಗೆ  ಎಸೆಯಲ್ಪಟ್ಟಿದ್ದಾರೆ. ತಕ್ಷಣ  ಗಾಯಳುವನ್ನು 

ಚಾರ್ವಾಕ: ಟ್ರಾನ್ಸ್ ಫಾರ್ಮರಿನಲ್ಲಿ ವಿದ್ಯುತ್ ಶಾಕ್, ಲೈನ್ ಮ್ಯಾನಿಗೆ ಗಾಯ Read More »

error: Content is protected !!
Scroll to Top