ಅಪಘಾತ

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು

ಬಂಟ್ವಾಳ : ಮರವೊಂದಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಇಂದು ನಡೆದಿದೆ. ಅಮ್ಟಾಡಿ ನಿವಾಸಿ ಅಕ್ಷಿತ್ (25) ಮೃತಪಟ್ಟ ಯುವಕ. ಇಂದು ಮುಂಜಾನೆ 4.30 ರ ಹೊತ್ತಿಗೆ ರಾತ್ರಿ ಪಾಳಿ ಮುಗಿಸಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ ತೆರಳುತ್ತಿದ್ದಾಗ ಹೆದ್ದಾರಿ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೆಲ್ಕಾರ್ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತ್ಯು Read More »

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ

ಪುತ್ತೂರು: ಕಾರೊಂದು ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯಗೊಂಡಿದ್ದು, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕಿಗೆ ಸೈಡ್ ಕೋಡುವ

ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ | ನಾಲ್ವರಿಗೆ ಗಂಭೀರ ಗಾಯ Read More »

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು

ಸಿಡ್ನಿ : ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಆಸ್ಟ್ರೇಲಿಯಾದಿಂದ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲಾ ನಿವಾಸಿ ಉಜ್ವಲಾ ವೇಮುರು (23) ಮೃತಪಟ್ಟವರು. ಗೋಲ್ಡ್ ಕೋಸ್ಟ್ನ ಲ್ಯಾಮಿಂಗ್ಟನ್ ರಾಷ್ಟ್ರೀಯ ಉದ್ಯಾನವನದ ಯಾನ್ ಬಕುಚಿ ಜಲಪಾತಕ್ಕೆ ಬಿದ್ದು ಉಜ್ವಲಾ ಅವರು ದಾರುಣ ಅಂತ್ಯ ಕಂಡಿದ್ದು ಶನಿವಾರ ಮಧ್ಯಾಹ್ನ ಈ ಅಪಘಾತ ಸಂಭವಿಸಿದೆ. ಉಜ್ವಲಾ ತನ್ನ ಸ್ನೇಹಿತರೊಂದಿಗೆ ಚಾರಣಕ್ಕಾಗಿ ಸ್ಥಳಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ನಡೆದುಕೊಂಡು ಹೋಗುವಾಗ ಇಳಿಜಾರಿನಲ್ಲಿ ಬಿದ್ದ ಟ್ರೈಪಾಡ್

ಭಾರತೀಯ ಮೂಲದ ವೈದ್ಯೆ ಆಸ್ಟ್ರೇಲಿಯಾದಲ್ಲಿ ಪ್ರಪಾತಕ್ಕೆ ಬಿದ್ದು ಮೃತ್ಯು Read More »

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ

ಬಂಟ್ವಾಳ: ಖಾಸಗಿ ಬಸ್ ಹಾಗೂ ಕಂಟೈನರ್ ಲಾರಿ ಡಿಕ್ಕಿ ಹೊಡೆದುಕೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಿಂದ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಾಸಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಬಿ.ಸಿ.ರೋಡಿನಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಂಟೈನರ್ ಹಾಗೂ ಮೂಡಬಿದಿರೆಯಿಂದ ಬಂಟ್ವಾಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದುಕೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಖಾಸಗಿ ಬಸ್-ಕಂಟೈನರ್ ಲಾರಿ ಡಿಕ್ಕಿ : ಲಾರಿ ಚಾಲಕನಿಗೆ ಗಂಭೀರ ಗಾಯ Read More »

ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು

ಪುತ್ತೂರು: ಬೈಕ್‍ ಡಿಕ್ಕಿ ಹೊಡೆದು ಪಾದಚಾರಿ ಮಹಿಳೆ ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ. ಬರೆಪ್ಪಾಡಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಮೃತಪಟ್ಟವರು. ಹಾಲಿನ ಡೈರಿಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕ್‍ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.

ಬೈಕ್ ಡಿಕ್ಕಿ : ಪಾದಾಚಾರಿ ಮಹಿಳೆ ಮೃತ್ಯು Read More »

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ

ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ ನಾಯಿ ಅಡ್ಡ ಬಂದು ಬೈಕ್ ಸ್ಕಿಡ್ ಆಗಿ ತಲೆಗೆ ಭೀಕರವಾಗಿ ಏಟು ಆಗಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾ. 6 ರಂದು ನಿಧನರಾಗಿದ್ದಾರೆ.  ಮೃತರು ತಂದೆ ತಾಯಿ ತಂಗಿ ಹಾಗೂ ಬಂದು ಮಿತ್ರರನ್ನು

ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಬಿರ್ಮನಕಜೆ ಪ್ರಸಾದ್ ನಿಧನ Read More »

ಸರಕಾರಿ ವಾಹನ ಡಿಕ್ಕಿ : ಪಾದಾಚಾರಿ ಮೃತ್ಯು !

ಬಂಟ್ವಾಳ: ಪಾದಚಾರಿಗೆ ಸರಕಾರಿ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟ ಘಟನೆ ಮಂಗಳವಾರ ಪರಂಗಿಪೇಟೆಯಲ್ಲಿ ತಡರಾತ್ರಿ ನಡೆದಿದೆ. ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಪಾದಚಾರಿಯನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ. ಪುತ್ತೂರು ಅರಣ್ಯ ಇಲಾಖೆಗೆ ಸೇರಿದ ವಾಹನ ಇದಾಗಿದ್ದು, ಬೀಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸರಕಾರಿ ವಾಹನ ಡಿಕ್ಕಿ : ಪಾದಾಚಾರಿ ಮೃತ್ಯು ! Read More »

ಬೈಕ್- ಗೂಡ್ಸ್ ನಡುವೆ ಡಿಕ್ಕಿ | ವಿದ್ಯಾರ್ಥಿ ಮೃತ್ಯು

ಉಪ್ಪಿನಂಗಡಿ : ಬೈಕ್‌ ಹಾಗೂ ಮಿನಿ ಗೂಡ್ಸ್‌ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ನಡೆದಿದೆ. ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಅಂತಿಮ ಬಿ.ಎ. ವಿದ್ಯಾರ್ಥಿ, ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಅಜೀರ ನಿವಾಸಿ ಗುರುವಪ್ಪ ಅವರ ಪುತ್ರ ಶ್ರೀಜಿಸ್ (20) ಮೃತ ಯುವಕ. ಶ್ರೀಜಿಸ್ ರವರು ಚಿಕ್ಕಮ್ಮನ ಮನೆಗೆ ಬಂದು ರಾತ್ರಿ ಅಲ್ಲಿಂದ ಆಲಂಕಾರು ಸಮೀಪದ ನೆಕ್ಕರೆಯಲ್ಲಿರುವ ಪೆಟ್ರೋಲ್‌ ಪಂಪ್‌ನಲ್ಲಿ ಬೈಕ್‌ಗೆ ಪೆಟ್ರೋಲ್‌ ತುಂಬಿಸಿ

ಬೈಕ್- ಗೂಡ್ಸ್ ನಡುವೆ ಡಿಕ್ಕಿ | ವಿದ್ಯಾರ್ಥಿ ಮೃತ್ಯು Read More »

ರಿಕ್ಷಾ ಪಲ್ಟಿ : ಚಾಲಕ ಮೃತ್ಯು

ಸುಬ್ರಹ್ಮಣ್ಯ: ರಿಕ್ಷಾವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಇಂಜಾಡಿ ಬಳಿ ಭಾನುವಾರ ತಡರಾತ್ರಿ ಸಂಭವಿಸಿದೆ. ರಿಕ್ಷಾ ಚಾಲಕ ವಿವೇಕಾನಂದ ದೇವರಗದ್ದೆ ಮೃತಪಟ್ಟವರು. ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಆಟೋ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಿವೇಕಾನಂದ ದೇವರಗದ್ದೆ ಅವರು ಭಾನುವಾರ ರಾತ್ರಿ ಗಂಟೆ 9ರ ಸುಮಾರಿಗೆ ಇಂಜಾಡಿ ಬಳಿ ಅಟೋದಲ್ಲಿ ಹೋಗುತ್ತಿರುವಾಗ ಲೋ ಬಿ.ಪಿ ಆಗಿ ರಿಕ್ಷಾ ರಸ್ತೆ ಬದಿ ಚಲಿಸಿ ಪಲ್ಟಿಯಾಗಿತ್ತು. ಚಾಲಕ ವಿವೇಕಾನಂದ ಅವರು ಬಿದ್ದು ಗಂಭೀರ ಗಾಯಗೊಂಡರೆನ್ನಲಾಗಿದೆ. ತಕ್ಷಣ ಅವರನ್ನು

ರಿಕ್ಷಾ ಪಲ್ಟಿ : ಚಾಲಕ ಮೃತ್ಯು Read More »

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು !

ಉಪ್ಪಿನಂಗಡಿ: ವ್ಯಕ್ತಿಯೋರ್ವರು ನಿರ್ಮಾಣ ಹಂತದ ಮನೆ ಮೇಲಿನಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಕರ್ವೇಲು ಎಂಬಲ್ಲಿ ಇಂದು ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಾಫ (35) ಮೃತಪಟ್ಟವರು. ಮುಹಮ್ಮದ್ ಅವರು ಮನೆಯೊಂದನ್ನು ನಿರ್ಮಿಸುತ್ತಿದ್ದು, ಕಾರ್ಮಿಕರೊಂದಿಗೆ ಸೇರಿ ಮನೆ ಕೆಲಸದಲ್ಲಿ ತೊಡಗಿದ್ದರು. ಇಂದು ಮನೆ ಮೇಲೆ ನೀರು ಹಾಕುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಬಿದ್ದಿದ್ದು ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರು ಪತ್ನಿ, ಗಂಡು, ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರ್ಮಾಣ ಹಂತದ ಮನೆ ಮೇಲಿನಿಂದ ಬಿದ್ದು ಮೃತ್ಯು ! Read More »

error: Content is protected !!
Scroll to Top