ನಿಧನ

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು

ಕಡಬ : ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದ ಕಾರ್ಮಿಕ ಮೃತಪಟ್ಟಿರುವ ಘಟನೆ ಕಡಬ ತಾಲೂಕು ಕುಂತೂರು ಗ್ರಾಮದಲ್ಲಿ ನಡೆದಿದೆ. ಕೃಷ್ಣ ಕುಮಾರ್ ಎಂಬವರ ದೂರಿನಂತೆ, ಕೃಷ್ಣ ಕುಮಾರ್ ರವರ ಪತ್ನಿಯ ತಮ್ಮನಾದ ಕೋಡಿಂಬಾಳ ಗ್ರಾಮ ಕಡಬ ನಿವಾಸಿ ಶರತ್ (29), 6 ತಿಂಗಳಿನಿಂದ ಕಡಬ ತಾಲೂಕು ಕುಂತೂರು ಗ್ರಾಮದ ಉದಯಶಂಕರ್ ಭಟ್ ಎಂಬವರ ಮನೆಗೆ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋಗುತ್ತಿದ್ದು, ಮೇ 17 ರಂದು ಸಂಜೆ, ಉದಯಶಂಕರ್ ಭಟ್ ರವರ ಜಾಗದಲ್ಲಿರುವ ಶೆಡ್‌ನಲ್ಲಿ ಮೃತಪಟ್ಟಿರುವುದಾಗಿ ಉದಯಶಂಕರ್ ಭಟ್ […]

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಮೃತ್ಯು Read More »

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ !

ಮಂಗಳೂರು : ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (70) ಅವರು ಮೇ 17ರಂದು ಮುಂಬೈಯಲ್ಲಿ ನಿಧನ ಹೊಂದಿದರು. ರಘುನಂದನ್‌ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್‌ಗೆ ಕೆಲಸಕ್ಕೆಂದು ಮುಂಬೈಗೆ ತೆರಳಿದ್ದರು. ಅನಂತರ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್‌ಕ್ರೀಂ ತಯಾರಿಸಿ ಜನಪ್ರಿಯರಾದರು.ಮುಂಬೈಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ.

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ ! Read More »

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು

ನೆಲ್ಯಾಡಿ : ಕೆಲ ದಿನದ ಹಿಂದೆ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನೆಲ್ಯಾಡಿ ಗ್ರಾಮದ ತೋಟ ನಿವಾಸಿ ಧನಂಜಯ ಗೌಡ (43) ಅವರು ಮೇ 16ರಂದು ಸಂಜೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಧನಂಜಯ ಗೌಡ ಅವರು ಮೇ.11ರಂದು ನೆರೆಮನೆಯ ಚಂದ್ರ ಬಿರುವಳಿಕೆ ಎಂಬವರ ಮನೆಗೆ ಕೃಷಿ ಕೆಲಸಕ್ಕೆ ಹೋಗಿದ್ದು ಅಲ್ಲಿ ಸಂಜೆ 6 ಗಂಟೆ ವೇಳೆಗೆ ತೆಂಗಿನ ಮರದಿಂದ ಕಾಯಿ ಕೀಳುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು. ಅವರನ್ನು

ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಮೃತ್ಯು Read More »

ಕೆ.ರಾಜೇಂದ್ರ ಆರಿಗ ನಿಧನ

ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕೆ.ರಾಜೇಂದ್ರ ಆರಿಗ (61) ಗುರುವಾರ ನಿಧನರಾದರು. ಕೆಲ ದಿನಗಳ ಹಿಂದೆ ಅಸ್ವಸ್ಥರಾದ ಅವರು ಗುರುವಾರ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿಯರನ್ನು ಅಗಲಿದ್ದಾರೆ.

ಕೆ.ರಾಜೇಂದ್ರ ಆರಿಗ ನಿಧನ Read More »

ಶಿಕ್ಷಕ ಕುಶಾಲಪ್ಪ ಗೌಡ ನಿಧನ

ಕುದ್ಮಾರು: ಬೆಳಂದೂರು ಗ್ರಾಮದ ಪಳ್ಳತ್ತಾರು ಶಾಲಾ ಶಿಕ್ಷಕ ಕುಶಾಲಪ್ಪ ಗೌಡ (58) ಇಂದು ನಿಧನರಾದರು. ಅವರು ಬೆಳಂದೂರು ಗ್ರಾಮದ ತುಂಬ್ಯ ನಿವಾಸಿಯಾಗಿದ್ದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಶಿಕ್ಷಕ ಕುಶಾಲಪ್ಪ ಗೌಡ ನಿಧನ Read More »

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ : ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತ ಬಾಲಕರು. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಈಜಲು ತೆರಳಿದ್ದ ಐವರು ಬಾಲಕರಲ್ಲಿ, ನಾಲ್ವರು ಮುಳುಗಿದ್ದರು. ಇತ್ತ ಬದುಕುಳಿದ ಓರ್ವ ಬಾಲಕ ಓಡಿ ಹೋಗಿ ಸಮೀಪದಲ್ಲಿದ್ದವರಿಗೆ ಸುದ್ದಿ

ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು Read More »

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ

ಬೆಂಗಳೂರು: ಯುವತಿಯೊಬ್ಬಳು  ಮನೆಯಲ್ಲಿ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಶವ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬಾತ್ ರೂಂ ನಲ್ಲಿ ಯುವತಿ ಶವ ಪತ್ತೆ Read More »

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ

ಕುಂಬ್ರ: ಒಳಮೊಗ್ರು ಗ್ರಾಮದ ಚಿಲ್ಮೆತ್ತಾರು ನಾರಾಯಣ ರೈ ಇಂದು ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಇವರು ಕುಂಬ್ರ ಮಂಡಲ ಪಂಚಾಯತ್ ಸದಸ್ಯರಾಗಿ , ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಏಕತ್ತಡ್ಕ ಇದರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾಗಿ , ಶ್ರೀ ವೀರಕೇಸರಿ ಸ್ಪೋರ್ಟ್ಸ್ ಕ್ಲಬ್ ನ ಗೌರವ ಸಲಹೆಗಾರರಾಗಿ , ಓಂ ಶಿವ ಭಜನಾ ಮಂದಿರ , ಓಂ ಶಿವ ಯುವಕ ಮಂಡಲದ ಗೌರವಾಧ್ಯಕ್ಷರಾಗಿ , ಊರಿನ ಅಭಿವೃದ್ಧಿಯಲ್ಲಿ ಯುವ ಸಮುದಾಯಕ್ಕೆ ಪ್ರೇರಣಾದಾಹಿಯಾಗಿ ಸೇವೆ

ಕುಂಬ್ರ ಮಂಡಲ ಪಂಚಾಯತ್ ಮಾಜಿ ಸದಸ್ಯ ಚಿಲ್ಮೆತ್ತಾರು ನಾರಾಯಣ ರೈ ನಿಧನ Read More »

ರಾತ್ರಿ ಮಲಗಿದಲ್ಲೇ ಹೋಟೆಲ್ ಕಾರ್ಮಿಕ ಸಾವು

ಸುಳ್ಯ : ಸುಳ್ಯ ತಾಲೂಕಿನ ಸಂಪಾಜೆಯ ಕಲ್ಲುಗುಂಡಿಯ ಹೋಟೆಲ್ ವೊಂದರಲ್ಲಿ ಕೆಲಸಕ್ಕಿದ್ದ ವ್ಯಕ್ತಿಯೊಬ್ಬ ರಾತ್ರಿ ಮಲಗಿದಲ್ಲೇ ಸಾವಿಗೀಡಾಗಿರುವ ಘಟನೆ ವರದಿಯಾಗಿದೆ. ಶಬರಿಮಲೆಯ ಪಂದಳದಿಂದ ಬಂದು ಕಲ್ಲುಗುಂಡಿಯ ಹೋಟೆಲ್ ನಲ್ಲಿ ಕೆಲಸ ನಿರತನಾಗಿದ್ದ ವಿಶ್ವನಾಥ ಎಂಬ ವ್ಯಕ್ತಿ ಸಾವಿಗೀಡಾಗಿರುವ ನತದೃಷ್ಟ. ಈತ ರಾತ್ರಿ ಹೋಟೆಲ್ ನಲ್ಲಿ ಚೆನ್ನಾಗಿಯೇ ಕೆಲಸ ಮಾಡಿಕೊಂಡು ಇದ್ದ. ಆದರೆ ಊಟ ಮಾಡಿ ಮಲಗಿದವ ಬೆಳಗ್ಗಿನ ಸಮಯದಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ. ಹೃದಯಾಘಾತ ಆಗಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ

ರಾತ್ರಿ ಮಲಗಿದಲ್ಲೇ ಹೋಟೆಲ್ ಕಾರ್ಮಿಕ ಸಾವು Read More »

ಅನಾರೋಗ್ಯದಿಂದ ಯುವಕ ನಿಧನ

ಬಂಟ್ವಾಳ : ಯುವಕನೋರ್ವ ಅನಾರೋಗ್ಯದಿಂದ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ. ಬಾಯಾರು ನಿವಾಸಿ ಮೌನೇಶ್ ಜೋಗಿ (24) ಮೃತಪಟ್ಟ ಯುವಕ. ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದ ಮೌನೇಶ್ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಅನಾರೋಗ್ಯದಿಂದ ಯುವಕ ನಿಧನ Read More »

error: Content is protected !!
Scroll to Top