ನಿಧನ

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ

ಪುತ್ತೂರು: ಮಧುರಾ ಬೀಡಿ ಉದ್ಯಮಿ, ಮರಿಲ್ ನಿವಾಸಿ ಡಿ.ಎ ಅಬ್ದುಲ್ ಖಾದರ್ (81) ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೆಲವು ದಿನಗಳ ಹಿಂದೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರಳದಿದ್ದಾರೆ. ಮಧುರಾ ಗ್ರೂಪ್ ನ ಸ್ಥಾಪಕರಾಗಿರುವ ಡಿ ಎ ಅಬ್ದುಲ್ ಖಾದರ್ ಮಧುರಾ ಎಜ್ಯುಕೇಶನಲ್ ಟ್ರಸ್ಟ್ ನ ಟ್ರಸ್ಟಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೂರ್ನಡ್ಕ ಜುಮಾ ಮಸೀದಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ,ಪುತ್ರಿಯರು, ಇಬ್ಬರು ಗಂಡು […]

ಮಧುರಾ ಬೀಡಿ ಉದ್ಯಮಿ ಡಿ.ಎ.ಅಬ್ದುಲ್ ಖಾದರ್ ನಿಧನ Read More »

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ

ಬೆಂಗಳೂರು: ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರ ಪುತ್ರಿ ಹಂಸ ಮೊಯ್ಲಿ (48) ಬೆಂಗಳೂರಿನಲ್ಲಿ ಇಂದು ನಿಧನರಾದರು. ಹಂಸ ಮೊಯ್ಲಿ ಅವರು ಭರತನಾಟ್ಯ, ನೃತ್ಯಗಾರ್ತಿ ಮತ್ತು ಪ್ರಾಯೋಗಿಕ ನೃತ್ಯ ಸಂಯೋಜಕಿಯಾಗಿದ್ದರು. ಅವರು ದೇವದಾಸಿಯರ ಜೀವನವನ್ನು ಆಧರಿಸಿದ ತಮಿಳು ಚಲನಚಿತ್ರ ಶೃಂಗಾರಂನಲ್ಲಿ ನಟಿಸಿದ್ದರು. ಪುತ್ರಿಯ ನಿಧನದ ಸುದ್ದಿ ತಿಳಿದಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಸಮಯಗಳಿಂದ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಒರ್ವ ಅದ್ಭುತ ಕಲಾವಿದೆಯನ್ನು

ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ಹಂಸ ಮೊಯ್ಲಿ ನಿಧನ Read More »

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ

ವಿಟ್ಲ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಎಲ್.ಎನ್.ಕೂಡೂರು (67) ಇಂದು ಮುಂಜಾನೆ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎಲ್‍.ಎನ್‍.ಕುಡೂರು ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಪ್ರಿಯ ಪಡೆದಿದ್ದರು. ಕ್ಯಾಂಪೊ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಟಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಟಲ ವಿದ್ಯಾ ಸಂಘದ ಸಂಚಾಲಕರಾಗಿ

ಸಾಮಾಜಿಕ ಧುರೀಣ, ಮಾಜಿ ಕ್ಯಾಂಪ್ಕೋ ಅಧ್ಯಕ್ಷ ಎಲ್‍.ಎನ್‍.ಕುಡೂರು ನಿಧನ Read More »

ಹೃದಯಾಘಾತದಿಂದ ಯುವತಿ ನಿಲಿಕಾ ಪೊನ್ನಪ್ಪ ನಿಧನ

ಮಡಿಕೇರಿ : ಹೃದಯಾಘಾತದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ. ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಎಂಬವರ ಪುತ್ರಿ ನಿಲಿಕಾ ಪೊನ್ನಪ್ಪ (24) ಮೃತಪಟ್ಟ ಯುವತಿ. ನಿಲಿಕಾ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ.

ಹೃದಯಾಘಾತದಿಂದ ಯುವತಿ ನಿಲಿಕಾ ಪೊನ್ನಪ್ಪ ನಿಧನ Read More »

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು

ನೆಲ್ಯಾಡಿ: ಆಕಸ್ಮಿಕವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ನಿವಾಸಿ ಚಕ್ರ ಬಹಾದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ (44) ಮೃತಪಟ್ಟವರು. ಜೂ. 11ರಂದು ಸಂಜೆ ಅಡುಗೆಗಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ಸುಟ್ಟಗಾಯ ಉಂಟಾಗಿತ್ತು.

ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು Read More »

ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು !

ಕಡಬ: ವಿದ್ಯುತ್ ಲೈನ್ ಕಾರ್ಮಿಕನೊಬ್ಬ ಕಂಬದಿಂದ ಬಿದ್ದು ಮೃತಪಟ್ಟ ಘಟನೆ ಪಂಜ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಇದೀಗ ನಡೆದಿದೆ. ಅಲೆಕ್ಕಾಡಿ ಸಮೀಪ ಪಿಜಾವು ಎಂಬಲ್ಲಿ ಕಡಬದ ಕೃಷ್ಣ ಎಲೆಕ್ಟ್ರಿಕಲ್ ನ ಕಾರ್ಮಿಕರು ವಿದ್ಯುತ್ ಲೈನ್ ಕೆಲಸ ನಿರ್ವಹಿಸುತ್ತಿದ್ದರೆನ್ನಲಾಗಿದೆ. ಈ ವೇಳೆ ಕಂಬದಿಂದ ಬಿದ್ದು ಕಾರ್ಮಿಕನೊಬ್ಬ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವಿದ್ಯುತ್ ಆಫ್ ಮಾಡಿ ಕೆಲಸ ನಿರ್ವಹಿಸಲಾಗುತ್ತಿದ್ದು ವಿದ್ಯುತ್ ಶಾಕ್ ನಿಂದ ಬಿದ್ದಿರುವುದೇ ಎಂಬ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪಂಜ ಶಾಖಾ ಜೆಇ ತಿಳಿಸಿದ್ದಾರೆ.

ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಮೃತ್ಯು ! Read More »

ಪ್ರತಿಭಟನೆ ವೇಳೆ ಕುಸಿದುಬಿದ್ದು ಎಂ.ಎಲ್.ಸಿ ಭಾನುಪ್ರಕಾಶ್ ನಿಧನ| ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ

ಮಂಗಳೂರು : ಬಿಜೆಪಿಯ ಹಿರಿಯ ನಾಯಕ, ವಿಧಾನ ಪರಿಷತ್ ನ ಮಾಜಿ ಸದಸ್ಯ ಭಾನುಪ್ರಕಾಶ್‌ರವರು ಇಂದು ನಿಧನರಾದರು. ಕಾಂಗ್ರೆಸ್‌ ವಿರುದ್ಧ ಬೆಲೆ ಏರಿಕೆ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಹಿರಿಯ ಮುಖಂಡ ಭಾನುಪ್ರಕಾಶ್ ರವರಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಭಾನುಪ್ರಕಾಶ್‌ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾದವರು ಹಾಗೂ ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ನಿಯಾಗಿದ್ದರು. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯತ್

ಪ್ರತಿಭಟನೆ ವೇಳೆ ಕುಸಿದುಬಿದ್ದು ಎಂ.ಎಲ್.ಸಿ ಭಾನುಪ್ರಕಾಶ್ ನಿಧನ| ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮ ಮುಂದೂಡಿಕೆ Read More »

ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ

ಬೆಳ್ತಂಗಡಿ: ವೇಣೂರು ಕರಿಮಣೇಲು ಗುತ್ತು ನಿವಾಸಿ, ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ (71) ಹೃದಯಾಘಾತದಿಂದ ಜೂ.12 ರಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಉದಯವಾಣಿ, ವಿಜಯ ಕರ್ನಾಟಕ, ಕನ್ನಡಪ್ರಭ ಪತ್ರಿಕೆಯ ವೇಣೂರು ಭಾಗದ ವರದಿಗಾರರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದರು. ಜತೆಗೆ ವೇಣೂರು ಗ್ರಾ.ಪಂ. ಮಾಜಿ ಸದಸ್ಯರಾಗಿ, ಧಾರ್ಮಿಕ ಕಾರ್ಯಕ್ರಮದಲ್ಲಿ ತೊಡಗಿಸಿಕೊಂಡಿದ್ದರು. ಈ ಬಾರಿ 2024 ವೇಣೂರು ಬಾಹುಬಲಿ ಮಹಾಮಸ್ತಕಾಭೀಷಕದ ಮಾಧ್ಯಮ ಸಮಿತಿ ಸಂಚಾಲಕರಾಗಿ, 2012

ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತ ನಿಧನ Read More »

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ

ಪುತ್ತೂರು: ಮೊಬೈಲ್ ಮಳಿಗೆ ಹೊಂದಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಇಂದು ನಿಧನರಾದರು. ಪುರುಷರಕಟ್ಟೆ ನಿವಾಸಿ ಪ್ರಕಾಶ್ (45) ಮೃತಪಟ್ಟವರು. ಪ್ರಕಾಶ್ ಅವರು ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಯಂಗ್ ಬ್ರಿಗೆಡ್ ನಲ್ಲಿ ತೊಡಗಿಸಿಕೊಂಡಿದ್ದರು. ಕ್ರಿಕೆಟ್ ಆಟಗಾರರಾಗಿದ್ದ ಅವರು ಕೆಎಸ್‍ ಆರ್‍ ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಅಂಗಡಿ ನಡೆಸುತ್ತಿದ್ದರು. ಮೃತರು ಪತ್ನಿ, ಮಗಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ನರಿಮೊಗರು ವಲಯ ಕಾಂಗ್ರೆಸ್  ಅಧ್ಯಕ್ಷ ಪ್ರಕಾಶ್ ನಿಧನ Read More »

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ

ಪುತ್ತೂರು: ಬಲ್ನಾಡು ಗ್ರಾಮದ ಉಜ್ರುಪಾದೆ ಬ್ರಹ್ಮರಕೋಡಿ ತರವಾಡು ಕುಟುಂಬದ ಹಿರಿಯರಾದ ದೇವಪ್ಪ ಗೌಡ ಬ್ರಹ್ಮರಕೋಡಿ ನಿಧನರಾದರು. ಕೆಲವು ಸಮಯದಿಂದ ಅಸೌಖ್ಯದಿಂದ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಜೂನ್ 6 ರಂದು ನಿಧನ ಹೊಂದಿದ್ದರು. ಮೃತರು ಪತ್ನಿ, ಮೂವರು ಮಕ್ಕಳು, ಕುಟುಂಬಸ್ಥರನ್ನು ಹಾಗೂ ಬಂಧುಗಳನ್ನು ಅಗಲಿದ್ದಾರೆ.

ಬ್ರಹ್ಮರಕೋಡಿ ತರವಾಡು ಮನೆಯ ಹಿರಿಯರಾದ ದೇವಪ್ಪ ಗೌಡ ನಿಧನ Read More »

error: Content is protected !!
Scroll to Top