ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ
ಪುತ್ತೂರು: ಕಡಬ ತಾಲೂಕಿನ ಕೃಷಿ ಕುಟುಂಬದ ನಾಟಿವೈದ್ಯ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಕಳುವಾಜೆ ಜಿನ್ನಪ್ಪ ಗೌಡರು ಇಂದು ಕಾಯ ತ್ಯಜಿಸಿದರು. ಎರಡು ದಿನಗಳ ಹಿಂದೆ ಮೆದುಳಿನ ವೈಫಲ್ಯ ಅವರನ್ನು ಬಾಧಿಸಿತ್ತು. ಕಳುವಾಜೆ ಮನೆತನದ ಪ್ರಸಿದ್ಧ ನಾಟಿ ವೈದ್ಯರಾಗಿದ್ದ ದಿ. ಸೋಮಪ್ಪ – ಬಾಲಕ್ಕ ದಂಪತಿಗಳ ಹಿರಿಯ ಮಗನಾಗಿ 1943ರ ಜನವರಿ 20ರಂದು ಜನಿಸಿದ ಕಳುವಾಜೆ ಜಿನ್ನಪ್ಪ ಗೌಡರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಶ್ರೀಮತಿ ಜಾನಕಿ ಬಂಡಾಜೆಯವರೊಂದಿಗಿನ ದಾಂಪತ್ಯದಲ್ಲಿ ಯಮುನಾ, ಜಯಂತಿ, ಭಾಸ್ಕರ […]