ನಿಧನ

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ

ಪುತ್ತೂರು: ಕಡಬ ತಾಲೂಕಿನ ಕೃಷಿ ಕುಟುಂಬದ ನಾಟಿವೈದ್ಯ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಕಳುವಾಜೆ ಜಿನ್ನಪ್ಪ ಗೌಡರು ಇಂದು ಕಾಯ ತ್ಯಜಿಸಿದರು. ಎರಡು ದಿನಗಳ ಹಿಂದೆ ಮೆದುಳಿನ ವೈಫಲ್ಯ ಅವರನ್ನು ಬಾಧಿಸಿತ್ತು. ಕಳುವಾಜೆ ಮನೆತನದ ಪ್ರಸಿದ್ಧ ನಾಟಿ ವೈದ್ಯರಾಗಿದ್ದ ದಿ. ಸೋಮಪ್ಪ – ಬಾಲಕ್ಕ ದಂಪತಿಗಳ ಹಿರಿಯ ಮಗನಾಗಿ 1943ರ ಜನವರಿ 20ರಂದು ಜನಿಸಿದ ಕಳುವಾಜೆ ಜಿನ್ನಪ್ಪ ಗೌಡರಿಗೆ 82 ವರ್ಷ ವಯಸ್ಸಾಗಿತ್ತು. ಪತ್ನಿ ಶ್ರೀಮತಿ ಜಾನಕಿ ಬಂಡಾಜೆಯವರೊಂದಿಗಿನ ದಾಂಪತ್ಯದಲ್ಲಿ ಯಮುನಾ, ಜಯಂತಿ, ಭಾಸ್ಕರ […]

ಆರ್ ಎಸ್‍ ಎಸ್‍ ಹಿರಿಯ ಕಾರ್ಯಕರ್ತ, ನಾಟಿ ವೈದ್ಯ, ಪ್ರತಿಷ್ಠಿತ ಕಳುವಾಜೆ ಮನೆತನದ ಜಿನ್ನಪ್ಪ ಗೌಡ ಕಳುವಾಜೆ ನಿಧನ Read More »

ಅಮರ್ ಲೈಟಿಂಗ್ಸ್ ಮಾಲಕ ರವೀಂದ್ರ ನಿಧನ

ಪುತ್ತೂರು: ಅಮರ್ ಲೈಟಿಂಗ್ಸ್ ನ ಮಾಲಕ, ನೆಲ್ಲಿಕಟ್ಟೆ ನಿವಾಸಿ ರವೀಂದ್ರ ಅನಾರೋಗ್ಯದಿಂದ ಸೋಮವಾರ ನಿಧನರಾದರು. ನೆಲ್ಲಿಕಟ್ಟೆಯಲ್ಲಿ ಅಮರ್ ಲೈಟಿಂಗ್ಸ್ ಸಂಸ್ಥೆಯನ್ನು ಹಲವಾರು ವರ್ಷಗಳಿಂದ ನಡೆಸಿಕೊಂಡು ಬಂದಿರುವ ಅವರು, ನೆಲ್ಲಿಕಟ್ಟೆ  ಮಿತ್ರ ಮಂಡಲದ  ಹಿರಿಯ ಸದಸ್ಯರಾಗಿದ್ದರು. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

ಅಮರ್ ಲೈಟಿಂಗ್ಸ್ ಮಾಲಕ ರವೀಂದ್ರ ನಿಧನ Read More »

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು

ಮಂಗಳೂರು : ರೈಲಿನಲ್ಲಿ ಕುಳಿತಿದ್ದ ವ್ಯಕ್ತಿಯೋರ್ವ ಹೃದಯಘಾತವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಮೇ.17ರ ಮಧ್ಯಾಹ್ನ 3:30ರ ಸುಮಾರಿಗೆ ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‍ ನ ಜನರಲ್ ಕೋಚ್ ನಲ್ಲಿ ಕುಳಿತಿದ್ದ ಸುಮಾರು 45 ವರ್ಷ ವಯಸ್ಸಿನ ವ್ಯಕ್ತಿಯೋರ್ವರಿಗೆ ಹೃದಯಾಘಾತವಾಗಿದೆ. ತಕ್ಷಣ  ಆರ್‍ಪಿಎಫ್‍ ಇನ್ಸ್‍ಪೆಕ್ಟರ್‍ ಮನೋಜ್‍ ಕುಮಾರ್‍ ಯಾದವ್‍ ಮತ್ತು ಸಿಬ್ಬಂದಿಗಳು ವ್ಯಕ್ತಿಗೆ ಸಿಪಿ ಆರ್‍ ಕೊಡಿಸಿ ಸರ್ಕಾರಿ ವೆನ್ಲಾಕ್‍ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ  ಸ್ಪಂದಿಸದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರೈಲಿನಲ್ಲಿ ಹೃದಯಘಾತವಾಗಿ ವ್ಯಕ್ತಿ ಮೃತ್ಯು Read More »

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು

ತಾಯಿಯ ಜೊತೆ ನಿದ್ದೆ ಮಾತ್ರೆ ಸೇವಿಸಿದ್ದ ರಾಜ್ಯಮಟ್ಟದ ಕಲಾವಿದ ಬೆಳ್ತಂಗಡಿ : ತಾಯಿಯ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ, ಚಿತ್ರ ಕಲಾ ಶಿಕ್ಷಕ, ರಾಜ್ಯಮಟ್ಟದ ಕಲಾವಿದ ಜಯರಾಮ್ ಕೆ (58) ಶುಕ್ರವಾರ ರಾತ್ರಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಕೊನೆಯುಸಿರೆಳೆದಿದ್ದಾರೆ. ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಮೇ 10ರಂದು ಹಿಂದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಪತ್ರ ಬರೆದಿಟ್ಟು ತಾಯಿಯ ಒಡಗೂಡಿ ಅಪರಿಮಿತ

ನಿದ್ದೆ ಮಾತ್ರೆ ಸೇವಿಸಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಲಾ ಶಿಕ್ಷಕ ಸಾವು Read More »

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು

ಬಂದಾರು : ಮಹಿಳೆಯೊಬ್ಬರು ವಾಂತಿ ಭೇದಿಯಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಮದುವೆ ಊಟದ ನಂತರ ತುಂಬಾ ಜನರಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದಿದ್ದು, ಅನೇಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಉಜಿರೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ 5 ಮಂದಿ ದಾಖಲಾಗಿದ್ದಾರೆ ಎನ್ನಲಾಗಿದ್ದು, ಇವರಲ್ಲಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಬಂದಾರು ಗ್ರಾಮದಲ್ಲಿ ಮದುವೆ ಸಮಾರಂಭಕ್ಕೆ ತೆರಳಿದವರಿಗೆಲ್ಲರಿಗು ವಾಂತಿ,

ಮದುವೆ ಊಟದಿಂದ ಆರೋಗ್ಯದಲ್ಲಿ ಏರುಪೇರು | ಮಹಿಳೆ ಮೃತ್ಯು Read More »

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

ಪುತ್ತೂರು: ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ತಿಳಿದು ಬಂದಿದೆ. ಪುತ್ತೂರು ಪಡೀಲ್‌ನಲ್ಲಿರುವ ಬಾರ್ ಆ್ಯಂಡ್ ರೆಸ್ಟೋರೆಂಟ್‌ ನಲ್ಲಿ ಅಡುಗೆ ತಯಾರಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕಲ್ಲಡ್ಕ ಸಮೀಪದ ಬಾಳಿಲ ಗ್ರಾಮದ ಪೂರ್ಲಿಪ್ಪಾಡಿ ನಿವಾಸಿ ಪದ್ಮನಾಭ(42ವ) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.   ಮೃತರು ಮೇ.13ರಂದು ಕಲ್ಲಡ್ಕ ಸಮೀಪ ಪೂರ್ಲಿಪ್ಪಾಡಿ ಮನೆಗೆ ತೆರಳಿದ್ದರು. ಮನೆಯಲ್ಲಿ ಅವರ ಪತ್ನಿ ಪೂಜಾ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ.14ರಂದು ಮನೆಗೆ

ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ Read More »

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ

ಪುತ್ತೂರು: ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿಯಾದ ಎನ್. ಗುಲಾಬಿ ಶೆಟ್ಟಿ ಕಂಪ ಅನಾರೋಗ್ಯದಿಂದ ಇಂದು ಬೆಳಗ್ಗೆ ಮೃತ ಪಟ್ಟಿದ್ದಾರೆ. ಇವರು ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ, ಮುಂಡೂರು ಕೃಷಿ ಪತ್ತಿನ ಸಹಕಾರಿ ಸಂಘ ಇದರ ನಿರ್ದೇಶಕಿ, ಕ್ರಿಯಾಶೀಲ ಸಾಮಾಜಿಕ ಕಾರ್ಯಕರ್ತೆ ಹಾಗೂ ದಾನಿ ಸ್ವಭಾವುಳ್ಳವರಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ ಕಾಲದ ಅಸ್ವಸ್ಥತೆಯ ಕಾರಣದಿಂದ ನಿಧನರಾದರು. ಇವರು ದಿ. ನಾರಾಯಣ ಶೆಟ್ಟಿ ಕಂಪ ಅವರ ಧರ್ಮಪತ್ನಿ

ಕುಕ್ಕಿನಡ್ಕ ಶ್ರೀ ಸುಬ್ರಾಯ ದೇವಸ್ಥಾನ ಮುಂಡೂರು ಇದರ ವ್ಯವಸ್ಥಾಪನಾ ಸಮಿತಿ ಸದಸ್ಯೆ ಎನ್. ಗುಲಾಬಿ ಶೆಟ್ಟಿ ಕಂಪ ನಿಧನ Read More »

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು

ಮಡಿಕೇರಿ : ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ 8 ಜನ ಯುವಕರಲ್ಲಿ ಇಬ್ಬರು ನೀರಿನಲ್ಲಿ ಮುಳುಗಿದ ಘಟನೆ ಮಡಿಕೇರಿ ತಾಲೂಕಿನ ನಾಪೊತ್ತು ಸಮೀಪದ ಎಮ್ಮೆಮಾಡುವಿನ ಕೂರುಳಿಯಲ್ಲಿ ನಡೆದಿದೆ. ಚೇರಂಬಾಣೆ ಮೂಲದ ಗಿರೀಶ್ (16) ಮತ್ತು ಅಯ್ಯಪ್ಪ (18) ಕಾವೇರಿ ನದಿಯಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದಾರೆ. ಇಬ್ಬರ ಪೈಕಿ ಓರ್ವನ ಮೃತದೇಹ ದೊರಕಿದೆ. ಇನ್ನೋರ್ವನ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಾಪೊಗ್ಗು ಪಿಎಸ್‌ಐ ಮಂಜುನಾಥ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ನಾನಕ್ಕೆಂದ ತೆರಳಿದ ಇಬ್ಬರು ಯುವಕರು ನೀರಿಗೆ ಬಿದ್ದು ಮೃತ್ಯು Read More »

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಸುಳ್ಯ: ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಅರಂತೋಡು ಗ್ರಾಮದ ಕಿರ್ಲಾಯದಲ್ಲಿ ನಡೆದಿದೆ. ಮೃತಪಟ್ಟವರು ಅಡಬಳೆ ವಾಸುದೇವ ಎನ್ನಲಾಗಿದೆ.  ತೆಂಗಿನಕಾಯಿ ತೆಗೆಯಲೆಂದು ಮರಕ್ಕೆ ಹತ್ತಿದ್ದ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡಿದ್ದರು. ತಕ್ಷಣ ವಾಸುದೇವ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.  ಮೃತರು ಪತ್ನಿ ಹಾಗೂ ನಾಲ್ವರು ಮಕ್ಕಳನ್ನು ಅಗಲಿದ್ದಾರೆ.

ತೆಂಗಿನಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು  

ವಿಜಯಪುರ : ತೆರೆದ ಬಾವಿಗೆ ಮೂರು ವರ್ಷದ ಮಗುವೊಂದು ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು ಮೂರು ವರ್ಷದ ಹರ್ಷಿತ್ ಪಾಟೀಲ್ ಎನ್ನಲಾಗಿದೆ.  ಶುಕ್ರವಾರ ಮಗು ಮನೆಯ ಮುಂದೆ ಆಟವಾಡುತ್ತಿತ್ತು. ಹೀಗೆ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ತಕ್ಷಣ ಕುಟುಂಬಸ್ಥರು ಮಗುವಿನ ಹುಡುಕಾಟದಲ್ಲಿ ತೊಡಗಿದ್ದರು. ಆದರೆ ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಕುಟುಂಬಸ್ಥರು ಮಗುವನ್ನು

ಬಾವಿಗೆ ಬಿದ್ದು ಮೂರು ವರ್ಷದ ಮಗು ಮೃತ್ಯು   Read More »

error: Content is protected !!
Scroll to Top