ನಿಧನ

ಅನಾರೋಗ್ಯದಿಂದ ಯುವಕ ಸಾವು

ಪುತ್ತೂರು: ಅಲ್ಪ ಕಾಲದ ಅಸೌಖ್ಯದಿಂದ ಯುವಕನೊಬ್ಬ ಮೃತಪಟ್ಚ ಘಟನೆ ನಡೆದಿದೆ. ಏನೇಕಲ್ಲು ಗ್ರಾಮದ ಪದ್ಮಡ್ಕ ನಿವಾಸಿ ಸುಜಿತ್(27) ಎಂಬವರೇ ಮೃತ ದುರ್ದೈವಿ. ಇವರು ಅನಾರೋಗ್ಯದ ಹಿನ್ನೆಲೆ ಪುತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರ ಅಂತ್ಯ ಸಂಸ್ಕಾರ ಅವರ ತಾಯಿಯ ತವರು ಮನೆಯಾದ ಕೂತ್ಕುಂಜದ ಚಿದ್ದಲ್ಲು ದಾಮೋದರ ಗೌಡ ಅವರ ಮನೆಯಲ್ಲಿ ನಡೆಯಿತು. ಮೃತರು ತಾಯಿ, ಸಹೋದರರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಅನಾರೋಗ್ಯದಿಂದ ಯುವಕ ಸಾವು Read More »

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪ ಗೌಡ ನಿಧನ

ಪುತ್ತೂರು: ಸಮಾಜ ಸೇವಕಿ, ಧಾರ್ಮಿಕ ಮುಂದಾಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನರಿಮೊಗರಿನ ಮುಂಡೂರು ಗ್ರಾಮದ ಕೆರೆಮನೆ ನಿವಾಸಿ ನಳಿನಿ ಲೋಕಪ್ಪ ಗೌಡ(74) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರು ಮುಂಡೂರು ಮೃತ್ಯುಂಜಯೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ಲೋಕಪ್ಪ ಗೌಡ ಅವರ ಪತ್ನಿ. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ನಳಿನಿ ಲೋಕಪ್ಪ ಗೌಡ ನಿಧನ Read More »

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ

ಬೆಂಗಳೂರು: ಅನಾರೋಗ್ಯದ ಕಾರಣದಿಂದ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ(93) ಅವರು ಅಂಗಾಂಗ ‌ವೈಫಲ್ಯದಿಂದ ನಿಧನರಾದರು. ಅವರು ದಿ ಹಿಂದೂ ಪತ್ರಿಕೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ವಿಧಾನ ಪರಿಷತ್ ಸದಸ್ಯರಾಗಿಯೂ ಅವರು ಸೇವೆ ಸಲ್ಲಿಸಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು, ಪತ್ರಿಕಾ ಅಕಾಡೆಮಿ ಹಾಗೂ ವಿವಿಧ ಪತ್ರಕರ್ತ ಕಲ್ಯಾಣ

ಹಿರಿಯ ಪತ್ರಕರ್ತ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲ Read More »

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ನಿಧನ

ವಿಟ್ಲ: ಅಪಘಾತವೊಂದರಲ್ಲಿ ‌ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪುರುಷೋತ್ತಮ ಆಚಾರ್ಯ ಕೈಂತಿಲ(68) ಎಂದು ಗುರುತಿಸಲಾಗಿದೆ. ಅವರಿಗೆ ಕೆಲ ದಿನಗಳ ಹಿಂದೆ ಮಂಗಿಲಪದವು ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿತ್ತು. ಮೃತರು ಪತ್ನಿ, ನಾಲ್ವರು ಪುತ್ರರನ್ನು ಅಗಲಿದ್ದಾರೆ.ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ನಿಧನ Read More »

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (91) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ನಿಧನರಾದರು. 1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಅಪ್ಪಣ್ಣ ಹೆಗ್ಡೆ 1960ರಲ್ಲಿ ಗ್ರಾಮ ಪಂಚಾಯತ್ ಸದಸ್ಯರಾಗಿ ಬಳಿಕ ಅಧ್ಯಕ್ಷರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅಪ್ಪಣ್ಣ ಹೆಗ್ಡೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರಲ್ಲದೆ ಸುದೀರ್ಘ ಕಾಲ ಬಸ್ರೂರಿನ ಶ್ರೀ

ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ Read More »

ಹೃದಯಾಪಘಾತದಿಂದ ಶಂಭುಗ ಸೀತಾರಾಮ ಶೆಟ್ಟಿ ನಿಧನ

ಮಾಣಿ: ಉಳ್ಳಾಲ್ತಿ ದೈವಸ್ಥಾನದಲ್ಲಿ ಗುಡ್ಡೆ ಚಾಮುಂಡಿ ದೈವದ ಪಾತ್ರಿಯಾಗಿದ್ದ ಶಂಭುಗ ಸೀತಾರಾಮ ಶೆಟ್ಟಿ(61) ಅವರು ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮೃತರು ಪತ್ನಿ, ನಾಲ್ಕು ಜನ ಪುತ್ರರು, ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಶಂಭುಗದಲ್ಲಿರುವ ಅವರ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ 7 ಗಂಟೆಗೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಹೃದಯಾಪಘಾತದಿಂದ ಶಂಭುಗ ಸೀತಾರಾಮ ಶೆಟ್ಟಿ ನಿಧನ Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು

ಪುತ್ತೂರು: ಕಳೆದ ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರ್ಮ ನಿವಾಸಿ, ಪಂಚಾಕ್ಷರಿ ಲೈಟಿಂಗ್ಸ್‌ನ ಮಾಲೀಕ ಗಣೇಶ್ ಗೌಡ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಲೈಟಿಂಗ್ಸ್ ‌ಸಂಬಂಧಿಸಿದ ಕೆಲಸಕ್ಕೆ ಡಿ. 6 ರಂದು ಬದಿಯಡ್ಕಕ್ಕೆ ತೆರಳಿದ್ದ ಅವರು ಸ್ಕೂಟರ್ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದರು. ಅವರಿಗೆ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೃತರು ಪತ್ನಿ, ಇಬ್ಬರು

ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು Read More »

ಯುವಕ ನೇಣು ಬಿಗಿದು ಆತ್ಮಹತ್ಯೆ

ಉಡುಪಿ: ಪ್ರೀತಿಸಿದವಳ ಜೊತೆ ಮೊಬೈಲಿನಲ್ಲಿ ಮಾತನಾಡುತ್ತಾ ರೂಮಿಗೆ ಹೋದ ಯುವಕ ನೇಣಿಗೆ ಶರಣಾದ ಘಟನೆ ಕುಂಜಿಬೆಟ್ಟುವಿನಲ್ಲಿ ನಡೆದಿದೆ. ಮೃತನನ್ನು ರಂಜಿತ್ (28) ಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡುತ್ತಿದ್ದ ರಂಜಿತ್ ಎಂದಿನಂತೆ ಜ. 29 ರಂದು ಸಹ ಕೆಲಸ ಮುಗಿಸಿ ಮನೆಗೆ ಬಂದಿದ್ದಾರೆ. ಕೆಲ ಸಮಯ ಮನೆಯವರ ಜೊತೆಗೆ ಸಮಯ ಕಳೆದಿದ್ದಾರೆ. ಅದಾದ ಬಳಿಕ ಫೋನಿನಲ್ಲಿ ತಮ್ಮ ಪ್ರೇಮಿಯ ಜೊತೆ ಮಾತನಾಡುತ್ತಾ ಕೋಣೆಗೆ ಹೋಗಿದ್ದಾರೆ. ರಾತ್ರಿ ಸಮಯದಲ್ಲಿ ಮನೆಯ ಟ್ಯಾಂಕಿನಲ್ಲಿ ನೀರು ತುಂಬಿದಾಗ, ಅದನ್ನು ಆಫ್ ಮಾಡಲು

ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ನಿರ್ಮಾಣ ಹಂತದ ತಡೆಗೋಡೆ ಕುಸಿತ: ಓರ್ವ ಮೃತ್ಯು

ಬೆಳ್ತಂಗಡಿ: ಉಜಿರೆ – ಸುರ್ಯ ರಸ್ತೆಯಲ್ಲಿನ ನಿರ್ಮಾಣ ಹಂತದಲ್ಲಿರುವ ತಡೆಗೋಡೆಯೊಂದು ‌ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕನೊಬ್ಬ ಮೃತಪಟ್ಚ ಘಟನೆ ನಡೆದಿದೆ. ಮೃತ ದುರ್ದೈವಿಯನ್ನು ಬಿಹಾರ ಮೂಲದ ರಾಕೇಶ್ ಕುಮಾರ್ (25) ಎಂದು ಗುರುತಿಸಲಾಗಿದೆ. ಕಾಮಗಾರಿ ನಡೆಯುತ್ತಿದ್ದ ತಡೆಗೋಡೆ ಕುಸಿದು ರಾಕೇಶ್ ಅವರು ಮಣ್ಣಿನಡಿ ‌ಸಿಲುಕಿಕೊಂಡಿದ್ದರು. ಸ್ಥಳೀಯರು ತಕ್ಷಣವೇ ಅವರನ್ನು ಅಲ್ಲಿಂದ ಹೊರತೆಗೆದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಅವರು ಮೃತಪಟ್ಚಿದ್ದಾರೆ. ಈ ದುರಂತದಲ್ಲಿ ಇನ್ನಿಬ್ಬರು ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು

ನಿರ್ಮಾಣ ಹಂತದ ತಡೆಗೋಡೆ ಕುಸಿತ: ಓರ್ವ ಮೃತ್ಯು Read More »

ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

ವಿಟ್ಲ: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ತೋಟದ ನಡುವಿನ ಆವರಣವಿಲ್ಲದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಳ್ನಾಡಿನ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಸಾಲೆತ್ತೂರಿನ ಕೋಡಿ ನಿವಾಸಿ, ಕೃಷಿಕ ಕೃಷ್ಣಪ್ಪ ಪೂಜಾರಿ (70) ಎಂಬವರೇ ಮೃತ ದುರ್ದೈವಿ. ಸಂಜೆ ವೇಳೆ ಸಾಲೆತ್ತೂರಿಗೆ ಹೋಗಿ ರಾತ್ರಿ ವಾಪಸ್ಸಾಗುತ್ತಿದ್ದಾಗ‌ ಈ ಘಟನೆ ನಡೆದಿದೆ.

ಬಾವಿಗೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು Read More »

error: Content is protected !!
Scroll to Top