ನಿಧನ

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು

ಬಂಟ್ವಾಳ : ಬೈಕ್ ಪ್ರಪಾತಕ್ಕೆ ಬಿದ್ದು, ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಚಿಕ್ಕ ಮಂಗಳೂರು ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಏ. 10 ರ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ.ಯಶೋಧರ(25) ಎಂಬವರೇ ಮೃತ ದುರ್ದೈವಿ. ಚಿಕ್ಕಮಗಳೂರು ನಿವಾಸಿಯಾದ ಇವರು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಬೈಕ್ ಚಲಾಯಿಸುತ್ತಿದ್ದ ಈತನ ಸ್ನೇಹಿತ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ. ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು, ಬೆಳ್ತಂಗಡಿ ಸ್ನೇಹಿತನ […]

ಪ್ರಪಾತಕ್ಕೆ ಬಿದ್ದ ಬೈಕ್ – ಹಿಂಬದಿ ಸವಾರ ಮೃತ್ಯು Read More »

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಎ. 7 ರಂದು ಸಂಭವಿಸಿದೆ. ಯಶವಂತ ಜಿ ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಇವರು ಎ. 5 ರ ರಾತ್ರಿ ತನ್ನ ಅಣ್ಣನ ಮೊಬೈಲ್ ಗೆ ಕರೆ ಮಾಡಿ ಮಾತನಾಡಿದ್ದು, ಆ ಬಳಿಕ ಕರೆ ಮಾಡಿದರೂ ಸ್ವೀಕರಿಸದೇ, ತನ್ನ ಮನೆಗೂ ಬಾರದೇ, ಎ. 7 ರ ಸಂಜೆ ಕೆದಂಬಾಡಿ ಗ್ರಾಮದ ಗುತ್ತು ಎಂಬಲ್ಲಿ ಮ್ಯಾಂಜಿಯಮ್ ಮರಕ್ಕೆ ನೈಲಾನ್

ಪುತ್ತೂರು : ನೇಣು ಬಿಗಿದು ಆತ್ಮಹತ್ಯೆ Read More »

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು

ಬಂಟ್ವಾಳ : ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎ. 7 ರಂದು ರಾಷ್ಟ್ರೀಯ ಹೆದ್ದಾರಿ ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಸಂಭವಿಸಿದೆ. ನಂದರಬೆಟ್ಟು ನಿವಾಸಿ ಸದಾಶಿವ ಆಚಾರ್ಯ (77) ಎಂಬವರೇ ಮೃತಪಟ್ಟ ವ್ಯಕ್ತಿ. ಮಂಗಳೂರು – ಬೆಂಗಳೂರು ರಸ್ತೆಯ ಬಿಸಿರೋಡಿನಲ್ಲಿ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ, ಸದಾಶಿವ ಆಚಾರ್ಯ ಮೃತಪಟ್ಟು, ಅವರ ಮೊಮ್ಮಗ ಚಾಲಕ ಅಕಾಶ್, ಅಳಿಯ ಸುರೇಶ್ ಆಚಾರ್ಯ, ಮಗ ಗಣೇಶ್ ಆಚಾರ್ಯ ಅವರು ಅಲ್ಪಸ್ವಲ್ಪ

ಡಿವೈಡರ್‌ ಗೆ ಕಾರು ಡಿಕ್ಕಿ : ನಂದರಬೆಟ್ಟು ಸದಾಶಿವ ಆಚಾರ್ಯ ಮೃತ್ಯು Read More »

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ

ಮೂಡುಬಿದಿರೆ : ಹಿರಿಯ ದೈವಪಾತ್ರಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲಾಡಿ ಅಣ್ಣು ಶೆಟ್ಟಿ(78) ಅವರು ಅಲ್ಪಕಾಲದ ಅಸೌಖ್ಯದಿಂದ ಏ. 7 ರಂದುನ ನಿಧನ ಹೊಂದಿದರು. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಇವರು ಶುಕ್ರವಾರದ ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಲಾಡಿ ಹಜಂಕಾಲಬೆಟ್ಟು, ಮಾರ್ನಾಡು, ತೋಡಾರು ಸಹಿತ ದ.ಕ ಜಿಲ್ಲೆಯ ಕಾರ್ಕಳ ತಾಲೂಕಿನ ಹಲವಾರು ದೈವಸ್ಥಾನಗಳಲ್ಲಿ ದೈವಪಾತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮೂಡಬಿದಿರೆಯ ಮಾಸ್ತಿಕಟ್ಟೆಯಲ್ಲಿ ವಾಸವಾಗಿದ್ದ ಇವರ ಅಂತ್ಯಸಂಸ್ಕಾರವು ಮಾರ್ನಾಡು ಕಲ್ಲಬೆಟ್ಟು ಗುತ್ತುಮನೆಯಲ್ಲಿ ನಡೆಯಿತು. ಅವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು

ಹಿರಿಯ ದೈವಪಾತ್ರಿ ಅಣ್ಣು ಶೆಟ್ಟಿ ದೈವಾಧೀನ Read More »

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ

ಮೈಸೂರು : ಇತ್ತೀಚೆಗಷ್ಟೇ ನಿಧನರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಅವರ ಪತ್ನಿ ವೀಣಾ ಧ್ರುವನಾರಾಯಣ ಏ. 7ರಂದು ನಿಧನರಾಗಿದ್ದಾರೆ. ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ ಅವರು ಸುಮಾರು 10 ವರ್ಷಗಳಿಂದ ಹಾಸಿಗೆ ಹಿಡಿದಿದ್ದರು. ಇತ್ತೀಚೆಗೆ, ಪತಿ ಧ್ರುವನಾರಾಯಣ ಅವರ ಅಕಾಲಿಕ ಸಾವಿನಿಂದಾಗಿ ಶಾಕ್ ಗೆ ಒಳಗಾಗಿದ್ದ ಅವರ ಆರೋಗ್ಯ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿತ್ತು. ಹಾಗಾಗಿ, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಶುಕ್ರವಾರ ನಿಧನರಾಗಿದ್ದಾರೆ. ಇವರು ಮೂವರು ಪುತ್ರರನ್ನು ಅಗಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ್ ಪತ್ನಿ ವೀಣಾ‌ ವಿಧಿವಶ Read More »

ದೇವಪ್ಪ ನೋಂಡಾ ನಿಧನ

ಪುತ್ತೂರು: ಪುತ್ತೂರು ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ಹೊಟೇಲ್ ಶ್ರೀ ಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7 ರಂದು ಸ್ವಗೃಹದಲ್ಲಿ ನಿಧನರಾದರು. ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರನ್ನು ಅಗಲಿದ್ದಾರೆ.

ದೇವಪ್ಪ ನೋಂಡಾ ನಿಧನ Read More »

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು

ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್‌ ತಡರಾತ್ರಿ ಧಾರವಾಡದಲ್ಲಿ ಅಪಘಾತ ಮಂಗಳೂರು : ಧಾರವಾಡ ಸಮೀಪ ರಾಷ್ಟ್ರೀಯ ಹೆದ್ದಾರಿ ಬೈಪಾಸ್‌ನಲ್ಲಿ ನಿನ್ನೆ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರು ಮತ್ತು ಬಸ್‌ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಐದು ಮಂದಿ ಕಾರಿನಲ್ಲಿದ್ದರು ಎನ್ನಲಾಗಿದೆ. ತಡರಾತ್ರಿ ಮುಂಬಯಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ ಕಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದೇ ವೇಳೆ ಅನಧಿಕೃತ ಮೂಲಗಳು ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ ಎಂದಿದೆ. ಡಿಕ್ಕಿಯ ಬಿರುಸಿಗೆ

ಕಾರು ಮತ್ತು ಬಸ್‌ ಡಿಕ್ಕಿ : ಓರ್ವ ಸಾವು Read More »

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು

ಪೂಜಾ ವಿಧಿ ನೆರವೇರಿಸುವಾಗ ದುರಂತ- ಮಡಿದವರೆಲ್ಲ ಯುವ ಅರ್ಚಕರು ಚೆನ್ನೈ : ಧಾರ್ಮಿಕ ವಿಧಾನಗಳಲ್ಲಿ ತೊಡಗಿದ್ದ 5 ಅರ್ಚಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಮೂವರಸನ್ ಪೇಟೆಯಲ್ಲಿ ನಡೆದಿದೆ.25 ಮಂದಿ ಅರ್ಚಕರ ಪೈಕಿ 5 ಮಂದಿ ಸಾವನ್ನಪ್ಪಿದ್ದಾರೆ. ಅವರನ್ನು ಸೂರ್ಯ (24) ರಾಘವನ್ (22) ಯೋಗೇಶ್ವರನ್ (23) ವನೀಶ್ (20) ರಾಘವನ್ (18) ಎಂದು ಗುರುತಿಸಲಾಗಿದೆ. ಈ ಅರ್ಚಕರ ತಂಡ ಮೂವರಸನ್ ಪೇಟೆಯ ಧರ್ಮಲಿಂಗೇಶ್ವರ ದೇವಾಲಯದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಈ 25

ಐವರು ಅರ್ಚಕರು ಪುಷ್ಕರಣಿಯಲ್ಲಿ ಮುಳುಗಿ ಸಾವು Read More »

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ

ಪುತ್ತೂರು : ಕೃಷಿಯಲ್ಲಿ ನಾನಾ ಆವಿಷ್ಕಾರಗಳಲ್ಲು ಮಾಡಿರುವ ಕೃಷಿ ವಿಜ್ಞಾನಿ ಮೂಡುಬಿದಿರೆ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ಅವರು ನಿಧನರಾಗಿದ್ದಾರೆ. ಭಾರತದ ಪ್ರತಿಷ್ಠಿತ ವಿಶ್ವವಿದ್ಯಾನಿಲಯಗಳಲ್ಲಿ ಉನ್ನತ ಪದವಿಗಳನ್ನು ಪಡೆದು ಅಮೆರಿಕದ ವಿಶ್ವವಿದ್ಯಾನಿಲಯದಿಂದ ಸಸ್ಯಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಸೋನ್ಸ್‌ರು ಕರ್ನಾಟಕದ ಕೃಷಿ ಚರಿತ್ರೆಯಲ್ಲಿ ದಾಖಲಾರ್ಹ ಹೆಸರ. ಡಾ| ಲಿವಿಂಗ್‌ಸ್ಟನ್ ಚಂದ್ರಮೋಹ ಸೋನ್ಸ್ ಕರ್ನಾಟಕದ ಕೃಷಿಕರ ಪಾಲಿಗೆ ಚರಿತ್ರಾರ್ಹ ಮಾದರಿಯೇ ಆಗಿದ್ದರು.ಸೋನ್ಸ್ ಪ್ರಪಂಚದ ಕೃಷಿಯನ್ನು ನೋಡಿದವರು. ಅದೇ ಉದ್ದೇಶದಿಂದ ದೇಶ ಸುತ್ತಿದವರು. ಕೋಶ ಓದಿದವರು, ಬೀಜ, ಹವಾಮಾನ,

ಕೃಷಿ ವಿಜ್ಞಾನಿ ಬೆಳುವಾಯಿಯ ಡಾ| ಎಲ್. ಸಿ. ಸೋನ್ಸ್ ನಿಧನ Read More »

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಗುತ್ತಿಕಲ್ಲು ಎಂಬಲ್ಲಿ ಏ. 3 ರಂದು ಸಂಭವಿಸಿದೆ. ಶಿವಪ್ಪ ಗೌಡ ಎಂಬವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಸುಮಾರು 4 ವರ್ಷಗಳ ಹಿಂದೆ ದಂಪತ್ಯದಲ್ಲಿ ಮನಸ್ಧಾಪ ಉಂಟಾಗಿ ಆತನ ಪತ್ನಿ ತವರು ಮನೆಯಲ್ಲಿ ನೆಲೆಸಿದ ಕಾರಣ ಮನೆಯಲ್ಲಿ ಒಬ್ಬರೇ ಇರುತ್ತಿದ್ದರು. ಏ. 1 ರಂದು ಶಿವಪ್ಪ ಗೌಡ ಕಾಣೆಯಾದ ಬಗ್ಗೆ ಅಣ್ಣ ತಿಮ್ಮಪ್ಪ ಗೌಡ ಪುತ್ತೂರು ನಗರ ಪೊಲೀಸ್‌

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ Read More »

error: Content is protected !!
Scroll to Top