ಜ್ವರದಿಂದ ಬಳಲುತ್ತಿದ್ದ ಮಗು ಸಾನಿಧ್ಯ ಮೃತ್ಯು!
ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಸುಮಾರು 8 ವರ್ಷದ ಮಗು ಸಾನಿಧ್ಯ ಸೋಮವಾರ ಬೆಳಿಗ್ಗೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ, ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್’ದೇವ್ ಆಚಾರ್ಯ ಅವರ ಪುತ್ರಿ ಸಾನಿಧ್ಯ. ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಮಗುವಿಗೆ ಡೆಂಗ್ಯೂ ಹಾಗೂ ನ್ಯೂಮೋನಿಯಾ ಆಗಿರುವುದಾಗಿ ತಿಳಿಸಿದ್ದರು ಎನ್ನಲಾಗಿದೆ. ಸಾನಿಧ್ಯ ಅವರು ತಂದೆ, ತಾಯಿಯನ್ನು ಅಗಲಿದ್ದಾರೆ.
ಜ್ವರದಿಂದ ಬಳಲುತ್ತಿದ್ದ ಮಗು ಸಾನಿಧ್ಯ ಮೃತ್ಯು! Read More »










