ನಿಧನ

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಬೆಂಗಳೂರು:ಸ್ಯಾಂಡಲ್‌ವುಡ್ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ(spandana passed away) ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಕತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. ಸ್ಯಾಂಡಲ್‌ವುಡ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ. ರಾಘವೇಂದ್ರ 2007, […]

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ Read More »

ಕೆ.ನಾರಾಯಣ ಶೆಟ್ಟಿ ನಿಧನ

ಪುತ್ತೂರು: ಪುತ್ತೂರು ನಗರದ ಜನತಾ ಕಬ್ಬಿನ ಹಾಲು ಅಂಗಡಿ ಮಾಲಕ ಕೆ.ನಾರಾಯಣ ಶೆಟ್ಟಿ ಭಾನುವಾರ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ತೂರು ಹಳೆ ಪೊಲೀಸ್ ಸ್ಟೇಷನ್ ಕಟ್ಟಡದ ಬಳಿಯ ಕಟ್ಟಡದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಬ್ಬಿನ ಹಾಲಿನ ಅಂಗಡಿ ನಡೆಸುತ್ತಿದ್ದರು. ಪುತ್ತೂರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಂಚವಟಿ ಬಳಿಯ ನಿವಾಸಿಯಾಗಿರುವ ಮೃತರು ಜನಸಂಘದ ಕಾರ್ಯಕರ್ತರಾಗಿದ್ದು, ತುರ್ತು ಸಂದರ್ಭದಲ್ಲಿ ಜೈಲು ಸೇರಿದ್ದರು. ಪುತ್ತೂರು ಪುರಸಭೆಯ ಮಾಜಿ ಸದಸ್ಯರಾಗಿದ್ದು, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಗಣೇಶೋತ್ಸವ ಸಮಿತಿ ಆರಂಭದ

ಕೆ.ನಾರಾಯಣ ಶೆಟ್ಟಿ ನಿಧನ Read More »

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ

ಬ್ರೆಜಿಲ್ : ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎನ್ನಲಾದ ಬ್ರೆಜಿಲ್ ಮೂಲದ ಜೋಸ್ ಪಾಲಿನೊ ಗೋಮ್ಸ್ (127) ತಮ್ಮ ನಿವಾಸ ಪೆಡ್ರಾಬೊನಿಟಾದಲ್ಲಿ ನಿಧನರಾಗಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಗೋಮ್ಸ್ ಬದುಕಿದ್ದರೆ ಆ.4 ರಂದು ತನ್ನ ಹುಟ್ಟುಹಬ್ಬ ಆಚರಿಸುವುದರಲ್ಲಿದ್ದರು ಎಂದು ಅವರ ಕುಟುಂಬ ತಿಳಿಸಿದೆ. ಗೋಮ್ಸ್ ಮದುವೆಯ ಪ್ರಮಾಣ ಪತ್ರದ ಪ್ರಕಾರ ಆ.4, 1895 ರಲ್ಲಿ ಜನಿಸಿದ್ದರು. ತನ್ನ ಜೀವಿತಾವಧಿಯಲ್ಲಿ ಮಹಾಯುದ್ಧ ಮತ್ತು ಕೋವಿಡ್ ಎರಡನ್ನೂ ಕಣ್ಣಾರೆ ಕಂಡ ವ್ಯಕ್ತಿ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಜೋಸ್ ಪಾಲಿನೊ ಗೋಮ್ಸ್ ನಿಧನ Read More »

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ

ಪುತ್ತೂರು: ಕೊಳ್ತಿಗೆ ಸರಕಾರಿ ಹಿ.ಪ್ರಾ. ಶಾಲೆಯ ವಿಶ್ರಾಂತ ಮುಖ್ಯ ಶಿಕ್ಷಕ, ಕೊಳ್ತಿಗೆ ಕೆಳಗಿನ ಮನೆಯ ತರವಾಡ್ ಯಜಮಾನ ನಾರಾಯಣ ರೈ (90) ಗುರುವಾರ ಮಧ್ಯಾಹ್ನ ನಿಧನರಾದರು. ಮುರುಳ್ಯ, ಕೊಳ್ತಿಗೆ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಅವರ ಅವಧಿಯಲ್ಲಿ ಶಾಲೆ ಶೈಕ್ಷಣಿಕವಾಗಿ ಪ್ರಗತಿ ಹೊಂದಿತ್ತು. ಮೃತರು ಮಕ್ಕಳು, ಸೊಸೆಯಂದಿರು, ಸಹೋದರ, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕೊಳ್ತಿಗೆ ಶಾಲಾ ನಿವೃತ್ತ ಮುಖ್ಯ ಶಿಕ್ಷಕ ನಾರಾಯಣ ರೈ ನಿಧನ Read More »

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ

ಬಾಗಲಕೋಟೆ: ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶರಾಗಿದ್ದಾರೆ. ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿ, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಮತಾ ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಬಾಗಲಕೋಟೆಯ ಇಳಕಲ್ ತಾಲ್ಲೂಕಿನ ಗುಡೂರ ಗ್ರಾಮದಲ್ಲಿ ಇಹಲೋಕ ತ್ಯಜಿಸಿದರು. ಮಮತಾ ಅವರು 5 ಸಾವಿರಕ್ಕೂ ಅಧಿಕ ನಾಟಕಗಳಲ್ಲಿ ನಟಿಸಿದ್ದರು. 25 ಸಿನಿಮಾಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿದ್ದರು. ಕನ್ನಡ ಚಿತ್ರರಂಗದ ಮೇರು ನಟರುಗಳಾದ ಅಂಬರೀಷ್, ವಜ್ರಮುನಿ ಸೇರಿ ಅನೇಕರ ಜೊತೆ ತೆರೆಹಂಚಿಕೊಂಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಚಿತ್ರರಂಗದಿಂದ ದೂರವೇ

ಹಿರಿಯ ನಟಿ ರಂಗಭೂಮಿ ಕಲಾವಿದೆ ಮಮತಾ ಗೂಡೂರ ಅವರು ವಿಧಿವಶ Read More »

ವಿಷ್ಣುಮೂರ್ತಿ ಹೊಳ್ಳ ನಿಧನ

ಪುತ್ತೂರು:  ತಾಲೂಕಿನ ಕುರಿಯ ಗ್ರಾಮದ  ಮಾಪಾಲ ನಿವಾಸಿ, ಪ್ರಗತಿ ಪರ ಕೃಷಿಕ ಮಾಪಾಲ ವಿಷ್ಣುಮೂರ್ತಿ ಹೊಳ್ಳ (86) ಮಂಗಳವಾರ  ಸ್ವಗೃಹದಲ್ಲಿ ನಿಧನರಾದರು. ಅವರು ಕುರಿಯ ವಿಷ್ಣುಮೂರ್ತಿ ದೇವಸ್ಥಾನದ  ಟ್ರಸ್ಟಿಯಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ರಾಜೀವಿ ಹೊಳ್ಳ, ಪುತ್ರಿ ಕಳಸ ಗ್ರಾಮ ಪಂಚಾಯಿತಿ ಸದಸ್ಯೆ ಅನುರಾಧ, ಪುತ್ರರಾದ ಕೋಲಾರದ ಉದ್ಯಮಿ ಹರೀಶ್ ಹೊಳ್ಳ, ವಿಜಯ ಕರ್ನಾಟಕದ ರೆಸ್ಪಾನ್ಸ್ ವಿಭಾಗದ ಮುಖ್ಯ ಉಪ ಸಂಪಾದಕ ಯೋಗೀಶ ಹೊಳ್ಳ ಅವರನ್ನು ಅಗಲಿದ್ದಾರೆ.

ವಿಷ್ಣುಮೂರ್ತಿ ಹೊಳ್ಳ ನಿಧನ Read More »

ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಹೊಸಮನೆ ನಿವಾಸಿ ಜನಾರ್ದನ ಯಾನೆ ಜಾರಪ್ಪ ಗೌಡ (55) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು. ಜನಾರ್ದನ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಹಿರೇಬಂಡಾಡಿ ಸುಬ್ರಹ್ಮಣ್ಯ ದೇವಸ್ಥಾನದ ಭಜನಾ ಮಂಡಳಿ ಸದಸ್ಯರಾಗಿದ್ದರು. ಅಲ್ಲದೆ ಹಲವಾರು ನಾಟಕಗಳಲ್ಲಿ ಹಾಸ್ಯ ಕಲಾವಿದರಾಗಿ ಅಭಿನಯಿಸಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರ, ಸಹೋದರರು ಹಾಗೂ ಸಹೋದರಿಯನ್ನು ಅಗಲಿದ್ದಾರೆ.

ಜನಾರ್ದನ ಯಾನೆ ಜಾರಪ್ಪ ಗೌಡ ನಿಧನ Read More »

ಕಡಬ ನೆಟ್ಟಣ ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

ಕಡಬ: ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಕಾಸರಗೋಡು ಹೊಸದುರ್ಗ ನಿವಾಸಿ ಸುಭಾಷ್ ಬಿ. (55) ಜು.28 ಅನಾರೋಗ್ಯದಿಂದ ಶುಕ್ರವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ ಬಳಿಕ 2021ರಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ನೆಟ್ಟದ ಕೇಂದ್ರೀಯ ಮರ ಸಂಗ್ರಹಾಲಯಕ್ಕೆ ನೇಮಕಗೊಂಡು ಕಳೆದ

ಕಡಬ ನೆಟ್ಟಣ ಉಪವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ Read More »

ರಾಮಚಂದ್ರ ಪುರುಷ ನಿಧನ

ಪುತ್ತೂರು: ನರಿಮೊಗರು ಗ್ರಾಮದ ಪುರುಷರಕಟ್ಟೆ ಸುರುಳಿಮಜಲು ನಿವಾಸಿ ರಾಮಚಂದ್ರ ಪುರುಷ ಎಂ. (65) ಸ್ವಗೃಹದಲ್ಲಿ ಭಾನುವಾರ ನಿಧನರಾದರು. ಪ್ರಗತಿಪರ ಕೃಷಿಕರಾಗಿದ್ದ ಮೃತರು ಮುಗೇರಡ್ಕ ಕುಟುಂಬದವರಾಗಿದ್ದರು. ಅಲ್ಲದೆ ಪ್ರತಿಷ್ಠಿತ ಸನಾತನ ನಾಥಿಯ ಪಂಥದವರಾಗಿರುವ ಅವರು ಕದ್ರಿ ಜೋಗಿ ಮಠಕ್ಕೆ ಸೇರಿದವರಾಗಿರುತ್ತಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ರಾಮಚಂದ್ರ ಪುರುಷ ನಿಧನ Read More »

error: Content is protected !!
Scroll to Top